Sachin Tendulkar

Sachin Tendulkar

ದಶಕಗಳ ಕಾಲ ಕ್ರಿಕೆಟ್ ಲೋಕವನ್ನು ಅಕ್ಷರಶಃ ಆಳಿದ ಕ್ರೆಡಿಟ್ ಸವ್ಯಸಾಚಿ ಸಚಿನ್ ತೆಂಡೂಲ್ಕರ್ ಅವರಿಗೆ ಸಲ್ಲುತ್ತದೆ. ವಿಶ್ವ ಕ್ರಿಕೆಟ್​ನಲ್ಲಿ ಕ್ರಿಕೆಟ್ ದೇವರು ಎಂದು ಚಿರಪರಿಚಿತರಾಗಿರುವ ಸಚಿನ್ ತೆಂಡೂಲ್ಕರ್ ನಿರ್ಮಿಸಿದ ದಾಖಲೆಗಳಿಗೆ ಲೆಕ್ಕವಿಲ್ಲ. ತಮ್ಮ 16ನೇ ವಯಸ್ಸಿನಲ್ಲೇ ಅಂತರರಾಷ್ಟ್ರೀಯ ಅಂಗಳಕ್ಕೆ ಕಾಲಿಟ್ಟು ಇತಿಹಾಸ ಬರೆದ ಸಚಿನ್​ ಈಗಲೂ ಕೋಟ್ಯಾಂತರ ಕ್ರಿಕೆಟ್​ ಅಭಿಮಾನಿಗಳ ಆರಾಧ್ಯ ದೈವ. 24 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಲಿಟ್ಲ್ ಮಾಸ್ಟರ್ ಹಲವಾರು ಅವಿಸ್ಮರಣೀಯ ಸನ್ನಿವೇಷಗಳಿಗೆ ಸಾಕ್ಷಿಯಾಗಿದ್ದಾರೆ. ಇದರ ಜೊತಗೆ ಅಪರೂಪದ ದಾಖಲೆಗಳನ್ನು ತನ್ನ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 1989ರಲ್ಲಿ ಪಾಕಿಸ್ತಾನ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸಚಿನ್ ತೆಂಡೂಲ್ಕರ್ 2013ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದಾಗ ಬರೋಬ್ಬರಿ 34,357 ರನ್‌ಗಳನ್ನು ತಮ್ಮ ಖಾತೆಗೆ ಸೇರಿಸಿಕೊಂಡಿದ್ದರು. ಅಂತರರಾಷ್ಟ್ರೀಯ ಏಕದಿನ ಪಂದ್ಯಾಗಳಲ್ಲಿ ಅಜೇಯ 200 ರನ್​ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ 2010ರಲ್ಲೇ ಸಚಿನ್ ಅವರು ಪಾತ್ರರಾಗಿದ್ದರು. ಏಕದಿನ ಕ್ರಿಕೆಟ್​​ನಲ್ಲಿ ಒಟ್ಟು 463 ಪಂದ್ಯಗಳನ್ನು ಆಡಿರುವ ಇವರು 18,426 ರನ್ ಕಲೆಹಾಕಿದ್ದಾರೆ. 49 ಶತಕ ಹಾಗೂ 96 ಅರ್ಧಶತಕ ಸಿಡಿಸಿದ್ದಾರೆ. ಬೌಲಿಂಗ್​​ನಲ್ಲೂ 154 ವಿಕೆಟ್ ಪಡೆದುಕೊಂಡಿದ್ದಾರೆ. ಟೆಸ್ಟ್​​ನಲ್ಲಿ 200 ಪಂದ್ಯಗಳನ್ನಾಡಿದ್ದು, 15,921 ರನ್ ಗಳಿಸಿದ್ದಾರೆ. ಇದರಲ್ಲಿ 51 ಶತಕ ಹಾಗೂ 68 ಅರ್ಧಶತಕ ಬಾರಿಸಿದ್ದಾರೆ.

ಇನ್ನೂ ಹೆಚ್ಚು ಓದಿ

ಫಸ್ಟ್ ಕ್ರೈ ಐಪಿಒ; ನಷ್ಟದ ಭೀತಿಯಲ್ಲಿ ಸಚಿನ್ ತೆಂಡೂಲ್ಕರ್; ಐಪಿಒಗೆ ಮುಂಚೆಯೇ 2 ಲಕ್ಷ ಷೇರು ಖರೀದಿಸಿದ್ದ ಮಾಸ್ಟರ್ ಬ್ಲಾಸ್ಟರ್

First Cry IPO: ಫಸ್ಟ್ ಕ್ರೈನಲ್ಲಿ ಕಳೆದ ವರ್ಷ ಷೇರು ಖರೀದಿಸಿದ್ದ ಸಚಿನ್ ತೆಂಡೂಲ್ಕರ್, ರಂಜನ್ ಪೈ ಮೊದಲಾದ ವ್ಯಕ್ತಿಗಳು ಹಲವು ಕೋಟಿ ರೂ ನಷ್ಟದ ಭೀತಿಯಲ್ಲಿದ್ದಾರೆ. ವರ್ಷದ ಹಿಂದೆ ಇವರು ಫಸ್ಟ್ ಕ್ರೈನ ಷೇರುಗಳನ್ನು 487 ರೂ ಬೆಲೆಗೆ ಖರೀದಿಸಿದ್ದರು. ಈಗ ಐಪಿಒದಲ್ಲಿ ಇದರ ಬೆಲೆ 440 ರೂನಿಂದ 465 ರೂ ಬೆಲೆಗೆ ಮಾರಾಟಕ್ಕಿಡಲಾಗಿದೆ. ಐಪಿಒ ಬೆಲೆಗೆ ಸಚಿನ್ ತಮ್ಮ ಷೇರುಗಳನ್ನು ಮಾರಿದರೆ ನಷ್ಟವಾಗಬಹುದು.

‘ಅವರು ನನ್ನ ಪಕ್ಕ ಕುಳಿತುಕೊಳ್ಳುತ್ತಿರಲಿಲ್ಲ’: ಧೋನಿ ಬಗ್ಗೆ ಕುತೂಹಲಕಾರಿ ಸಂಗತಿ ಬಿಚ್ಚಿಟ್ಟ ಸಚಿನ್ ತೆಂಡೂಲ್ಕರ್

ಐಪಿಎಲ್ 2024 ರ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಧೋನಿ ಮತ್ತು ಕೊಹ್ಲಿ ತಂಡ ಮುಖಾಮುಖಿಯಾಗಿದೆ. ಆದರೆ ಪಂದ್ಯಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಐಪಿಎಲ್​ ಪಂದ್ಯ ಆಯೋಜಕರೊಂದಿಗೆ ಮಾತನಾಡಿದ್ದು, ಎಂಎಸ್ ಧೋನಿ ಬಗ್ಗೆ ಕೆಲ ಕುತೂಹಲಕಾರಿ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ.

RCB Women: ಕೊಹ್ಲಿ, ಸಚಿನ್, ಸೆಹ್ವಾಗ್… ಇನ್ನೂ ಅನೇಕರು: ಆರ್​ಸಿಬಿ ಗೆಲುವಿನ ಬಗ್ಗೆ ಯಾರೆಲ್ಲ ಏನಂದ್ರು ನೋಡಿ

WPL 2024 Final: ಆರ್​ಸಿಬಿ ವಿಜಯವು ಬೆಂಗಳೂರಿನ ಬೀದಿಗಳಲ್ಲಿ ಭಾರಿ ಸಂಭ್ರಮಾಚರಣೆಗೆ ಕಾರಣವಾಯಿತು. ಇದರೊಂದಿಗೆ ಸ್ಟಾರ್ ಕ್ರಿಕೆಟಿಗರು ಕೂಡ ತಮ್ಮ ಶುಭಾಶಯಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಕೋರಿದ್ದಾರೆ. ವಿರಾಟ್ ಕೊಹ್ಲಿ , ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್ ಸೇರಿದಂತೆ ಇತರರು ಹೇಗೆ ಪ್ರತಿಕ್ರಿಯಿಸಿದ್ದಾರೆ ಎಂಬುದು ಇಲ್ಲಿದೆ.

ಸಚಿನ್​ಗೂ ಇಷ್ಟವಾಯ್ತು ‘ಲಾಪತಾ ಲೇಡೀಸ್​’ ಸಿನಿಮಾ; ಇಲ್ಲಿದೆ ಪ್ರಾಮಾಣಿಕ ವಿಮರ್ಶೆ

ಸ್ಪರ್ಶ್​ ಶ್ರೀವಾಸ್ತವ, ಪ್ರತಿಭಾ ರಂಟಾ, ತಿನಾಂಶಿ ಗೋಯಲ್​ ಅವರು ನಟಿಸಿರುವ ‘ಲಾಪತಾ ಲೇಡೀಸ್​’ ಸಿನಿಮಾದ ಬಗ್ಗೆ ಪಾಸಿಟಿವ್​ ಟಾಕ್​ ಸೃಷ್ಟಿ ಆಗಿದೆ. ಜನ ಸಾಮಾನ್ಯರು ಮಾತ್ರವಲ್ಲದೇ ರಾಧಿಕಾ ಆಪ್ಟೆ, ಅನುರಾಗ್​ ಕಶ್ಯಪ್​, ಸಿದ್ದಾರ್ಥ್​ ಮಲ್ಹೋತ್ರಾ ಮುಂತಾದ ಸೆಲೆಬ್ರಿಟಿಗಳು ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ. ಸಚಿನ್​ ತೆಂಡುಲ್ಕರ್​ ಕೂಡ ‘ಲಾಪತಾ ಲೇಡೀಸ್​’ ಸಿನಿಮಾವನ್ನು ಸಖತ್​ ಮೆಚ್ಚಿಕೊಂಡಿದ್ದಾರೆ.

ಕಿಚ್ಚನಿಗೆ ಸಚಿನ್ ತೆಂಡೂಲ್ಕರ್ ಸ್ವೀಟ್ ಟ್ವೀಟ್: ಸುದೀಪ್ ಪ್ರತಿಕ್ರಿಯಿಸಿದ್ದು ಹೇಗೆ?

Kichcha Sudeep: ಕಿಚ್ಚ ಸುದೀಪ್​ ಅವರಿಗೆ ಹಲವು ಚಿತ್ರರಂಗಗಳಲ್ಲಿ ಹಲವು ಆತ್ಮೀಯ ಗೆಳೆಯರಿದ್ದಾರೆ. ಅಂತೆಯೇ ಕ್ರಿಕೆಟ್ ಕ್ಷೇತ್ರದಲ್ಲಿಯೂ ಹಲವು ಗೆಳೆಯರಿದ್ದಾರೆ. ಇದೀಗ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸುದೀಪ್ ಅವರಿಗೆ ಸ್ವೀಟ್ ಶಾಕ್ ಒಂದನ್ನು ನೀಡಿದ್ದಾರೆ.

Sachin Tendulkar: ವಿಶೇಷ ಪಂದ್ಯಕ್ಕಾಗಿ ಸಚಿನ್ ತೆಂಡೂಲ್ಕರ್ ಕಂಬ್ಯಾಕ್..!

Sachin Tendulkar: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 664 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 34357 ರನ್ ಕಲೆಹಾಕಿದ್ದಾರೆ. ಈ ವೇಳೆ 100 ಶತಕ ಹಾಗೂ 164 ಅರ್ಧಶತಕಗಳನ್ನು ಸಿಡಿಸಿ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