Rohit Sharma

Rohit Sharma

2007 ರಲ್ಲಿ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ರೋಹಿತ್ ಶರ್ಮಾ, ಅದೇ ವರ್ಷ ಟಿ20 ಕ್ರಿಕೆಟ್​ಗೂ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದರು. ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ 7 ವರ್ಷಗಳ ನಂತರ ಟೆಸ್ಟ್ ಕ್ರಿಕೆಟ್​ನಲ್ಲಿ ಚೊಚ್ಚಲ ಅವಕಾಶ ಪಡೆದ ರೋಹಿತ್ ಶರ್ಮಾ, ಅಂದಿನಿಂದ ಇಂದಿನವರೆಗೆ ಟೀಂ ಇಂಡಿಯಾದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಪ್ರಸ್ತುತ ನಾಯಕನಾಗಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ತಂಡ ಡಬ್ಲ್ಯುಟಿಸಿ ಫೈನಲ್ ಸೇರಿದಂತೆ ಒಂದು ಏಕದಿನ ವಿಶ್ವಕಪ್ ಫೈನಲ್ ಕೂಡ ಆಡಿದೆ. ಆದರೆ ತಂಡಕ್ಕೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಟೀಂ ಇಂಡಿಯಾ ಪರ ಇದುವರೆಗೆ ಮೂರು ಮಾದರಿಯ ಕ್ರಿಕೆಟ್​ನಲ್ಲಿ 469 ಪಂದ್ಯಗಳನ್ನಾಡಿರುವ ರೋಹಿತ್, 46 ಶತಕ ಹಾಗೂ 100 ಅರ್ಧಶತಕ ಹಾಗೂ 4 ದ್ವಿಶತಕದ ಆಧಾರದ ಮೇಲೆ ಒಟ್ಟು 18511 ರನ್ ಕಲೆಹಾಕಿದ್ದಾರೆ. ಹಾಗೆಯೇ ಐಪಿಎಲ್​ನಲ್ಲೂ ತಮ್ಮ ಮ್ಯಾಜಿಕ್ ತೋರಿರುವ ರೋಹಿತ್ ಶರ್ಮಾ ತಮ್ಮ ನಾಯಕತ್ವದಲ್ಲಿ ತಂಡವನ್ನು ದಾಖಲೆಯ 6 ಬಾರಿ ಚಾಂಪಿಯನ್ ಮಾಡಿದ್ದಾರೆ.

ಇನ್ನೂ ಹೆಚ್ಚು ಓದಿ

30 ವರ್ಷಗಳ ಬಳಿಕ ಅಬ್ಬರ… ರೋಹಿತ್ ಶರ್ಮಾ ವಿಶ್ವ ದಾಖಲೆ

Rohit Sharma Century Record: ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ 90 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 7 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 119 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಹಿಟ್​ಮ್ಯಾನ್ ಏಕದಿನ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅದು ಕೂಡ ಸನತ್ ಜಯಸೂರ್ಯ ಹಾಗೂ ತಿಲಕರತ್ನೆ ದಿಲ್ಶಾನ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

IND vs ENG: 475 ದಿನಗಳ ಬರ ನೀಗಿಸಿಕೊಂಡ ಶತಕ ವೀರ ರೋಹಿತ್ ಶರ್ಮಾ

Rohit Sharma century: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಬಿರುಗಾಳಿಯ ಶತಕ ಸಿಡಿಸಿದ್ದಾರೆ. ಕೇವಲ 76 ಎಸೆತಗಳಲ್ಲಿ ಶತಕ ಪೂರೈಸಿದ ರೋಹಿತ್ ಅವರ ಇನ್ನಿಂಗ್ಸ್​ನಲ್ಲಿ 7 ಸಿಕ್ಸರ್‌ ಮತ್ತು 9 ಬೌಂಡರಿಗಳು ಸೇರಿವೆ. ಈ ಮೂಲಕ ರೋಹಿತ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 338 ದಿನಗಳ ನಂತರ ಮತ್ತು ಏಕದಿನ ಪಂದ್ಯದಲ್ಲಿ 475 ದಿನಗಳ ನಂತರ ಶತಕದ ಬರ ನೀಗಿಸಿಕೊಂಡಿದ್ದಾರೆ.

IND vs ENG: ರೋಹಿತ್ ಸಿಡಿಲಬ್ಬರದ ಬ್ಯಾಟಿಂಗ್‌ಗೆ ದ್ರಾವಿಡ್, ಗೇಲ್ ದಾಖಲೆ ಉಡೀಸ್..!

