AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rukmini Vasanth

Rukmini Vasanth

ಕನ್ನಡದ ಜನಪ್ರಿಯ ನಟಿಯರಲ್ಲಿ ರುಕ್ಮಿಣಿ ವಸಂತ್ ಕೂಡ ಇದ್ದಾರೆ. 2019ರ ‘ಬೀರ್ಬಲ್’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು ರುಕ್ಮಿಣಿ. ಈ ಸಿನಿಮಾ ಗೆಲುವು ಕಂಡಿತು. ಆದರೆ, ರುಕ್ಮಿಣಿಗೆ ಅಷ್ಟಾಗಿ ಜನಪ್ರಿಯತೆ ಸಿಕ್ಕಿರಲಿಲ್ಲ. ರಕ್ಷಿತ್ ಶೆಟ್ಟಿ ನಟನೆಯ, ಹೇಮಂತ್ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಮೂಲಕ ಅವರ ಖ್ಯಾತಿ ಹೆಚ್ಚಿತು. ಅವರು ಸ್ಯಾಂಡಲ್​ವುಡ್​ನಲ್ಲಿ ಈ ಸಿನಿಮಾ ಮೂಲಕ ಗಮನ ಸೆಳೆದರು. ಅವರು ಮಾಡಿದ ಪ್ರಿಯಾ ಪಾತ್ರ ಭರ್ಜರಿ ಮನ್ನಣೆ ಪಡೆಯಿತು. ಆ ಬಳಿಕ ‘ಬಾನದಾರಿಯಲ್ಲಿ’, ‘ಬಘೀರ’, ‘ಭೈರತಿ ರಣಗಲ್’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ಎಲ್ಲಾ ಸಿನಿಮಾಗಳಲ್ಲಿ ಅವರು ಹೀರೋಗೆ ಸಿಗೋದಿಲ್ಲ ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರ. ಈಗ ರುಕ್ಮಿಣಿ ತಮಿಳು ಸಿನಿಮಾ ರಂಗದಲ್ಲಿ ಬ್ಯುಸಿ ಆಗಿದ್ದಾರೆ

ಇನ್ನೂ ಹೆಚ್ಚು ಓದಿ

ಟಾಕ್ಸಿಕ್ ಟೀಸರ್: ಹಸಿಬಿಸಿ ದೃಶ್ಯ ನೋಡಿ ರುಕ್ಮಿಣಿ ವಸಂತ್ ಅಭಿಮಾನಿಗಳಿಗೆ ಆತಂಕ

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ ಟೀಸರ್​​ನಲ್ಲಿ ಹತ್ತು ಹಲವು ಅಂಶಗಳು ಹೈಲೈಟ್ ಆಗಿವೆ. ಹಸಿಬಿಸಿ ದೃಶ್ಯಗಳು ಕೂಡ ಇದರಲ್ಲಿ ಇವೆ. ಅದನ್ನು ಕಂಡು ಕೆಲವರಿಗೆ ಈಗಾಗಲೇ ಆತಂಕ ಶುರುವಾಗಿದೆ. ರುಕ್ಮಿಣಿ ವಸಂತ್ ಅಭಿಮಾನಿಗಳು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

‘ಟಾಕ್ಸಿಕ್’ ಡೈರೆಕ್ಟರ್ ಮಹಿಳೆ ಆದ್ರೂ ಟೀಸರ್​​ನಲ್ಲಿ ನಟಿಯರಿಗೆ ಜಾಗ ಇಲ್ಲ; ನೆಟ್ಟಿಗರ ಟೀಕೆ

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದಲ್ಲಿ ಹಲವು ಸ್ಟಾರ್ ನಟಿಯರು ಅಭಿನಯಿಸಿದ್ದಾರೆ. ಈಗ ಈ ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ನಟಿಯರ ಪಾತ್ರವನ್ನು ಕಿಂಚಿತ್ತೂ ತೋರಿಸಿಲ್ಲ ಎಂದು ಕೆಲವು ನೆಟ್ಟಿಗರು ಟೀಕೆ ಮಾಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಟಾಲಿವುಡ್​ನ ಮತ್ತೋರ್ವ ಸ್ಟಾರ್ ಹೀರೋಗೆ ನಾಯಕಿ ಆದ ರುಕ್ಮಿಣಿ ವಸಂತ್

