Sign In

By signing in or creating an account, you agree with Associated Broadcasting Company's Terms & Conditions and Privacy Policy.

Sachin Tendulkar

Sachin Tendulkar

ದಶಕಗಳ ಕಾಲ ಕ್ರಿಕೆಟ್ ಲೋಕವನ್ನು ಅಕ್ಷರಶಃ ಆಳಿದ ಕ್ರೆಡಿಟ್ ಸವ್ಯಸಾಚಿ ಸಚಿನ್ ತೆಂಡೂಲ್ಕರ್ ಅವರಿಗೆ ಸಲ್ಲುತ್ತದೆ. ವಿಶ್ವ ಕ್ರಿಕೆಟ್​ನಲ್ಲಿ ಕ್ರಿಕೆಟ್ ದೇವರು ಎಂದು ಚಿರಪರಿಚಿತರಾಗಿರುವ ಸಚಿನ್ ತೆಂಡೂಲ್ಕರ್ ನಿರ್ಮಿಸಿದ ದಾಖಲೆಗಳಿಗೆ ಲೆಕ್ಕವಿಲ್ಲ. ತಮ್ಮ 16ನೇ ವಯಸ್ಸಿನಲ್ಲೇ ಅಂತರರಾಷ್ಟ್ರೀಯ ಅಂಗಳಕ್ಕೆ ಕಾಲಿಟ್ಟು ಇತಿಹಾಸ ಬರೆದ ಸಚಿನ್​ ಈಗಲೂ ಕೋಟ್ಯಾಂತರ ಕ್ರಿಕೆಟ್​ ಅಭಿಮಾನಿಗಳ ಆರಾಧ್ಯ ದೈವ. 24 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಲಿಟ್ಲ್ ಮಾಸ್ಟರ್ ಹಲವಾರು ಅವಿಸ್ಮರಣೀಯ ಸನ್ನಿವೇಷಗಳಿಗೆ ಸಾಕ್ಷಿಯಾಗಿದ್ದಾರೆ. ಇದರ ಜೊತಗೆ ಅಪರೂಪದ ದಾಖಲೆಗಳನ್ನು ತನ್ನ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 1989ರಲ್ಲಿ ಪಾಕಿಸ್ತಾನ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸಚಿನ್ ತೆಂಡೂಲ್ಕರ್ 2013ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದಾಗ ಬರೋಬ್ಬರಿ 34,357 ರನ್‌ಗಳನ್ನು ತಮ್ಮ ಖಾತೆಗೆ ಸೇರಿಸಿಕೊಂಡಿದ್ದರು. ಅಂತರರಾಷ್ಟ್ರೀಯ ಏಕದಿನ ಪಂದ್ಯಾಗಳಲ್ಲಿ ಅಜೇಯ 200 ರನ್​ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ 2010ರಲ್ಲೇ ಸಚಿನ್ ಅವರು ಪಾತ್ರರಾಗಿದ್ದರು. ಏಕದಿನ ಕ್ರಿಕೆಟ್​​ನಲ್ಲಿ ಒಟ್ಟು 463 ಪಂದ್ಯಗಳನ್ನು ಆಡಿರುವ ಇವರು 18,426 ರನ್ ಕಲೆಹಾಕಿದ್ದಾರೆ. 49 ಶತಕ ಹಾಗೂ 96 ಅರ್ಧಶತಕ ಸಿಡಿಸಿದ್ದಾರೆ. ಬೌಲಿಂಗ್​​ನಲ್ಲೂ 154 ವಿಕೆಟ್ ಪಡೆದುಕೊಂಡಿದ್ದಾರೆ. ಟೆಸ್ಟ್​​ನಲ್ಲಿ 200 ಪಂದ್ಯಗಳನ್ನಾಡಿದ್ದು, 15,921 ರನ್ ಗಳಿಸಿದ್ದಾರೆ. ಇದರಲ್ಲಿ 51 ಶತಕ ಹಾಗೂ 68 ಅರ್ಧಶತಕ ಬಾರಿಸಿದ್ದಾರೆ.

ಇನ್ನೂ ಹೆಚ್ಚು ಓದಿ

IML 2025: ವಿಂಡೀಸ್ ಮಣಿಸಿದ ಇಂಡಿಯಾ ಮಾಸ್ಟರ್ಸ್​ಗೆ ಚಾಂಪಿಯನ್ ಕಿರೀಟ

India Masters Wins International Masters League T20 Final: ರಾಯ್‌ಪುರದಲ್ಲಿ ನಡೆದ ಅಂತರರಾಷ್ಟ್ರೀಯ ಮಾಸ್ಟರ್ಸ್ ಲೀಗ್ ಟಿ20 ಪಂದ್ಯಾವಳಿಯ ಫೈನಲ್‌ನಲ್ಲಿ ಭಾರತ ಮಾಸ್ಟರ್ಸ್ ತಂಡವು ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ ಆಯಿತು. ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 147 ರನ್ ಗಳಿಸಿತು. ಈ ಗುರಿ ಬೆನ್ನಟಿದ ಭಾರತ ಮಾಸ್ಟರ್ಸ್ ತಂಡವು 17 ಎಸೆತಗಳು ಬಾಕಿ ಇರುವಾಗಲೇ ಗುರಿ ತಲುಪಿತು. ಈ ಗೆಲುವಿನೊಂದಿಗೆ ಭಾರತ ಮಾಸ್ಟರ್ಸ್ ತಂಡವು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಕ್ರಿಕೆಟ್ ದೇವರ ಶತಕದ ಶತಕಕ್ಕೆ ಭರ್ತಿ 13 ವರ್ಷ; ಆ ಪಂದ್ಯದ ಫಲಿತಾಂಶ ಏನಾಗಿತ್ತು ಗೊತ್ತಾ?

Sachin Tendulkar's Unbreakable Record: ಸಚಿನ್ ತೆಂಡೂಲ್ಕರ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕಗಳನ್ನು ಪೂರೈಸಿ ಇಂದಿಗೆ 13 ವರ್ಷಗಳು ತುಂಬಿವೆ. ಬಿಸಿಸಿಐ ಅವರಿಗೆ ಅಭಿನಂದನೆ ಸಲ್ಲಿಸಿದೆ. ಮಾರ್ಚ್ 16, 2012 ರಂದು ಮೀರ್ಪುರದಲ್ಲಿ ನಡೆದ ಈ ಪಂದ್ಯದಲ್ಲಿ, ಸಚಿನ್ 147 ಎಸೆತಗಳಲ್ಲಿ 114 ರನ್ ಗಳಿಸಿದರು. ಆದಾಗ್ಯೂ ಭಾರತ ಈ ಪಂದ್ಯದಲ್ಲಿ ಐದು ವಿಕೆಟ್‌ಗಳಿಂದ ಸೋಲಬೇಕಾಯಿತು.

ಕ್ರಿಕೆಟ್ ದೇವರ ದ್ವಿಶತಕಕ್ಕೆ ಭರ್ತಿ 15 ವರ್ಷ; ಹೇಗಿತ್ತು ಗೊತ್ತಾ ಆ ಐತಿಹಾಸಿಕ ಕ್ಷಣ?

Sachin Tendulkar: ವಾಸ್ತವವಾಗಿ 2010 ರಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತ ಪ್ರವಾಸಕ್ಕೆ ಬಂದಿತ್ತು. ಏಕದಿನ ಸರಣಿಯ ಎರಡನೇ ಪಂದ್ಯ ಫೆಬ್ರವರಿ 24 ರಂದು ಗ್ವಾಲಿಯರ್‌ನ ಕ್ಯಾಪ್ಟನ್ ರೂಪ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಿತು. ಅದೇ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ 147 ಎಸೆತಗಳನ್ನು ಎದುರಿಸಿ 25 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ ಅಜೇಯ 200 ರನ್​ಗಳ ಇನ್ನಿಂಗ್ಸ್ ಆಡಿದ್ದರು.

IND vs ENG: ಕ್ರಿಕೆಟ್ ದೇವರ ಶ್ರೇಷ್ಠ ದಾಖಲೆ ಮುರಿದ ರನ್ ಮಷಿನ್ ವಿರಾಟ್ ಕೊಹ್ಲಿ

Virat Kohli Achieves Double Milestone: ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಅದ್ಭುತ ಅರ್ಧಶತಕ ಗಳಿಸಿ ಎರಡು ದೊಡ್ಡ ಮೈಲುಗಲ್ಲುಗಳನ್ನು ಸಾಧಿಸಿದ್ದಾರೆ. ಏಷ್ಯಾದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 16,000 ರನ್‌ಗಳನ್ನು ಪೂರ್ಣಗೊಳಿಸಿದ ಮೊದಲ ಭಾರತೀಯ ಆಟಗಾರನೆಂಬ ದಾಖಲೆಬರೆದಿದ್ದು, ಇದರ ಜೊತೆಗೆ ಇಂಗ್ಲೆಂಡ್ ವಿರುದ್ಧ 4000 ರನ್ ಗಳಿಸಿದ ಮೊದಲ ಭಾರತೀಯ ಆಟಗಾರನೂ ಎನಿಸಿಕೊಂಡಿದ್ದಾರೆ.

