AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sachin Tendulkar

Sachin Tendulkar

ದಶಕಗಳ ಕಾಲ ಕ್ರಿಕೆಟ್ ಲೋಕವನ್ನು ಅಕ್ಷರಶಃ ಆಳಿದ ಕ್ರೆಡಿಟ್ ಸವ್ಯಸಾಚಿ ಸಚಿನ್ ತೆಂಡೂಲ್ಕರ್ ಅವರಿಗೆ ಸಲ್ಲುತ್ತದೆ. ವಿಶ್ವ ಕ್ರಿಕೆಟ್​ನಲ್ಲಿ ಕ್ರಿಕೆಟ್ ದೇವರು ಎಂದು ಚಿರಪರಿಚಿತರಾಗಿರುವ ಸಚಿನ್ ತೆಂಡೂಲ್ಕರ್ ನಿರ್ಮಿಸಿದ ದಾಖಲೆಗಳಿಗೆ ಲೆಕ್ಕವಿಲ್ಲ. ತಮ್ಮ 16ನೇ ವಯಸ್ಸಿನಲ್ಲೇ ಅಂತರರಾಷ್ಟ್ರೀಯ ಅಂಗಳಕ್ಕೆ ಕಾಲಿಟ್ಟು ಇತಿಹಾಸ ಬರೆದ ಸಚಿನ್​ ಈಗಲೂ ಕೋಟ್ಯಾಂತರ ಕ್ರಿಕೆಟ್​ ಅಭಿಮಾನಿಗಳ ಆರಾಧ್ಯ ದೈವ. 24 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಲಿಟ್ಲ್ ಮಾಸ್ಟರ್ ಹಲವಾರು ಅವಿಸ್ಮರಣೀಯ ಸನ್ನಿವೇಷಗಳಿಗೆ ಸಾಕ್ಷಿಯಾಗಿದ್ದಾರೆ. ಇದರ ಜೊತಗೆ ಅಪರೂಪದ ದಾಖಲೆಗಳನ್ನು ತನ್ನ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 1989ರಲ್ಲಿ ಪಾಕಿಸ್ತಾನ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಸಚಿನ್ ತೆಂಡೂಲ್ಕರ್ 2013ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದಾಗ ಬರೋಬ್ಬರಿ 34,357 ರನ್‌ಗಳನ್ನು ತಮ್ಮ ಖಾತೆಗೆ ಸೇರಿಸಿಕೊಂಡಿದ್ದರು. ಅಂತರರಾಷ್ಟ್ರೀಯ ಏಕದಿನ ಪಂದ್ಯಾಗಳಲ್ಲಿ ಅಜೇಯ 200 ರನ್​ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ 2010ರಲ್ಲೇ ಸಚಿನ್ ಅವರು ಪಾತ್ರರಾಗಿದ್ದರು. ಏಕದಿನ ಕ್ರಿಕೆಟ್​​ನಲ್ಲಿ ಒಟ್ಟು 463 ಪಂದ್ಯಗಳನ್ನು ಆಡಿರುವ ಇವರು 18,426 ರನ್ ಕಲೆಹಾಕಿದ್ದಾರೆ. 49 ಶತಕ ಹಾಗೂ 96 ಅರ್ಧಶತಕ ಸಿಡಿಸಿದ್ದಾರೆ. ಬೌಲಿಂಗ್​​ನಲ್ಲೂ 154 ವಿಕೆಟ್ ಪಡೆದುಕೊಂಡಿದ್ದಾರೆ. ಟೆಸ್ಟ್​​ನಲ್ಲಿ 200 ಪಂದ್ಯಗಳನ್ನಾಡಿದ್ದು, 15,921 ರನ್ ಗಳಿಸಿದ್ದಾರೆ. ಇದರಲ್ಲಿ 51 ಶತಕ ಹಾಗೂ 68 ಅರ್ಧಶತಕ ಬಾರಿಸಿದ್ದಾರೆ.

ಇನ್ನೂ ಹೆಚ್ಚು ಓದಿ

IND vs AUS: ಚೇಸ್ ಕಿಂಗ್ ಕೊಹ್ಲಿಯ ರನ್ ಓಟಕ್ಕೆ ಕ್ರಿಕೆಟ್ ದೇವರ ದಾಖಲೆ ಧ್ವಂಸ

Virat Kohli Breaks Sachin's Record: ವಿರಾಟ್ ಕೊಹ್ಲಿ ಸಿಡ್ನಿಯಲ್ಲಿ ಅಜೇಯ 74 ರನ್ ಗಳಿಸಿ, ಏಕದಿನ ರನ್ ಚೇಸಿಂಗ್‌ನಲ್ಲಿ ಅತಿ ಹೆಚ್ಚು 50+ ಸ್ಕೋರ್ ಮಾಡಿದ ಸಚಿನ್ ತೆಂಡೂಲ್ಕರ್ ದಾಖಲೆ (69) ಮುರಿದು ಹೊಸ ಮೈಲುಗಲ್ಲು (70) ತಲುಪಿದರು. ಈ ಪ್ರದರ್ಶನದಿಂದ ಅವರು ಆಸ್ಟ್ರೇಲಿಯಾದಲ್ಲಿನ ತಮ್ಮ ಹಿಂದಿನ ಕಳಪೆ ಫಾರ್ಮ್‌ ಅನ್ನು ಸುಧಾರಿಸಿಕೊಂಡು, ತಮ್ಮ ರನ್ ಚೇಸಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದರು.

IND vs AUS: 0,0,74.. ಒಂದೇ ಪಂದ್ಯದಲ್ಲಿ ಹಲವು ದಾಖಲೆ ಸೃಷ್ಟಿಸಿದ ವಿರಾಟ್ ಕೊಹ್ಲಿ

Virat Kohli Records: ಆಸ್ಟ್ರೇಲಿಯಾ ವಿರುದ್ಧ ಸತತ 2 ಸೊನ್ನೆಗಳ ನಂತರ ವಿರಾಟ್ ಕೊಹ್ಲಿ ಅಜೇಯ 74 ರನ್ ಗಳಿಸಿ ತಂಡಕ್ಕೆ ಗೆಲುವು ತಂದರು. ಈ ಇನ್ನಿಂಗ್ಸ್ ಮೂಲಕ ಅವರು ಆಸ್ಟ್ರೇಲಿಯಾ ವಿರುದ್ಧ 2500 ODI ರನ್, ಸಚಿನ್ ನಂತರ ಎರಡನೇ ಅತಿ ಹೆಚ್ಚು ODI ರನ್ (14235) ಗಳಿಸಿದ ಆಟಗಾರ, ಮತ್ತು ಅತಿ ಹೆಚ್ಚು ಶತಕ ಪಾಲುದಾರಿಕೆಗಳಲ್ಲಿ 2ನೇ ಸ್ಥಾನ ಪಡೆದರು. ಕೊಹ್ಲಿ 78 ಕ್ಯಾಚ್‌ಗಳೊಂದಿಗೆ ವಿಶ್ವ ದಾಖಲೆ ಕೂಡ ನಿರ್ಮಿಸಿದ್ದಾರೆ.

ರಾಹುಲ್ ದ್ರಾವಿಡ್ ಮಗನನ್ನು ಔಟ್ ಮಾಡಿದ ಸಚಿನ್ ತೆಂಡೂಲ್ಕರ್ ಪುತ್ರ

Samit Dravid - Arjun Tendulkar: ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಹಾಗೂ ಸಚಿನ್ ತೆಂಡೂಲ್ಕರ್ ಅವರ ಮಗ ಅರ್ಜುನ್ ತೆಂಡೂಲ್ಕರ್ ದೇಶೀಯ ಟೂರ್ನಿಯಲ್ಲಿ ಮುಖಾಮುಖಿಯಾಗಿದ್ದಾರೆ. ಈ ಪಂದ್ಯದಲ್ಲಿ ಸಮಿತ್ ದ್ರಾವಿಡ್ ಅವರ ವಿಕೆಟ್ ಕಬಳಿಸುವಲ್ಲಿ ಅರ್ಜುನ್ ತೆಂಡೂಲ್ಕರ್ ಸಫಲರಾಗಿದ್ದಾರೆ.

