AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Royal Challengers Bengaluru

Royal Challengers Bengaluru

Royal Challengers Bengaluru

IPL: ಅತ್ಯಧಿಕ ಬ್ರಾಂಡ್ ಮೌಲ್ಯ ಹೊಂದಿರುವ ತಂಡ ಆರ್​ಸಿಬಿ; ಸಿಎಸ್​ಕೆಗೆ ಯಾವ ಸ್ಥಾನ?

IPL brand valuation 2026: ಹೌಲಿಹಾನ್ ಲೋಕೆ 2026ರ ಐಪಿಎಲ್ ಬ್ರಾಂಡ್ ಮೌಲ್ಯಮಾಪನ ಅಧ್ಯಯನದ ಪ್ರಕಾರ, ಐಪಿಎಲ್ ವ್ಯವಹಾರ ಮೌಲ್ಯ 2 ಲಕ್ಷ ಕೋಟಿ ರೂ. ತಲುಪಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು $312 ಮಿಲಿಯನ್ ಬ್ರಾಂಡ್ ಮೌಲ್ಯದೊಂದಿಗೆ ಅಗ್ರಸ್ಥಾನದಲ್ಲಿದೆ, $300 ಮಿಲಿಯನ್ ದಾಟಿದ ಮೊದಲ ಐಪಿಎಲ್ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂಬೈ ಇಂಡಿಯನ್ಸ್, ಕೆಕೆಆರ್, ಮತ್ತು ಸಿಎಸ್​ಕೆ ಕೂಡ ಗಮನಾರ್ಹ ಬ್ರಾಂಡ್ ಮೌಲ್ಯಗಳನ್ನು ಹೊಂದಿವೆ. ಐಪಿಎಲ್ ಜಾಗತಿಕವಾಗಿ ಕ್ರೀಡಾ ಕ್ಷೇತ್ರದ ಪ್ರಮುಖ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದೆ.

ಆರ್​ಸಿಬಿ ವೇಗಿ ಯಶ್ ದಯಾಳ್​ಗೆ ಬಿಗ್ ರಿಲೀಫ್ ನೀಡಿದ ಅಲಹಾಬಾದ್ ಹೈಕೋರ್ಟ್

Cricketer Yash Dayal: ಮದುವೆಯ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಕ್ರಿಕೆಟಿಗ ಯಶ್ ದಯಾಳ್‌ಗೆ ಅಲಹಾಬಾದ್ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದ್ದು, ಯಶ್ ದಯಾಳ್ ತಮ್ಮ ಸಂಬಂಧವು ಸಮ್ಮತಿದಾಯಕವಾಗಿತ್ತು ಮತ್ತು ಯಾವುದೇ ಮದುವೆಯ ಭರವಸೆ ಇರಲಿಲ್ಲ ಎಂದು ವಾದಿಸಿದ್ದಾರೆ. ಪ್ರಸಿದ್ಧಿ ಪಡೆದ ನಂತರ ಹಣಕ್ಕಾಗಿ ಈ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದ್ದಕ್ಕಿದ್ದಂತೆ ತಂಡ ಬದಲಾಯಿಸಿದ ಆರ್​​ಸಿಬಿ ವೇಗಿ ಯಶ್ ದಯಾಳ್

Yash Dayal team change: ಆರ್‌ಸಿಬಿ ಬೌಲರ್ ಯಶ್ ದಯಾಳ್ ತಮ್ಮ ದೇಶೀಯ ಕ್ರಿಕೆಟ್ ತಂಡವನ್ನು ಉತ್ತರ ಪ್ರದೇಶದಿಂದ ಛತ್ತೀಸ್‌ಗಢಕ್ಕೆ ಬದಲಾಯಿಸಿದ್ದಾರೆ. ಎನ್‌ಒಸಿ ಕೋರಿ ಅರ್ಜಿ ಸಲ್ಲಿಸಿರುವ ದಯಾಳ್, ಈಗಾಗಲೇ ಛತ್ತೀಸ್‌ಗಢದ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಐಪಿಎಲ್ 2026ರ ಆವೃತ್ತಿಯಲ್ಲಿ ಆಡದೇ ಇರುವುದು ಮತ್ತು ಯುಪಿ ಟಿ20 ಲೀಗ್‌ನಲ್ಲಿ ಎದುರಾದ ಸಮಸ್ಯೆಗಳು ಈ ನಿರ್ಧಾರಕ್ಕೆ ಕಾರಣವಾಗಿವೆ ಎನ್ನಲಾಗಿದೆ.

RCB ಆಟಗಾರರಿಗೆ ಅನ್ಯಾಯ: ಬಿಸಿಸಿಐ ವಿರುದ್ಧ ಮಾಜಿ ಕ್ರಿಕೆಟಿಗ ಕಿಡಿ

ಸಡಗೋಪನ್ ರಮೇಶ್ ಅವರು ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಬ್ಯಾಟರ್. ತಮಿಳುನಾಡಿನ ಚೆನ್ನೈ ಮೂಲದ ಇವರು 1999 ರಿಂದ 2001 ರ ಅವಧಿಯಲ್ಲಿ ಭಾರತ ತಂಡದ 19 ಟೆಸ್ಟ್​ ಹಾಗೂ 24 ಏಕದಿನ ಪಂದ್ಯಗಳನ್ನಾಡಿದ್ದರು. ಈ ವೇಳೆ ಟೆಸ್ಟ್​ನಲ್ಲಿ 2 ಶತಕ ಸೇರಿದಂತೆ 1367 ಹಾಗೂ ಏಕದಿನ ಕ್ರಿಕೆಟ್​ನಲ್ಲಿ 646 ರನ್ ಕಲೆಹಾಕಿದ್ದರು.

RCB ಎಡಿಷನ್ ಫೋನ್: ಏನಿದರ ವಿಶೇಷತೆ?

ಭಾರತದ ಅತ್ಯಂತ ಜನಪ್ರಿಯ ಕ್ರಿಕೆಟ್ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪ್ರಸ್ತುತ ತಂತ್ರಜ್ಞಾನ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸುತ್ತಿರುವ ಲಂಡನ್ ಮೂಲದ 'ನಥಿಂಗ್' (Nothing) ಕಂಪೆನಿ ಪರಸ್ಪರ ಕೈಜೋಡಿಸಿವೆ. 2026ರ ಐಪಿಎಲ್ ಸೀಸನ್‌ನಲ್ಲಿ RCB ತಂಡದ ಮುಖ್ಯ ಪ್ರಾಯೋಜಕರಾಗಿ ಕಾಣಿಸಿಕೊಂಡಿದ್ದ ನಥಿಂಗ್ ಕಂಪೆನಿ ಇದೀಗ ಆರ್​ಸಿಬಿ ಅಭಿಮಾನಿಗಳಿಗಾಗಿ ವಿಶೇಷ ಎಡಿಷನ್ ಫೋನ್ ಬಿಡುಗಡೆ ಮಾಡಲು ಮುಂದಾಗಿದೆ.

RCB ಫ್ರಾಂಚೈಸಿ ಮಾರಾಟ: ಇನ್ಮುಂದೆ 2 ತಂಡಗಳಿಗೆ ಹೊಸ ಮಾಲೀಕರು!

IPL 2027, RCB : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈ ಹಿಂದೆ ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿತ್ತು. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿತ್ತು. ಇದೀಗ ಡಿಯಾಜಿಯೋ ಕಂಪೆನಿಯು ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಿ, ಮದ್ಯದ ಉದ್ಯಮದ ಮೇಲೆ ಗಮನ ಹರಿಸಲು ನಿರ್ಧರಿಸಿದೆ.

ನನ್ನ ಜೀವನದಲ್ಲಿ ನಾನು ನೋಡಿದ ಅತ್ಯುತ್ತಮ ಬ್ಯಾಟ್ಸ್‌ಮನ್ ಈತ; ಎಬಿ ಡಿವಿಲಿಯರ್ಸ್

AB de Villiers Crowns Virat Kohli as Best Batsman: ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ತಮ್ಮ ಪ್ರಕಾರ ವಿಶ್ವದ ಟಾಪ್ 3 ಬ್ಯಾಟ್ಸ್‌ಮನ್‌ಗಳನ್ನು ಬಹಿರಂಗಪಡಿಸಿದ್ದಾರೆ. ಅವರ ಪ್ರಕಾರ ವಿರಾಟ್ ಕೊಹ್ಲಿ ಜೀವನದಲ್ಲಿ ಕಂಡ ಅತ್ಯುತ್ತಮ ಬ್ಯಾಟ್ಸ್‌ಮನ್. ರಿಕಿ ಪಾಂಟಿಂಗ್ ಮತ್ತು ಕುಮಾರ ಸಂಗಕ್ಕಾರ ನಂತರದ ಸ್ಥಾನದಲ್ಲಿದ್ದಾರೆ. ಕೊಹ್ಲಿಯ ಸ್ಥಿರತೆ, ಫಿಟ್‌ನೆಸ್, ಮಾನಸಿಕ ದೃಢತೆ ಹಾಗೂ ಒತ್ತಡದ ಚೇಸಿಂಗ್ ಸಾಮರ್ಥ್ಯವನ್ನು ಡಿವಿಲಿಯರ್ಸ್ ಪ್ರಶಂಸಿಸಿದ್ದಾರೆ.

32ನೇ ವಯಸ್ಸಿಗೆ ನಿವೃತ್ತಿ; ಯುಎಇ ಪರ ಕಣಕ್ಕಿಳಿಯಲಿರುವ ಭಾರತದ ಕ್ರಿಕೆಟಿಗ

KS Bharat's Shocking Move: ಕೆ.ಎಸ್. ಭರತ್ ಟೀಂ ಇಂಡಿಯಾದಿಂದ ನಿವೃತ್ತಿ ಪಡೆದು ಯುಎಇ ಪರ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಅವಕಾಶ ವಂಚಿತರಾದ 32ರ ಹರೆಯದ ಭರತ್ ದುಬೈಗೆ ತೆರಳಿದ್ದಾರೆ. ಆದರೆ ಯುಎಇ ಪರ ಆಡಲು ಮೂರು ವರ್ಷಗಳ ಕೂಲಿಂಗ್-ಆಫ್ ಅವಧಿಯ ನಿಯಮವಿದೆ. 2027ರ ನಂತರವಷ್ಟೇ ಭರತ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲು ಸಾಧ್ಯ. ಇದು ಅವರ ವೃತ್ತಿಜೀವನದ ಎರಡನೇ ಇನ್ನಿಂಗ್ಸ್ ಆಗಿದೆ.

24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಜೋರ್ಡನ್ ಕಾಕ್ಸ್​

JORDAN COX: 2026ರ ಐಪಿಎಲ್ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಜೋರ್ಡನ್ ಕಾಕ್ಸ್ ಅವರನ್ನು ₹75 ಲಕ್ಷಕ್ಕೆ ಖರೀದಿಸಿತ್ತು. ಅದರಂತೆ ಈ ಬಾರಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಕಾಕ್ಸ್​ಗೆ ಒಂದೇ ಒಂದು ಮ್ಯಾಚ್​ನಲ್ಲಿ ಬ್ಯಾಟ್ ಬೀಸಲು ಅವಕಾಶ ಸಿಕ್ಕಿರಲಿಲ್ಲ. ಇದಾಗ್ಯೂ ಸಬ್‌ಸ್ಟಿಟ್ಯೂಟ್ ಫೀಲ್ಡರ್ ಆಗಿ ತಂಡಕ್ಕೆ ನೆರವಾಗಿದ್ದರು.

ಲಿವಿಂಗ್​ಸ್ಟೋನ್ ನಾಯಕ, ಆ್ಯಂಡಿ ಫ್ಲವರ್, ದಿನೇಶ್ ಕಾರ್ತಿಕ್ ಕೋಚ್!

The Hundred 2026: ದಿ ಹಂಡ್ರೆಡ್ ಲೀಗ್ ಟೂರ್ನಿಯು ಜುಲೈ 21, 2026 ರಿಂದ ಪ್ರಾರಂಭವಾಗಲಿದೆ. ಲಂಡನ್‌ನ ಕಿಯಾ ಓವಲ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಎಂಐ ಲಂಡನ್ (MI London) ಮತ್ತು ಸನ್‌ರೈಸರ್ಸ್ ಲೀಡ್ಸ್ (Sunrisers Leeds) ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಲಿಯಾಮ್ ಲಿವಿಂಗ್‌ಸ್ಟೋನ್ ನೇತೃತ್ವದ ಲಂಡನ್ ಸ್ಪಿರಿಟ್ ತಂಡವು ತನ್ನ ಮೊದಲ ಪಂದ್ಯವನ್ನು ಜುಲೈ 23, 2026 ರಂದು ಲಾರ್ಡ್ಸ್ ಮೈದಾನದಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ.

ಆಡುವ ಬಯಕೆ ಇದೆ, ಆದರೆ..?; ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮನದಾಳ ತೆರೆದಿಟ್ಟ ಭುವನೇಶ್ವರ್

Bhuvneshwar Kumar comeback: ಇತ್ತೀಚಿನ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ 28 ವಿಕೆಟ್‌ ಪಡೆದ ಭುವನೇಶ್ವರ್ ಕುಮಾರ್ ಟೀಂ ಇಂಡಿಯಾ ಕಮ್‌ಬ್ಯಾಕ್ ಬಗ್ಗೆ ಆಸಕ್ತಿ ಹೆಚ್ಚಿಸಿದ್ದಾರೆ. ಸ್ವಿಂಗ್ ಬೌಲರ್ ಭುವಿ, ಇತ್ತೀಚಿನ ಸರಣಿಗಳಿಗೆ ಆಯ್ಕೆಯಾಗದಿದ್ದರೂ, ಮೌನ ಮುರಿದು ನೀಲಿ ಜೆರ್ಸಿ ಧರಿಸುವ ಬಯಕೆ ವ್ಯಕ್ತಪಡಿಸಿದ್ದಾರೆ. ಆಯ್ಕೆದಾರರ ತೀರ್ಮಾನಕ್ಕೆ ಬಿಟ್ಟಿದ್ದೇನೆ ಎಂದಿದ್ದಾರೆ.

RCB ಆಟಗಾರನ ನಿಧಾನಗತಿಯ ಬ್ಯಾಟಿಂಗ್: ಆದರೂ ರೋಚಕ ಗೆಲುವು!

Jordan Cox: ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದ ಜೋರ್ಡನ್ ಕಾಕ್ಸ್ ಇದೀಗ ಟಿ20 ಬ್ಲಾಸ್ಟ್​ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಆರ್​ಸಿಬಿ ಪರ 16 ಪಂದ್ಯಗಳಲ್ಲೂ ಬೆಂಚ್ ಕಾದಿದ್ದ ಕಾಕ್ಸ್ ಟಿ20 ಬ್ಲಾಸ್ಟ್​ನಲ್ಲಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿ ಸುದ್ದಿಯಾಗಿದ್ದಾರೆ.

ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು