AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sachin Tendulkar

Sachin Tendulkar

ದಶಕಗಳ ಕಾಲ ಕ್ರಿಕೆಟ್ ಲೋಕವನ್ನು ಅಕ್ಷರಶಃ ಆಳಿದ ಕ್ರೆಡಿಟ್ ಸವ್ಯಸಾಚಿ ಸಚಿನ್ ತೆಂಡೂಲ್ಕರ್ ಅವರಿಗೆ ಸಲ್ಲುತ್ತದೆ. ವಿಶ್ವ ಕ್ರಿಕೆಟ್​ನಲ್ಲಿ ಕ್ರಿಕೆಟ್ ದೇವರು ಎಂದು ಚಿರಪರಿಚಿತರಾಗಿರುವ ಸಚಿನ್ ತೆಂಡೂಲ್ಕರ್ ನಿರ್ಮಿಸಿದ ದಾಖಲೆಗಳಿಗೆ ಲೆಕ್ಕವಿಲ್ಲ. ತಮ್ಮ 16ನೇ ವಯಸ್ಸಿನಲ್ಲೇ ಅಂತರರಾಷ್ಟ್ರೀಯ ಅಂಗಳಕ್ಕೆ ಕಾಲಿಟ್ಟು ಇತಿಹಾಸ ಬರೆದ ಸಚಿನ್​ ಈಗಲೂ ಕೋಟ್ಯಾಂತರ ಕ್ರಿಕೆಟ್​ ಅಭಿಮಾನಿಗಳ ಆರಾಧ್ಯ ದೈವ. 24 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಲಿಟ್ಲ್ ಮಾಸ್ಟರ್ ಹಲವಾರು ಅವಿಸ್ಮರಣೀಯ ಸನ್ನಿವೇಷಗಳಿಗೆ ಸಾಕ್ಷಿಯಾಗಿದ್ದಾರೆ. ಇದರ ಜೊತಗೆ ಅಪರೂಪದ ದಾಖಲೆಗಳನ್ನು ತನ್ನ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 1989ರಲ್ಲಿ ಪಾಕಿಸ್ತಾನ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸಚಿನ್ ತೆಂಡೂಲ್ಕರ್ 2013ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದಾಗ ಬರೋಬ್ಬರಿ 34,357 ರನ್‌ಗಳನ್ನು ತಮ್ಮ ಖಾತೆಗೆ ಸೇರಿಸಿಕೊಂಡಿದ್ದರು. ಅಂತರರಾಷ್ಟ್ರೀಯ ಏಕದಿನ ಪಂದ್ಯಾಗಳಲ್ಲಿ ಅಜೇಯ 200 ರನ್​ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ 2010ರಲ್ಲೇ ಸಚಿನ್ ಅವರು ಪಾತ್ರರಾಗಿದ್ದರು. ಏಕದಿನ ಕ್ರಿಕೆಟ್​​ನಲ್ಲಿ ಒಟ್ಟು 463 ಪಂದ್ಯಗಳನ್ನು ಆಡಿರುವ ಇವರು 18,426 ರನ್ ಕಲೆಹಾಕಿದ್ದಾರೆ. 49 ಶತಕ ಹಾಗೂ 96 ಅರ್ಧಶತಕ ಸಿಡಿಸಿದ್ದಾರೆ. ಬೌಲಿಂಗ್​​ನಲ್ಲೂ 154 ವಿಕೆಟ್ ಪಡೆದುಕೊಂಡಿದ್ದಾರೆ. ಟೆಸ್ಟ್​​ನಲ್ಲಿ 200 ಪಂದ್ಯಗಳನ್ನಾಡಿದ್ದು, 15,921 ರನ್ ಗಳಿಸಿದ್ದಾರೆ. ಇದರಲ್ಲಿ 51 ಶತಕ ಹಾಗೂ 68 ಅರ್ಧಶತಕ ಬಾರಿಸಿದ್ದಾರೆ.