ಬಿರುಗಾಳಿಯಲ್ಲಿ ಸಿಲುಕಿದ ಸಚಿನ್ ತೆಂಡೂಲ್ಕರ್ ಪ್ರಯಾಣಿಸುತ್ತಿದ್ದ ಖಾಸಗಿ ಜೆಟ್; ಕಾಡು ಪ್ರಾಣಿಗಳಿದ್ದ ಜಾಗದಲ್ಲಿ ಲ್ಯಾಂಡಿಂಗ್

Sachin Tendulkar's Africa Trip: ಸಚಿನ್ ತೆಂಡೂಲ್ಕರ್ ಅವರು ತಮ್ಮ ಕುಟುಂಬದೊಂದಿಗೆ ಆಫ್ರಿಕಾ ಪ್ರವಾಸದ ವೇಳೆ ಅನುಭವಿಸಿದ ಅಪಾಯಕಾರಿ ಘಟನೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬಿರುಗಾಳಿಯಿಂದಾಗಿ ಅವರ ಖಾಸಗಿ ಜೆಟ್ ಬೇರೆ ಲ್ಯಾಂಡಿಂಗ್ ಸ್ಥಳಕ್ಕೆ ತಿರುಗಿಸಲ್ಪಟ್ಟಿತು. ಆ ಸ್ಥಳದಲ್ಲಿ ಕಾಡು ಪ್ರಾಣಿಗಳು ಇದ್ದುದರಿಂದ, ವಿಮಾನವನ್ನು ಎರಡು ಬಾರಿ ಕೆಳಕ್ಕೆ ಇಳಿಸಿ ಪ್ರಾಣಿಗಳನ್ನು ದೂರ ಓಡಿಸಿ ಸುರಕ್ಷಿತವಾಗಿ ಇಳಿಸಲಾಯಿತು. ಈ ರೋಮಾಂಚಕಾರಿ ಘಟನೆಯ ವಿಡಿಯೋವನ್ನು ಸಚಿನ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸಚಿನ್ ತೆಂಡೂಲ್ಕರ್ ಬಿಸಿಸಿಐನ ಮುಂದಿನ ಅಧ್ಯಕ್ಷ? ಕ್ರಿಕೆಟ್ ದೇವರು ಹೇಳಿದ್ದೇನು?

Next BCCI President: ರೋಜರ್ ಬಿನ್ನಿ ಅವರ ರಾಜೀನಾಮೆಯಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹೊಸ ಅಧ್ಯಕ್ಷರನ್ನು ಹುಡುಕುತ್ತಿದೆ. ಸಚಿನ್ ತೆಂಡೂಲ್ಕರ್ ಅವರ ಹೆಸರು ಚರ್ಚೆಯಲ್ಲಿದ್ದರೂ, ಅವರು ಈ ಹುದ್ದೆಗೆ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೆಪ್ಟೆಂಬರ್ 2025ರಲ್ಲಿ ನಡೆಯುವ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು.

ನಿಶ್ಚಿತಾರ್ಥದ ಬಳಿಕ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡ ಅರ್ಜುನ್- ಸಾನಿಯಾ; ಫೋಟೋ ಹಂಚಿಕೊಂಡ ಸಚಿನ್

Sachin Tendulkar's Mother's 88th Birthday: ಸಚಿನ್ ತೆಂಡೂಲ್ಕರ್ ಅವರ ತಾಯಿ ರಜನಿ ತೆಂಡೂಲ್ಕರ್ ಅವರ 88ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ ಮತ್ತು ಅವರ ಭಾವಿ ಮಡದಿ ಸಾನಿಯಾ ಚಂದೋಕ್ ಭಾಗವಹಿಸಿದ್ದರು. ನಿಶ್ಚಿತಾರ್ಥದ ನಂತರ ಸಾನಿಯಾ ಹಾಗೂ ಅರ್ಜುನ್ ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಂಡಿರುವುದು ಇದೇ ಮೊದಲು.

ಯುವಿಗಿಂತ ಮೊದಲು ಧೋನಿ… ವಿಶ್ವಕಪ್​ ಗೆಲುವಿನಲ್ಲಿ ಸಚಿನ್ ‘ಮೈಂಡ್ ಗೇಮ್’

ODI World Cup 2011: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ 2011ರ ಏಕದಿನ ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 50 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 274 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 48.2 ಓವರ್​ಗಳಲ್ಲಿ 277 ರನ್ ಬಾರಿಸಿ ವಿಶ್ವ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದರು.

