AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma

Rohit Sharma

2007 ರಲ್ಲಿ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ರೋಹಿತ್ ಶರ್ಮಾ, ಅದೇ ವರ್ಷ ಟಿ20 ಕ್ರಿಕೆಟ್​ಗೂ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದರು. ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ 7 ವರ್ಷಗಳ ನಂತರ ಟೆಸ್ಟ್ ಕ್ರಿಕೆಟ್​ನಲ್ಲಿ ಚೊಚ್ಚಲ ಅವಕಾಶ ಪಡೆದ ರೋಹಿತ್ ಶರ್ಮಾ, ಅಂದಿನಿಂದ ಇಂದಿನವರೆಗೆ ಟೀಂ ಇಂಡಿಯಾದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಪ್ರಸ್ತುತ ನಾಯಕನಾಗಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ತಂಡ ಡಬ್ಲ್ಯುಟಿಸಿ ಫೈನಲ್ ಸೇರಿದಂತೆ ಒಂದು ಏಕದಿನ ವಿಶ್ವಕಪ್ ಫೈನಲ್ ಕೂಡ ಆಡಿದೆ. ಆದರೆ ತಂಡಕ್ಕೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಟೀಂ ಇಂಡಿಯಾ ಪರ ಇದುವರೆಗೆ ಮೂರು ಮಾದರಿಯ ಕ್ರಿಕೆಟ್​ನಲ್ಲಿ 469 ಪಂದ್ಯಗಳನ್ನಾಡಿರುವ ರೋಹಿತ್, 46 ಶತಕ ಹಾಗೂ 100 ಅರ್ಧಶತಕ ಹಾಗೂ 4 ದ್ವಿಶತಕದ ಆಧಾರದ ಮೇಲೆ ಒಟ್ಟು 18511 ರನ್ ಕಲೆಹಾಕಿದ್ದಾರೆ. ಹಾಗೆಯೇ ಐಪಿಎಲ್​ನಲ್ಲೂ ತಮ್ಮ ಮ್ಯಾಜಿಕ್ ತೋರಿರುವ ರೋಹಿತ್ ಶರ್ಮಾ ತಮ್ಮ ನಾಯಕತ್ವದಲ್ಲಿ ತಂಡವನ್ನು ದಾಖಲೆಯ 6 ಬಾರಿ ಚಾಂಪಿಯನ್ ಮಾಡಿದ್ದಾರೆ.

ಇನ್ನೂ ಹೆಚ್ಚು ಓದಿ

RCB vs MI: ಒಂದೇ ಪಂದ್ಯದಲ್ಲಿ ಒಟ್ಟಿಗೆ ಧೋನಿ ದಾಖಲೆ ಮುರಿದ ರೋಹಿತ್, ಕೊಹ್ಲಿ

Kohli, Rohit Match Dhoni's IPL Record: ಐಪಿಎಲ್ 2026ರ MI vs RCB ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಐತಿಹಾಸಿಕ ಮೈಲಿಗಲ್ಲನ್ನು ತಲುಪಿದ್ದಾರೆ. ಈ ದಿಗ್ಗಜ ಆಟಗಾರರು ತಮ್ಮ 278ನೇ ಐಪಿಎಲ್ ಪಂದ್ಯವನ್ನಾಡುವ ಮೂಲಕ ಎಂ.ಎಸ್. ಧೋನಿ ಅವರ ಐಪಿಎಲ್‌ನಲ್ಲಿ ಅತಿ ಹೆಚ್ಚು ಪಂದ್ಯಗಳ ದಾಖಲೆಯನ್ನು ಸರಿಗಟ್ಟಿದರು. ರಾಯ್‌ಪುರದಲ್ಲಿ ನಡೆದ ಈ 54ನೇ ಪಂದ್ಯ, ಮೂವರು ಕ್ರಿಕೆಟ್ ದಿಗ್ಗಜರ ಹೆಸರನ್ನು ಐಪಿಎಲ್ ಇತಿಹಾಸದ ಪುಟಗಳಲ್ಲಿ ಒಟ್ಟಾಗಿ ಸೇರಿಸಿತು.

MI, IPL 2026: ಮುಂಬೈ ಮಾಸ್ಟರ್ ಪ್ಲ್ಯಾನ್: ಹಾರ್ದಿಕ್-ಸೂರ್ಯಗೆ ಶಾಕ್.. ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆ?

Rohit Sharma Mumbai Indians Captain: ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ ಪ್ರಸಕ್ತ ಋತುವು ತೀರಾ ಕೆಟ್ಟದಾಗಿದೆ. ಸತತ ಸೋಲುಗಳಿಂದ ಬಳಲುತ್ತಿರುವಾಗ, ಪ್ರಮುಖ ಆಟಗಾರರ ಅನುಪಸ್ಥಿತಿಯು ತಂಡವನ್ನು ಇನ್ನಷ್ಟು ಚಿಂತೆಗೀಡು ಮಾಡಿದೆ. ಈ ಕಠಿಣ ಸಂದರ್ಭಗಳಲ್ಲಿ, ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ಅವರಿಗೆ ಹಸ್ತಾಂತರಿಸಲು ಮ್ಯಾನೇಜ್‌ಮೆಂಟ್ ಯೋಜಿಸುತ್ತಿರುವಂತಿದೆ.

ಹಿಟ್​ಮ್ಯಾನ್ ಆರ್ಭಟ: ರೋಹಿತ್ ಶರ್ಮಾಗೆ ಸ್ಪೆಷಲ್ ಗಿಫ್ಟ್ ನೀಡಿದ ನೀತಾ ಅಂಬಾನಿ

MI vs LSG: ಐಪಿಎಲ್ 2026ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಜಿದ್ದಾಜಿದ್ದಿನ ಹೋರಾಟದಲ್ಲಿ ಮುಂಬೈ ಇಂಡಿಯನ್ಸ್ ತಂಡ ಐತಿಹಾಸಿಕ ಜಯ ದಾಖಲಿಸಿದೆ. ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡು ಮೈದಾನಕ್ಕೆ ಮರಳಿದ ರೋಹಿತ್ ಶರ್ಮಾ, ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.

MI vs LSG: ಕಮ್​ಬ್ಯಾಕ್ ಅಂದ್ರೆ ಇದು: ರೋಹಿತ್ ಶರ್ಮಾ ಬಿರುಗಾಳಿಯ ಬ್ಯಾಟಿಂಗ್​ಗೆ ಉದಯವಾಯಿತು ಮೂರು ಬೃಹತ್ ದಾಖಲೆಗಳು

Rohit Sharma Record: ಏಪ್ರಿಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಗಾಯಗೊಂಡರು. ಇದರಿಂದ ಕೆಲವು ಪಂದ್ಯಗಳನ್ನು ತಪ್ಪಿಸಿಕೊಂಡರು. ಬಳಿಕ ನಿನ್ನೆ ಅವರು ಲಕ್ನೋ ವಿರುದ್ಧ ಕಣಕ್ಕಿಳಿದು ಸ್ಫೋಟಕ ಇನ್ನಿಂಗ್ಸ್ ಆಡಿ ತಂಡಕ್ಕೆ ಜಯ ತಂದುಕೊಟ್ಟರು. ಎಲ್‌ಎಸ್‌ಜಿ ವಿರುದ್ಧದ ಪಂದ್ಯದಲ್ಲಿ ರೋಹಿತ್ ಕೇವಲ 44 ಎಸೆತಗಳಲ್ಲಿ 84 ರನ್ ಗಳಿಸಿ ಹಲವು ದಾಖಲೆ ಕೂಡ ನಿರ್ಮಿಸಿದರು.

IPL 2026: ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ 3ನೇ ಆಟಗಾರ ಮನೀಷ್ ಪಾಂಡೆ

Manish Pandey's Historic IPL 2026 Record: ಐಪಿಎಲ್ 2026ರಲ್ಲಿ ಮನೀಷ್ ಪಾಂಡೆ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಕೆಕೆಆರ್ ಪರ ಆಡುವ ಮೂಲಕ, ಅವರು ಎಲ್ಲಾ 19 ಸೀಸನ್‌ಗಳಲ್ಲಿ ಕನಿಷ್ಠ ಒಂದು ಪಂದ್ಯವನ್ನಾದರೂ ಆಡಿದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಂತರದ ಮೂರನೇ ಆಟಗಾರರಾಗಿದ್ದಾರೆ. ಗಾಯದಿಂದಾಗಿ ಧೋನಿ ಈ ಸೀಸನ್‌ನಲ್ಲಿ ಆಡದಿರುವ ಕಾರಣ, ಪಾಂಡೆ ಧೋನಿ ಅವರನ್ನು ಈ ಪಟ್ಟಿಯಲ್ಲಿ ಹಿಂದಿಕ್ಕಿದ್ದಾರೆ. ಇದು ಪಾಂಡೆಯ ದೀರ್ಘಾವಧಿಯ ಐಪಿಎಲ್ ವೃತ್ತಿಜೀವನಕ್ಕೆ ಸಾಕ್ಷಿಯಾಗಿದೆ.

ಭಾರತೀಯರಿಲ್ಲದ ವಿಶ್ವ ಏಕದಿನ ಪ್ಲೇಯಿಂಗ್ XI ಪ್ರಕಟಿಸಿದ ಬಾಬರ್ ಆಝಂ

Babar Azam's World ODI XI Sparks Debate: ಪಾಕಿಸ್ತಾನಿ ನಾಯಕ ಬಾಬರ್ ಆಜಮ್ ತಮ್ಮ ವಿಶ್ವ ಏಕದಿನ XI ತಂಡವನ್ನು ಹೆಸರಿಸಿದ್ದಾರೆ. ಈ ತಂಡದಲ್ಲಿ ಯಾವುದೇ ಭಾರತೀಯ ಆಟಗಾರರಿಗೆ ಸ್ಥಾನ ನೀಡಿಲ್ಲ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಅವರಂತಹ ಅಗ್ರ ಆಟಗಾರರ ಅನುಪಸ್ಥಿತಿಯು ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಇಂಗ್ಲೆಂಡ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಆಟಗಾರರು ಬಾಬರ್ ಆಯ್ಕೆಯಲ್ಲಿ ಸ್ಥಾನ ಪಡೆದಿದ್ದಾರೆ.

IPL 2026: ಡಗೌಟ್​ನಿಂದಲೇ ಹಾರ್ದಿಕ್​ಗೆ ನಾಯಕನ ಪಾಠ ಮಾಡಿದ ರೋಹಿತ್ ಶರ್ಮಾ

Rohit Sharma: ಗಾಯದ ಕಾರಣದಿಂದಾಗಿ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪರ ಆಡದೇ ಇರಬಹುದು, ಆದರೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಅವರ ಸಲಹೆಗಳು ಮುಂಬೈ ಇಂಡಿಯನ್ಸ್ ವಿಕೆಟ್ ಪಡೆಯಲು ಸಹಾಯ ಮಾಡಿದವು. ಶನಿವಾರ ನಡೆದ ಪಂದ್ಯದಲ್ಲಿ ರೋಹಿತ್ ಡಗೌಟ್​ನಿಂದಲೇ ಹಾರ್ದಿಕ್​ಗೆ ಹೇಗೆ ಸಲಹೆ ನೀಡಿದರು ಎಂಬುದನ್ನು ನೋಡಿ.

ರೋಹಿತ್ ಶರ್ಮಾ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಮುಂಬೈ ಇಂಡಿಯನ್ಸ್ ತಂಡವು ಈವರೆಗೆ 8 ಪಂದ್ಯಗಳನ್ನಾಡಿದೆ. ಈ ಎಂಟು ಮ್ಯಾಚ್​ಗಳಲ್ಲಿ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಈ ಮೂಲಕ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಇನ್ನುಳಿದ 6 ಮ್ಯಾಚ್​ಗಳಲ್ಲಿ ಗೆದ್ದರೆ ಮಾತ್ರ ಮುಂಬೈ ಇಂಡಿಯನ್ಸ್ ತಂಡವು ಪ್ಲೇಆಫ್​ಗೇರಬಹುದು.

MI vs SRH: ಸತತ ಸೋಲುಗಳಿಂದ ಕಂಗೆಟ್ಟು 7 ವರ್ಷಗಳ ಇತಿಹಾಸ ಬದಲಿಸಿದ ಹಾರ್ದಿಕ್ ಪಾಂಡ್ಯ

MI vs SRH:ಐಪಿಎಲ್ 2026 ರಲ್ಲಿ ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನ ನೀಡಿದ್ದು, ಏಳು ಪಂದ್ಯಗಳಲ್ಲಿ ಐದು ಸೋತಿದೆ. ತಂಡದ ನಾಯಕ ಹಾರ್ದಿಕ್ ಪಾಂಡ್ಯ ಸನ್‌ರೈಸರ್ಸ್ ವಿರುದ್ಧ ಟಾಸ್ ಗೆದ್ದು ಏಳು ವರ್ಷಗಳ ನಂತರ ವಾಂಖೆಡೆಯಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ರೋಹಿತ್ ಶರ್ಮಾ ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ, ಮುಂದಿನ ಎರಡು ಪಂದ್ಯಗಳಲ್ಲಿ ಅವರು ಆಡದಿರುವುದು ಖಚಿತವಾಗಿದೆ.

GT vs MI Playing XI: ಮುಂಬೈ ಪರ ಇಬ್ಬರು ಐಪಿಎಲ್​ಗೆ ಪಾದಾರ್ಪಣೆ; ರೋಹಿತ್ ಮತ್ತೆ ಅಲಭ್ಯ

Gujarat Titans vs Mumbai Indians in Kannada Playing XI: ಮುಂಬೈ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮುಂಬೈ ಮೊದಲು ಬ್ಯಾಟಿಂಗ್‌ ಮಾಡಲಿದೆ. ಇನ್ನು ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಖಚಿತವಾಗಿದೆ. ಅದರಂತೆ ಟೈಟಾನ್ಸ್ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

IPL 2026: ಗುಜರಾತ್ ವಿರುದ್ಧ ಕಣಕ್ಕಿಳಿಯುತ್ತಾರಾ ರೋಹಿತ್ ಶರ್ಮಾ?

Rohit Sharma Injury Update: ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಪ್ಲೇಆಫ್ ಪ್ರವೇಶಕ್ಕೆ ಉಳಿದ ಎಲ್ಲ ಪಂದ್ಯಗಳನ್ನು ಗೆಲ್ಲಲೇಬೇಕಿದೆ. ಹ್ಯಾಮ್‌ಸ್ಟ್ರಿಂಗ್ ಗಾಯದಿಂದ ಕೊನೆಯ ಪಂದ್ಯ ತಪ್ಪಿಸಿಕೊಂಡಿದ್ದ ರೋಹಿತ್ ಶರ್ಮಾ, ಗುಜರಾತ್ ಟೈಟಾನ್ಸ್ ವಿರುದ್ಧ ಆಡುವುದು ಅನಿಶ್ಚಿತವಾಗಿದೆ. ನೆಟ್ಸ್‌ನಲ್ಲಿ ಅಭ್ಯಾಸ ನಡೆಸಿದ್ದರೂ, ಅವರ ಲಭ್ಯತೆ ಬಗ್ಗೆ ಅಧಿಕೃತ ನಿರ್ಧಾರವಾಗಿಲ್ಲ. ರೋಹಿತ್ ಅಲಭ್ಯತೆಯಲ್ಲಿ ಡಿ ಕಾಕ್ ಶತಕ ಸಿಡಿಸಿದರೂ ತಂಡ ಸೋತಿತ್ತು.

IPL 2026: ರೋಹಿತ್ ಕಂಬ್ಯಾಕ್ ಬಗ್ಗೆ ಆಘಾತಕ್ಕಾರಿ ಮಾಹಿತಿ ನೀಡಿದ ಹಾರ್ದಿಕ್

Rohit Sharma Injury Update: ಐಪಿಎಲ್ 2026ರಲ್ಲಿ ಮುಂಬೈ ಇಂಡಿಯನ್ಸ್ ಸತತ ಸೋಲುಗಳಿಂದ ಕಂಗೆಟ್ಟಿದೆ. ಇದಕ್ಕೆ ಮತ್ತೊಂದು ಆಘಾತವೆಂದರೆ ಸ್ಟಾರ್ ಆರಂಭಿಕ ರೋಹಿತ್ ಶರ್ಮಾ ಗಾಯದ ಕಾರಣ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿರುವುದು. ಕನಿಷ್ಠ ಎರಡು ಪಂದ್ಯಗಳಿಗೆ ಅಲಭ್ಯರಾಗಿರುವ ರೋಹಿತ್ ಅನುಪಸ್ಥಿತಿಯಲ್ಲಿ ಯುವ ಆಟಗಾರ ಮಯಾಂಕ್ ರಾವತ್‌ಗೆ ಚೊಚ್ಚಲ ಅವಕಾಶ ಲಭಿಸಿದೆ. ನಾಯಕ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈಗೆ ಪಂಜಾಬ್ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?