ಕನ್ನಡದ ಜನಪ್ರಿಯ ನಟಿ ರುಕ್ಮಿಣಿ ವಸಂತ್ ಈಗ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅಕ್ಕಿನೇನಿ ನಾಗ ಚೈತನ್ಯ ನಟನೆಯ ಮುಂದಿನ ಚಿತ್ರದಲ್ಲಿ ರುಕ್ಮಿಣಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರದ ಯಶಸ್ಸಿನ ನಂತರ ರುಕ್ಮಿಣಿ ಪರಭಾಷೆಯಲ್ಲಿ ಭಾರಿ ಬೇಡಿಕೆ ಸೃಷ್ಟಿಸಿದ್ದಾರೆ. ಈ ಪ್ರೇಮಕಥೆಯ ಚಿತ್ರೀಕರಣ ಶೀಘ್ರದಲ್ಲೇ ಆರಂಭವಾಗಲಿದೆ.

ಹೊಸ ಅವತಾರದಲ್ಲಿ ರುಕ್ಮಿಣಿ ವಸಂತ್; ಇಲ್ಲಿವೆ ಸುಂದರ ಫೋಟೋಗಳು

ರುಕ್ಮಿಣಿ ವಸಂತ್ ಅವರಿಗೆ ಕೆಲವು ವಿಷಯಗಳು ತುಂಬಾನೇ ಇಷ್ಟ. ಇದರಲ್ಲಿ ಫುಡ್ ಹಾಗೂ ಫೋಟೋಶೂಟ್ ಕೂಡ ಒಂದು. ಅವರು ಈಗ ತಮ್ಮ ಹೊಸ ಫೋಟೋಶೂಟ್ ಮಾಡಿಸಿದ್ದು, ಇದರಲ್ಲಿ ಅವರು ತಮ್ಮಿಷ್ಟದ ತಿಂಡಿಗಳ ಜೊತೆ ಪೋಸ್ ಕೊಟ್ಟಿದ್ದಾರೆ. ಅವರ ಹೊಸ ಡ್ರೆಸ್ ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ.

ವಿಲನ್ ಪಾತ್ರ ಮಾಡಿದರೂ ಜನರು ಒಪ್ಪಿಕೊಂಡರು; ಖುಷಿ ಹೊರಹಾಕಿದ ರುಕ್ಮಿಣಿ ವಸಂತ್

ರುಕ್ಮಿಣಿ ವಸಂತ್ 'ಕಾಂತಾರ ಚಾಪ್ಟರ್ 1' ಚಿತ್ರದಲ್ಲಿ ನೆಗೆಟಿವ್ ಪಾತ್ರ ನಿರ್ವಹಿಸಿದ್ದರೂ, ಅಭಿಮಾನಿಗಳು ಅವರನ್ನು ಒಪ್ಪಿಕೊಂಡಿದ್ದಾರೆ. ವೃತ್ತಿಜೀವನದ ಆರಂಭದಲ್ಲಿ ಇಂತಹ ಪಾತ್ರ ಮಾಡುವುದು ಅಪಾಯಕಾರಿ ಎಂದಿದ್ದರೂ, ಜನರಿಂದ ದ್ವೇಷ ಬಾರದಿರುವುದು ಅವರಿಗೆ ಸಂತಸ ತಂದಿದೆ. ಆ ಬಗ್ಗೆ ಇಲ್ಲಿದೆ ವಿವರ .