Rohit Sharma: ಕಟಕ್ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಕೇವಲ 30 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದು, ಮತ್ತೆ ತಮ್ಮ ಹಳೆಯ ಫಾರ್ಮ್‌ಗೆ ಮರಳಿದ್ದಾರೆ. ರೋಹಿತ್ ತಮ್ಮ ಅರ್ಧಶತಕದ ಇನ್ನಿಂಗ್ಸ್​ನಲ್ಲಿ ಇದುವರೆಗೆ 4 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇದರ ಜೊತೆಗೆ ರೋಹಿತ್ ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹಾಗೂ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿದಿದ್ದಾರೆ.

Rohit Sharma: ಏಕದಿನದಲ್ಲಿ ಧೋನಿಗಿಂತ ರೋಹಿತ್ ಬೆಸ್ಟ್ ನಾಯಕ; ಇದು ಅಂಕಿ ಅಂಶ ನುಡಿದ ಸತ್ಯ

Rohit Sharma captaincy: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಕಳೆದ 6 ಪಂದ್ಯಗಳ ಸೋಲಿನ ಸರಣಿಗೆ ತೆರೆ ಎಳೆದಿದ್ದಾರೆ. ನಾಯಕನಾಗಿ ಅವರ ಯಶಸ್ಸು, ಏಕದಿನ ಮಾದರಿಯಲ್ಲಿ ಅವರ ಅತ್ಯುತ್ತಮ ನಾಯಕತ್ವವನ್ನು ಮತ್ತೆ ಸಾಬೀತುಪಡಿಸಿದೆ.

IND vs ENG: ಸಿನಿಮಾ ನೋಡುತ್ತಿದ್ದವನಿಗೆ ಮಧ್ಯರಾತ್ರಿ ಫೋನ್ ಬಂತು; ತಂಡಕ್ಕೆ ಆಯ್ಕೆಯಾದ ರೋಚಕ ಕಹಾನಿ ತೆರೆದಿಟ್ಟ ಅಯ್ಯರ್

Shreyas Iyer: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅವರ ಸ್ಫೋಟಕ 59 ರನ್‌ಗಳ ಇನ್ನಿಂಗ್ಸ್ ಭಾರತಕ್ಕೆ ಗೆಲುವು ತಂದುಕೊಟ್ಟಿದೆ. ಇನ್ನು ಪಂದ್ಯ ಮುಗಿದ ಬಳಿಕ ತಾನು ತಂಡಕ್ಕೆ ಆಯ್ಕೆಯಾಗಿದ್ದು ಹೇಗೆ ಎಂಬುದನ್ನು ವಿವರಿಸಿರುವ ಶ್ರೇಯಸ್ ಅಯ್ಯರ್, ರೋಹಿತ್ ಶರ್ಮಾ ಅವರು ರಾತ್ರಿ ಕರೆ ಮಾಡಿ ನಾನು ಪ್ಲೇಯಿಂಗ್​ 11 ನಲ್ಲಿ ಆಡಬಹುದು ಎಂಬ ವಿಷಯವನ್ನು ತಿಳಿಸಿದರು ಎಂದಿದ್ದಾರೆ.

IND vs ENG: ನಿವೃತ್ತಿಯ ಪ್ರಶ್ನೆಗೆ ಖಡಕ್ಕಾಗಿ ಉತ್ತರಿಸಿದ ರೋಹಿತ್ ಶರ್ಮಾ; ಏನು ಹೇಳಿದ್ರು ನೀವೇ ನೋಡಿ

Rohit Sharma Press Conference: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಗೆ ಮುನ್ನ ರೋಹಿತ್ ಶರ್ಮಾ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ರೋಹಿತ್​ಗೆ ಭವಿಷ್ಯದ ಬಗ್ಗೆ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ರೋಹಿತ್, ತಮ್ಮ ಭವಿಷ್ಯದ ಯೋಜನೆಗಳನ್ನು ಚರ್ಚಿಸಲು ಇದು ಸೂಕ್ತ ಸಮಯವಲ್ಲ ಎಂದು ಹೇಳಿದರು.

Champions Trophy: ರೋಹಿತ್ ಶರ್ಮಾ ನಿವೃತ್ತಿಗೆ ಗಡುವು..!

Rohit Sharma: ರೋಹಿತ್ ಶರ್ಮಾ ಅವರಿಗೆ ಈಗ 37 ವರ್ಷ. 2027ರ ಏಕದಿನ ವಿಶ್ವಕಪ್ ವೇಳೆಗೆ ಅವರಿಗೆ 39 ವರ್ಷ ಪ್ರಾಯವಾಗಲಿದೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯೊಂದಿಗೆ ವಿದಾಯ ಹೇಳುವಂತೆ ಹಿಟ್​ಮ್ಯಾನ್ ಅವರನ್ನು ಕೋರಲಾಗಿದೆ. ಒಂದು ವೇಳೆ ರೋಹಿತ್ ಶರ್ಮಾ ನಿವೃತ್ತಿ ಘೋಷಿಸದಿದ್ದರೆ, ಮುಂಬರುವ ಸರಣಿಗಳಿಗೆ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿಲ್ಲ.

ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಇಕ್ಕಟ್ಟಿಗೆ ಸಿಲುಕಿದ ರೋಹಿತ್ ಶರ್ಮಾ

Champions Trophy 2025: ನಾಯಕ ರೋಹಿತ್ ಶರ್ಮಾಗೆ ಚಾಂಪಿಯನ್ಸ್ ಟ್ರೋಫಿಗಾಗಿ ತಂಡ ಆಯ್ಕೆ ಮಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಇಬ್ಬರೂ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಜಡೇಜಾ ರಣಜಿ ಟ್ರೋಫಿಯಲ್ಲಿ ಅದ್ಭುತ ಬೌಲಿಂಗ್ ಮಾಡಿದರೆ, ಅಕ್ಷರ್ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯಗಳಲ್ಲಿ ಉತ್ತಮವಾಗಿ ಆಡಿದ್ದಾರೆ. ಇಬ್ಬರೂ ಸ್ಪಿನ್ ಆಲ್-ರೌಂಡರ್ ಆಗಿರುವುದರಿಂದ ರೋಹಿತ್ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ದೇಶೀ ಟೂರ್ನಿಯಲ್ಲೂ ಫೇಲ್; ರಣಜಿಯಿಂದ ಹಿಂದೆ ಸರಿದ ರೋಹಿತ್ ಶರ್ಮಾ

Rohit Sharma Quits Ranji Trophy: ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ರಣಜಿ ಟ್ರೋಫಿಯಲ್ಲಿ ತಮ್ಮ ಲಯ ಕಂಡುಕೊಳ್ಳಲು ಪ್ರಯತ್ನಿಸಿದ್ದರು. ಆದರೆ ನಿರೀಕ್ಷಿತ ಫಲಿತಾಂಶ ಸಿಗದ ಕಾರಣ, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಗೆ ತಯಾರಿ ನಡೆಸಲು ಅವರು ರಣಜಿ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಯಶಸ್ವಿ ಜೈಸ್ವಾಲ್ ಕೂಡ ಇದೇ ಕಾರಣಕ್ಕಾಗಿ ಹಿಂದೆ ಸರಿಯುತ್ತಿದ್ದಾರೆ.

ರೋಹಿತ್ ವಿಕೆಟ್ ಪಡೆದು ಸಂಭ್ರಮಾಚರಣೆ ಮಾಡದಿರಲು ಕಾರಣ ತಿಳಿಸಿದ ಉಮರ್ ನಜೀರ್

Rohit Sharma's Ranji Trophy Return: ರೋಹಿತ್ ಶರ್ಮಾ ಅವರ ಕಳಪೆ ಪ್ರದರ್ಶನ ರಣಜಿ ಟ್ರೋಫಿಯಲ್ಲೂ ಮುಂದುವರೆದಿದೆ. 10 ವರ್ಷಗಳ ಬಳಿಕ ರಣಜಿ ಅಖಾಡಕ್ಕಿಳಿದಿದ್ದ ರೋಹಿತ್ ಕೇವಲ 3 ರನ್ ಗಳಿಸಿ ಔಟ್ ಆದರು. ಜಮ್ಮು ಮತ್ತು ಕಾಶ್ಮೀರದ ಉಮರ್ ನಜೀರ್ ಅವರು ರೋಹಿತ್ ಅವರ ವಿಕೆಟ್ ಪಡೆದರೂ ಸಂಭ್ರಮಿಸಲಿಲ್ಲ. ಇದೀಗ ತಾನು ಸಂಭ್ರಮಿಸದಿರಲು ಕಾರಣ ಏನು ಎಂಬುದನ್ನು ಈ ವೇಗಿ ವಿವರಿಸಿದ್ದಾರೆ.

