AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Royal Challengers Bengaluru

Royal Challengers Bengaluru

Royal Challengers Bengaluru

RCB ಎಡಿಷನ್ ಫೋನ್: ಏನಿದರ ವಿಶೇಷತೆ?

ಭಾರತದ ಅತ್ಯಂತ ಜನಪ್ರಿಯ ಕ್ರಿಕೆಟ್ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪ್ರಸ್ತುತ ತಂತ್ರಜ್ಞಾನ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸುತ್ತಿರುವ ಲಂಡನ್ ಮೂಲದ 'ನಥಿಂಗ್' (Nothing) ಕಂಪೆನಿ ಪರಸ್ಪರ ಕೈಜೋಡಿಸಿವೆ. 2026ರ ಐಪಿಎಲ್ ಸೀಸನ್‌ನಲ್ಲಿ RCB ತಂಡದ ಮುಖ್ಯ ಪ್ರಾಯೋಜಕರಾಗಿ ಕಾಣಿಸಿಕೊಂಡಿದ್ದ ನಥಿಂಗ್ ಕಂಪೆನಿ ಇದೀಗ ಆರ್​ಸಿಬಿ ಅಭಿಮಾನಿಗಳಿಗಾಗಿ ವಿಶೇಷ ಎಡಿಷನ್ ಫೋನ್ ಬಿಡುಗಡೆ ಮಾಡಲು ಮುಂದಾಗಿದೆ.

RCB ಫ್ರಾಂಚೈಸಿ ಮಾರಾಟ: ಇನ್ಮುಂದೆ 2 ತಂಡಗಳಿಗೆ ಹೊಸ ಮಾಲೀಕರು!

IPL 2027, RCB : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈ ಹಿಂದೆ ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿತ್ತು. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿತ್ತು. ಇದೀಗ ಡಿಯಾಜಿಯೋ ಕಂಪೆನಿಯು ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಿ, ಮದ್ಯದ ಉದ್ಯಮದ ಮೇಲೆ ಗಮನ ಹರಿಸಲು ನಿರ್ಧರಿಸಿದೆ.

ನನ್ನ ಜೀವನದಲ್ಲಿ ನಾನು ನೋಡಿದ ಅತ್ಯುತ್ತಮ ಬ್ಯಾಟ್ಸ್‌ಮನ್ ಈತ; ಎಬಿ ಡಿವಿಲಿಯರ್ಸ್

AB de Villiers Crowns Virat Kohli as Best Batsman: ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ತಮ್ಮ ಪ್ರಕಾರ ವಿಶ್ವದ ಟಾಪ್ 3 ಬ್ಯಾಟ್ಸ್‌ಮನ್‌ಗಳನ್ನು ಬಹಿರಂಗಪಡಿಸಿದ್ದಾರೆ. ಅವರ ಪ್ರಕಾರ ವಿರಾಟ್ ಕೊಹ್ಲಿ ಜೀವನದಲ್ಲಿ ಕಂಡ ಅತ್ಯುತ್ತಮ ಬ್ಯಾಟ್ಸ್‌ಮನ್. ರಿಕಿ ಪಾಂಟಿಂಗ್ ಮತ್ತು ಕುಮಾರ ಸಂಗಕ್ಕಾರ ನಂತರದ ಸ್ಥಾನದಲ್ಲಿದ್ದಾರೆ. ಕೊಹ್ಲಿಯ ಸ್ಥಿರತೆ, ಫಿಟ್‌ನೆಸ್, ಮಾನಸಿಕ ದೃಢತೆ ಹಾಗೂ ಒತ್ತಡದ ಚೇಸಿಂಗ್ ಸಾಮರ್ಥ್ಯವನ್ನು ಡಿವಿಲಿಯರ್ಸ್ ಪ್ರಶಂಸಿಸಿದ್ದಾರೆ.

32ನೇ ವಯಸ್ಸಿಗೆ ನಿವೃತ್ತಿ; ಯುಎಇ ಪರ ಕಣಕ್ಕಿಳಿಯಲಿರುವ ಭಾರತದ ಕ್ರಿಕೆಟಿಗ

KS Bharat's Shocking Move: ಕೆ.ಎಸ್. ಭರತ್ ಟೀಂ ಇಂಡಿಯಾದಿಂದ ನಿವೃತ್ತಿ ಪಡೆದು ಯುಎಇ ಪರ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಅವಕಾಶ ವಂಚಿತರಾದ 32ರ ಹರೆಯದ ಭರತ್ ದುಬೈಗೆ ತೆರಳಿದ್ದಾರೆ. ಆದರೆ ಯುಎಇ ಪರ ಆಡಲು ಮೂರು ವರ್ಷಗಳ ಕೂಲಿಂಗ್-ಆಫ್ ಅವಧಿಯ ನಿಯಮವಿದೆ. 2027ರ ನಂತರವಷ್ಟೇ ಭರತ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲು ಸಾಧ್ಯ. ಇದು ಅವರ ವೃತ್ತಿಜೀವನದ ಎರಡನೇ ಇನ್ನಿಂಗ್ಸ್ ಆಗಿದೆ.

24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಜೋರ್ಡನ್ ಕಾಕ್ಸ್​

JORDAN COX: 2026ರ ಐಪಿಎಲ್ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಜೋರ್ಡನ್ ಕಾಕ್ಸ್ ಅವರನ್ನು ₹75 ಲಕ್ಷಕ್ಕೆ ಖರೀದಿಸಿತ್ತು. ಅದರಂತೆ ಈ ಬಾರಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಕಾಕ್ಸ್​ಗೆ ಒಂದೇ ಒಂದು ಮ್ಯಾಚ್​ನಲ್ಲಿ ಬ್ಯಾಟ್ ಬೀಸಲು ಅವಕಾಶ ಸಿಕ್ಕಿರಲಿಲ್ಲ. ಇದಾಗ್ಯೂ ಸಬ್‌ಸ್ಟಿಟ್ಯೂಟ್ ಫೀಲ್ಡರ್ ಆಗಿ ತಂಡಕ್ಕೆ ನೆರವಾಗಿದ್ದರು.

ಲಿವಿಂಗ್​ಸ್ಟೋನ್ ನಾಯಕ, ಆ್ಯಂಡಿ ಫ್ಲವರ್, ದಿನೇಶ್ ಕಾರ್ತಿಕ್ ಕೋಚ್!

The Hundred 2026: ದಿ ಹಂಡ್ರೆಡ್ ಲೀಗ್ ಟೂರ್ನಿಯು ಜುಲೈ 21, 2026 ರಿಂದ ಪ್ರಾರಂಭವಾಗಲಿದೆ. ಲಂಡನ್‌ನ ಕಿಯಾ ಓವಲ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಎಂಐ ಲಂಡನ್ (MI London) ಮತ್ತು ಸನ್‌ರೈಸರ್ಸ್ ಲೀಡ್ಸ್ (Sunrisers Leeds) ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಲಿಯಾಮ್ ಲಿವಿಂಗ್‌ಸ್ಟೋನ್ ನೇತೃತ್ವದ ಲಂಡನ್ ಸ್ಪಿರಿಟ್ ತಂಡವು ತನ್ನ ಮೊದಲ ಪಂದ್ಯವನ್ನು ಜುಲೈ 23, 2026 ರಂದು ಲಾರ್ಡ್ಸ್ ಮೈದಾನದಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ.

ಆಡುವ ಬಯಕೆ ಇದೆ, ಆದರೆ..?; ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮನದಾಳ ತೆರೆದಿಟ್ಟ ಭುವನೇಶ್ವರ್

Bhuvneshwar Kumar comeback: ಇತ್ತೀಚಿನ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ 28 ವಿಕೆಟ್‌ ಪಡೆದ ಭುವನೇಶ್ವರ್ ಕುಮಾರ್ ಟೀಂ ಇಂಡಿಯಾ ಕಮ್‌ಬ್ಯಾಕ್ ಬಗ್ಗೆ ಆಸಕ್ತಿ ಹೆಚ್ಚಿಸಿದ್ದಾರೆ. ಸ್ವಿಂಗ್ ಬೌಲರ್ ಭುವಿ, ಇತ್ತೀಚಿನ ಸರಣಿಗಳಿಗೆ ಆಯ್ಕೆಯಾಗದಿದ್ದರೂ, ಮೌನ ಮುರಿದು ನೀಲಿ ಜೆರ್ಸಿ ಧರಿಸುವ ಬಯಕೆ ವ್ಯಕ್ತಪಡಿಸಿದ್ದಾರೆ. ಆಯ್ಕೆದಾರರ ತೀರ್ಮಾನಕ್ಕೆ ಬಿಟ್ಟಿದ್ದೇನೆ ಎಂದಿದ್ದಾರೆ.

RCB ಆಟಗಾರನ ನಿಧಾನಗತಿಯ ಬ್ಯಾಟಿಂಗ್: ಆದರೂ ರೋಚಕ ಗೆಲುವು!

Jordan Cox: ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದ ಜೋರ್ಡನ್ ಕಾಕ್ಸ್ ಇದೀಗ ಟಿ20 ಬ್ಲಾಸ್ಟ್​ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಆರ್​ಸಿಬಿ ಪರ 16 ಪಂದ್ಯಗಳಲ್ಲೂ ಬೆಂಚ್ ಕಾದಿದ್ದ ಕಾಕ್ಸ್ ಟಿ20 ಬ್ಲಾಸ್ಟ್​ನಲ್ಲಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿ ಸುದ್ದಿಯಾಗಿದ್ದಾರೆ.

ಸರಿಯಾದ ನಿರ್ಧಾರ… ರಜತ್ ಪಾಟಿದಾರ್ ಆಯ್ಕೆಯಾಗದಿರಲು ಇದುವೇ ಕಾರಣ!

Rajat Patidar: ಈ ಬಾರಿಯ ಐಪಿಎಲ್​​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರಜತ್ ಪಾಟಿದಾರ್ 14 ಇನ್ನಿಂಗ್ಸ್‌ಗಳಲ್ಲಿ 41.75 ರ ಸರಾಸರಿ ಹಾಗೂ 192.69 ರ ಸ್ಟ್ರೈಕ್ ರೇಟ್‌ನಲ್ಲಿ 501 ರನ್ ಚಚ್ಚಿದ್ದರು. ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳ ವಿರುದ್ಧ ಅಬ್ಬರಿಸುವ ಅವರ ಶೈಲಿ ಆರ್‌ಸಿಬಿ ತಂಡಕ್ಕೆ ದೊಡ್ಡ ಶಕ್ತಿಯಾಗಿತ್ತು. ಆದಾಗ್ಯೂ ಅವರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ನೀಡಲಾಗಿಲ್ಲ.

ನಾನು RCB ತಂಡದ ಕಟ್ಟಾ ಅಭಿಮಾನಿ: ವೈಭವ್ ಅಚ್ಚರಿಯ ಹೇಳಿಕೆ!

Vaibhav Sooryavanshi: ರಾಜಸ್ಥಾನ್ ರಾಯಲ್ಸ್ ತಂಡದ ಸ್ಫೋಟಕ ದಾಂಡಿಗ ವೈಭವ್ ಸೂರ್ಯವಂಶಿ ಈ ಬಾರಿಯ ಐಪಿಎಲ್​​ನಲ್ಲಿ ಬರೋಬ್ಬರಿ 776 ರನ್​​ ಕಲೆಹಾಕಿದ್ದರು. ಈ ಭರ್ಜರಿ ಪ್ರದರ್ಶನದೊಂದಿಗೆ ಒಂದೇ ಐಪಿಎಲ್​​ ಸೀಸನ್​ನಲ್ಲಿ 5 ಪ್ರಶಸ್ತಿ ಪಡೆದು ಹೊಸ ಇತಿಹಾಸ ನಿರ್ಮಿಸಿದ್ದರು. ಅಲ್ಲದೆ ಇದೀಗ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ.

ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..!

ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸಿದ ಮೂವರು ಅಪ್ರತಿಮ ಮ್ಯಾಚ್ ವಿನ್ನರ್‌ಗಳಾದ ರಜತ್ ಪಾಟಿದಾರ್, ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ಅವರನ್ನು ಮುಂಬರುವ ಇಂಗ್ಲೆಂಡ್ ಹಾಗೂ ಐರ್ಲೆಂಡ್ ಪ್ರವಾಸದ ಟಿ20 ಸರಣಿಯಿಂದ ಕೈಬಿಡುವ ಮೂಲಕ ಬಿಸಿಸಿಐ ಬಿಗ್ ಶಾಕ್ ನೀಡಿದೆ!

ದೇವದತ್ ಪಡಿಕ್ಕಲ್​ಗೆ ಕೇವಲ 2.6 ಲಕ್ಷ ರೂ..!

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟಕ್ಕೇರುಲ್ಲಿ ಪ್ರಮುಖ ಪಾತ್ರವಹಿಸಿದ್ದ ದೇವದತ್ ಪಡಿಕ್ಕಲ್ ಇದೀಗ ರಾಜ್ಯದ ಟಿ20 ಲೀಗ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಆದರೆ ಈ ಟೂರ್ನಿಗಾಗಿ ನಡೆದ ಹರಾಜಿನಲ್ಲಿ ಅವರು ಕಡಿಮೆ ಮೊತ್ತಕ್ಕೆ ಮಾರಾಟವಾಗಿದ್ದಾರೆ.