AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sachin Tendulkar

Sachin Tendulkar

ದಶಕಗಳ ಕಾಲ ಕ್ರಿಕೆಟ್ ಲೋಕವನ್ನು ಅಕ್ಷರಶಃ ಆಳಿದ ಕ್ರೆಡಿಟ್ ಸವ್ಯಸಾಚಿ ಸಚಿನ್ ತೆಂಡೂಲ್ಕರ್ ಅವರಿಗೆ ಸಲ್ಲುತ್ತದೆ. ವಿಶ್ವ ಕ್ರಿಕೆಟ್​ನಲ್ಲಿ ಕ್ರಿಕೆಟ್ ದೇವರು ಎಂದು ಚಿರಪರಿಚಿತರಾಗಿರುವ ಸಚಿನ್ ತೆಂಡೂಲ್ಕರ್ ನಿರ್ಮಿಸಿದ ದಾಖಲೆಗಳಿಗೆ ಲೆಕ್ಕವಿಲ್ಲ. ತಮ್ಮ 16ನೇ ವಯಸ್ಸಿನಲ್ಲೇ ಅಂತರರಾಷ್ಟ್ರೀಯ ಅಂಗಳಕ್ಕೆ ಕಾಲಿಟ್ಟು ಇತಿಹಾಸ ಬರೆದ ಸಚಿನ್​ ಈಗಲೂ ಕೋಟ್ಯಾಂತರ ಕ್ರಿಕೆಟ್​ ಅಭಿಮಾನಿಗಳ ಆರಾಧ್ಯ ದೈವ. 24 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಲಿಟ್ಲ್ ಮಾಸ್ಟರ್ ಹಲವಾರು ಅವಿಸ್ಮರಣೀಯ ಸನ್ನಿವೇಷಗಳಿಗೆ ಸಾಕ್ಷಿಯಾಗಿದ್ದಾರೆ. ಇದರ ಜೊತಗೆ ಅಪರೂಪದ ದಾಖಲೆಗಳನ್ನು ತನ್ನ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 1989ರಲ್ಲಿ ಪಾಕಿಸ್ತಾನ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸಚಿನ್ ತೆಂಡೂಲ್ಕರ್ 2013ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದಾಗ ಬರೋಬ್ಬರಿ 34,357 ರನ್‌ಗಳನ್ನು ತಮ್ಮ ಖಾತೆಗೆ ಸೇರಿಸಿಕೊಂಡಿದ್ದರು. ಅಂತರರಾಷ್ಟ್ರೀಯ ಏಕದಿನ ಪಂದ್ಯಾಗಳಲ್ಲಿ ಅಜೇಯ 200 ರನ್​ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ 2010ರಲ್ಲೇ ಸಚಿನ್ ಅವರು ಪಾತ್ರರಾಗಿದ್ದರು. ಏಕದಿನ ಕ್ರಿಕೆಟ್​​ನಲ್ಲಿ ಒಟ್ಟು 463 ಪಂದ್ಯಗಳನ್ನು ಆಡಿರುವ ಇವರು 18,426 ರನ್ ಕಲೆಹಾಕಿದ್ದಾರೆ. 49 ಶತಕ ಹಾಗೂ 96 ಅರ್ಧಶತಕ ಸಿಡಿಸಿದ್ದಾರೆ. ಬೌಲಿಂಗ್​​ನಲ್ಲೂ 154 ವಿಕೆಟ್ ಪಡೆದುಕೊಂಡಿದ್ದಾರೆ. ಟೆಸ್ಟ್​​ನಲ್ಲಿ 200 ಪಂದ್ಯಗಳನ್ನಾಡಿದ್ದು, 15,921 ರನ್ ಗಳಿಸಿದ್ದಾರೆ. ಇದರಲ್ಲಿ 51 ಶತಕ ಹಾಗೂ 68 ಅರ್ಧಶತಕ ಬಾರಿಸಿದ್ದಾರೆ.

ಇನ್ನೂ ಹೆಚ್ಚು ಓದಿ

Joe Root: 11 ಪಂದ್ಯಗಳಲ್ಲಿ 22 ಸೆಂಚುರಿ ಸಿಡಿಸಿದರೂ ಸಚಿನ್ ದಾಖಲೆ ಮುರಿಯೋದು ಡೌಟ್..!

Sachin Tendulkar - Joe Root: 200 ಟೆಸ್ಟ್ ಪಂದ್ಯಗಳ ಮೂಲಕ 329 ಇನಿಂಗ್ಸ್​ ಆಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 15921 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಈ ಪಟ್ಟಿಯಲ್ಲಿ ಜೋ ರೂಟ್ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

IND vs ENG: ಭಾರತ ಓವಲ್ ಟೆಸ್ಟ್ ಗೆದ್ದರೆ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ ಯಾರ ಕೈ ಸೇರಲಿದೆ?

Anderson-Tendulkar Trophy: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಫಲಿತಾಂಶವು ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಭವಿಷ್ಯವನ್ನು ನಿರ್ಧರಿಸುತ್ತದೆ. ಸರಣಿ ಡ್ರಾ ಆದರೆ, ಟ್ರೋಫಿ ಯಾರಿಗೂ ಸಲ್ಲದು ಎಂಬುದು ಇತ್ತೀಚಿನ ಅಧಿಕೃತ ಮಾಹಿತಿ. ಇದರರ್ಥ ಟ್ರೋಫಿ ECB ಪ್ರಧಾನ ಕಚೇರಿಯಾದ ಲಾರ್ಡ್ಸ್‌ನಲ್ಲಿ ಇರಿಸಲಾಗುವುದು. ಪೂರ್ವದ ಪಟೌಡಿ ಟ್ರೋಫಿ ಫಲಿತಾಂಶವನ್ನು ಈ ಬಾರಿ ಪರಿಗಣಿಸಲಾಗುವುದಿಲ್ಲ.

14 ವರ್ಷಗಳ ನಂತರ ಮೆಸ್ಸಿ ಭಾರತ ಭೇಟಿ; ಸಚಿನ್, ಕೊಹ್ಲಿ ಜೊತೆ ಕ್ರಿಕೆಟ್ ಆಡಲಿರುವ ಫುಟ್ಬಾಲ್ ಲೆಜೆಂಡ್

Lionel Messi's India Visit 2025: ಲಿಯೋನೆಲ್ ಮೆಸ್ಸಿ ಅವರು ಡಿಸೆಂಬರ್ 13 ರಿಂದ 15 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಮುಂಬೈ, ಕೋಲ್ಕತ್ತಾ ಮತ್ತು ದೆಹಲಿಗೆ ಭೇಟಿ ನೀಡುವ ಮೆಸ್ಸಿ, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರೊಂದಿಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯವನ್ನು ಆಡಲಿದ್ದಾರೆ. ಕೋಲ್ಕತ್ತಾದಲ್ಲಿ ಅವರನ್ನು ಸನ್ಮಾನಿಸಲಾಗುವುದು ಮತ್ತು ಮಕ್ಕಳಿಗಾಗಿ ಫುಟ್ಬಾಲ್ ಕಾರ್ಯಾಗಾರವನ್ನು ಆಯೋಜಿಸಲಾಗುವುದು. 2011 ರ ನಂತರ ಇದು ಮೆಸ್ಸಿಯವರ ಎರಡನೇ ಭಾರತ ಭೇಟಿ.

Joe Root: ರೂಟ್ ಕ್ಲಿಯರ್… ಸಚಿನ್ ವಿಶ್ವ ದಾಖಲೆ ಶೇಕಿಂಗ್

India vs England 4th Test: ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್​ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 358 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು ಜೋ ರೂಟ್ ಅವರ ಭರ್ಜರಿ ಶತಕದೊಂದಿಗೆ 3ನೇ ದಿನದಾಟದ ಅಂತ್ಯಕ್ಕೆ 7 ವಿಕೆಟ್​​ ಕಳೆದುಕೊಂಡು 544 ರನ್​ಗಳಿಸಿದೆ.

Fact Check: ಲಾರ್ಡ್ಸ್‌ನಲ್ಲಿ ವಿರಾಟ್ ಕೊಹ್ಲಿ ಫೋಟೋದೊಂದಿಗೆ ಸಚಿನ್ ತೆಂಡೂಲ್ಕರ್ ಪೋಸ್ ನೀಡಿದ್ದಾರೆಯೇ?: ಸತ್ಯ ಇಲ್ಲಿದೆ ನೋಡಿ

ಟಿವಿ9 ಕನ್ನಡ ವೈರಲ್ ಚಿತ್ರವನ್ನು ತನಿಖೆ ಮಾಡಿ, ಇದನ್ನು ಡಿಜಿಟಲ್ ರೂಪದಲ್ಲಿ ಮಾರ್ಪಡಿಸಲಾಗಿದೆ ಮತ್ತು ತಪ್ಪಾಗಿ ಹಂಚಿಕೊಳ್ಳಲಾಗಿದೆ ಎಂದು ಕಂಡುಹಿಡಿದಿದೆ. ಮೂಲ ಚಿತ್ರವು ವಾಸ್ತವವಾಗಿ ಸಚಿನ್ ತೆಂಡೂಲ್ಕರ್ ಅವರ ಸ್ವಂತ ಭಾವಚಿತ್ರದೊಂದಿಗೆ ಪೋಸ್ ನೀಡುತ್ತಿರುವುದನ್ನು ತೋರಿಸುತ್ತದೆ, ಇದನ್ನು ಜುಲೈ 10 ರಂದು ಲಾರ್ಡ್ಸ್ ಮ್ಯೂಸಿಯಂನಲ್ಲಿ ಅನಾವರಣಗೊಳಿಸಲಾಯಿತು.

ಟೆಸ್ಟ್ ಮತ್ತು ಏಕದಿನದಲ್ಲಿ ದ್ವಿಶತಕ ಬಾರಿಸಿರುವವರ ಪಟ್ಟಿಯಲ್ಲಿ ಭಾರತೀಯರದ್ದೇ ಪಾರುಪತ್ಯ

Elite double century club: ಶುಭ್ಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅದ್ಭುತವಾದ 269 ರನ್ ಗಳಿಸುವ ಮೂಲಕ ಅನೇಕ ದಾಖಲೆಗಳನ್ನು ನಿರ್ಮಿಸಿದ್ದಾರೆ. ಅವರು ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ದ್ವಿಶತಕ ಗಳಿಸಿದ ಕೆಲವೇ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಈ ಸಾಧನೆಯೊಂದಿಗೆ ಅವರು ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಮತ್ತು ರೋಹಿತ್ ಶರ್ಮಾ ಅವರಂತಹ ದಂತಕಥೆಗಳ ಸಾಲಿಗೆ ಸೇರಿದ್ದಾರೆ.

IND vs ENG: ಪಟೌಡಿ ಟ್ರೋಫಿ ಹೆಸರು ಬದಲಾವಣೆ; ಮೊದಲ ಬಾರಿಗೆ ಮೌನ ಮುರಿದ ಸಚಿನ್ ತೆಂಡೂಲ್ಕರ್

India-England Test Series Renamed: ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ಹೆಸರನ್ನು ಪಟೌಡಿ ಟ್ರೋಫಿಯಿಂದ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ ಎಂದು ಬದಲಾಯಿಸಲಾಗಿದೆ. ಸಚಿನ್ ತೆಂಡೂಲ್ಕರ್ ಅವರು ಪಟೌಡಿ ಕುಟುಂಬದೊಂದಿಗೆ ಮಾತನಾಡಿ, ಪಟೌಡಿಯವರ ಪರಂಪರೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುವುದಾಗಿ ಹೇಳಿದ್ದರು. ಅದರಂತೆ ಈಗ ಸರಣಿ ವಿಜೇತ ನಾಯಕನಿಗೆ 'ಪಟೌಡಿ ಪದಕ ಫಾರ್ ಎಕ್ಸಲೆನ್ಸ್' ನೀಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಸಚಿನ್ ಹೇಳಿಕೊಂಡಿದ್ದಾರೆ.

IND vs ENG: ಇಂಡೊ-ಇಂಗ್ಲೆಂಡ್ ಟೆಸ್ಟ್ ಸರಣಿಗೆ ಹೆಸರು ಫೈನಲ್: ಪಟೌಡಿಗೆ ವಿಶೇಷ ಗೌರವ

India tour of England, 2025: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳನ್ನಾಡಲಿದೆ. ಈ ಸರಣಿಗೆ ಲೆಜೆಂಡ್ ಸಚಿನ್ ತೆಂಡೂಲ್ಕರ್ ಹಾಗೂ ಜೇಮ್ಸ್ ಅ್ಯಂಡರ್ಸನ್ ಅವರ ಹೆಸರನ್ನಿಡಲು ಬಿಸಿಸಿಐ-ಇಸಿಬಿ ನಿರ್ಧರಿಸಿದೆ.

WTC 2025 final: 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆಲುವು; 27 ವರ್ಷಗಳ ನಂತರ ಸಚಿನ್ ದಾಖಲೆ ಉಡೀಸ್

WTC 2025 final: ದಕ್ಷಿಣ ಆಫ್ರಿಕಾ 2025ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಐಡೆನ್ ಮಾರ್ಕ್ರಾಮ್ ಅವರ 136 ರನ್‌ಗಳ ಅದ್ಭುತ ಇನ್ನಿಂಗ್ಸ್ ಗೆಲುವಿಗೆ ಪ್ರಮುಖ ಕಾರಣವಾಯಿತು. ಇದು ಐಸಿಸಿ ಟೂರ್ನಮೆಂಟ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಗಳಿಸಿದ ಮೊದಲ ಶತಕವೂ ಆಗಿದ್ದು, ಮಾರ್ಕ್ರಾಮ್ ಈ ಶತಕದ ಮೂಲಕ ಸಚಿನ್ ತೆಂಡೂಲ್ಕರ್ ಅವರ ದೀರ್ಘಕಾಲದ ದಾಖಲೆಯನ್ನು ಮುರಿದರು.

IND vs ENG: ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಅನಾವರಣ ಮುಂದೂಡಿಕೆ; ಕಾರಣವೇನು?

Anderson-Tendulkar Trophy: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಹೊಸ ಹೆಸರು "ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ" ಎಂದು ನಾಮಕರಣ ಮಾಡಲಾಗಿದೆ. ಆದರೆ, ಏರ್ ಇಂಡಿಯಾ ವಿಮಾನ ಅಪಘಾತದ ಹಿನ್ನೆಲೆಯಲ್ಲಿ ಈ ಟ್ರೋಫಿಯ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಪೂರ್ವ ನಿಗದಿತ WTC ಫೈನಲ್ ಸಮಯದಲ್ಲಿ ಲಾರ್ಡ್ಸ್‌ನಲ್ಲಿ ಟ್ರೋಫಿ ಅನಾವರಣಗೊಳ್ಳಬೇಕಿತ್ತು. ಮುಂದಿನ ದಿನಗಳಲ್ಲಿ ಹೊಸ ದಿನಾಂಕವನ್ನು ಘೋಷಿಸಲಾಗುವುದು ಎಂದು ಎರಡೂ ಕ್ರಿಕೆಟ್ ಮಂಡಳಿಗಳು ತಿಳಿಸಿವೆ.

ಸ್ಕೂಟಿಗೆ ಡಿಕ್ಕಿ ಹೊಡೆದ ಹಂದಿಗಳ ಹಿಂಡು; ಮಹಿಳೆಯ ಹೆಲ್ಮೆಟ್ ಛಿದ್ರ!
ಸ್ಕೂಟಿಗೆ ಡಿಕ್ಕಿ ಹೊಡೆದ ಹಂದಿಗಳ ಹಿಂಡು; ಮಹಿಳೆಯ ಹೆಲ್ಮೆಟ್ ಛಿದ್ರ!
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್