Rishabh Pant

Rishabh Pant

ಅಂಡರ್ 19 ವಿಶ್ವಕಪ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಸಾಕಷ್ಟು ಸದ್ದು ಮಾಡಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್, 2017 ರಲ್ಲಿ ಟಿ20 ಮಾದರಿಯಲ್ಲಿ ಟೀಂ ಇಂಡಿಯಾ ಪರ ಚೊಚ್ಚಲ ಪಂದ್ಯವನ್ನಾಡಿದರು. ನಂತರ ಒಂದು ವರ್ಷದ ಬಳಿಕ ಅಂದರೆ 2018 ರಲ್ಲಿ ತಂಡದ ಪರ ಏಕದಿನ ಹಾಗೂ ಟೆಸ್ಟ್ ಮಾದರಿಯಲ್ಲೂ ಮೊದಲ ಪಂದ್ಯವನ್ನಾಡಿದರು. ಅಂದಿನಿಂದ ಪಂತ್ ಟೀಂ ಇಂಡಿಯಾದ ಖಾಯಂ ಸದಸ್ಯರಲ್ಲಿ ಒಬ್ಬರಾಗಿದ್ದಾರೆ. ಇದುವರೆಗೂ 33 ಟೆಸ್ಟ್ ಪಂದ್ಯಗಳನ್ನಾಡಿರುವ ಪಂತ್, 43.67ರ ಸರಾಸರಿಯಲ್ಲಿ 2271 ರನ್ ಬಾರಿಸಿದ್ದಾರೆ. ಇದರಲ್ಲಿ ಐದು ಶತಕ ಹಾಗೂ ಹನ್ನೊಂದು ಅರ್ಧಶತಕವೂ ಸೇರಿದೆ. ಇದರ ಜತೆಗೆ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನೆಲದಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ ವಿಕೆಟ್ ಕೀಪರ್ ಬ್ಯಾಟರ್ ಎನ್ನುವ ಗೌರವಕ್ಕೂ ಪಂತ್ ಪಾತ್ರರಾಗಿದ್ದಾರೆ. ಪಂತ್ ಏಕದಿನ ಕ್ರಿಕೆಟ್​​ನಲ್ಲಿ 30 ಪಂದ್ಯಗಳಿಂದ 865 ರನ್ ಬಾರಿಸಿದ್ದರೆ, ಟಿ20 ಕ್ರಿಕೆಟ್​​ನಲ್ಲಿ 66 ಪಂದ್ಯಗಳನ್ನಾಡಿ 987 ರನ್ ಗಳಿಸಿದ್ದಾರೆ. ಐಪಿಎಲ್​ನಲ್ಲೂ ಕಮಾಲ್ ಮಾಡಿರುವ ಪಂತ್, ಪ್ರಸ್ತುತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬಾಗವಾಗಿದ್ದು, ಇದುವರೆಗೆ 98 ಐಪಿಎಲ್ ಪಂದ್ಯಗಳನ್ನಾಡಿರುವ ಪಂತ್, ಒಟ್ಟು 2818 ರನ್ ಕಲೆಹಾಕಿದ್ದಾರೆ.

ಇನ್ನೂ ಹೆಚ್ಚು ಓದಿ

IND vs AUS: ರಿಷಭ್ ಪಂತ್ ವಿರುದ್ಧ ಸಿಟ್ಟಿನಿಂದ ಕೂಗಿದ ರೋಹಿತ್ ಶರ್ಮಾ, ವಿಡಿಯೋ ವೈರಲ್

ಆಸ್ಟ್ರೇಲಿಯಾ ವಿರುದ್ಧದ ಟಿ20 ವಿಶ್ವಕಪ್​​ನ ಸೂಪರ್-8 ಪಂದ್ಯದಲ್ಲಿ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 92 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ನೆರವಿನಿಂದ 205 ರನ್‌ ಗಳಿಸಿತ್ತು. ಆದರೆ ಆಸ್ಟ್ರೇಲಿಯಾದ ಮುಂದೆ ಈ ಸ್ಕೋರ್ ಕೂಡ ಕಡಿಮೆಯಾಗಬಹುದು ಎಂಬುದು ತಂಡದ ಲೆಕ್ಕಾಚಾರವಾಗಿತ್ತು. ಹೀಗಾಗಿ ಬೌಲಿಂಗ್, ಫೀಲ್ಡಿಂಗ್​ನಲ್ಲಿ ಚುರುಕಿನ ಆರಂಭ ಪಡೆಯಲು ತಂಡ ಮುಂದಾಗಿತ್ತು. ಆದರೆ ಎರಡನೇ ಓವರ್​​ನಲ್ಲೇ ಮಾರ್ಷ್​ ಕ್ಯಾಚ್ ಅವಕಾಶ ಕೈಚೆಲ್ಲಿದ್ದು ರೋಹಿತ್ ಶರ್ಮಾ ಸಿಟ್ಟಿಗೆ ಕಾರಣವಾಯಿತು. ಹಿಟ್​​ಮ್ಯಾನ್ ಸಿಟ್ಟಿನಿಂದ ಕೂಗಿದ ವಿಡಿಯೋ ವೈರಲ್ ಆಗುತ್ತಿದ್ದು, ಇಲ್ಲಿದೆ ನೋಡಿ.