‘ಅರ್ಜುನ್ ನಿಜವಾಗಿಯೂ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆಯೇ?’; ಫ್ಯಾನ್ಸ್ ಪ್ರಶ್ನೆಗೆ ನೇರವಾಗಿ ಉತ್ತರಿಸಿದ ಸಚಿನ್ ತೆಂಡೂಲ್ಕರ್

Sachin Tendulkar Confirms Arjun Tendulkar's Engagement: ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರ ನಿಶ್ಚಿತಾರ್ಥದ ಸುದ್ದಿ ಇತ್ತೀಚೆಗೆ ಹರಡಿತ್ತು. ಈ ಬಗ್ಗೆ ಅನೇಕ ವದಂತಿಗಳಿದ್ದವು. ಆದರೆ, ಸಚಿನ್ ಅವರೇ ಈ ವಿಷಯವನ್ನು Reddit ನಲ್ಲಿ 'Ask Me Anything' ಸೆಷನ್ನಲ್ಲಿ ಖಚಿತಪಡಿಸಿದ್ದಾರೆ. ಅರ್ಜುನ್ ಅವರು ಸಾನಿಯಾ ಚಂದೋಕ್ ಎಂಬುವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ನಿಶ್ಚಿತಾರ್ಥ ತೀರಾ ಖಾಸಗಿಯಾಗಿ ನಡೆದಿದೆ ಎಂದು ವರದಿಯಾಗಿದೆ.

‘ನನ್ನ ದೇಶ, ನನ್ನ ಗುರುತು’; 79ನೇ ಸ್ವಾತಂತ್ರ್ಯ ದಿನದ ಬಗ್ಗೆ ಭಾರತೀಯ ಕ್ರಿಕೆಟಿಗರು ಏನು ಹೇಳಿದ್ರು?

Team India Celebrates 79th Independence Day: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯಂದು, ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್, ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ, ಗೌತಮ್ ಗಂಭೀರ್, ಶುಭ್‌ಮನ್ ಗಿಲ್ ಮತ್ತು ಇರ್ಫಾನ್ ಪಠಾಣ್ ಸೇರಿದಂತೆ ಹಲವು ಕ್ರಿಕೆಟ್ ದಿಗ್ಗಜರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ದೇಶವಾಸಿಗಳಿಗೆ ಶುಭಾಶಯಗಳನ್ನು ಕೋರಿದ್ದಾರೆ. ತ್ರಿವರ್ಣ ಧ್ವಜ, ದೇಶಭಕ್ತಿಯ ಸಂದೇಶಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಪೋಸ್ಟ್‌ಗಳು ಹಂಚಿಕೊಳ್ಳಲಾಗಿದೆ. ಬಿಸಿಸಿಐ ಕೂಡ ಶುಭಾಶಯಗಳನ್ನು ಕೋರಿದೆ.

ಹೆಲ್ಮೆಟ್‌ ಮೇಲೆ ತ್ರಿವರ್ಣ; ನಾನಾಡುವುದು ದೇಶಕ್ಕಾಗಿ, ಮಂಡಳಿಗಾಗಿ ಅಲ್ಲ ಎಂದಿದ್ದ ಕ್ರಿಕೆಟ್ ದೇವರು

Sachin Tendulkar: ಸಚಿನ್ ತೆಂಡೂಲ್ಕರ್ ಅವರ ಕ್ರಿಕೆಟ್ ಜೀವನವು ಅನೇಕ ಮೊದಲುಗಳಿಗೆ ಸಾಕ್ಷಿಯಾಗಿದೆ. ತಮ್ಮ ಹೆಲ್ಮೆಟ್ ಮೇಲೆ ತ್ರಿವರ್ಣ ಧ್ವಜ ಹಚ್ಚಿಕೊಂಡು ದೇಶಭಕ್ತಿಯನ್ನು ಪ್ರದರ್ಶಿಸಿದ್ದು, ಬ್ರಾಂಡ್‌ಗಳ ಜಾಹೀರಾತಿಗೆ ನಿರಾಕರಿಸಿದ್ದು, ಮತ್ತು ಅವರ ಆಟದ ಮೂಲಕ ಭಾರತೀಯ ಕ್ರಿಕೆಟ್‌ಗೆ ನೀಡಿದ ಕೊಡುಗೆ ಅವರನ್ನು ಅಜರಾಮರವಾಗಿಸಿದೆ. ಇಂದಿಗೂ ಅವರ ಸಾಧನೆಗಳು ಸ್ಫೂರ್ತಿಯಾಗಿದೆ.

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