ವಿಠಲ ಗ್ರಾಮದ ಬಳಿ 20ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ
ವಿಠಲ ಗ್ರಾಮದ ಬಳಿ 20ಕ್ಕೂ ಅಧಿಕ ಕಾಡಾನೆಗಳು ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ
ಯೋಗಿ ಬಗ್ಗೆ ಇರೋ ಬೇಸರ ಹೇಳಿಕೊಂಡ ದುನಿಯಾ ವಿಜಯ್
ಯೋಗಿ ಬಗ್ಗೆ ಇರೋ ಬೇಸರ ಹೇಳಿಕೊಂಡ ದುನಿಯಾ ವಿಜಯ್
ಇಂದಿನಿಂದ 3 ದಿನ ಟಿ ನರಸೀಪುರದಲ್ಲಿ ಕುಂಭಮೇಳ: ಸಿದ್ಧತೆ ಹೇಗಿದೆ ನೋಡಿ
ಇಂದಿನಿಂದ 3 ದಿನ ಟಿ ನರಸೀಪುರದಲ್ಲಿ ಕುಂಭಮೇಳ: ಸಿದ್ಧತೆ ಹೇಗಿದೆ ನೋಡಿ
ಮೈಸೂರು: ತ್ರಿವೇಣಿ ಸಂಗಮ ಕುಂಭಮೇಳದ ಮಹತ್ವ ತಿಳಿಯಿರಿ
ಮೈಸೂರು: ತ್ರಿವೇಣಿ ಸಂಗಮ ಕುಂಭಮೇಳದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ನಾಲ್ಕು ಗ್ರಹಗಳ ಶುಭಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ನಾಲ್ಕು ಗ್ರಹಗಳ ಶುಭಫಲವಿದೆ
ಹಾಸಿಗೆ ಹಿಡಿದ ಮಗನ ಚಿಕಿತ್ಸೆಗೆ ಕುಮಾರಸ್ವಾಮಿ ಬಳಿ ಸಹಾಯ ಕೇಳಿದ ತಾಯಿ
ಹಾಸಿಗೆ ಹಿಡಿದ ಮಗನ ಚಿಕಿತ್ಸೆಗೆ ಕುಮಾರಸ್ವಾಮಿ ಬಳಿ ಸಹಾಯ ಕೇಳಿದ ತಾಯಿ
ಕೊಹ್ಲಿಯ ಕೈ ಮುಟ್ಟಿ ಸ್ವರ್ಗ ಸಿಕ್ಕವನಂತೆ ಕುಣಿದಾಟಿದ ಬಾಲಕ
ಕೊಹ್ಲಿಯ ಕೈ ಮುಟ್ಟಿ ಸ್ವರ್ಗ ಸಿಕ್ಕವನಂತೆ ಕುಣಿದಾಟಿದ ಬಾಲಕ
ಬೆಂಗಳೂರು: ಮಾದಾವರ ಸುತ್ತಮುತ್ತ ಫುಲ್​ ಟ್ರಾಫಿಕ್​ಜಾಮ್, ವಾಹನ ಸವಾರರ ಪರದಾಟ
ಬೆಂಗಳೂರು: ಮಾದಾವರ ಸುತ್ತಮುತ್ತ ಫುಲ್​ ಟ್ರಾಫಿಕ್​ಜಾಮ್, ವಾಹನ ಸವಾರರ ಪರದಾಟ
ಕಟಕ್‌ನಲ್ಲಿ ಅರ್ಧಕ್ಕೆ ನಿಂತ ಪಂದ್ಯ; ಮೈದಾನ ತೊರೆದ ಎಲ್ಲಾ ಆಟಗಾರರು..!
ಕಟಕ್‌ನಲ್ಲಿ ಅರ್ಧಕ್ಕೆ ನಿಂತ ಪಂದ್ಯ; ಮೈದಾನ ತೊರೆದ ಎಲ್ಲಾ ಆಟಗಾರರು..!
Aero india: ಬೆಂಗಳೂರಿನಲ್ಲಿ ರಾಜನಾಥ್​ ಸಿಂಗ್​ ಸುದ್ದಿಗೋಷ್ಠಿಯ ನೇರಪ್ರಸಾರ
Aero india: ಬೆಂಗಳೂರಿನಲ್ಲಿ ರಾಜನಾಥ್​ ಸಿಂಗ್​ ಸುದ್ದಿಗೋಷ್ಠಿಯ ನೇರಪ್ರಸಾರ