DC vs LSG: ನಾನು ಆರ್​ಸಿಬಿ ವಿರುದ್ಧ ಆಡಿದ್ದರೆ..: ಲಕ್ನೋ ವಿರುದ್ಧ ಗೆದ್ದ ಬಳಿಕ ರಿಷಭ್ ಪಂತ್ ಶಾಕಿಂಗ್ ಸ್ಟೇಟ್ಮೆಂಟ್

Rishabh Pant post match presentation: ನಿಯಮ ಉಲ್ಲಂಘನೆಯ ಕಾರಣದಿಂದ ರಿಷಭ್ ಪಂತ್ ಕಳೆದ ಆರ್​ಸಿಬಿ ವಿರುದ್ಧದ ಪಂದ್ಯದಿಂದ ಹೊರಗಿದ್ದರು. ಈ ಬಗ್ಗೆ ಲಕ್ನೋ ವಿರುದ್ಧದ ಪಂದ್ಯ ಮುಗಿದ ಬಳಿಕ ಮಾತನಾಡಿರುವ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಂತ್ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಏನು ಹೇಳಿದ್ರು?, ಇಲ್ಲಿದೆ ಮಾಹಿತಿ.

DC vs RR, IPL 2024: ಐಪಿಎಲ್​ನಲ್ಲಿಂದು ಡೆಲ್ಲಿ-ರಾಜಸ್ಥಾನ್ ಸೆಣೆಸಾಟ: ಯಾರು ಗೆದ್ದರೆ ಯಾರಿಗೆ ಸಹಕಾರಿ?

Delhi Capitals vs Rajasthan Royals: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿಂದು ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಡೆಲ್ಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಟೀಮ್ ಸಂಜು ಸ್ಯಾಮ್ಸನ್ ಅವರ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

DC vs CSK: ಧೋನಿ ಎದುರೇ ಹೆಲಿಕಾಫ್ಟರ್ ಶಾಟ್ ಸಿಡಿಸಿ ಶಾಕ್ ಕೊಟ್ಟ ರಿಷಭ್ ಪಂತ್: ವಿಡಿಯೋ

Rishabh Pant’s Helicopter Shot: ಐಪಿಎಲ್ 2024ರ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ರಿಷಭ್ ಪಂತ್ ತಮ್ಮ ಹಳೆಯ ಶೈಲಿಯಲ್ಲಿ ಕಾಣಿಸಿಕೊಂಡರು. ಅದರಲ್ಲೂ ಹೆಲಿಕಾಪ್ಟರ್ ಶಾಟ್ ಸೃಷ್ಟಿಕರ್ತ ಎಂಎಸ್ ಧೋನಿ ಅವರ ಮುಂದೆ ಅದೆರೀತಿಯ ಶಾಟ್ ಆಡಿ ಸಿಎಸ್​ಕೆ ಶಾಕ್ ನೀಡಿದರು.

RR vs DC, IPL 2024: ತಾಳ್ಮೆ ಕಳೆದುಕೊಂಡ ಪಂತ್: ಔಟಾದ ಕೋಪದಲ್ಲಿ ರಿಷಭ್ ಏನು ಮಾಡಿದ್ರು ನೋಡಿ

Rishabh Pant Angry: ಐಪಿಎಲ್ 2024ರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಿಷಭ್ ಪಂತ್ 14ನೇ ಓವರ್‌ನ ಮೊದಲ ಎಸೆತದಲ್ಲಿ ಯುಜ್ವೇಂದ್ರ ಚಾಹಲ್ ಎಸೆತದಲ್ಲಿ ಔಟಾದರು. ಪ್ರಮುಖ ಹಂತದಲ್ಲಿ ಔಟಾಗಿ, ಪಂದ್ಯವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗದಿದ್ದಕ್ಕೆ ಪಂತ್ ಕೋಪಗೊಂಡಂತೆ ಕಂಡುಬಂತು. ಅವರು ಈ ಸಂದರ್ಭ ಏನು ಮಾಡಿದ್ರು ನೋಡಿ.

Rishabh Pant: ರಿಷಭ್ ಪಂತ್ ಮಿಂಚಿನ ಸ್ಟಂಪಿಂಗ್​ಗೆ ಬೆರಗಾದ ಕ್ರಿಕೆಟ್ ಜಗತ್ತು: ರೋಚಕ ವಿಡಿಯೋ ನೋಡಿ

PBKS vs DC, IPL 2024: ಐಪಿಎಲ್ 2024ರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಬ್ಯಾಟ್​ನಿಂದ ದೊಡ್ಡ ಸದ್ದು ಮಾಡಲಿಲ್ಲ. ಆದರೆ, ವಿಕೆಟ್ ಹಿಂಭಾಗ ತೋರಿದ ಚಾಣಾಕ್ಷತೆಗೆ ಎಲ್ಲರೂ ಮನಸೋತರು. ವಿಕೆಟ್ ಕೀಪಿಂಗ್​ನಲ್ಲಿ ಪಂತ್ ಮೊದಲಿಗಿಂತ ಚುರುಕಾಗಿ ಕಾಣುತ್ತಿದ್ದರು.

IPL 2024: ಅಭ್ಯಾಸದ ವೇಳೆ ರಿಷಭ್ ಪಂತ್ ಸ್ಫೋಟಕ ಬ್ಯಾಟಿಂಗ್ ಕಂಡು ಎಲ್ಲರೂ ಶಾಕ್: ವಿಡಿಯೋ ನೋಡಿ

Rishabh Pant Practice Video: ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಂಪ್ ಸೇರಿ ಅಭ್ಯಾಸ ಆರಂಭಿಸಿದ್ದಾರೆ. ಅಲ್ಲದೆ ಪ್ರ್ಯಾಕ್ಟೀಸ್ ಸೆಷನ್​ನಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Rishabh Pant IPL 2024: ರಿಷಭ್ ಪಂತ್ ಫ್ಯಾನ್ಸ್​ಗೆ ಬಂಪರ್ ಸುದ್ದಿ: ಡೆಲ್ಲಿ ಕಡೆಯಿಂದ ಬಂತು ಖಚಿತ ಮಾಹಿತಿ

Delhi Capitals, IPL 2024: ಟೀಮ್ ಇಂಡಿಯಾ ಸೂಪರ್ ಸ್ಟಾರ್ ರಿಷಭ್ ಪಂತ್ ಐಪಿಎಲ್ 2024 ರ ಮೂಲಕ ಕ್ರಿಕೆಟ್ ಲೋಕಕ್ಕೆ ಕಮ್​ಬ್ಯಾಕ್ ಮಾಡುವುದು ಖಚಿತವಾಗಿದೆ. ಇವರು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿರುತ್ತಾರೆ ಎಂದು ಪಾರ್ಥ್ ಜಿಂದಾಲ್ ಹೇಳಿದ್ದಾರೆ. ಕಳೆದ ಋತುವಿನಲ್ಲಿ ಪಂತ್ ಆಡಲು ಸಾಧ್ಯವಾಗಲಿಲ್ಲ, ಈಗ ಸುಮಾರು ಒಂದೂವರೆ ವರ್ಷಗಳ ನಂತರ ಮೈದಾನಕ್ಕೆ ಮರಳುತ್ತಿದ್ದಾರೆ.

Rishabh Pant: ‘ಈ ಜಗತ್ತಿನಲ್ಲಿ ನನ್ನ ಸಮಯ ಮುಗಿಯಿತು’; ಆ ಕರಾಳ ರಾತ್ರಿಯ ಬಗ್ಗೆ ರಿಷಭ್ ಪಂತ್ ಮನದಾಳ

Rishabh Pant: 2022 ರ ಡಿಸೆಂಬರ್​ 31 ರಂದು ಭೀಕರ ಕಾರು ಅಪಘಾತಕ್ಕೀಡಾಗಿ ಕ್ರಿಕೆಟ್​ನಿಂದ ದೂರವಿರುವ ಟೀಂ ಇಂಡಿಯಾದ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಪ್ರಸ್ತುತ ಚೇತರಿಕೆಯ ಹಾದಿಯಲ್ಲಿದ್ದು, ಮುಂಬರುವ ಐಪಿಎಲ್​ನಲ್ಲಿ ಅಖಾಡಕ್ಕಿಳಿಯಲು ತಯಾರಿ ಆರಂಭಿಸಿದ್ದಾರೆ. ಈ ನಡುವೆ ಅಂದು ನಡೆದ ಘಟನೆಯ ಬಗ್ಗೆ ರಿಷಭ್ ಪಂತ್ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು