AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sachin Tendulkar

Sachin Tendulkar

ದಶಕಗಳ ಕಾಲ ಕ್ರಿಕೆಟ್ ಲೋಕವನ್ನು ಅಕ್ಷರಶಃ ಆಳಿದ ಕ್ರೆಡಿಟ್ ಸವ್ಯಸಾಚಿ ಸಚಿನ್ ತೆಂಡೂಲ್ಕರ್ ಅವರಿಗೆ ಸಲ್ಲುತ್ತದೆ. ವಿಶ್ವ ಕ್ರಿಕೆಟ್​ನಲ್ಲಿ ಕ್ರಿಕೆಟ್ ದೇವರು ಎಂದು ಚಿರಪರಿಚಿತರಾಗಿರುವ ಸಚಿನ್ ತೆಂಡೂಲ್ಕರ್ ನಿರ್ಮಿಸಿದ ದಾಖಲೆಗಳಿಗೆ ಲೆಕ್ಕವಿಲ್ಲ. ತಮ್ಮ 16ನೇ ವಯಸ್ಸಿನಲ್ಲೇ ಅಂತರರಾಷ್ಟ್ರೀಯ ಅಂಗಳಕ್ಕೆ ಕಾಲಿಟ್ಟು ಇತಿಹಾಸ ಬರೆದ ಸಚಿನ್​ ಈಗಲೂ ಕೋಟ್ಯಾಂತರ ಕ್ರಿಕೆಟ್​ ಅಭಿಮಾನಿಗಳ ಆರಾಧ್ಯ ದೈವ. 24 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಲಿಟ್ಲ್ ಮಾಸ್ಟರ್ ಹಲವಾರು ಅವಿಸ್ಮರಣೀಯ ಸನ್ನಿವೇಷಗಳಿಗೆ ಸಾಕ್ಷಿಯಾಗಿದ್ದಾರೆ. ಇದರ ಜೊತಗೆ ಅಪರೂಪದ ದಾಖಲೆಗಳನ್ನು ತನ್ನ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 1989ರಲ್ಲಿ ಪಾಕಿಸ್ತಾನ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸಚಿನ್ ತೆಂಡೂಲ್ಕರ್ 2013ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದಾಗ ಬರೋಬ್ಬರಿ 34,357 ರನ್‌ಗಳನ್ನು ತಮ್ಮ ಖಾತೆಗೆ ಸೇರಿಸಿಕೊಂಡಿದ್ದರು. ಅಂತರರಾಷ್ಟ್ರೀಯ ಏಕದಿನ ಪಂದ್ಯಾಗಳಲ್ಲಿ ಅಜೇಯ 200 ರನ್​ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ 2010ರಲ್ಲೇ ಸಚಿನ್ ಅವರು ಪಾತ್ರರಾಗಿದ್ದರು. ಏಕದಿನ ಕ್ರಿಕೆಟ್​​ನಲ್ಲಿ ಒಟ್ಟು 463 ಪಂದ್ಯಗಳನ್ನು ಆಡಿರುವ ಇವರು 18,426 ರನ್ ಕಲೆಹಾಕಿದ್ದಾರೆ. 49 ಶತಕ ಹಾಗೂ 96 ಅರ್ಧಶತಕ ಸಿಡಿಸಿದ್ದಾರೆ. ಬೌಲಿಂಗ್​​ನಲ್ಲೂ 154 ವಿಕೆಟ್ ಪಡೆದುಕೊಂಡಿದ್ದಾರೆ. ಟೆಸ್ಟ್​​ನಲ್ಲಿ 200 ಪಂದ್ಯಗಳನ್ನಾಡಿದ್ದು, 15,921 ರನ್ ಗಳಿಸಿದ್ದಾರೆ. ಇದರಲ್ಲಿ 51 ಶತಕ ಹಾಗೂ 68 ಅರ್ಧಶತಕ ಬಾರಿಸಿದ್ದಾರೆ.

ಇನ್ನೂ ಹೆಚ್ಚು ಓದಿ

IND vs ENG: ಪಟೌಡಿ ಟ್ರೋಫಿ ಹೆಸರು ಬದಲಾವಣೆ; ಮೊದಲ ಬಾರಿಗೆ ಮೌನ ಮುರಿದ ಸಚಿನ್ ತೆಂಡೂಲ್ಕರ್

India-England Test Series Renamed: ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ಹೆಸರನ್ನು ಪಟೌಡಿ ಟ್ರೋಫಿಯಿಂದ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ ಎಂದು ಬದಲಾಯಿಸಲಾಗಿದೆ. ಸಚಿನ್ ತೆಂಡೂಲ್ಕರ್ ಅವರು ಪಟೌಡಿ ಕುಟುಂಬದೊಂದಿಗೆ ಮಾತನಾಡಿ, ಪಟೌಡಿಯವರ ಪರಂಪರೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುವುದಾಗಿ ಹೇಳಿದ್ದರು. ಅದರಂತೆ ಈಗ ಸರಣಿ ವಿಜೇತ ನಾಯಕನಿಗೆ 'ಪಟೌಡಿ ಪದಕ ಫಾರ್ ಎಕ್ಸಲೆನ್ಸ್' ನೀಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಸಚಿನ್ ಹೇಳಿಕೊಂಡಿದ್ದಾರೆ.

IND vs ENG: ಇಂಡೊ-ಇಂಗ್ಲೆಂಡ್ ಟೆಸ್ಟ್ ಸರಣಿಗೆ ಹೆಸರು ಫೈನಲ್: ಪಟೌಡಿಗೆ ವಿಶೇಷ ಗೌರವ

India tour of England, 2025: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳನ್ನಾಡಲಿದೆ. ಈ ಸರಣಿಗೆ ಲೆಜೆಂಡ್ ಸಚಿನ್ ತೆಂಡೂಲ್ಕರ್ ಹಾಗೂ ಜೇಮ್ಸ್ ಅ್ಯಂಡರ್ಸನ್ ಅವರ ಹೆಸರನ್ನಿಡಲು ಬಿಸಿಸಿಐ-ಇಸಿಬಿ ನಿರ್ಧರಿಸಿದೆ.

WTC 2025 final: 27 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆಲುವು; 27 ವರ್ಷಗಳ ನಂತರ ಸಚಿನ್ ದಾಖಲೆ ಉಡೀಸ್

WTC 2025 final: ದಕ್ಷಿಣ ಆಫ್ರಿಕಾ 2025ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಐಡೆನ್ ಮಾರ್ಕ್ರಾಮ್ ಅವರ 136 ರನ್‌ಗಳ ಅದ್ಭುತ ಇನ್ನಿಂಗ್ಸ್ ಗೆಲುವಿಗೆ ಪ್ರಮುಖ ಕಾರಣವಾಯಿತು. ಇದು ಐಸಿಸಿ ಟೂರ್ನಮೆಂಟ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಗಳಿಸಿದ ಮೊದಲ ಶತಕವೂ ಆಗಿದ್ದು, ಮಾರ್ಕ್ರಾಮ್ ಈ ಶತಕದ ಮೂಲಕ ಸಚಿನ್ ತೆಂಡೂಲ್ಕರ್ ಅವರ ದೀರ್ಘಕಾಲದ ದಾಖಲೆಯನ್ನು ಮುರಿದರು.

IND vs ENG: ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಅನಾವರಣ ಮುಂದೂಡಿಕೆ; ಕಾರಣವೇನು?

Anderson-Tendulkar Trophy: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಹೊಸ ಹೆಸರು "ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ" ಎಂದು ನಾಮಕರಣ ಮಾಡಲಾಗಿದೆ. ಆದರೆ, ಏರ್ ಇಂಡಿಯಾ ವಿಮಾನ ಅಪಘಾತದ ಹಿನ್ನೆಲೆಯಲ್ಲಿ ಈ ಟ್ರೋಫಿಯ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಪೂರ್ವ ನಿಗದಿತ WTC ಫೈನಲ್ ಸಮಯದಲ್ಲಿ ಲಾರ್ಡ್ಸ್‌ನಲ್ಲಿ ಟ್ರೋಫಿ ಅನಾವರಣಗೊಳ್ಳಬೇಕಿತ್ತು. ಮುಂದಿನ ದಿನಗಳಲ್ಲಿ ಹೊಸ ದಿನಾಂಕವನ್ನು ಘೋಷಿಸಲಾಗುವುದು ಎಂದು ಎರಡೂ ಕ್ರಿಕೆಟ್ ಮಂಡಳಿಗಳು ತಿಳಿಸಿವೆ.

IND vs ENG: ಭಾರತ- ಇಂಗ್ಲೆಂಡ್‌ ಟೆಸ್ಟ್ ಸರಣಿಯಲ್ಲಿ ಅಧಿಕ ರನ್ ಬಾರಿಸಿದ ಟಾಪ್ 5 ಬ್ಯಾಟ್ಸ್‌ಮನ್​ಗಳಿವರು

India vs England Test Series: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಐದು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಜೋ ರೂಟ್, ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ಅಲಸ್ಟೈರ್ ಕುಕ್ ಮತ್ತು ವಿರಾಟ್ ಕೊಹ್ಲಿ ಇದ್ದಾರೆ. ಈ ಟಾಪ್ ಐವರ ಪಟ್ಟಿಯಲ್ಲಿ ಇಬ್ಬರು ಇಂಗ್ಲೆಂಡ್ ಆಟಗಾರರಿದ್ದರೆ, ಉಳಿದ ಮೂವರು ಆಟಗಾರರು ಭಾರತೀಯರಾಗಿದ್ದಾರೆ.

IND vs ENG: ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಗೆ ಇಬ್ಬರು ಲೆಜೆಂಡರಿ ಆಟಗಾರರ ಹೆಸರಿಡಲು ನಿರ್ಧಾರ

India vs England Test Series: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಗೆ "ತೆಂಡೂಲ್ಕರ್-ಆಂಡರ್ಸನ್ ಟ್ರೋಫಿ" ಎಂದು ಹೊಸ ಹೆಸರಿಡಲು ನಿರ್ಧರಿಸಲಾಗಿದೆ. ಚಿನ್ ತೆಂಡೂಲ್ಕರ್ ಮತ್ತು ಜೇಮ್ಸ್ ಆಂಡರ್ಸನ್ ಅವರ ಕೊಡುಗೆಯನ್ನು ಗೌರವಿಸುವ ಉದ್ದೇಶದಿಂದ ಈ ಹೊಸ ಹೆಸರನ್ನು ಆಯ್ಕೆ ಮಾಡಲಾಗಿದೆ. ಜೂನ್ 20 ರಿಂದ ಆರಂಭವಾಗುವ ಐದು ಪಂದ್ಯಗಳ ಸರಣಿಯಲ್ಲಿ ಈ ಟ್ರೋಫಿ ಅನಾವರಣಗೊಳ್ಳಲಿದೆ. ಭಾರತ ಮತ್ತು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗಳು ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿವೆ.

IPL 2025: ಕ್ರಿಕೆಟ್ ದೇವರ 15 ವರ್ಷಗಳ ಹಿಂದಿನ ದಾಖಲೆ ಮುರಿದ ಸೂರ್ಯ

SuryaKumar Yadav's Record-Breaking IPL 2025 Season: ಸೂರ್ಯಕುಮಾರ್ ಯಾದವ್ ಐಪಿಎಲ್ 2025 ರಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. 650 ಕ್ಕೂ ಹೆಚ್ಚು ರನ್ ಗಳಿಸಿ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ತಲುಪಲು ಸಹಾಯ ಮಾಡಿದ್ದಾರೆ. ಅವರು ಸತತ 14 ಇನ್ನಿಂಗ್ಸ್‌ಗಳಲ್ಲಿ 25 ಕ್ಕಿಂತ ಹೆಚ್ಚು ರನ್ ಗಳಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಅವರ ಮುಂಬೈ ಇಂಡಿಯನ್ಸ್ ದಾಖಲೆಯನ್ನೂ ಮುರಿದಿದ್ದಾರೆ.

ಟೆಸ್ಟ್ ಕ್ರಿಕೆಟ್​ಗೆ ಕೊಹ್ಲಿ ವಿದಾಯ; ಕ್ರಿಕೆಟ್ ದೇವರ ದಾಖಲೆ ಮುರೆಯದೆ ಹೊರಟ ರನ್ ಸಾಮ್ರಾಟ

Virat Kohli Retires from Test Cricket: ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಇದರಿಂದ ಸಚಿನ್ ತೆಂಡೂಲ್ಕರ್ ಅವರ ಅನೇಕ ದಾಖಲೆಗಳು ಶಾಶ್ವತವಾಗಿ ಮುರಿಯದೆ ಉಳಿಯಲಿವೆ. ಸಚಿನ್ ದಾಖಲೆಯನ್ನು ಮುರಿಯುವ ಸಾಧ್ಯತೆಗಳಿದಿದ್ದು ಕೊಹ್ಲಿಗೆ ಮಾತ್ರ. ಆದರೆ ಟಿ20 ಹಾಗೂ ಟೆಸ್ಟ್​ಗೆ ಕೊಹ್ಲಿ ನಿವೃತ್ತಿ ಘೋಸಿರುವುದರಿಂದ ಆ ದಾಖಲೆಗಳನ್ನು ಮುರಿಯುವುದು ಅಸಾಧ್ಯವಾಗಿದೆ.

ಸರಿಯಲ್ಲ ಎಂದು ಭಾವಿಸಿದೆ; ಕೊಹ್ಲಿ ಜೊತೆಗಿನ 12 ವರ್ಷಗಳ ಹಿಂದಿನ ಘಟನೆ ನೆನೆದ ಸಚಿನ್ ತೆಂಡೂಲ್ಕರ್

Virat Kohli Retires From Test Cricket: ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದು, ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಆಘಾತವನ್ನುಂಟುಮಾಡಿದೆ. ಸಚಿನ್ ತೆಂಡೂಲ್ಕರ್ ಅವರು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಕೊಹ್ಲಿಯ ನಿವೃತ್ತಿಗೆ ಭಾವುಕವಾಗಿ ಪ್ರತಿಕ್ರಿಯಿಸಿದ್ದು, 12 ವರ್ಷಗಳ ಹಿಂದಿನ ಒಂದು ವೈಯಕ್ತಿಕ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ಕೊಹ್ಲಿ ಅವರ ಟೆಸ್ಟ್ ವೃತ್ತಿಜೀವನ ಮತ್ತು ಅವರು ಭಾರತೀಯ ಕ್ರಿಕೆಟ್‌ಗೆ ನೀಡಿದ ಕೊಡುಗೆಯನ್ನು ಸಚಿನ್ ಹೊಗಳಿದ್ದಾರೆ.

Sai Sudarshan: ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ದಾಖಲೆ ಪುಡಿಗಟ್ಟಿದ ಸಾಯಿ ಸುದರ್ಶನ್: ಏನಿದು ಸಾಧನೆ ನೋಡಿ

GT vs SRH, IPL 2025: ಈ ಋತುವಿನಲ್ಲಿ ಸಾಯಿ ಸುದರ್ಶನ್ ಆಡಿದ 10 ಪಂದ್ಯಗಳಲ್ಲಿ 504 ರನ್ ಗಳಿಸಿದ್ದಾರೆ. ಅವರು ಪ್ರಸ್ತುತ ಐಪಿಎಲ್‌ನ 18 ನೇ ಋತುವಿನಲ್ಲಿ ಅತಿ ಹೆಚ್ಚು ರನ್‌ಗಳನ್ನು ಗಳಿಸಿದ ಬ್ಯಾಟರ್ ಆಗಿದ್ದಾರೆ. ಅದೇ ಸಮಯದಲ್ಲಿ, ಸಾಯಿ ಹೈದರಾಬಾದ್ ವಿರುದ್ಧ ದೊಡ್ಡ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಪಟ್ಟಿಯಲ್ಲಿ ಕ್ರಿಕೆಟ್ ದೇವರು ಎಂದೇ ಪ್ರಸಿದ್ಧರಾದ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ.

ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