AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Royal Challengers Bengaluru

Royal Challengers Bengaluru

Royal Challengers Bengaluru

IPL 2026 Auction: ಐಪಿಎಲ್ ಮಿನಿ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ

IPL 2026 Full Player Lists for All 10 Teams: ಐಪಿಎಲ್ 2026 ಸೀಸನ್‌ಗಾಗಿ ಎಲ್ಲಾ ತಂಡಗಳ ಸಂಪೂರ್ಣ ಆಟಗಾರರ ಪಟ್ಟಿ ಇಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್, ಆರ್‌ಸಿಬಿ, ಮುಂಬೈ ಇಂಡಿಯನ್ಸ್ ಸೇರಿದಂತೆ ಪ್ರತಿ ತಂಡದ ನಾಯಕರು, ಪ್ರಮುಖ ಆಟಗಾರರು ಮತ್ತು ಹೊಸ ಸೇರ್ಪಡೆಗಳ ವಿವರವಾದ ಮಾಹಿತಿಯನ್ನು ಈ ಲೇಖನವು ಒಳಗೊಂಡಿದೆ.

RCB IPL Auction 2026: ಮಿನಿ ಹರಾಜಿನಲ್ಲಿ ಆರ್​ಸಿಬಿ ಖರೀದಿಸಿದ 8 ಆಟಗಾರರು ಇವರೇ..

Royal Challengers Bengaluru Auction Players : 2026ರ ಐಪಿಎಲ್ ಮಿನಿ ಹರಾಜಿನಲ್ಲಿ 16.40 ಕೋಟಿ ರೂ. ಪರ್ಸ್ ಹೊಂದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 8 ಆಟಗಾರರನ್ನು ಖರೀದಿಸಿದೆ. ವೆಂಕಟೇಶ್ ಅಯ್ಯರ್ 7 ಕೋಟಿ ರೂ.ಗೆ ಸೇರ್ಪಡೆಯಾದರೆ, ಮಂಗೇಶ್ ಯಾದವ್ 5.2 ಕೋಟಿ ರೂ.ಗೆ ಖರೀದಿಯಾಗಿದ್ದಾರೆ. 6 ಭಾರತೀಯ ಮತ್ತು 2 ವಿದೇಶಿ ಆಟಗಾರರನ್ನು ಸೇರಿಸಿಕೊಂಡಿರುವ ಆರ್‌ಸಿಬಿ, ತಮ್ಮ ತಂಡವನ್ನು ಬಲಪಡಿಸಿಕೊಂಡಿದೆ. ಈ ಹೊಸ ಸೇರ್ಪಡೆಗಳು ತಂಡಕ್ಕೆ ಹೊಸ ಹುರುಪು ನೀಡಲಿವೆ.

IPL Auction 2026: ಮೊದಲ ಸುತ್ತಿನಲ್ಲಿ ಹರಾಜಾಗದೆ ಉಳಿದಿದ್ದ ಲಿವಿಂಗ್‌ಸ್ಟೋನ್​ಗೆ 13 ಕೋಟಿ ಕೊಟ್ಟ ಕಾವ್ಯಾ

Liam Livingstone IPL 2026: ಇಂಗ್ಲೆಂಡ್‌ನ ಸ್ಫೋಟಕ ಬ್ಯಾಟ್ಸ್‌ಮನ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಐಪಿಎಲ್ 2026 ಹರಾಜಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 13 ಕೋಟಿ ರೂ.ಗೆ ಖರೀದಿಸಿದೆ. ಆರ್‌ಸಿಬಿಯಲ್ಲಿ ವೈಫಲ್ಯ ಕಂಡಿದ್ದರೂ, ಅವರ ಆಲ್ ರೌಂಡರ್ ಸಾಮರ್ಥ್ಯ (ಬ್ಯಾಟಿಂಗ್, ಬೌಲಿಂಗ್, ಮ್ಯಾಚ್ ಫಿನಿಷರ್) ಅವರನ್ನು ದುಬಾರಿ ಆಟಗಾರನನ್ನಾಗಿಸಿದೆ. ಎರಡನೇ ಸುತ್ತಿನಲ್ಲಿ ಹಲವು ತಂಡಗಳ ಪೈಪೋಟಿಯ ಬಳಿಕ ಎಸ್‌ಆರ್‌ಹೆಚ್ ಅವರನ್ನು ಪಡೆಯಿತು.

IPL Auction 2026: 5.2 ಕೋಟಿ ರೂ.ಗೆ ಆರ್​ಸಿಬಿ ಸೇರಿದ ಮಂಗೇಶ್ ಯಾದವ್ ಯಾರು?

Mangesh Yadav Joins RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಿನಿ ಹರಾಜಿನಲ್ಲಿ ಯುವ ಆಲ್‌ರೌಂಡರ್ ಮಂಗೇಶ್ ಯಾದವ್ ಅವರನ್ನು 5.20 ಕೋಟಿ ರೂ.ಗೆ ಖರೀದಿಸಿದೆ. ಮಧ್ಯಪ್ರದೇಶದ ಈ ಪ್ರತಿಭಾವಂತ ಆಟಗಾರ ಎಡಗೈ ವೇಗದ ಬೌಲಿಂಗ್ ಮತ್ತು ಪರಿಣಾಮಕಾರಿ ಬ್ಯಾಟಿಂಗ್ ಸಾಮರ್ಥ್ಯ ಹೊಂದಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮತ್ತು ಎಂಪಿ ಟಿ20 ಲೀಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಆರ್​ಸಿಬಿ ತಂಡಕ್ಕೆ ಪ್ರಮುಖ ಸೇರ್ಪಡೆಯಾಗಿದ್ದಾರೆ.

IPL Auction 2026: 16.75 ಕೋಟಿ ರೂ. ನಷ್ಟದೊಂದಿಗೆ ಆರ್​ಸಿಬಿ ಸೇರಿದ ವೆಂಕಟೇಶ್ ಅಯ್ಯರ್

Venkatesh Iyer Auction Price: ಐಪಿಎಲ್ 2026 ಮಿನಿ ಹರಾಜಿನಲ್ಲಿ ವೆಂಕಟೇಶ್ ಅಯ್ಯರ್ 7 ಕೋಟಿ ರೂ.ಗೆ RCB ಸೇರಿಕೊಂಡಿದ್ದಾರೆ. ಕಳೆದ ಮೆಗಾ ಹರಾಜಿನಲ್ಲಿ 23.75 ಕೋಟಿ ಪಡೆದಿದ್ದ ವೆಂಕಟೇಶ್​ ಈ ಬಾರಿ ಕಡಿಮೆ ಮೊತ್ತಕ್ಕೆ ಬಿಕರಿಯಾಗಿದ್ದಾರೆ. ಅವರ ಕಳಪೆ ಪ್ರದರ್ಶನವೇ ಇದಕ್ಕೆ ಕಾರಣ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ನೆರವಾಗಬಲ್ಲ ಅಯ್ಯರ್ ಆರ್​ಸಿಬಿಗೆ ಉತ್ತಮ ಆಯ್ಕೆ ಎನ್ನಲಾಗಿದೆ.

IPL 2026 Auction: RCB ತಂಡಕ್ಕೆ ಸ್ಟಾರ್ ಆಲ್​ರೌಂಡರ್ ಎಂಟ್ರಿ

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಗಾಗಿ ಅಬುಧಾಬಿಯ ಇತಿಹಾದ್ ಅರೇನಾದಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಈ ಹರಾಜಿನಲ್ಲಿ ಬರೋಬ್ಬರಿ 369 ಆಟಗಾರರ ಹೆಸರು ಕಾಣಿಸಿಕೊಂಡಿದೆ. ಇವರಲ್ಲಿ ಎರಡನೇ ಸುತ್ತಿನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ಸ್ಟಾರ್ ಆಲ್​ರೌಂಡರ್​ನನ್ನು ಖರೀದಿಸಿದೆ.

IPL 2026: ಕೊನೆಗೂ RCB ಅಭಿಮಾನಿಗಳಿಗೆ ಸಿಕ್ತು ಗುಡ್ ನ್ಯೂಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳನ್ನು ಆಯೋಜಿಸಲು ಅವಕಾಶ ನೀಡಬೇಕೆಂದು ಕೆಎಸ್​ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಇತ್ತೀಗಷ್ಟೇ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿರುವ ಸರ್ಕಾರ, ಬೆಂಗಳೂರಿನಲ್ಲಿ ಪಂದ್ಯವನ್ನು ಆಯೋಜಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಆರ್​ಸಿಬಿ ಅಭಿಮಾನಿಗಳಿಗೆ ಡಿಕೆಶಿ ಗುಡ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆ ಬಗ್ಗೆ ಮಹತ್ವದ ಮಾಹಿತಿ

ಆರ್​ಸಿಬಿ ಐಪಿಎಲ್ ವಿಜಯೋತ್ಸವ ಕಾಲ್ತುಳಿತ ಘಟನೆಯಿಂದಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ನು ಮುಂದೆ ಐಪಿಎಲ್ ಪಂದ್ಯಗಳೇ ನಡೆಯುವುದಿಲ್ಲ ಎಂದು ಬೇಸರದಲ್ಲಿದ್ದ ರಾಜ್ಯ ಕ್ರಿಕೆಟ್ ಪ್ರೇಮಿಗಳಿಗೆ ಕರ್ನಾಟಕ ಸಚಿವ ಸಂಪುಟ ಗುರುವಾರ ಸಂಜೆ ಗುಡ್ ನ್ಯೂಸ್ ಕೊಟ್ಟಿತ್ತು. ಇದೀಗ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆ ಬಗ್ಗೆ ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರದಿಂದ RCB ಅಭಿಮಾನಿಗಳಿಗೆ ಗುಡ್ ನ್ಯೂಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯಗಳನ್ನು ಆಯೋಜಿಸಲು ಅವಕಾಶ ನೀಡಬೇಕೆಂದು ಕೆಎಸ್​ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಮನವಿಗೆ ಸರ್ಕಾರದ ಕಡೆಯಿಂದಲೂ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮ್ಯಾಚ್: ಡಿಕೆ ಶಿವಕುಮಾರ್ ಗುಡ್ ನ್ಯೂಸ್

ಬೆಂಗಳೂರಿನಲ್ಲಿ ಐಪಿಎಲ್ ಮತ್ತು ಇತರೆ ಕ್ರಿಕೆಟ್ ಪಂದ್ಯಗಳ ಆಯೋಜನೆ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (KSCA) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನೇತೃತ್ವದ ತಂಡ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದೆ. ಪಂದ್ಯಗಳಿಗೆ ಅನುಮತಿ ಕೋರಲಾಗಿದ್ದು, ನಾಳೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿಕೆಶಿ ತಿಳಿಸಿದ್ದಾರೆ.

  • Sunil MH
  • Updated on: Dec 10, 2025
  • 12:05 pm

ಆರ್​ಸಿಬಿ ಅಭಿಮಾನಿಗಳಿಗೆ ಡಿಕೆ ಶಿವಕುಮಾರ್ ಗುಡ್ ನ್ಯೂಸ್ ನೀಡಿದ ಬೆನ್ನಲ್ಲೇ ಬೆಂಗಳೂರಲ್ಲಿ ಐಪಿಎಲ್​ಗೆ ಎದುರಾಯ್ತು ಹೊಸ ವಿಘ್ನ!

IPL 2026: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಐಪಿಎಲ್ ಪಂದ್ಯಗಳನ್ನು ಆಯೋಜಿಸುವ ಪ್ರಯತ್ನಗಳಿಗೆ ಹಿರಿಯ ವಕೀಲ ಅಮೃತೇಶ್ ವಿರೋಧ ವ್ಯಕ್ತಪಡಿಸಿದ್ದಾರೆ. ಪಂದ್ಯಗಳನ್ನು ಆಯೋಜಿಸದಂತೆ ಸರ್ಕಾರ ಹಾಗೂ ಹೈಕೋರ್ಟ್‌ಗೆ ಅವರು ಮನವಿ ಮಾಡಿದ್ದಾರೆ. ಐಪಿಎಲ್ ಸೇರಿ ಅಂತಾರಾಷ್ಟ್ರೀಯ ಮಟ್ಟದ ಪಂದ್ಯ ಆಯೋಜನೆಗೆ ಪ್ರಯತ್ನಿಸುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ ಬೆನ್ನಲ್ಲೇ ಈ ಮನವಿ ಸಲ್ಲಿಕೆಯಾಗಿರುವುದು ಮಹತ್ವ ಪಡೆದಿದೆ.

IPL 2026: ನಿರಾಸೆಯಲ್ಲಿದ್ದ ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್

19ನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ ಎತ್ತಂಗಡಿ ಆಗುವ ಆತಂಕದಲ್ಲಿದ್ದ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಆರ್​​ಸಿಬಿ ವಿಜಯೋತ್ಸವ ಆಚರಣೆ ವೇಳೆ ಸಂಭವಿಸಿದ್ದ ಕಾಲ್ತುಳಿತದಿಂದಾಗಿ ಚಿನ್ನಸ್ವಾಮಿ ಸ್ಟೇಡಿಯಂ ಅಪಖ್ಯಾತಿಗೆ ಒಳಗಾಗಿದೆ. ಇದೀಗ ಡಿಕೆಶಿ, ಕ್ರೀಡಾಂಗಣಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಮರಳಿ ತರುವ ಭರವಸೆ ನೀಡಿದ್ದಾರೆ.