AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma

Rohit Sharma

2007 ರಲ್ಲಿ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ರೋಹಿತ್ ಶರ್ಮಾ, ಅದೇ ವರ್ಷ ಟಿ20 ಕ್ರಿಕೆಟ್​ಗೂ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದರು. ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ 7 ವರ್ಷಗಳ ನಂತರ ಟೆಸ್ಟ್ ಕ್ರಿಕೆಟ್​ನಲ್ಲಿ ಚೊಚ್ಚಲ ಅವಕಾಶ ಪಡೆದ ರೋಹಿತ್ ಶರ್ಮಾ, ಅಂದಿನಿಂದ ಇಂದಿನವರೆಗೆ ಟೀಂ ಇಂಡಿಯಾದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಪ್ರಸ್ತುತ ನಾಯಕನಾಗಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ತಂಡ ಡಬ್ಲ್ಯುಟಿಸಿ ಫೈನಲ್ ಸೇರಿದಂತೆ ಒಂದು ಏಕದಿನ ವಿಶ್ವಕಪ್ ಫೈನಲ್ ಕೂಡ ಆಡಿದೆ. ಆದರೆ ತಂಡಕ್ಕೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಟೀಂ ಇಂಡಿಯಾ ಪರ ಇದುವರೆಗೆ ಮೂರು ಮಾದರಿಯ ಕ್ರಿಕೆಟ್​ನಲ್ಲಿ 469 ಪಂದ್ಯಗಳನ್ನಾಡಿರುವ ರೋಹಿತ್, 46 ಶತಕ ಹಾಗೂ 100 ಅರ್ಧಶತಕ ಹಾಗೂ 4 ದ್ವಿಶತಕದ ಆಧಾರದ ಮೇಲೆ ಒಟ್ಟು 18511 ರನ್ ಕಲೆಹಾಕಿದ್ದಾರೆ. ಹಾಗೆಯೇ ಐಪಿಎಲ್​ನಲ್ಲೂ ತಮ್ಮ ಮ್ಯಾಜಿಕ್ ತೋರಿರುವ ರೋಹಿತ್ ಶರ್ಮಾ ತಮ್ಮ ನಾಯಕತ್ವದಲ್ಲಿ ತಂಡವನ್ನು ದಾಖಲೆಯ 6 ಬಾರಿ ಚಾಂಪಿಯನ್ ಮಾಡಿದ್ದಾರೆ.

ಇನ್ನೂ ಹೆಚ್ಚು ಓದಿ

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ: ರೋಹಿತ್-ವಿರಾಟ್ ಕೊಹ್ಲಿ ವಾಪಸ್

ವೆಸ್ಟ್ ಇಂಡೀಸ್ ವಿರುದ್ಧದ ಮುಂಬರುವ ಮೂರು ಪಂದ್ಯಗಳ ಏಕದಿನ ಹಾಗೂ ಟಿ20 ಸರಣಿಗೆ ಬಿಸಿಸಿಐ, 15 ಸದಸ್ಯರ ಭಾರತ ತಂಡವನ್ನು ಬುಧವಾರ ಪ್ರಕಟಿಸಲಾಗಿದೆ. ಎರಡು ತಿಂಗಳ ವಿರಾಮದ ಬಳಿಕ ಹಿರಿಯ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಂಡಕ್ಕೆ ತಂಡಕ್ಕೆ ವಾಪಸ್ ಆಗಿದ್ದಾರೆ. ಹಾಗಾದ್ರೆ, 15ರ ಬಳಗದಲ್ಲಿ ಯಾರೆಲ್ಲಾ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಏಕದಿನ ವಿಶ್ವಕಪ್ ಆಡ್ತೀರಾ? ಅಚ್ಚರಿಯ ಉತ್ತರ ನೀಡಿದ ರೋಹಿತ್ ಶರ್ಮಾ

ಮುಂದಿನ 2027ರ ಏಕದಿನ ವಿಶ್ವಕಪ್‌ಗಾಗಿ ಟೀಂ ಇಂಡಿಯಾ ತಯಾರಿ ನಡೆಸಿದೆ. ಆದರೆ, ಅನುಭವಿ ಆಟಗಾರ ರೋಹಿತ್ ಶರ್ಮಾ ವಿಶ್ವಕಪ್‌ನಲ್ಲಿ ಆಡುತ್ತಾರೆಯೇ ಎಂಬ ಪ್ರಶ್ನೆಗೆ ಸ್ವತಃ ರೋಹಿತ್ ನೀಡಿದ ಉತ್ತರ ಗೊಂದಲ ಸೃಷ್ಟಿಸಿದೆ. ‘ಅಕ್ಟೋಬರ್ 2027 ದೂರವಿದೆ, ನಂತರ ನೋಡೋಣ’ ಎಂದಿರುವುದು ಅವರ ಭವಿಷ್ಯದ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ. ಬಿಸಿಸಿಐ ಸ್ಪಷ್ಟಪಡಿಸಿದ್ದರೂ, ರೋಹಿತ್ ಮೌನ ಮುಂದುವರೆಸಿದ್ದು, ಅವರ ಆಯ್ಕೆ ಕುರಿತು ಚರ್ಚೆಗಳು ನಡೆಯುತ್ತಿವೆ.

ರೋಹಿತ್ ಶರ್ಮಾ ದಾಖಲೆ ಪುಡಿಗಟ್ಟಲು ಸಜ್ಜಾದ ಸ್ಮೃತಿ ಮಂಧಾನ

ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ ಸ್ಮೃತಿ ಮಂಧಾನ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಗಳಿಸಿದರೆ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಅವರ ಅತಿ ಹೆಚ್ಚು 50+ ಸ್ಕೋರ್‌ಗಳ ದಾಖಲೆಯನ್ನು ಮುರಿಯಲಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ನಂತರ ಅತಿ ಹೆಚ್ಚು 50+ ರನ್ ಗಳಿಸಿದ ಎರಡನೇ ಭಾರತೀಯ ಆಟಗಾರ್ತಿಯಾಗಿ ಹೊರಹೊಮ್ಮಲಿದ್ದಾರೆ.

ರೋಹಿತ್ ಶರ್ಮಾ ಏಕದಿನ ವಿಶ್ವಕಪ್ ಭವಿಷ್ಯ ಇಂದು ನಿರ್ಧಾರ!

ಟೀಮ್ ಇಂಡಿಯಾ ಅಭಿಮಾನಿಗಳ ಕಣ್ಣು ಇಂದು ಮುಂಬೈನಲ್ಲಿರುವ ಬಿಸಿಸಿಐ ಪ್ರಧಾನ ಕಚೇರಿಯತ್ತ ನೆಟ್ಟಿದೆ. ಇತ್ತೀಚಿನ ಸರಣಿಗಳಲ್ಲಿನ ಕಳಪೆ ಪ್ರದರ್ಶನದ ತನಿಖೆಗಾಗಿ ಬಿಸಿಸಿಐ ಪರಾಮರ್ಶನಾ ಸಭೆ ಕರೆದಿದ್ದು, ಇದೇ ವೇದಿಕೆಯಲ್ಲಿ ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಏಕದಿನ ಕ್ರಿಕೆಟ್ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ.

ರೋಹಿತ್ ಶರ್ಮಾ ವಿಶ್ವಕಪ್ ಭವಿಷ್ಯ: ಅಗರ್ಕರ್, ಬಿಸಿಸಿಐಗೆ ರಹಾನೆ ಖಡಕ್ ಸಂದೇಶ!

ಭಾರತೀಯ ಕ್ರಿಕೆಟ್‌ನಲ್ಲಿ ಸದ್ಯ ರೋಹಿತ್ ಶರ್ಮಾ ಅವರ ಭವಿಷ್ಯದ ಕುರಿತು ಚರ್ಚೆಗಳು ಮುಂದುವರೆದಿದೆ. 2027ರ ಏಕದಿನ ವಿಶ್ವಕಪ್‌ಗೆ ರೋಹಿತ್ ಅವರನ್ನು ಮುಂದುವರಿಸುವ ವಿಷಯದಲ್ಲಿ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಕೇವಲ 'ಸರಣಿಯಿಂದ ಸರಣಿಗೆ' ನಿರ್ಧಾರ ಕೈಗೊಳ್ಳುತ್ತಿರುವುದು ಕ್ರಿಕೆಟ್ ವಲಯದ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. 

