AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma

Rohit Sharma

2007 ರಲ್ಲಿ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ರೋಹಿತ್ ಶರ್ಮಾ, ಅದೇ ವರ್ಷ ಟಿ20 ಕ್ರಿಕೆಟ್​ಗೂ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದರು. ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ 7 ವರ್ಷಗಳ ನಂತರ ಟೆಸ್ಟ್ ಕ್ರಿಕೆಟ್​ನಲ್ಲಿ ಚೊಚ್ಚಲ ಅವಕಾಶ ಪಡೆದ ರೋಹಿತ್ ಶರ್ಮಾ, ಅಂದಿನಿಂದ ಇಂದಿನವರೆಗೆ ಟೀಂ ಇಂಡಿಯಾದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಪ್ರಸ್ತುತ ನಾಯಕನಾಗಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ತಂಡ ಡಬ್ಲ್ಯುಟಿಸಿ ಫೈನಲ್ ಸೇರಿದಂತೆ ಒಂದು ಏಕದಿನ ವಿಶ್ವಕಪ್ ಫೈನಲ್ ಕೂಡ ಆಡಿದೆ. ಆದರೆ ತಂಡಕ್ಕೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಟೀಂ ಇಂಡಿಯಾ ಪರ ಇದುವರೆಗೆ ಮೂರು ಮಾದರಿಯ ಕ್ರಿಕೆಟ್​ನಲ್ಲಿ 469 ಪಂದ್ಯಗಳನ್ನಾಡಿರುವ ರೋಹಿತ್, 46 ಶತಕ ಹಾಗೂ 100 ಅರ್ಧಶತಕ ಹಾಗೂ 4 ದ್ವಿಶತಕದ ಆಧಾರದ ಮೇಲೆ ಒಟ್ಟು 18511 ರನ್ ಕಲೆಹಾಕಿದ್ದಾರೆ. ಹಾಗೆಯೇ ಐಪಿಎಲ್​ನಲ್ಲೂ ತಮ್ಮ ಮ್ಯಾಜಿಕ್ ತೋರಿರುವ ರೋಹಿತ್ ಶರ್ಮಾ ತಮ್ಮ ನಾಯಕತ್ವದಲ್ಲಿ ತಂಡವನ್ನು ದಾಖಲೆಯ 6 ಬಾರಿ ಚಾಂಪಿಯನ್ ಮಾಡಿದ್ದಾರೆ.

ಇನ್ನೂ ಹೆಚ್ಚು ಓದಿ

ರೋಹಿತ್-ಕೊಹ್ಲಿಯನ್ನು ಕೈಬಿಡುವ ಧೈರ್ಯ ಮಾಡಬೇಡಿ: ಅಶ್ವಿನ್ ಎಚ್ಚರಿಕೆ

Rohit Sharma - Virat Kohli: ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಈಗಾಗಲೇ ನಿವೃತ್ತರಾಗಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ, ಮುಂಬರುವ ಏಕದಿನ ವಿಶ್ವಕಪ್​ವರೆಗೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ಇರಾದೆಯಲ್ಲಿದ್ದಾರೆ. ಇದಾಗ್ಯೂ, ಕೆಲ ಪಂದ್ಯಗಳಲ್ಲಿನ ಕಳಪೆ ಪ್ರದರ್ಶನವನ್ನೇ ಮುಂದಿಟ್ಟು ಈ ಇಬ್ಬರು ದಿಗ್ಗಜರನ್ನು ಗುರಿಯಾಗಿಸಿ ಟೀಕಿಸಲಾಗುತ್ತಿದೆ ಎಂದು ಅಶ್ವಿನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದೇಶಿ ನೆಲದಲ್ಲಿ ಅತಿ ಹೆಚ್ಚು ರನ್; ಅಗ್ರಸ್ಥಾನದಲ್ಲಿ ರೋಹಿತ್

Team India ODI Crisis: ಐಪಿಎಲ್ ನಂತರ ಟೀಂ ಇಂಡಿಯಾ ವಿದೇಶಿ ಏಕದಿನ ಸರಣಿಗಳಲ್ಲಿ ವೈಫಲ್ಯ ಕಂಡಿದೆ. ಬ್ಯಾಟಿಂಗ್ ವಿಭಾಗದ ಕಳಪೆ ಪ್ರದರ್ಶನವೇ ಮುಖ್ಯ ಕಾರಣ. ರೋಹಿತ್ ಶರ್ಮಾ ಗರಿಷ್ಠ ರನ್ ಗಳಿಸಿದ್ದರೂ, ತಂಡದಿಂದ ಕೈಬಿಡುವ ಸಾಧ್ಯತೆಯಿದೆ. ಆದರೆ, ಕಳಪೆ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ಅವರನ್ನು ಉಳಿಸಿಕೊಳ್ಳಲಾಗಿದೆ. ಇದು ತಂಡದ ಆಯ್ಕೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

‘ಅದು ನನಗೆ ಮುಖ್ಯವಲ್ಲ’; ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ರೋಹಿತ್

Rohit Sharma's Fiery Reply to Retirement Rumors: ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಐತಿಹಾಸಿಕ ಶತಕ ಸಿಡಿಸಿ, ತಮ್ಮ ನಿವೃತ್ತಿ ವದಂತಿಗಳಿಗೆ ಬ್ಯಾಟ್​ನಿಂದಲೇ ಉತ್ತರ ನೀಡಿದ್ದಾರೆ. ಏಕದಿನ ತಂಡದಲ್ಲಿ ತಮ್ಮ ಸ್ಥಾನದ ಬಗ್ಗೆ ಕೇಳಿಬರುತ್ತಿದ್ದ ಟೀಕೆಗಳಿಗೆ ಪ್ರತಿಕ್ರಿಯಿಸಿದ ಹಿಟ್‌ಮ್ಯಾನ್, ಈ ರೀತಿಯ ಮಾತುಗಳು ತನ್ನ ಆಟದ ಮೇಲೆ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ. ದೇಶಕ್ಕಾಗಿ ಆಡುವುದು ಮತ್ತು ರನ್ ಗಳಿಸುವುದೇ ತನ್ನ ಗುರಿ ಎಂದು ಹೇಳುವ ಮೂಲಕ, ತಂಡಕ್ಕೆ ಕೊಡುಗೆ ನೀಡುವ ಬಗ್ಗೆ ತನ್ನ ಬದ್ಧತೆಯನ್ನು ಸ್ಪಷ್ಟಪಡಿಸಿದ್ದಾರೆ.

ರೋಹಿತ್- ಕೊಹ್ಲಿ ಮತ್ತೆ ಕಣಕ್ಕಿಳಿಯುವುದು ಯಾವಾಗ? ಇಲ್ಲಿದೆ ಏಕದಿನ ಸರಣಿಗಳ ವೇಳಾಪಟ್ಟಿ

Team India's ODI Future: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಸೋಲಿನ ನಡುವೆಯೂ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರು. ಟಿ20 ಮತ್ತು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿರುವುದರಿಂದ, ಇವರಿಬ್ಬರು ನೀಲಿ ಜೆರ್ಸಿಯಲ್ಲಿ ಯಾವಾಗ ಕಾಣಿಸಿಕೊಳ್ಳುತ್ತಾರೆ ಎಂಬುದು ಅಭಿಮಾನಿಗಳ ಪ್ರಶ್ನೆ. ಸೆಪ್ಟೆಂಬರ್‌ನಲ್ಲಿ ವೆಸ್ಟ್ ಇಂಡೀಸ್, ನವೆಂಬರ್‌ನಲ್ಲಿ ನ್ಯೂಜಿಲೆಂಡ್ ಮತ್ತು ಡಿಸೆಂಬರ್‌ನಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗಳಲ್ಲಿ ಇವರು ಆಡಲಿದ್ದಾರೆ, 2027ರ ವಿಶ್ವಕಪ್‌ಗೆ ಇದು ನಿರ್ಣಾಯಕ.

IND vs ENG: ಬಾಲ್ಯದ ಗೆಳೆಯ ನೀಡಿದ ಬ್ಯಾಟ್​ನಿಂದ ಲಾರ್ಡ್ಸ್‌ನಲ್ಲಿ ಶತಕ ಬಾರಿಸಿದ ರೋಹಿತ್

Rohit Sharma century: ರೋಹಿತ್ ಶರ್ಮಾ ಲಾರ್ಡ್ಸ್‌ನಲ್ಲಿ ಸಿಡಿಸಿದ 138 ರನ್‌ಗಳ ಭರ್ಜರಿ ಶತಕ ನಿವೃತ್ತಿ ವದಂತಿಗಳಿಗೆ ಉತ್ತರ ನೀಡಿತು. ಈ ಸ್ಮರಣೀಯ ಇನ್ನಿಂಗ್ಸ್‌ಗೆ ರೋಹಿತ್ ಬಳಸಿದ್ದು ಶಾರ್ದೂಲ್ ಠಾಕೂರ್ ಅವರ ಬ್ಯಾಟ್ ಎಂಬ ಅಚ್ಚರಿಯ ಸಂಗತಿ ಈಗ ಬಹಿರಂಗವಾಗಿದೆ. ಶಾರ್ದೂಲ್ ನೀಡಿದ ಬ್ಯಾಟ್‌ನಿಂದಲೇ ರೋಹಿತ್ ವಿಶ್ವ ಕ್ರಿಕೆಟ್ ಜಗತ್ತನ್ನು ಮಂತ್ರಮುಗ್ಧಗೊಳಿಸಿದರು. ಅವರ ಬಾಲ್ಯದ ಗೆಳೆತನದ ಕಥೆಯೂ ಇಲ್ಲಿದೆ.

ರೋಹಿತ್ ಶರ್ಮಾ ಸೆಂಚುರಿಗೆ ಸಚಿನ್ ಸಾರ್ವಕಾಲಿಕ ದಾಖಲೆ ಉಡೀಸ್

Rohit Sharma Records: ಇಂಗ್ಲೆಂಡ್ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಲ್ಲಿ ವಿಫಲರಾಗಿದ್ದ ರೋಹಿತ್ ಶರ್ಮಾ ಕೊನೆಗೂ ಅಬ್ಬರಿಸಿದ್ದಾರೆ. ಅದು ಸಹ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಹಿಟ್​​ಮ್ಯಾನ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

IND vs ENG: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ದಿಗ್ಗಜರ ದಾಖಲೆ ಮುರಿದ ರೋಹಿತ್

Rohit Sharma's Historic Lord's Century: ಐತಿಹಾಸಿಕ ಲಾರ್ಡ್ಸ್‌ನಲ್ಲಿ ರೋಹಿತ್ ಶರ್ಮಾ ಸಿಡಿಸಿದ ಶತಕ ಸ್ಮರಣೀಯ. ಇಂಗ್ಲೆಂಡ್ ವಿರುದ್ಧ 388 ರನ್‌ಗಳ ಗುರಿ ಬೆನ್ನತ್ತಿ, ಅವರು ಲಾರ್ಡ್ಸ್‌ನಲ್ಲಿ ಏಕದಿನ ಶತಕ ಗಳಿಸಿದ ಮೊದಲ ಭಾರತೀಯ ಎನಿಸಿಕೊಂಡರು. ಸಚಿನ್ ತೆಂಡೂಲ್ಕರ್ ಮತ್ತು ವಿವ್ ರಿಚರ್ಡ್ಸ್ ಸೇರಿದಂತೆ ಹಲವು ದಿಗ್ಗಜರ ದಾಖಲೆಗಳನ್ನು ಮುರಿದು, ಏಕದಿನ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಅತ್ಯಂತ ಹಿರಿಯ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದು ರೋಹಿತ್‌ಗೆ ಇಂಗ್ಲೆಂಡ್ ನೆಲದಲ್ಲಿ 10ನೇ ಶತಕ.

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ರೋಹಿತ್

Rohit Sharma Century at Lord's: ಇಂಗ್ಲೆಂಡ್ ವಿರುದ್ಧದ ಸರಣಿ ನಿರ್ಧಾರಕ ಪಂದ್ಯದಲ್ಲಿ ರೋಹಿತ್ ಶರ್ಮಾ ಲಾರ್ಡ್ಸ್‌ನಲ್ಲಿ ಐತಿಹಾಸಿಕ ಶತಕ ಬಾರಿಸಿ ಮಿಂಚಿದ್ದಾರೆ. ಇದು ಲಾರ್ಡ್ಸ್‌ನಲ್ಲಿ ಭಾರತೀಯ ಬ್ಯಾಟ್ಸ್‌ಮನ್ ಬಾರಿಸಿದ ಮೊದಲ ಏಕದಿನ ಶತಕವಾಗಿದ್ದು, 47 ವರ್ಷಗಳ ಬರವನ್ನು ನೀಗಿಸಿದೆ. ಈ ಮೂಲಕ ರೋಹಿತ್ ತಮ್ಮ ಫಾರ್ಮ್‌ಗೆ ಬಂದ ಟೀಕೆಗಳಿಗೆ ಸಮರ್ಥವಾಗಿ ಉತ್ತರಿಸಿದ್ದಾರೆ, ತಂಡಕ್ಕೆ ಅದ್ಭುತ ಆರಂಭ ಒದಗಿಸಿದ್ದಾರೆ.

ಎಲ್ಲಾ ವದಂತಿಗಳಿಗೆ ಬ್ರೇಕ್: ಲಾರ್ಡ್ಸ್​ನಲ್ಲಿ ರೋಹಿತ್-ಗಂಭೀರ್ ನಗುವೋ ನಗು!