ಇನ್ನೂ ಹೆಚ್ಚು ಓದಿ

‘ಲಗಾನ್’ ಸಿನಿಮಾಗೆ 25 ವರ್ಷ: ಚಿತ್ರತಂಡಕ್ಕೆ ಅತ್ಯಮೂಲ್ಯ ಸಲಹೆ ನೀಡಿದ್ದ ಸಚಿನ್ ತೆಂಡುಲ್ಕರ್

‘ಲಗಾನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದಲ್ಲದೆ, ಜಾಗತಿಕ ಮಟ್ಟದಲ್ಲಿ ಭಾರತದ ಹೆಸರನ್ನು ಎತ್ತಿಹಿಡಿದಿತ್ತು. 74ನೇ ‘ಆಸ್ಕರ್ ಪ್ರಶಸ್ತಿ’ಯ ‘ಅತ್ಯುತ್ತಮ ವಿದೇಶಿ ಭಾಷಾ ಚಿತ್ರ’ ವಿಭಾಗದಲ್ಲಿ ನಾಮಿನೇಟ್ ಆಗಿತ್ತು. ಈ ಸಿನಿಮಾಗೆ ಸಚಿನ್ ತೆಂಡುಲ್ಕರ್ ಕೂಡ ಒಂದು ಮುಖ್ಯವಾದ ಸಲಹೆ ನೀಡಿದ್ದರು.

ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ ಎಂದ ಟೀಂ ಇಂಡಿಯಾದ ಮಾಜಿ ನಾಯಕ

Vaibhav Sooryavanshi: ಕೃಷ್ಣಮಾಚಾರಿ ಶ್ರೀಕಾಂತ್, 15 ವರ್ಷದ ವೈಭವ್ ಸೂರ್ಯವಂಶಿ ಅವರನ್ನು 'ದೇವರ ಮಗ' ಎಂದು ಬಣ್ಣಿಸಿದ್ದಾರೆ. ಅವರ ಸ್ಫೋಟಕ ಬ್ಯಾಟಿಂಗ್, ಶಾಂತ ಮನಸ್ಥಿತಿ ಮತ್ತು ಅಸಾಧಾರಣ ದಾಖಲೆಗಳನ್ನು ಪ್ರಶಂಸಿಸಿ, ವೈಭವ್ ಭಾರತೀಯ ಕ್ರಿಕೆಟ್‌ನ ಉಜ್ವಲ ಭವಿಷ್ಯ ಎಂದಿದ್ದಾರೆ. ಆದರೆ, ಸಚಿನ್‌ನಂತಹ ಶ್ರೇಷ್ಠ ಆಟಗಾರರೊಂದಿಗೆ ಹೋಲಿಸಿ ಅನಗತ್ಯ ಒತ್ತಡ ಹೇರಬಾರದು, ಅವರು ಸ್ವಾಭಾವಿಕವಾಗಿ ಬೆಳೆಯಲು ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

IND vs AFG: ಅತಿ ವೇಗದ ಶತಕ ಬಾರಿಸಿ ಕ್ರಿಕೆಟ್ ದೇವರನ್ನು ಸರಿಗಟ್ಟಿದ ಇಶಾನ್ ಕಿಶನ್

Ishan Kishan Blazes Fastest ODI Century: ಇಶಾನ್ ಕಿಶನ್ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಎರಡನೇ ಪಂದ್ಯದಲ್ಲಿ 71 ಎಸೆತಗಳಲ್ಲಿ ಸ್ಪೋಟಕ ಶತಕ ಬಾರಿಸಿ 125 ರನ್ ಗಳಿಸಿದರು. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ ವೇಗದ ಶತಕದ ದಾಖಲೆಯನ್ನು ಸರಿಗಟ್ಟಿದರು. ವಿರಾಟ್ ಕೊಹ್ಲಿ ಮತ್ತು ಸೆಹ್ವಾಗ್ ನಂತರ ಭಾರತದ ವೇಗದ ಏಕದಿನ ಶತಕ ಬಾರಿಸಿದವರಲ್ಲಿ ಇಶಾನ್ ಕಿಶನ್ ಒಬ್ಬರಾಗಿದ್ದಾರೆ.

ಟೀಂ ಇಂಡಿಯಾಕ್ಕೆ ಎಂಟ್ರಿಕೊಟ್ಟ ಅತಿ ಕಿರಿಯ; ಸಚಿನ್ ದಾಖಲೆ ಮುರಿದ ವೈಭವ್

Youngest Indian Cricketer: ಬಿಸಿಸಿಐ ಐರ್ಲೆಂಡ್, ಇಂಗ್ಲೆಂಡ್ ಸರಣಿ ಹಾಗೂ ಏಷ್ಯನ್ ಗೇಮ್ಸ್‌ಗಾಗಿ ಭಾರತ ಟಿ20 ತಂಡವನ್ನು ಪ್ರಕಟಿಸಿದೆ. ಶ್ರೇಯಸ್ ಅಯ್ಯರ್ ನಾಯಕರಾಗಿದ್ದು, ತಿಲಕ್ ವರ್ಮಾ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಐಪಿಎಲ್‌ನಲ್ಲಿ ಮಿಂಚಿದ 15 ವರ್ಷದ ವೈಭವ್ ಸೂರ್ಯವಂಶಿ ತಂಡಕ್ಕೆ ಆಯ್ಕೆಯಾಗಿ, ಸಚಿನ್ ತೆಂಡೂಲ್ಕರ್ ಅವರ 36 ವರ್ಷಗಳ ಹಳೆಯ ದಾಖಲೆಯನ್ನು ಮುರಿದು, ಭಾರತ ತಂಡಕ್ಕೆ ಆಯ್ಕೆಯಾದ ಅತ್ಯಂತ ಕಿರಿಯ ಆಟಗಾರರಾಗಿ ಇತಿಹಾಸ ಸೃಷ್ಟಿಸಿದ್ದಾರೆ.

‘ನಾನು ನೋಡಿದ ಬೆಸ್ಟ್ ಕ್ಯಾಚ್’; ಶ್ರೇಯಸ್ ಹಿಡಿದ ಕ್ಯಾಚ್​​ಗೆ ಸಲಾಂ ಹೊಡದ ಕ್ರಿಕೆಟ್ ದೇವರು

Shreyas Iyer's IPL 2026 Masterpiece Catch:ಐಪಿಎಲ್ 2026ರ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಶ್ರೇಯಸ್ ಅಯ್ಯರ್ ಅದ್ಭುತ ಕ್ಯಾಚ್ ಹಿಡಿದರು. ಬೌಂಡರಿ ಬಳಿ ಗಾಳಿಯಲ್ಲಿ ಚೆಂಡನ್ನು ಹಿಡಿದು, ಅದನ್ನು ಸಹ ಆಟಗಾರನ ಕಡೆಗೆ ಎಸೆದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಅವರ ಈ ಸಮಯಪ್ರಜ್ಞೆ ಮತ್ತು ಫಿಟ್‌ನೆಸ್‌ಗೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದನ್ನು ತಮ್ಮ ಜೀವನದಲ್ಲಿ ನೋಡಿದ ಅತ್ಯುತ್ತಮ ಕ್ಯಾಚ್‌ಗಳಲ್ಲಿ ಒಂದೆಂದು ಬಣ್ಣಿಸಿದ್ದಾರೆ.

IPL 2026: ಆಮೆಗತಿಯ ಶತಕ ಬಾರಿಸಿ ಫ್ಯಾನ್ಸ್​ಗೆ ನಿದ್ದೆ ಬರಿಸಿದ ಐವರು ಆಟಗಾರರಿವರು

IPL's Slowest Centuries: ಐಪಿಎಲ್ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ಸೀಸನ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಟಿ20 ಎಂದರೆ ಸ್ಫೋಟಕ ಬ್ಯಾಟಿಂಗ್, ಆದರೆ ಐಪಿಎಲ್ ಇತಿಹಾಸದಲ್ಲಿ ಕೆಲ ಆಟಗಾರರು ನಿಧಾನಗತಿಯ ಶತಕಗಳನ್ನು ದಾಖಲಿಸಿದ್ದಾರೆ. ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್, ಮನೀಷ್ ಪಾಂಡೆ ಸೇರಿದಂತೆ ಐಪಿಎಲ್‌ನ 5 ಅತ್ಯಂತ ನಿಧಾನಗತಿಯ ಶತಕಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.

ಗಣ್ಯರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಅರ್ಜುನ್- ಸಾನಿಯಾ

Arjun Tendulkar- Saaniya Chandhok Wedding: ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಚಾಂದೋಕ್ ಅವರನ್ನು ವಿವಾಹವಾಗಿದ್ದಾರೆ. ಮುಂಬೈನಲ್ಲಿ ನಡೆದ ಈ ಅದ್ದೂರಿ ಸಮಾರಂಭದಲ್ಲಿ ಎಂ.ಎಸ್. ಧೋನಿ, ರಾಹುಲ್ ದ್ರಾವಿಡ್ ಸೇರಿದಂತೆ ಹಲವು ಕ್ರಿಕೆಟ್ ದಿಗ್ಗಜರು, ರಾಜಕೀಯ ಗಣ್ಯರು ಭಾಗವಹಿಸಿದ್ದರು. ಕಳೆದ ಆಗಸ್ಟ್‌ನಲ್ಲಿ ನಿಶ್ಚಿತಾರ್ಥ, ಮಾರ್ಚ್ 3 ರಂದು ಮೆಹಂದಿ ಸಮಾರಂಭ ನೆರವೇರಿತ್ತು.

IND vs NZ: ಸಚಿನ್ ದಾಖಲೆ ಮುರಿದರೂ ಇತಿಹಾಸ ಸೃಷ್ಟಿಸುವ ಅವಕಾಶ ಕೈಚೆಲ್ಲಿದ ವಿರಾಟ್

Virat Kohli Breaks Sachin's Record: ರಾಜ್‌ಕೋಟ್‌ನಲ್ಲಿ ಭಾರತ-ನ್ಯೂಜಿಲೆಂಡ್ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ನ್ಯೂಜಿಲೆಂಡ್ ವಿರುದ್ಧದ ಗರಿಷ್ಠ ರನ್‌ಗಳ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ. 1773 ರನ್ ಗಳಿಸುವ ಮೂಲಕ ಈ ಸಾಧನೆ ಮಾಡಿದರು. ಆದಾಗ್ಯೂ, ಸತತ ಆರು ಅರ್ಧಶತಕಗಳ ಮತ್ತೊಂದು ದಾಖಲೆ ನಿರ್ಮಿಸುವ ಅವಕಾಶವನ್ನು ಕಳೆದುಕೊಂಡರು. ಈ ಪಂದ್ಯದಲ್ಲಿ ಅವರು 23 ರನ್‌ಗಳಿಗೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

IND vs AUS: ಚೇಸ್ ಕಿಂಗ್ ಕೊಹ್ಲಿಯ ರನ್ ಓಟಕ್ಕೆ ಕ್ರಿಕೆಟ್ ದೇವರ ದಾಖಲೆ ಧ್ವಂಸ

Virat Kohli Breaks Sachin's Record: ವಿರಾಟ್ ಕೊಹ್ಲಿ ಸಿಡ್ನಿಯಲ್ಲಿ ಅಜೇಯ 74 ರನ್ ಗಳಿಸಿ, ಏಕದಿನ ರನ್ ಚೇಸಿಂಗ್‌ನಲ್ಲಿ ಅತಿ ಹೆಚ್ಚು 50+ ಸ್ಕೋರ್ ಮಾಡಿದ ಸಚಿನ್ ತೆಂಡೂಲ್ಕರ್ ದಾಖಲೆ (69) ಮುರಿದು ಹೊಸ ಮೈಲುಗಲ್ಲು (70) ತಲುಪಿದರು. ಈ ಪ್ರದರ್ಶನದಿಂದ ಅವರು ಆಸ್ಟ್ರೇಲಿಯಾದಲ್ಲಿನ ತಮ್ಮ ಹಿಂದಿನ ಕಳಪೆ ಫಾರ್ಮ್‌ ಅನ್ನು ಸುಧಾರಿಸಿಕೊಂಡು, ತಮ್ಮ ರನ್ ಚೇಸಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದರು.

IND vs AUS: 0,0,74.. ಒಂದೇ ಪಂದ್ಯದಲ್ಲಿ ಹಲವು ದಾಖಲೆ ಸೃಷ್ಟಿಸಿದ ವಿರಾಟ್ ಕೊಹ್ಲಿ

Virat Kohli Records: ಆಸ್ಟ್ರೇಲಿಯಾ ವಿರುದ್ಧ ಸತತ 2 ಸೊನ್ನೆಗಳ ನಂತರ ವಿರಾಟ್ ಕೊಹ್ಲಿ ಅಜೇಯ 74 ರನ್ ಗಳಿಸಿ ತಂಡಕ್ಕೆ ಗೆಲುವು ತಂದರು. ಈ ಇನ್ನಿಂಗ್ಸ್ ಮೂಲಕ ಅವರು ಆಸ್ಟ್ರೇಲಿಯಾ ವಿರುದ್ಧ 2500 ODI ರನ್, ಸಚಿನ್ ನಂತರ ಎರಡನೇ ಅತಿ ಹೆಚ್ಚು ODI ರನ್ (14235) ಗಳಿಸಿದ ಆಟಗಾರ, ಮತ್ತು ಅತಿ ಹೆಚ್ಚು ಶತಕ ಪಾಲುದಾರಿಕೆಗಳಲ್ಲಿ 2ನೇ ಸ್ಥಾನ ಪಡೆದರು. ಕೊಹ್ಲಿ 78 ಕ್ಯಾಚ್‌ಗಳೊಂದಿಗೆ ವಿಶ್ವ ದಾಖಲೆ ಕೂಡ ನಿರ್ಮಿಸಿದ್ದಾರೆ.

ರಾಹುಲ್ ದ್ರಾವಿಡ್ ಮಗನನ್ನು ಔಟ್ ಮಾಡಿದ ಸಚಿನ್ ತೆಂಡೂಲ್ಕರ್ ಪುತ್ರ

Samit Dravid - Arjun Tendulkar: ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಹಾಗೂ ಸಚಿನ್ ತೆಂಡೂಲ್ಕರ್ ಅವರ ಮಗ ಅರ್ಜುನ್ ತೆಂಡೂಲ್ಕರ್ ದೇಶೀಯ ಟೂರ್ನಿಯಲ್ಲಿ ಮುಖಾಮುಖಿಯಾಗಿದ್ದಾರೆ. ಈ ಪಂದ್ಯದಲ್ಲಿ ಸಮಿತ್ ದ್ರಾವಿಡ್ ಅವರ ವಿಕೆಟ್ ಕಬಳಿಸುವಲ್ಲಿ ಅರ್ಜುನ್ ತೆಂಡೂಲ್ಕರ್ ಸಫಲರಾಗಿದ್ದಾರೆ.

ಬಿರುಗಾಳಿಯಲ್ಲಿ ಸಿಲುಕಿದ ಸಚಿನ್ ತೆಂಡೂಲ್ಕರ್ ಪ್ರಯಾಣಿಸುತ್ತಿದ್ದ ಖಾಸಗಿ ಜೆಟ್; ಕಾಡು ಪ್ರಾಣಿಗಳಿದ್ದ ಜಾಗದಲ್ಲಿ ಲ್ಯಾಂಡಿಂಗ್

Sachin Tendulkar's Africa Trip: ಸಚಿನ್ ತೆಂಡೂಲ್ಕರ್ ಅವರು ತಮ್ಮ ಕುಟುಂಬದೊಂದಿಗೆ ಆಫ್ರಿಕಾ ಪ್ರವಾಸದ ವೇಳೆ ಅನುಭವಿಸಿದ ಅಪಾಯಕಾರಿ ಘಟನೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬಿರುಗಾಳಿಯಿಂದಾಗಿ ಅವರ ಖಾಸಗಿ ಜೆಟ್ ಬೇರೆ ಲ್ಯಾಂಡಿಂಗ್ ಸ್ಥಳಕ್ಕೆ ತಿರುಗಿಸಲ್ಪಟ್ಟಿತು. ಆ ಸ್ಥಳದಲ್ಲಿ ಕಾಡು ಪ್ರಾಣಿಗಳು ಇದ್ದುದರಿಂದ, ವಿಮಾನವನ್ನು ಎರಡು ಬಾರಿ ಕೆಳಕ್ಕೆ ಇಳಿಸಿ ಪ್ರಾಣಿಗಳನ್ನು ದೂರ ಓಡಿಸಿ ಸುರಕ್ಷಿತವಾಗಿ ಇಳಿಸಲಾಯಿತು. ಈ ರೋಮಾಂಚಕಾರಿ ಘಟನೆಯ ವಿಡಿಯೋವನ್ನು ಸಚಿನ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!