ರೋಹಿತ್-ಕೊಹ್ಲಿಯನ್ನು ಕೈಬಿಡುವ ಧೈರ್ಯ ಮಾಡಬೇಡಿ: ಅಶ್ವಿನ್ ಎಚ್ಚರಿಕೆ

Rohit Sharma - Virat Kohli: ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಈಗಾಗಲೇ ನಿವೃತ್ತರಾಗಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ, ಮುಂಬರುವ ಏಕದಿನ ವಿಶ್ವಕಪ್​ವರೆಗೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ಇರಾದೆಯಲ್ಲಿದ್ದಾರೆ. ಇದಾಗ್ಯೂ, ಕೆಲ ಪಂದ್ಯಗಳಲ್ಲಿನ ಕಳಪೆ ಪ್ರದರ್ಶನವನ್ನೇ ಮುಂದಿಟ್ಟು ಈ ಇಬ್ಬರು ದಿಗ್ಗಜರನ್ನು ಗುರಿಯಾಗಿಸಿ ಟೀಕಿಸಲಾಗುತ್ತಿದೆ ಎಂದು ಅಶ್ವಿನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದೇಶಿ ನೆಲದಲ್ಲಿ ಅತಿ ಹೆಚ್ಚು ರನ್; ಅಗ್ರಸ್ಥಾನದಲ್ಲಿ ರೋಹಿತ್

Team India ODI Crisis: ಐಪಿಎಲ್ ನಂತರ ಟೀಂ ಇಂಡಿಯಾ ವಿದೇಶಿ ಏಕದಿನ ಸರಣಿಗಳಲ್ಲಿ ವೈಫಲ್ಯ ಕಂಡಿದೆ. ಬ್ಯಾಟಿಂಗ್ ವಿಭಾಗದ ಕಳಪೆ ಪ್ರದರ್ಶನವೇ ಮುಖ್ಯ ಕಾರಣ. ರೋಹಿತ್ ಶರ್ಮಾ ಗರಿಷ್ಠ ರನ್ ಗಳಿಸಿದ್ದರೂ, ತಂಡದಿಂದ ಕೈಬಿಡುವ ಸಾಧ್ಯತೆಯಿದೆ. ಆದರೆ, ಕಳಪೆ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ಅವರನ್ನು ಉಳಿಸಿಕೊಳ್ಳಲಾಗಿದೆ. ಇದು ತಂಡದ ಆಯ್ಕೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

‘ಅದು ನನಗೆ ಮುಖ್ಯವಲ್ಲ’; ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ರೋಹಿತ್

Rohit Sharma's Fiery Reply to Retirement Rumors: ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಐತಿಹಾಸಿಕ ಶತಕ ಸಿಡಿಸಿ, ತಮ್ಮ ನಿವೃತ್ತಿ ವದಂತಿಗಳಿಗೆ ಬ್ಯಾಟ್​ನಿಂದಲೇ ಉತ್ತರ ನೀಡಿದ್ದಾರೆ. ಏಕದಿನ ತಂಡದಲ್ಲಿ ತಮ್ಮ ಸ್ಥಾನದ ಬಗ್ಗೆ ಕೇಳಿಬರುತ್ತಿದ್ದ ಟೀಕೆಗಳಿಗೆ ಪ್ರತಿಕ್ರಿಯಿಸಿದ ಹಿಟ್‌ಮ್ಯಾನ್, ಈ ರೀತಿಯ ಮಾತುಗಳು ತನ್ನ ಆಟದ ಮೇಲೆ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ. ದೇಶಕ್ಕಾಗಿ ಆಡುವುದು ಮತ್ತು ರನ್ ಗಳಿಸುವುದೇ ತನ್ನ ಗುರಿ ಎಂದು ಹೇಳುವ ಮೂಲಕ, ತಂಡಕ್ಕೆ ಕೊಡುಗೆ ನೀಡುವ ಬಗ್ಗೆ ತನ್ನ ಬದ್ಧತೆಯನ್ನು ಸ್ಪಷ್ಟಪಡಿಸಿದ್ದಾರೆ.

ರೋಹಿತ್- ಕೊಹ್ಲಿ ಮತ್ತೆ ಕಣಕ್ಕಿಳಿಯುವುದು ಯಾವಾಗ? ಇಲ್ಲಿದೆ ಏಕದಿನ ಸರಣಿಗಳ ವೇಳಾಪಟ್ಟಿ

Team India's ODI Future: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಸೋಲಿನ ನಡುವೆಯೂ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರು. ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿರುವುದರಿಂದ, ಇವರಿಬ್ಬರು ನೀಲಿ ಜೆರ್ಸಿಯಲ್ಲಿ ಯಾವಾಗ ಕಾಣಿಸಿಕೊಳ್ಳುತ್ತಾರೆ ಎಂಬುದು ಅಭಿಮಾನಿಗಳ ಪ್ರಶ್ನೆ. ಸೆಪ್ಟೆಂಬರ್‌ನಲ್ಲಿ ವೆಸ್ಟ್ ಇಂಡೀಸ್, ನವೆಂಬರ್‌ನಲ್ಲಿ ನ್ಯೂಜಿಲೆಂಡ್ ಮತ್ತು ಡಿಸೆಂಬರ್‌ನಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗಳಲ್ಲಿ ಇವರು ಆಡಲಿದ್ದಾರೆ, 2027ರ ವಿಶ್ವಕಪ್‌ಗೆ ಇದು ನಿರ್ಣಾಯಕ.