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ಜಯ ಸಾಧಿಸಿತ್ತು. ಇದೀಗ ಸರಣಿ ನಿರ್ಣಾಯಕ ಮೂರನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿದೆ. ಇಂದು (ಜು.19) ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವವರು ಟ್ರೋಫಿ ಎತ್ತಿ ಹಿಡಿಯಲಿದ್ದಾರೆ.

ರೋಹಿತ್​ ಬಗ್ಗೆ ಕಳವಳವಿಲ್ಲ, ವಿಶೇಷ ರಣರಂತ್ರ: ಮೋರ್ಕೆಲ್ ಹೇಳಿದ್ದೇನು?

IND vs ENG: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಿರ್ಣಾಯಕ ಮೂರನೇ ಏಕದಿನ ಪಂದ್ಯಕ್ಕೆ ಐತಿಹಾಸಿಕ ಲಾರ್ಡ್ಸ್ ಮೈದಾನ ಸಜ್ಜಾಗಿದ್ದು, 1-1 ಸಮಬಲದಲ್ಲಿರುವ ಸರಣಿ ಗೆಲ್ಲಲು ಉಭಯ ತಂಡಗಳು ಭರ್ಜರಿ ತಂತ್ರ ರೂಪಿಸಿವೆ. ನಾಯಕ ರೋಹಿತ್ ಶರ್ಮಾ ಅವರ ಫಾರ್ಮ್‌ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಬೌಲಿಂಗ್ ಕೋಚ್ ಮೋರ್ನೆ ಮೋರ್ಕೆಲ್, ಲಾರ್ಡ್ಸ್‌ನ ಇಳಿಜಾರಿನ ಸವಾಲು ಎದುರಿಸಲು ಬ್ಯಾಟರ್‌ಗಳಿಗೆ ಸಲಹೆ ನೀಡಿದ್ದಾರೆ.

IND vs ENG: ಲಾರ್ಡ್ಸ್‌ನಲ್ಲಿ ಶತಕಗಳ ಬರ! ಟೀಂ ಇಂಡಿಯಾಕ್ಕೆ ಗೆಲುವೊಂದೇ ಗುರಿಯಲ್ಲ

India vs England 3rd ODI: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ನಿರ್ಣಾಯಕ ಪಂದ್ಯ ಲಾರ್ಡ್ಸ್‌ನಲ್ಲಿ ನಡೆಯಲಿದೆ. 2004 ರಿಂದ ಇಲ್ಲಿ ಗೆಲ್ಲದ ಭಾರತ, ಸರಣಿ ಗೆಲ್ಲಲು ಸವಾಲು ಎದುರಿಸುತ್ತಿದೆ. ಮುಖ್ಯವಾಗಿ, ಲಾರ್ಡ್ಸ್‌ನಲ್ಲಿ ಇದುವರೆಗೆ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ಏಕದಿನ ಶತಕ ಬಾರಿಸಿಲ್ಲ. ಟೀಂ ಇಂಡಿಯಾ ಈ ಐತಿಹಾಸಿಕ ಮೈದಾನದಲ್ಲಿ ಶತಕದ ಬರ ನೀಗಿಸಿ, ಸರಣಿಯನ್ನು ಗೆಲ್ಲುವುದೇ ಎಂಬುದೇ ಕುತೂಹಲ.

IND vs ENG: ಲಾರ್ಡ್ಸ್‌ನಲ್ಲಿ ಮತ್ತೊಂದು ದಾಖಲೆ ನಿರ್ಮಿಸಲಿದ್ದಾರೆ ರೋಹಿತ್, ಕೊಹ್ಲಿ

Rohit Kohli 400 matches: ಭಾರತ vs ಇಂಗ್ಲೆಂಡ್ ಏಕದಿನ ಸರಣಿಯ ನಿರ್ಣಾಯಕ ಪಂದ್ಯ ಜುಲೈ 19 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. ಈ 'ಮಾಡು ಇಲ್ಲವೇ ಮಡಿ' ಪಂದ್ಯದಲ್ಲಿ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಜೋಡಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ 400 ಅಂತರರಾಷ್ಟ್ರೀಯ ಪಂದ್ಯಗಳನ್ನು ಒಟ್ಟಿಗೆ ಆಡಿದ ದಾಖಲೆ ನಿರ್ಮಿಸಲಿದ್ದಾರೆ. ಸರಣಿ ಗೆಲ್ಲುವ ಮೂಲಕ ಭಾರತ ತಂಡವು ತನ್ನ ಇಂಗ್ಲೆಂಡ್‌ ಪ್ರವಾಸವನ್ನು ಉತ್ತಮ ರೀತಿಯಲ್ಲಿ ಅಂತ್ಯಗೊಳಿಸಲು ನೋಡುತ್ತಿದೆ.

ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​