AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant

Rishabh Pant

ಅಂಡರ್ 19 ವಿಶ್ವಕಪ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಸಾಕಷ್ಟು ಸದ್ದು ಮಾಡಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್, 2017 ರಲ್ಲಿ ಟಿ20 ಮಾದರಿಯಲ್ಲಿ ಟೀಂ ಇಂಡಿಯಾ ಪರ ಚೊಚ್ಚಲ ಪಂದ್ಯವನ್ನಾಡಿದರು. ನಂತರ ಒಂದು ವರ್ಷದ ಬಳಿಕ ಅಂದರೆ 2018 ರಲ್ಲಿ ತಂಡದ ಪರ ಏಕದಿನ ಹಾಗೂ ಟೆಸ್ಟ್ ಮಾದರಿಯಲ್ಲೂ ಮೊದಲ ಪಂದ್ಯವನ್ನಾಡಿದರು. ಅಂದಿನಿಂದ ಪಂತ್ ಟೀಂ ಇಂಡಿಯಾದ ಖಾಯಂ ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ಇದುವರೆಗೂ 33 ಟೆಸ್ಟ್ ಪಂದ್ಯಗಳನ್ನಾಡಿರುವ ಪಂತ್, 43.67ರ ಸರಾಸರಿಯಲ್ಲಿ 2271 ರನ್ ಬಾರಿಸಿದ್ದಾರೆ. ಇದರಲ್ಲಿ ಐದು ಶತಕ ಹಾಗೂ ಹನ್ನೊಂದು ಅರ್ಧಶತಕವೂ ಸೇರಿದೆ. ಇದರ ಜತೆಗೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನೆಲದಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ ವಿಕೆಟ್ ಕೀಪರ್ ಬ್ಯಾಟರ್ ಎನ್ನುವ ಗೌರವಕ್ಕೂ ಪಂತ್ ಪಾತ್ರರಾಗಿದ್ದಾರೆ. ಪಂತ್ ಏಕದಿನ ಕ್ರಿಕೆಟ್​​ನಲ್ಲಿ 30 ಪಂದ್ಯಗಳಿಂದ 865 ರನ್ ಬಾರಿಸಿದ್ದರೆ, ಟಿ20 ಕ್ರಿಕೆಟ್​​ನಲ್ಲಿ 66 ಪಂದ್ಯಗಳನ್ನಾಡಿ 987 ರನ್ ಗಳಿಸಿದ್ದಾರೆ. ಐಪಿಎಲ್​ನಲ್ಲೂ ಕಮಾಲ್ ಮಾಡಿರುವ ಪಂತ್, ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಾಗವಾಗಿದ್ದು, ಇದುವರೆಗೆ 98 ಐಪಿಎಲ್ ಪಂದ್ಯಗಳನ್ನಾಡಿರುವ ಪಂತ್, ಒಟ್ಟು 2818 ರನ್ ಕಲೆಹಾಕಿದ್ದಾರೆ.

ಇನ್ನೂ ಹೆಚ್ಚು ಓದಿ

ಸೋಲಿಗೆ ಕಾರಣವೇನು? ನಮಗೆ ವಿಶ್ರಾಂತಿಯ ಅಗತ್ಯವಿದೆ ಎಂದ ರಿಷಭ್ ಪಂತ್!

IPL 2026 LSG vs KKR: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೂಡ 20 ಓವರ್​ಗಳಲ್ಲಿ 155 ರನ್ ಬಾರಿಸಿ ಪಂದ್ಯ ಟೈ ಗೊಳಿಸಿದ್ದರು. ಇದಾದ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಕೆಕೆಆರ್ ತಂಡ ಜಯ ಸಾಧಿಸಿದೆ.

ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್

IPL 2026 LSG: ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್-19ರ ಮೊದಲಾರ್ಧದಲ್ಲಿ 7 ಪಂದ್ಯಗಳನ್ನಾಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡ ಕೇವಲ 2 ಮ್ಯಾಚ್​ಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಈ ಗೆಲುವುಗಳ ಮೂಲಕ ಪ್ರಸ್ತುತ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಅಂದರೆ ಎಲ್​ಎಸ್​ಜಿ ತಂಡವು ಪ್ಲೇಆಫ್​ಗೇರಲು ದ್ವಿತೀಯಾರ್ಧದಲ್ಲಿ ಪ್ರಚಂಡ ಪ್ರದರ್ಶನ ನೀಡಲೇಬೇಕು.

RCB vs LSG: ರಿಷಭ್ ಪಂತ್ ಮೊಣಕೈಗೆ ಗಂಭೀರ ಗಾಯ ಮಾಡಿದ ಹೇಜಲ್‌ವುಡ್ ಬೆಂಕಿ ಚೆಂಡು

Rishabh Pant Suffers Elbow Injury: ಐಪಿಎಲ್ 2026 ರಲ್ಲಿ LSG vs RCB ಪಂದ್ಯದಲ್ಲಿ ಲಕ್ನೋ ನಾಯಕ ರಿಷಭ್ ಪಂತ್ ಮೊಣಕೈಗೆ ಗಂಭೀರ ಗಾಯ ಮಾಡಿಕೊಂಡು ರಿಟೈರ್ಡ್ ಹರ್ಟ್ ಆಗಿದ್ದಾರೆ. ಜೋಶ್ ಹೇಲ್‌ವುಡ್ ಎಸೆದ ಚೆಂಡು ಬಡಿದು ತೀವ್ರ ನೋವಿನಿಂದ ನರಳಿದ ಪಂತ್, ಕೇವಲ 3 ಎಸೆತಗಳನ್ನು ಎದುರಿಸಿ ಮೈದಾನ ತೊರೆದರು. ಅವರ ನೋವಿನಿಂದಾಗಿ ಮತ್ತೆ ಬ್ಯಾಟಿಂಗ್‌ಗೆ ಇಳಿಯುವ ಸಾಧ್ಯತೆ ಕಡಿಮೆ. ಈ ಘಟನೆ ಲಕ್ನೋ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

LSG vs DC: ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ಲಕ್ನೋ ‘ಸೂಪರ್ ಸ್ಟಾರ್ಸ್’

Lucknow Super Giants Stumble in IPL 2026:ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಬ್ಯಾಟಿಂಗ್ ವೈಫಲ್ಯ ಕಂಡಿದೆ. ಬಲಿಷ್ಠ ಬ್ಯಾಟಿಂಗ್ ಲೈನ್ಅಪ್ ಹೊಂದಿದ್ದರೂ, ನಾಯಕ ರಿಷಭ್ ಪಂತ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್ ಮತ್ತು ಮಿಚೆಲ್ ಮಾರ್ಷ್ ಬೇಗನೆ ವಿಕೆಟ್ ಒಪ್ಪಿಸಿದರು. ಮೊದಲ 10 ಓವರ್‌ಗಳಲ್ಲಿ 71 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಲಕ್ನೋ ತಂಡ ಸಂಕಷ್ಟಕ್ಕೆ ಸಿಲುಕಿದೆ, ನಿರೀಕ್ಷೆ ಸುಳ್ಳಾಗಿದೆ.

IND vs NZ: ಮತ್ತೆ ಗಾಯಗೊಂಡ ರಿಷಬ್ ಪಂತ್; ಅಭ್ಯಾಸದಿಂದ ಅರ್ಧಕ್ಕೆ ವಾಪಸ್

Rishabh Pant injury update: ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ಅಭ್ಯಾಸದ ವೇಳೆ ಸೊಂಟಕ್ಕೆ ಗಾಯ ಮಾಡಿಕೊಂಡಿದ್ದಾರೆ. ಇದರಿಂದ ಅವರು ಮೊದಲ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ. ಪಂತ್ ಅವರ ಗಾಯದ ತೀವ್ರತೆ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲವಾದರೂ, ಇದು ತಂಡದ ಯೋಜನೆಗಳ ಮೇಲೆ ಪರಿಣಾಮ ಬೀರಲಿದೆ.

IND vs SA: ಮೊದಲ ಏಕದಿನದಲ್ಲಿ ಪಂತ್, ರುತುರಾಜ್ ಆಡ್ತಾರಾ? ನಾಯಕ ರಾಹುಲ್ ಹೇಳಿದ್ದಿದು

India vs South Africa ODI: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಸಜ್ಜಾಗಿರುವ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್, ರಾಂಚಿ ಪಂದ್ಯಕ್ಕೂ ಮುನ್ನ ಪ್ರಮುಖ ಮಾಹಿತಿ ಹಂಚಿಕೊಂಡಿದ್ದಾರೆ. ತಾನು 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಾಗಿ ತಿಳಿಸಿದ ರಾಹುಲ್, ರಿಷಭ್ ಪಂತ್ ವಿಕೆಟ್‌ಕೀಪರ್ ಆಗಿ ಆಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ರುತುರಾಜ್ ಗಾಯಕ್ವಾಡ್‌ಗೆ ಸರಣಿಯಲ್ಲಿ ಅವಕಾಶ ಸಿಗಲಿದೆ ಎಂದು ಭರವಸೆ ನೀಡಿದ್ದು, ರೋಹಿತ್ ಮತ್ತು ಕೊಹ್ಲಿ ಕಮ್‌ಬ್ಯಾಕ್ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿಸಿದೆ.

IND vs SA: ಕಳಪೆ ಪ್ರದರ್ಶನಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸಿದ ರಿಷಭ್ ಪಂತ್

Rishabh Pant apology: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತದ ಹೀನಾಯ ಸೋಲು ಮತ್ತು ವೈಯಕ್ತಿಕ ಕಳಪೆ ಪ್ರದರ್ಶನಕ್ಕೆ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಕ್ಷಮೆಯಾಚಿಸಿದ್ದಾರೆ. ತಂಡವಾಗಿ ನಿರೀಕ್ಷೆಗಳನ್ನು ಪೂರೈಸಲು ವಿಫಲರಾಗಿದ್ದೇವೆ ಎಂದು ಒಪ್ಪಿಕೊಂಡಿರುವ ಪಂತ್, ಮುಂದಿನ ದಿನಗಳಲ್ಲಿ ಕಠಿಣ ಪರಿಶ್ರಮದಿಂದ ಬಲವಾಗಿ ಮರಳುವ ಭರವಸೆ ನೀಡಿದ್ದಾರೆ. ಸರಣಿಯಲ್ಲಿ ಕೇವಲ 49 ರನ್ ಗಳಿಸಿ ವಿಫಲರಾಗಿದ್ದ ಪಂತ್, ತಮ್ಮ ಆಟ ಸುಧಾರಿಸಲು ಶ್ರಮಿಸುವುದಾಗಿ ಹೇಳಿದ್ದಾರೆ.

ಇಂಜುರಿ ನಡುವೆಯೂ ಟೆಸ್ಟ್​ನಲ್ಲಿ ಟಿ20 ಕ್ರಿಕೆಟ್ ಆಡಿದ ರಿಷಭ್ ಪಂತ್; ವಿಡಿಯೋ

Rishabh Pant's Heroic 65: ದಕ್ಷಿಣ ಆಫ್ರಿಕಾ ಎ ವಿರುದ್ಧದ ಅನಧಿಕೃತ ಟೆಸ್ಟ್‌ನಲ್ಲಿ ರಿಷಭ್ ಪಂತ್ 54 ಎಸೆತಗಳಲ್ಲಿ 65 ರನ್ ಗಳಿಸಿ ಮಿಂಚಿದರು. ಗಾಯಗೊಂಡರೂ ಮರಳಿ ಬ್ಯಾಟಿಂಗ್‌ಗೆ ಇಳಿದ ಪಂತ್, ಸ್ಫೋಟಕ ಆಟದ ಮೂಲಕ ಭಾರತ ಎ ತಂಡ 382 ರನ್‌ಗಳಿಗೆ ಡಿಕ್ಲೇರ್ ಮಾಡಲು ನೆರವಾದರು. ಈ ಅದ್ಭುತ ಇನ್ನಿಂಗ್ಸ್‌ನಿಂದ ಭಾರತ ಎ ದಕ್ಷಿಣ ಆಫ್ರಿಕಾ ಎ ಗೆ 417 ರನ್‌ಗಳ ಬೃಹತ್ ಗುರಿ ನೀಡಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಅಜೇಯ ಅರ್ಧಶತಕ ಬಾರಿಸಿದ ರಿಷಭ್ ಪಂತ್

Rishabh Pant's Unbeaten Half-Century: ದಕ್ಷಿಣ ಆಫ್ರಿಕಾ ಎ ವಿರುದ್ಧದ ಅನಧಿಕೃತ ಟೆಸ್ಟ್‌ನಲ್ಲಿ ರಿಷಭ್ ಪಂತ್ ಅಜೇಯ ಅರ್ಧಶತಕ (64) ಗಳಿಸಿ ಭಾರತ ಎ ತಂಡಕ್ಕೆ ಆಸರೆಯಾಗಿದ್ದಾರೆ. 32 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದಾಗ ಕ್ರೀಸ್‌ಗೆ ಬಂದ ಪಂತ್, ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಪಂದ್ಯ ಗೆಲ್ಲಲು ಭಾರತ ಎ ತಂಡಕ್ಕೆ ಕೊನೆಯ ದಿನ 156 ರನ್‌ಗಳ ಅಗತ್ಯವಿದೆ.

Rishabh Pant: ರಿಷಭ್ ಪಂತ್ ಕಂಬ್ಯಾಕ್ ಯಾವಾಗ? ಇಲ್ಲಿದೆ ಬಿಗ್ ಅಪ್​ಡೇಟ್

Rishabh Pant Injury Update: ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ಗಾಯದಿಂದ ಚೇತರಿಸಿಕೊಂಡು ಕ್ರಿಕೆಟ್‌ಗೆ ಮರಳಲು ಸಿದ್ಧರಾಗಿದ್ದಾರೆ. ಕಾಲ್ಬೆರಳ ಗಾಯದಿಂದಾಗಿ ಏಷ್ಯಾಕಪ್ ಮತ್ತು ವೆಸ್ಟ್ ಇಂಡೀಸ್ ಸರಣಿಗಳನ್ನು ತಪ್ಪಿಸಿಕೊಂಡಿದ್ದ ಪಂತ್, ಅಕ್ಟೋಬರ್ 25 ರಿಂದ ದೆಹಲಿಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಆಡಲು ಬಯಸಿದ್ದಾರೆ. ರಣಜಿ ಟ್ರೋಫಿಯಲ್ಲಿ ದೆಹಲಿ ನಾಯಕನಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಫಿಟ್‌ನೆಸ್ ಕ್ಲಿಯರೆನ್ಸ್ ಪಡೆದರೆ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಭಾರತ ತಂಡಕ್ಕೆ ಮರಳಬಹುದು.

ಟೀಮ್ ಇಂಡಿಯಾಗೆ ಬಿಗ್ ಶಾಕ್: ಟೆಸ್ಟ್ ಸರಣಿಯಿಂದ ಪ್ರಮುಖ ಆಟಗಾರ ಔಟ್

India vs West Indies Test: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಪ್ರಾರಂಭವಾಗಲಿದೆ. ಭಾರತದಲ್ಲಿ ನಡೆಯಲಿರುವ ಎರಡು ಪಂದ್ಯಗಳ ಈ ಸರಣಿಗಾಗಿ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು ಘೋಷಿಸಲಾಗುತ್ತದೆ. ಆದರೆ ಈ ಸರಣಿಯಲ್ಲಿ ಭಾರತ ತಂಡದ ಸ್ಟಾರ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ.

‘ನಿಜವಾಗಿಯೂ ಬೇಸರವಾಗಿದೆ’; ರಿಷಭ್ ಪಂತ್ ಬಳಿ ಕ್ಷಮೆಯಾಚಿಸಿದ ಇಂಗ್ಲೆಂಡ್‌ ವೇಗಿ

India vs England Test Series: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ಡ್ರಾದೊಂದಿಗೆ ಅಂತ್ಯವಾಯಿತು. ಈ ಸರಣಿಯಲ್ಲಿ ರಿಷಭ್ ಪಂತ್ ಮತ್ತು ಕ್ರಿಸ್ ವೋಕ್ಸ್ ಗಂಭೀರವಾಗಿ ಗಾಯಗೊಂಡರು. ಪಂತ್ ಅವರ ಕಾಲಿಗೆ ವೋಕ್ಸ್ ಎಸೆದ ಚೆಂಡು ಬಡಿದರೆ, ವೋಕ್ಸ್ ಫೀಲ್ಡಿಂಗ್ ಮಾಡುವಾಗ ಗಾಯಗೊಂಡರು. ಗಾಯದ ನಂತರವೂ ವೋಕ್ಸ್ ಒಂದೇ ಕೈಯಲ್ಲಿ ಬ್ಯಾಟಿಂಗ್ ಮಾಡಿದ್ದು ಪ್ರಶಂಸೆಗೆ ಪಾತ್ರವಾಗಿದೆ. ಈ ಇಬ್ಬರೂ ಆಟಗಾರರು ಪರಸ್ಪರ ಸಂದೇಶಗಳ ಮೂಲಕ ಆರೋಗ್ಯ ವಿಚಾರಿಸಿಕೊಂಡಿದ್ದಾರೆ.

ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು