Royal Challengers Bengaluru

Royal Challengers Bengaluru

Royal Challengers Bengaluru

ಭಾರತ vs ಇಂಗ್ಲೆಂಡ್ ಪಂದ್ಯದಲ್ಲಿ ಎಲ್ಲರ ಕಣ್ಣು RCB ಆಟಗಾರರ ಮೇಲೆ..!

India vs England: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಆರ್​ಸಿಬಿ ಟೀಮ್​ನ ಯಾವುದೇ ಆಟಗಾರ ಸ್ಥಾನ ಪಡೆದಿಲ್ಲ. ಆದರೆ ಅತ್ತ ಇಂಗ್ಲೆಂಡ್ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲೇ ಆರ್​ಸಿಬಿ ತಂಡದ ಮೂವರು ಆಟಗಾರರು ಕಾಣಿಸಿಕೊಂಡಿದ್ದಾರೆ. ಹೀಗಾಗಿ ಭಾರತದ ವಿರುದ್ಧ ಈ ಮೂವರ ಪ್ರದರ್ಶನ ಹೇಗಿರಲಿದೆ ಎಂಬುದೇ ಈಗ ಕುತೂಹಲ.

RCB ತಂಡಕ್ಕೆ ಇಂಗ್ಲೆಂಡ್ ಆಟಗಾರ್ತಿ ಎಂಟ್ರಿ

WPL 2025 RCB Squad: ವುಮೆನ್ಸ್ ಪ್ರೀಮಿಯರ್ ಲೀಗ್​ 2025 ಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) 18 ಸದಸ್ಯರ ಬಳಗವನ್ನು ರೂಪಿಸಿಕೊಂಡಿದೆ. ಈ ಬಾರಿ ಆರ್​ಸಿಬಿ ತಂಡಕ್ಕೆ ಒಟ್ಟು 6 ಹೊಸ ಆಟಗಾರ್ತಿಯರು ಎಂಟ್ರಿ ಕೊಟ್ಟಿದ್ದಾರೆ. ಇವರಲ್ಲಿ ನಾಲ್ವರು ಹರಾಜಿನ ಮೂಲಕ ಆಯ್ಕೆಯಾದರೆ, ಒಬ್ಬರನ್ನು ಹರಾಜಿಗೂ ಮುನ್ನ ಟ್ರೇಡ್ ಮಾಡಿಕೊಳ್ಳಲಾಗಿದೆ. ಇನ್ನು ಚಾರ್ಲಿ ಡೀನ್ ಬದಲಿ ಆಟಗಾರ್ತಿಯಾಗಿ ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

IPL 2025: RCB ನಾಯಕ ಯಾರು? ಸ್ಪಷ್ಟನೆ ನೀಡಿದ ಕೋಚ್ ಆ್ಯಂಡಿ ಫ್ಲವರ್

IPL 2025 RCB Captain: ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ವಿರಾಟ್ ಕೊಹ್ಲಿ 143 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ 66 ಪಂದ್ಯಗಳಲ್ಲಿ ಆರ್​ಸಿಬಿ ಜಯ ಸಾಧಿಸಿದೆ. ಹಾಗೆಯೇ 2016 ರಲ್ಲಿ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿತ್ತು. ಇದೀಗ 18ನೇ ಸೀಸನ್​ನಲ್ಲಿ ಮತ್ತೆ ವಿರಾಟ್ ಕೊಹ್ಲಿಯನ್ನು ನಾಯಕನನ್ನಾಗಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

6,6,6,6,6,6: ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ

Tim David: ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅಡಿಲೇಡ್ ಬೌಲರ್​​ಗಳನ್ನು ಮನಸೋ ಇಚ್ಛೆ ದಂಡಿಸಿದ ಡೇವಿಡ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ 28 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 62 ರನ್ ಚಚ್ಚಿದರು.

RCB ಟಾರ್ಗೆಟ್ ಲಿಸ್ಟ್ ಔಟ್: ಕನ್ನಡಿಗನನ್ನು ಕಡೆಗಣಿಸಿರುವುದು ಬಹಿರಂಗ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್-18 ರ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮರಳಬೇಕೆಂದಿದ್ದ ಕೆಎಲ್ ರಾಹುಲ್ ಅವರನ್ನು ಈ ಬಾರಿ ಆರ್​​ಸಿಬಿ ಖರೀದಿಸಿಲ್ಲ. ಇದಾಗ್ಯೂ ಕನ್ನಡಿಗನಿಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬರೋಬ್ಬರಿ 14 ಕೋಟಿ ರೂ. ವ್ಯಯಿಸಿದೆ. ಅದರಂತೆ ಐಪಿಎಲ್ 2025 ರಲ್ಲಿ ರಾಹುಲ್ ಡೆಲ್ಲಿ ಪರ ಕಣಕ್ಕಿಳಿಯಲಿದ್ದಾರೆ.

