AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma

Rohit Sharma

2007 ರಲ್ಲಿ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ರೋಹಿತ್ ಶರ್ಮಾ, ಅದೇ ವರ್ಷ ಟಿ20 ಕ್ರಿಕೆಟ್​ಗೂ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದರು. ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ 7 ವರ್ಷಗಳ ನಂತರ ಟೆಸ್ಟ್ ಕ್ರಿಕೆಟ್​ನಲ್ಲಿ ಚೊಚ್ಚಲ ಅವಕಾಶ ಪಡೆದ ರೋಹಿತ್ ಶರ್ಮಾ, ಅಂದಿನಿಂದ ಇಂದಿನವರೆಗೆ ಟೀಂ ಇಂಡಿಯಾದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಪ್ರಸ್ತುತ ನಾಯಕನಾಗಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ತಂಡ ಡಬ್ಲ್ಯುಟಿಸಿ ಫೈನಲ್ ಸೇರಿದಂತೆ ಒಂದು ಏಕದಿನ ವಿಶ್ವಕಪ್ ಫೈನಲ್ ಕೂಡ ಆಡಿದೆ. ಆದರೆ ತಂಡಕ್ಕೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಟೀಂ ಇಂಡಿಯಾ ಪರ ಇದುವರೆಗೆ ಮೂರು ಮಾದರಿಯ ಕ್ರಿಕೆಟ್​ನಲ್ಲಿ 469 ಪಂದ್ಯಗಳನ್ನಾಡಿರುವ ರೋಹಿತ್, 46 ಶತಕ ಹಾಗೂ 100 ಅರ್ಧಶತಕ ಹಾಗೂ 4 ದ್ವಿಶತಕದ ಆಧಾರದ ಮೇಲೆ ಒಟ್ಟು 18511 ರನ್ ಕಲೆಹಾಕಿದ್ದಾರೆ. ಹಾಗೆಯೇ ಐಪಿಎಲ್​ನಲ್ಲೂ ತಮ್ಮ ಮ್ಯಾಜಿಕ್ ತೋರಿರುವ ರೋಹಿತ್ ಶರ್ಮಾ ತಮ್ಮ ನಾಯಕತ್ವದಲ್ಲಿ ತಂಡವನ್ನು ದಾಖಲೆಯ 6 ಬಾರಿ ಚಾಂಪಿಯನ್ ಮಾಡಿದ್ದಾರೆ.

ಇನ್ನೂ ಹೆಚ್ಚು ಓದಿ

Asia Cup 2025: ಏಷ್ಯಾಕಪ್​ನಲ್ಲಿ ಆಡುವುದಿಲ್ಲ ವಿರಾಟ್ ಕೊಹ್ಲಿ- ರೋಹಿತ್ ಶರ್ಮಾ

Asia Cup 2025: 2025 ರ ಏಷ್ಯಾ ಕಪ್ ಟಿ20 ಸ್ವರೂಪದಲ್ಲಿ ನಡೆಯಲಿದ್ದು, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ನಿವೃತ್ತರಾಗಿರುವುದರಿಂದ ಈ ಪಂದ್ಯಾವಳಿಯಲ್ಲಿ ಆಡುವುದಿಲ್ಲ. ಜುಲೈ 26 ರಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಟೂರ್ನಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿರುವುದು ಗಮನಾರ್ಹ.

ಏಕದಿನ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ ಯುಗಾಂತ್ಯ?

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಬಳಿಕ ಟೀಮ್ ಇಂಡಿಯಾ ಶ್ರೀಲಂಕಾ ಅಥವಾ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿಗೂ ಮುನ್ನ ಭಾರತ ಏಕದಿನ ತಂಡದ ನಾಯಕ ಬದಲಾಗುವ ಸಾಧ್ಯತೆಯಿದೆ. ಅಂದರೆ ಪ್ರಸ್ತುತ ನಾಯಕ ರೋಹಿತ್ ಶರ್ಮಾ ಅವರನ್ನು ಕ್ಯಾಪ್ಟನ್ ಪಟ್ಟದಿಂದ ಕೆಳಗಿಳಿಸುವುದು ಬಹುತೇಕ ಖಚಿತ.