Sachin Tendulkar: ಭಾರತ ರತ್ನ ಸಚಿನ್ ತೆಂಡೂಲ್ಕರ್ ಕಿರೀಟಕ್ಕೆ ಜೀವಮಾನ ಸಾಧನೆ ಪ್ರಶಸ್ತಿ ಗರಿ

BCCI Annual Awards: ಫೆಬ್ರವರಿ 1 ರಂದು ನಡೆಯುವ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ವರದಿಯಾಗಿದೆ. ತಮ್ಮ  ಅದ್ಭುತ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದಲ್ಲಿ ಅನೇಕ ದಾಖಲೆಗಳನ್ನು ಸೃಷ್ಟಿಸಿರುವ ಸವ್ಯಸಾಚಿ ಸಚಿನ್ ಅವರ ಸಾಧನೆಯ ಕಿರೀಟಕ್ಕೆ ಇದೀಗ ಈ ಪ್ರಶಸ್ತಿಯೊಂದು ಸೇರುತ್ತಿದೆ. ಸಚಿನ್ ಇದುವರೆಗೆ ಭಾರತ ರತ್ನ ಸೇರಿದಂತೆ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ.

ಸಚಿನ್ ತೆಂಡೂಲ್ಕರ್ ಹಂಚಿಕೊಂಡ ಒಂದು ವಿಡಿಯೋ ಪುಟ್ಟ ಹುಡುಗಿಯ ಅದೃಷ್ಟವನ್ನೇ ಬದಲಿಸಿತು..!

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ರಾಜಸ್ಥಾನದ 12 ವರ್ಷದ ಬಾಲಕಿ ಬೌಲಿಂಗ್ ಮಾಡುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋಗೆ ಟೀಮ್ ಇಂಡಿಯಾದ ಮಾಜಿ ವೇಗಿ ಇದಕ್ಕೆ ಮಾಜಿ ವೇಗದ ಬೌಲರ್ ಝಹೀರ್ ಖಾನ್ ಕೂಡ ಪ್ರತಿಕ್ರಿಯಿಸಿದ್ದಾರೆ. ಇದೀಗ ದೇಶದ ದೊಡ್ಡ ಕೈಗಾರಿಕೋದ್ಯಮಿಯೊಬ್ಬರ ಕಂಪನಿ ಪುಟ್ಟ ಬಾಲಕಿಯ ಸಹಾಯಕ್ಕೆ ಮುಂದಾಗಿದೆ.

ಫಸ್ಟ್ ಕ್ರೈ ಐಪಿಒ; ನಷ್ಟದ ಭೀತಿಯಲ್ಲಿ ಸಚಿನ್ ತೆಂಡೂಲ್ಕರ್; ಐಪಿಒಗೆ ಮುಂಚೆಯೇ 2 ಲಕ್ಷ ಷೇರು ಖರೀದಿಸಿದ್ದ ಮಾಸ್ಟರ್ ಬ್ಲಾಸ್ಟರ್

First Cry IPO: ಫಸ್ಟ್ ಕ್ರೈನಲ್ಲಿ ಕಳೆದ ವರ್ಷ ಷೇರು ಖರೀದಿಸಿದ್ದ ಸಚಿನ್ ತೆಂಡೂಲ್ಕರ್, ರಂಜನ್ ಪೈ ಮೊದಲಾದ ವ್ಯಕ್ತಿಗಳು ಹಲವು ಕೋಟಿ ರೂ ನಷ್ಟದ ಭೀತಿಯಲ್ಲಿದ್ದಾರೆ. ವರ್ಷದ ಹಿಂದೆ ಇವರು ಫಸ್ಟ್ ಕ್ರೈನ ಷೇರುಗಳನ್ನು 487 ರೂ ಬೆಲೆಗೆ ಖರೀದಿಸಿದ್ದರು. ಈಗ ಐಪಿಒದಲ್ಲಿ ಇದರ ಬೆಲೆ 440 ರೂನಿಂದ 465 ರೂ ಬೆಲೆಗೆ ಮಾರಾಟಕ್ಕಿಡಲಾಗಿದೆ. ಐಪಿಒ ಬೆಲೆಗೆ ಸಚಿನ್ ತಮ್ಮ ಷೇರುಗಳನ್ನು ಮಾರಿದರೆ ನಷ್ಟವಾಗಬಹುದು.

‘ಅವರು ನನ್ನ ಪಕ್ಕ ಕುಳಿತುಕೊಳ್ಳುತ್ತಿರಲಿಲ್ಲ’: ಧೋನಿ ಬಗ್ಗೆ ಕುತೂಹಲಕಾರಿ ಸಂಗತಿ ಬಿಚ್ಚಿಟ್ಟ ಸಚಿನ್ ತೆಂಡೂಲ್ಕರ್

ಐಪಿಎಲ್ 2024 ರ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಧೋನಿ ಮತ್ತು ಕೊಹ್ಲಿ ತಂಡ ಮುಖಾಮುಖಿಯಾಗಿದೆ. ಆದರೆ ಪಂದ್ಯಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಐಪಿಎಲ್​ ಪಂದ್ಯ ಆಯೋಜಕರೊಂದಿಗೆ ಮಾತನಾಡಿದ್ದು, ಎಂಎಸ್ ಧೋನಿ ಬಗ್ಗೆ ಕೆಲ ಕುತೂಹಲಕಾರಿ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ.

RCB Women: ಕೊಹ್ಲಿ, ಸಚಿನ್, ಸೆಹ್ವಾಗ್… ಇನ್ನೂ ಅನೇಕರು: ಆರ್​ಸಿಬಿ ಗೆಲುವಿನ ಬಗ್ಗೆ ಯಾರೆಲ್ಲ ಏನಂದ್ರು ನೋಡಿ

WPL 2024 Final: ಆರ್​ಸಿಬಿ ವಿಜಯವು ಬೆಂಗಳೂರಿನ ಬೀದಿಗಳಲ್ಲಿ ಭಾರಿ ಸಂಭ್ರಮಾಚರಣೆಗೆ ಕಾರಣವಾಯಿತು. ಇದರೊಂದಿಗೆ ಸ್ಟಾರ್ ಕ್ರಿಕೆಟಿಗರು ಕೂಡ ತಮ್ಮ ಶುಭಾಶಯಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಕೋರಿದ್ದಾರೆ. ವಿರಾಟ್ ಕೊಹ್ಲಿ , ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್ ಸೇರಿದಂತೆ ಇತರರು ಹೇಗೆ ಪ್ರತಿಕ್ರಿಯಿಸಿದ್ದಾರೆ ಎಂಬುದು ಇಲ್ಲಿದೆ.

ಸಚಿನ್​ಗೂ ಇಷ್ಟವಾಯ್ತು ‘ಲಾಪತಾ ಲೇಡೀಸ್​’ ಸಿನಿಮಾ; ಇಲ್ಲಿದೆ ಪ್ರಾಮಾಣಿಕ ವಿಮರ್ಶೆ

ಸ್ಪರ್ಶ್​ ಶ್ರೀವಾಸ್ತವ, ಪ್ರತಿಭಾ ರಂಟಾ, ತಿನಾಂಶಿ ಗೋಯಲ್​ ಅವರು ನಟಿಸಿರುವ ‘ಲಾಪತಾ ಲೇಡೀಸ್​’ ಸಿನಿಮಾದ ಬಗ್ಗೆ ಪಾಸಿಟಿವ್​ ಟಾಕ್​ ಸೃಷ್ಟಿ ಆಗಿದೆ. ಜನ ಸಾಮಾನ್ಯರು ಮಾತ್ರವಲ್ಲದೇ ರಾಧಿಕಾ ಆಪ್ಟೆ, ಅನುರಾಗ್​ ಕಶ್ಯಪ್​, ಸಿದ್ದಾರ್ಥ್​ ಮಲ್ಹೋತ್ರಾ ಮುಂತಾದ ಸೆಲೆಬ್ರಿಟಿಗಳು ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ. ಸಚಿನ್​ ತೆಂಡುಲ್ಕರ್​ ಕೂಡ ‘ಲಾಪತಾ ಲೇಡೀಸ್​’ ಸಿನಿಮಾವನ್ನು ಸಖತ್​ ಮೆಚ್ಚಿಕೊಂಡಿದ್ದಾರೆ.

ಟಿವಿ9 ಎಜುಕೇಶನ್ ಎಕ್ಸ್​​ಪೋ, ರೋಚಕ ಡ್ರೋನ್ ದೃಶ್ಯ
ಟಿವಿ9 ಎಜುಕೇಶನ್ ಎಕ್ಸ್​​ಪೋ, ರೋಚಕ ಡ್ರೋನ್ ದೃಶ್ಯ
ರಾಜಿನಾಮೆ ನೀಡಿ ಚುನಾವಣೆಗೆ ಬಾ: ವಿಜಯೇಂದ್ರಗೆ ಯತ್ನಾಳ್​ ಸವಾಲು
ರಾಜಿನಾಮೆ ನೀಡಿ ಚುನಾವಣೆಗೆ ಬಾ: ವಿಜಯೇಂದ್ರಗೆ ಯತ್ನಾಳ್​ ಸವಾಲು
‘ವಿದ್ಯಾಪತಿ’ ಸಿನಿಮಾಕ್ಕೆ ಭಿನ್ನವಾಗಿ ಆಹ್ವಾನ ನೀಡಿದ ಡಾಲಿ ಧನಂಜಯ್
‘ವಿದ್ಯಾಪತಿ’ ಸಿನಿಮಾಕ್ಕೆ ಭಿನ್ನವಾಗಿ ಆಹ್ವಾನ ನೀಡಿದ ಡಾಲಿ ಧನಂಜಯ್
Jasprit Bumrah: ಜಸ್​ಪ್ರೀತ್ ಬುಮ್ರಾ ಎಂಟ್ರಿ: RCB ಗೆ ಟೆನ್ಶನ್ ಶುರು
Jasprit Bumrah: ಜಸ್​ಪ್ರೀತ್ ಬುಮ್ರಾ ಎಂಟ್ರಿ: RCB ಗೆ ಟೆನ್ಶನ್ ಶುರು
ರಾಮನವಮಿ ದಿನವೇ ರಾಮೇಶ್ವರಂನಲ್ಲಿ ಪಂಬನ್ ರೈಲ್ವೆ ಸೇತುವೆ ಉದ್ಘಾಟಿಸಿದ ಮೋದಿ
ರಾಮನವಮಿ ದಿನವೇ ರಾಮೇಶ್ವರಂನಲ್ಲಿ ಪಂಬನ್ ರೈಲ್ವೆ ಸೇತುವೆ ಉದ್ಘಾಟಿಸಿದ ಮೋದಿ
ಕಾರಿನ ಟಾಪ್ ಮೇಲೆ ಕುಳಿತು ಹುಚ್ಚಾಟ: ಸ್ವಲ್ಪ ಹೆಚ್ಚು ಕಡಿಮೆ ಆದ್ರು ಯಮನಪಾದ!
ಕಾರಿನ ಟಾಪ್ ಮೇಲೆ ಕುಳಿತು ಹುಚ್ಚಾಟ: ಸ್ವಲ್ಪ ಹೆಚ್ಚು ಕಡಿಮೆ ಆದ್ರು ಯಮನಪಾದ!
ಅಯೋಧ್ಯೆಯಲ್ಲಿ ಬಾಲ ರಾಮನ ಹಣೆ ಸ್ಪರ್ಶಿಸಿದ ಸೂರ್ಯ ರಶ್ಮಿ
ಅಯೋಧ್ಯೆಯಲ್ಲಿ ಬಾಲ ರಾಮನ ಹಣೆ ಸ್ಪರ್ಶಿಸಿದ ಸೂರ್ಯ ರಶ್ಮಿ
ಬೇಕರಿಗೆ ಬಂದಿದ್ದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ
ಬೇಕರಿಗೆ ಬಂದಿದ್ದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ
2,300 ವರ್ಷ ಹಳೆಯ ಬೋಧಿ ವೃಕ್ಷವಿರುವ ಬೌದ್ಧ ದೇವಾಲಯಕ್ಕೆ ಮೋದಿ ಭೇಟಿ
2,300 ವರ್ಷ ಹಳೆಯ ಬೋಧಿ ವೃಕ್ಷವಿರುವ ಬೌದ್ಧ ದೇವಾಲಯಕ್ಕೆ ಮೋದಿ ಭೇಟಿ
ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರ ಪರವಾಗಿ ಹಾಲಿ ಕಾಂಗ್ರೆಸ್ ಅಧ್ಯಕ್ಷ ಪ್ರಾರ್ಥನೆ
ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರ ಪರವಾಗಿ ಹಾಲಿ ಕಾಂಗ್ರೆಸ್ ಅಧ್ಯಕ್ಷ ಪ್ರಾರ್ಥನೆ