IND vs ENG: ಬಾಲ್ಯದ ಗೆಳೆಯ ನೀಡಿದ ಬ್ಯಾಟ್​ನಿಂದ ಲಾರ್ಡ್ಸ್‌ನಲ್ಲಿ ಶತಕ ಬಾರಿಸಿದ ರೋಹಿತ್

Rohit Sharma century: ರೋಹಿತ್ ಶರ್ಮಾ ಲಾರ್ಡ್ಸ್‌ನಲ್ಲಿ ಸಿಡಿಸಿದ 138 ರನ್‌ಗಳ ಭರ್ಜರಿ ಶತಕ ನಿವೃತ್ತಿ ವದಂತಿಗಳಿಗೆ ಉತ್ತರ ನೀಡಿತು. ಈ ಸ್ಮರಣೀಯ ಇನ್ನಿಂಗ್ಸ್‌ಗೆ ರೋಹಿತ್ ಬಳಸಿದ್ದು ಶಾರ್ದೂಲ್ ಠಾಕೂರ್ ಅವರ ಬ್ಯಾಟ್ ಎಂಬ ಅಚ್ಚರಿಯ ಸಂಗತಿ ಈಗ ಬಹಿರಂಗವಾಗಿದೆ. ಶಾರ್ದೂಲ್ ನೀಡಿದ ಬ್ಯಾಟ್‌ನಿಂದಲೇ ರೋಹಿತ್ ವಿಶ್ವ ಕ್ರಿಕೆಟ್ ಜಗತ್ತನ್ನು ಮಂತ್ರಮುಗ್ಧಗೊಳಿಸಿದರು. ಅವರ ಬಾಲ್ಯದ ಗೆಳೆತನದ ಕಥೆಯೂ ಇಲ್ಲಿದೆ.

ರೋಹಿತ್ ಶರ್ಮಾ ಸೆಂಚುರಿಗೆ ಸಚಿನ್ ಸಾರ್ವಕಾಲಿಕ ದಾಖಲೆ ಉಡೀಸ್

Rohit Sharma Records: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಲ್ಲಿ ವಿಫಲರಾಗಿದ್ದ ರೋಹಿತ್ ಶರ್ಮಾ ಕೊನೆಗೂ ಅಬ್ಬರಿಸಿದ್ದಾರೆ. ಅದು ಸಹ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಹಿಟ್​​ಮ್ಯಾನ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

IND vs ENG: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ದಿಗ್ಗಜರ ದಾಖಲೆ ಮುರಿದ ರೋಹಿತ್

Rohit Sharma's Historic Lord's Century: ಐತಿಹಾಸಿಕ ಲಾರ್ಡ್ಸ್‌ನಲ್ಲಿ ರೋಹಿತ್ ಶರ್ಮಾ ಸಿಡಿಸಿದ ಶತಕ ಸ್ಮರಣೀಯ. ಇಂಗ್ಲೆಂಡ್ ವಿರುದ್ಧ 388 ರನ್‌ಗಳ ಗುರಿ ಬೆನ್ನತ್ತಿ, ಅವರು ಲಾರ್ಡ್ಸ್‌ನಲ್ಲಿ ಏಕದಿನ ಶತಕ ಗಳಿಸಿದ ಮೊದಲ ಭಾರತೀಯ ಎನಿಸಿಕೊಂಡರು. ಸಚಿನ್ ತೆಂಡೂಲ್ಕರ್ ಮತ್ತು ವಿವ್ ರಿಚರ್ಡ್ಸ್ ಸೇರಿದಂತೆ ಹಲವು ದಿಗ್ಗಜರ ದಾಖಲೆಗಳನ್ನು ಮುರಿದು, ಏಕದಿನ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಅತ್ಯಂತ ಹಿರಿಯ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದು ರೋಹಿತ್‌ಗೆ ಇಂಗ್ಲೆಂಡ್ ನೆಲದಲ್ಲಿ 10ನೇ ಶತಕ.

ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