Rohit Sharma: ದಿಢೀರನೆ ಇಂಗ್ಲೆಂಡ್ ತಲುಪಿದ ರೋಹಿತ್ ಶರ್ಮಾ: ವೈರಲ್ ಆಗುತ್ತಿದೆ ಫೋಟೋ

England vs India 3rd Test: ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಮೂರನೇ ಪಂದ್ಯ ಗುರುವಾರ ಲಾರ್ಡ್ಸ್‌ನ ಐತಿಹಾಸಿಕ ಮೈದಾನದಲ್ಲಿ ಆರಂಭವಾಗಿದೆ. ಎಲ್ಲರ ಕಣ್ಣುಗಳು ಮೈದಾನದತ್ತ ಇರುವಾಗ, ಇದ್ದಕ್ಕಿದ್ದಂತೆ ಒಂದು ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಮೂಡಿಸಿತು. ಈ ಫೋಟೋ ಟೀಮ್ ಇಂಡಿಯಾದ ಮಾಜಿ ಟೆಸ್ಟ್ ನಾಯಕ ರೋಹಿತ್ ಶರ್ಮಾ ಅವರದ್ದಾಗಿದ್ದು, ಬಾಲಿವುಡ್ ತಾರೆ ಬಾಬಿ ಡಿಯೋಲ್ ಕೂಡ ಅವರೊಂದಿಗೆ ಇದ್ದರು.

IND vs SL: ಆಗಸ್ಟ್‌ನಲ್ಲಿ ಭಾರತ- ಶ್ರೀಲಂಕಾ ನಡುವೆ ಏಕದಿನ, ಟಿ20 ಸರಣಿ

India's Sri Lanka Tour: ಭಾರತದ ಬಾಂಗ್ಲಾದೇಶ ಪ್ರವಾಸ ರದ್ದಾಗಿದ್ದು, ಇದೀಗ ಶ್ರೀಲಂಕಾ ಪ್ರವಾಸ ಮಾಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಆಗಸ್ಟ್‌ನಲ್ಲಿ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳ ಸರಣಿ ನಡೆಯುವ ಸಾಧ್ಯತೆಯಿದೆ. ಬಿಸಿಸಿಐ ಇನ್ನೂ ಅಧಿಕೃತವಾಗಿ ಘೋಷಿಸಿಲ್ಲವಾದರೂ, ಈ ಸುದ್ದಿ ಕ್ರಿಕೆಟ್ ಅಭಿಮಾನಿಗಳಲ್ಲಿ ಉತ್ಸಾಹವನ್ನು ಹುಟ್ಟುಹಾಕಿದೆ.

IND vs BAN: ಟೀಂ ಇಂಡಿಯಾದ ಬಾಂಗ್ಲಾದೇಶ ಪ್ರವಾಸವನ್ನು ಮುಂದಿನ ವರ್ಷಕ್ಕೆ ಮುಂದೂಡಿದ ಬಿಸಿಸಿಐ

India's tour of Bangladesh rescheduled: ಭಾರತ ಮತ್ತು ಬಾಂಗ್ಲಾದೇಶದ ನಡುವೆ ಆಗಸ್ಟ್ 2025ರಲ್ಲಿ ನಡೆಯಬೇಕಿದ್ದ ಏಕದಿನ ಮತ್ತು ಟಿ20 ಸರಣಿಯನ್ನು ಬಿಸಿಸಿಐ ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗಳು ಪರಸ್ಪರ ಒಪ್ಪಿಗೆಯೊಂದಿಗೆ ಸೆಪ್ಟೆಂಬರ್ 2026ಕ್ಕೆ ಮುಂದೂಡಿವೆ. ಬಾಂಗ್ಲಾದೇಶದ ರಾಜಕೀಯ ಅಸ್ಥಿರತೆ ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

ಟೆಸ್ಟ್ ಮತ್ತು ಏಕದಿನದಲ್ಲಿ ದ್ವಿಶತಕ ಬಾರಿಸಿರುವವರ ಪಟ್ಟಿಯಲ್ಲಿ ಭಾರತೀಯರದ್ದೇ ಪಾರುಪತ್ಯ

Elite double century club: ಶುಭ್ಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅದ್ಭುತವಾದ 269 ರನ್ ಗಳಿಸುವ ಮೂಲಕ ಅನೇಕ ದಾಖಲೆಗಳನ್ನು ನಿರ್ಮಿಸಿದ್ದಾರೆ. ಅವರು ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ದ್ವಿಶತಕ ಗಳಿಸಿದ ಕೆಲವೇ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಈ ಸಾಧನೆಯೊಂದಿಗೆ ಅವರು ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಮತ್ತು ರೋಹಿತ್ ಶರ್ಮಾ ಅವರಂತಹ ದಂತಕಥೆಗಳ ಸಾಲಿಗೆ ಸೇರಿದ್ದಾರೆ.

IND vs BAN: ಭಾರತ- ಬಾಂಗ್ಲಾ ನಡುವಿನ ಏಕದಿನ, ಟಿ20 ಸರಣಿ ಭಾಗಶಃ ರದ್ದು

India's Bangladesh Tour in Jeopardy: ಭಾರತದ ಬಾಂಗ್ಲಾದೇಶ ಕ್ರಿಕೆಟ್ ಪ್ರವಾಸ ರದ್ದಾಗುವ ಸಾಧ್ಯತೆ ಹೆಚ್ಚಾಗಿದೆ. ಬಾಂಗ್ಲಾದೇಶದಲ್ಲಿನ ರಾಜಕೀಯ ಅಸ್ಥಿರತೆ ಮತ್ತು ಸುರಕ್ಷತಾ ಕಾಳಜಿಗಳಿಂದಾಗಿ ಕೇಂದ್ರ ಸರ್ಕಾರ ಈ ಪ್ರವಾಸಕ್ಕೆ ಅನುಮತಿ ನೀಡುತ್ತಿಲ್ಲ ಎಂದು ವರದಿಯಾಗಿದೆ. ಹೀಗಾಗಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಆಡುವುದನ್ನು ವೀಕ್ಷಿಸಲು ಕಾಯುತ್ತಿರುವ ಅಭಿಮಾನಿಗಳಿಗೆ ಇದು ನಿರಾಶಾದಾಯಕ ಸುದ್ದಿಯಾಗಿದೆ. ಬಿಸಿಸಿಐ ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಶೀಘ್ರದಲ್ಲೇ ಒಂದು ನಿರ್ಧಾರವನ್ನು ಪ್ರಕಟಿಸಬಹುದು ಎಂದು ವರದಿಯಾಗಿದೆ.

IND vs ENG: ಶತಕ ವಂಚಿತರಾದರೂ ರೋಹಿತ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್

Yashasvi Jaiswal: ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ 87 ರನ್ ಗಳಿಸಿ ಔಟಾದರು. ಶತಕದಿಂದ ವಂಚಿತರಾದರೂ, SENA ದೇಶಗಳಲ್ಲಿ ಅತಿ ಹೆಚ್ಚು ಬಾರಿ 50+ ಸ್ಕೋರ್‌ ಹೊಂದಿರುವ ಭಾರತೀಯ ಆರಂಭಿಕ ಆಟಗಾರ ಎಂಬ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದರು. ಕೇವಲ 17 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ ಜೈಸ್ವಾಲ್, ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು 50+ ಸ್ಕೋರ್‌ ಗಳಿಸಿದ ಭಾರತೀಯ ಆರಂಭಿಕ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದರು.

ಕೊಹ್ಲಿ- ರೋಹಿತ್ ಇಲ್ಲದ ಡ್ರೀಮ್ ಟಿ20 ತಂಡವನ್ನು ಪ್ರಕಟಿಸಿದ ವರುಣ್ ಚಕ್ರವರ್ತಿ

Varun Chakravarthy's Dream T20 XI Revealed: ವರುಣ್ ಚಕ್ರವರ್ತಿ ಅವರು ತಮ್ಮ ಕನಸಿನ ಟಿ20 ತಂಡವನ್ನು ಘೋಷಿಸಿದ್ದು, ಆ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರಿಲ್ಲ. ಮೂವರು ಭಾರತೀಯ ಆಟಗಾರರು (ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ) ಮತ್ತು ಎಂಟು ವಿದೇಶಿ ಆಟಗಾರರು ಈ ತಂಡದಲ್ಲಿದ್ದಾರೆ.

ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬೆದರಿಕೆ; 2 ದಿನ ಹೋಟೆಲ್​ನಲ್ಲೇ ಲಾಕ್..!

India vs Pakistan T20 World Cup 2024: ಭಾರತ-ಪಾಕಿಸ್ತಾನ ನಡುವಿನ 2024 ರ ಟಿ20 ವಿಶ್ವಕಪ್ ಪಂದ್ಯಕ್ಕೂ ಮುನ್ನ, ಭಾರತ ತಂಡಕ್ಕೆ ಬೆದರಿಕೆಗಳು ಎದುರಾಗಿದ್ದವು. ಇದರಿಂದಾಗಿ ತಂಡದ ಆಟಗಾರರನ್ನು ಎರಡು ದಿನಗಳ ಕಾಲ ಹೋಟೆಲ್‌ನಲ್ಲಿಯೇ ಲಾಕ್ ಮಾಡಲಾಗಿತ್ತು. ನಾವೆಲ್ಲೂ ಹೊರಗೆ ಹೋಗುವಂತಿರಲಿಲ್ಲ. ಊಟವನ್ನು ಸಹ ರೂಮ್​​ನಿಂದಲೇ ಬುಕ್ ಮಾಡಬೇಕಾಗಿತ್ತು ಎಂದು ರೋಹಿತ್ ಶರ್ಮಾ ಹೇಳಿಕೊಂಡಿದ್ದಾರೆ.

ಕ್ರೌಡ್ ನಿಭಾಯಿಸಲಾಗದೆ ಮಾಲೀಕನಿಂದ ಅಂಗಡಿ ಕ್ಲೋಸ್!
ಕ್ರೌಡ್ ನಿಭಾಯಿಸಲಾಗದೆ ಮಾಲೀಕನಿಂದ ಅಂಗಡಿ ಕ್ಲೋಸ್!
ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್