IPL 2025: 4 ತಿಂಗಳು ಮುಂಚೆಯೇ ಅಭ್ಯಾಸ ಶುರು ಮಾಡಿದ RCB

IPL 2025 RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್) 18ನೇ ಆವೃತ್ತಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) 22 ಸದಸ್ಯರ ಬಲಿಷ್ಠ ಪಡೆಯನ್ನು ರೂಪಿಸಿಕೊಂಡಿದೆ. ಇವರಲ್ಲಿ 8 ವಿದೇಶಿ ಆಟಗಾರರಿದ್ದರೆ, 14 ಭಾರತೀಯರಿದ್ದಾರೆ.

ಟೆಸ್ಟ್​​ನಲ್ಲಿ RCB ಆಟಗಾರನ ಆರ್ಭಟ: ಚೊಚ್ಚಲ ಶತಕ ಜಸ್ಟ್ ಮಿಸ್

Jacob Bethell: 21 ವರ್ಷದ ಜೇಕಬ್ ಬೆಥೆಲ್ ಇಂಗ್ಲೆಂಡ್ ತಂಡದ ಭರವಸೆಯ ಆಲ್​​ರೌಂಡರ್ ಆಟಗಾರ. ಈ ಬಾರಿಯ ಮೆಗಾ ಹರಾಜಿನಲ್ಲಿ ಬೆಥೆಲ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 2.6 ಕೋಟಿ ರೂ.ಗೆ ಖರೀದಿಸಿದೆ. ಈ ಖರೀದಿ ಬೆನ್ನಲ್ಲೇ ಅಬ್ಬರ ಶುರು ಮಾಡಿರುವ ಜೇಕಬ್ ಈ ಬಾರಿಯ ಐಪಿಎಲ್​​ನಲ್ಲೂ ಸಿಡಿಲಬ್ಬರ ಪ್ರದರ್ಶಿಸುವ ನಿರೀಕ್ಷೆಯಿದೆ.

ಚೊಚ್ಚಲ ಹ್ಯಾಟ್ರಿಕ್ ವಿಕೆಟ್..! ಆರ್‌ಸಿಬಿ ಸೇರಿದ ತಕ್ಷಣ ಫಾರ್ಮ್‌ಗೆ ಮರಳಿದ ಭುವನೇಶ್ವರ್ ಕುಮಾರ್

Bhuvneshwar Kumar's Hat-trick: ಭಾರತ ತಂಡದಿಂದ ಹೊರಗಿರುವ ಭುವನೇಶ್ವರ್ ಕುಮಾರ್, ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಜಾರ್ಖಂಡ್ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆದು ಸಂಚಲನ ಮೂಡಿಸಿದ್ದಾರೆ. ಇದು ಅವರ ಟಿ20 ಕ್ರಿಕೆಟ್‌ನ ಮೊದಲ ಹ್ಯಾಟ್ರಿಕ್. ಈ ಸಾಧನೆಯು ಆರ್‌ಸಿಬಿ ಅಭಿಮಾನಿಗಳ ಉತ್ಸಾಹ ಹೆಚ್ಚಿಸಿದ್ದು, ಭುವಿ ಟೀಂ ಇಂಡಿಯಾಗೆ ಮರಳುವ ಸಾಧ್ಯತೆಗಳನ್ನೂ ಹೆಚ್ಚಿಸಿದೆ.

Jacob Bethell: ಆರ್​ಸಿಬಿ ಸೇರಿದ ಕೂಡಲೇ ಇಂಗ್ಲೆಂಡ್ ಆಟಗಾರನಿಗೆ ಖುಲಾಯಿಸಿದ ಅದೃಷ್ಟ

Jacob Bethell: ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಹೊಸ ಕೇಂದ್ರ ಒಪ್ಪಂದವನ್ನು ಪ್ರಕಟಿಸಿದ್ದು, ಈ ಒಪ್ಪಂದದಲ್ಲಿ ಇತ್ತೀಚಿಗಷ್ಟೆ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದ ಯುವ ಆಟಗಾರ ಜೇಕಬ್ ಬೆಥೆಲ್ ಅವರ ಹೆಸರನ್ನೂ ಈ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಆಟಗಾರ 2 ವರ್ಷಗಳ ಕೇಂದ್ರ ಒಪ್ಪಂದವನ್ನು ಪಡೆದಿದ್ದಾರೆ.

IPL 2025: ದಾಖಲೆಗಳೊಂದಿಗೆ RCB ಗೆ ಬಂದ ಭುವಿ… ಮುಂದೇನು?

IPL 2025: ಐಪಿಎಲ್​ನಲ್ಲಿ 176 ಪಂದ್ಯಗಳನ್ನಾಡಿರುವ ಭುವನೇಶ್ವರ್ ಕುಮಾರ್ ಈವರೆಗೆ 176 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 3910 ಎಸೆತಗಳನ್ನು ಎಸೆದಿರುವ ಅವರು ಒಟ್ಟು 181 ವಿಕೆಟ್​​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಬೌಲರ್​​​ಗಲ್ಲಿ ಗುರುತಿಸಿಕೊಂಡಿದ್ದಾರೆ.

ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್
ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್