ಭಾರತದ ಅತ್ಯಂತ ಜನಪ್ರಿಯ ತಾರೆಯರ​ ಪಟ್ಟಿಯಲ್ಲಿ ಕನ್ನಡದ ಮೂವರಿಗೆ ಸ್ಥಾನ

IMDb 2025ರ ಭಾರತದ ಅತ್ಯಂತ ಜನಪ್ರಿಯ ತಾರೆಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಾರಿ ಶಾರುಖ್, ಸಲ್ಮಾನ್ ಸ್ಥಾನ ಪಡೆದಿಲ್ಲ. ಟಾಪ್ 10ರಲ್ಲಿ ಬಹುತೇಕ ಹೊಸ ಮುಖಗಳಿದ್ದು, ಮೂವರು ಕನ್ನಡದ ಕಲಾವಿದರಾದ ರಶ್ಮಿಕಾ ಮಂದಣ್ಣ (6), ರುಕ್ಮಿಣಿ ವಸಂತ್ (9), ರಿಷಬ್ ಶೆಟ್ಟಿ (10) ಸ್ಥಾನ ಗಳಿಸಿದ್ದಾರೆ.

ಥಿಯೇಟರ್​ನಲ್ಲಿ 50 ದಿನ ಪೂರೈಸಿದ ‘ಕಾಂತಾರ: ಚಾಪ್ಟರ್ 1’; ಸಿಕ್ಕಿರೋ ಶೋಗಳೆಷ್ಟು?

'ಕಾಂತಾರ: ಚಾಪ್ಟರ್ 1' ಸಿನಿಮಾ 50 ದಿನ ಪೂರೈಸಿದ್ದು, ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರ 900 ಕೋಟಿ ರೂ. ಗಳಿಸಿದೆ. ಒಟಿಟಿಗೆ ಬಂದರೂ ಬೆಂಗಳೂರಿನಲ್ಲಿ ಇಂದಿಗೂ 11 ಶೋಗಳೊಂದಿಗೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಪ್ರೀಕ್ವೆಲ್, ಥಿಯೇಟರ್‌ಗಳಲ್ಲಿ ತನ್ನ ಅಧಿಪತ್ಯವನ್ನು ಮುಂದುವರೆಸಿದೆ.

ರುಕ್ಮಿಣಿ ವಸಂತ್​ ಹೆಸರಲ್ಲಿ ಮೋಸ; ಎಚ್ಚರಿಸಿದ ‘ಕಾಂತಾರ’ದ ಕನಕವತಿ

'ಕಾಂತಾರ' ಖ್ಯಾತಿಯ ರುಕ್ಮಿಣಿ ವಸಂತ್ ಹೆಸರಲ್ಲಿ ಸೈಬರ್ ವಂಚನೆ ನಡೆಯುತ್ತಿದೆ. ಅಪರಿಚಿತ ವ್ಯಕ್ತಿಯೊಬ್ಬರು ಅವರ ಹೆಸರಿನಲ್ಲಿ ಜನರಿಗೆ ಕರೆ ಮಾಡಿ ಮೋಸ ಮಾಡುತ್ತಿದ್ದು, ರುಕ್ಮಿಣಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಆ ನಂಬರ್ ತನಗೆ ಸೇರಿದ್ದಲ್ಲ, ಯಾವುದೇ ಕರೆ ಅಥವಾ ಮೆಸೇಜ್‌ಗಳಿಗೆ ಸ್ಪಂದಿಸಬೇಡಿ, ಆನ್‌ಲೈನ್‌ನಲ್ಲಿ ಜಾಗರೂಕರಾಗಿರಿ ಎಂದು ಅವರು ಮನವಿ ಮಾಡಿದ್ದಾರೆ.

ರಸ್ತೆಗೆ ಟಾರ್ ಹಾಕೋ ಟ್ರೋಲ್ ಬಗ್ಗೆ ಕೊನೆಗೂ ಪ್ರತಿಕ್ರಿಯಿಸಿದ ರುಕ್ಮಿಣಿ ವಸಂತ್

ನಟಿ ರುಕ್ಮಿಣಿ ವಸಂತ್ ‘ಕಾಂತಾರ: ಚಾಪ್ಟರ್ 1’ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ತಂದುಕೊಟ್ಟಿದೆ. ಚಿತ್ರದ ಟ್ರೇಲರ್ ಬಿಡುಗಡೆಯಾದಾಗ, ರುಕ್ಮಿಣಿ ವಸಂತ್ ಕುರಿತ ಕೆಲವು ಟ್ರೋಲ್‌ಗಳು ವೈರಲ್ ಆಗಿದ್ದವು. ಆದರೆ, ಅವರು ಈ ಟ್ರೋಲ್‌ಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದಾರೆ.

ಭಯೋತ್ಪಾದಕರ ವಿರುದ್ಧ ಹೋರಾಡಿ ವೀರ ಮರಣ; ರುಕ್ಮಿಣಿ ವಸಂತ್ ತಂದೆ ಯಾರು?

ರುಕ್ಮಿಣಿ ವಸಂತ್ ಅವರ ತಂದೆ ಕರ್ನಲ್ ವಸಂತ್ ವೇಣುಗೋಪಾಲ್ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದರು. ಪಠಾಣ್‌ಕೋಟ್, ಸಿಕ್ಕಿಂ, ರಾಂಚಿ, ಜಮ್ಮು ಮತ್ತು ಕಾಶ್ಮೀರ ಮತ್ತು ಇತರ ಸ್ಥಳಗಳಲ್ಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದರು. ರುಕ್ಮಿಣಿ ಕೇವಲ ಏಳು ವರ್ಷದವಳಿದ್ದಾಗ ಅವರು ವೀರ ಮರಣ ಹೊಂದಿದರು.

ಮಹಾನ್ ಯೋಧನ ಪುತ್ರಿ ರುಕ್ಮಿಣಿ ವಸಂತ್, ಇಲ್ಲಿವೆ ನಟಿಯ ತಂದೆಯ ಚಿತ್ರಗಳು

Colonel Vasanth Venugopal: ನಟಿ ರುಕ್ಮಿಣಿ ವಸಂತ್ ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ತಮ್ಮ ನಟನಾ ಪ್ರತಿಭೆ ಮತ್ತು ಅದ್ಭುತ ಸೌಂದರ್ಯದಿಂದಾಗಿ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ರುಕ್ಮಿಣಿ ವಸಂತ್ ಈಗ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಆದರೆ ಅವರ ತಂದೆ ಇಡೀ ದೇಶವೇ ಹೆಮ್ಮೆ ಪಡುವ ಭಾರತೀಯ ಸೈನ್ಯದ ಮಹಾನ್ ಯೋಧ ಎಂಬುದು ಹೆಚ್ಚು ಜನರಿಗೆ ತಿಳಿದಿಲ್ಲ. ಇಲ್ಲಿವೆ ಅವರ ತಂದೆಯ ಚಿತ್ರಗಳು.

‘ಕಾಂತಾರ: ಚಾಪ್ಟರ್ 1’ ವಿಶೇಷ ಶೋ ಝಲಕ್; ಮಿಂಚಿದ ರಿಷಬ್, ರುಕ್ಮಿಣಿ

‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಅದ್ದೂರಿಯಾಗಿ ಶೋ ಒಂದನ್ನು ಆಯೋಜನೆ ಮಾಡಲಾಗಿತ್ತು. ಈ ಶೋಗೆ ರಿಷಬ್, ರುಕ್ಮಿಣಿ ವಸಂತ್ ಹಾಗೂ ಕುಟುಂಬದವರು ಹಾಜರಿ ಹಾಕಿದ್ದರು. ಈ ಶೋ ಸಾಕಷ್ಟು ಗಮನ ಸೆಳೆದಿದೆ. ಅದರ ವಿಡಿಯೋನ ‘ಕಾಂತಾರ: ಚಾಪ್ಟರ್ 1’ ತಂಡ ಹಂಚಿಕೊಂಡಿದೆ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು