AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan

Salman Khan

ನಟ ಸಲ್ಮಾನ್​ ಖಾನ್​ ಅವರು ಹಿಂದಿ ಚಿತ್ರರಂಗದಲ್ಲಿ ಭಾರಿ ಬೇಡಿಕೆ ಹೊಂದಿದ್ದಾರೆ. ಭಾರತದ ಶ್ರೀಮಂತ ನಟರಲ್ಲಿ ಅವರು ಕೂಡ ಇದ್ದಾರೆ. ಅಬ್ದಲ್​ ರಶೀದ್​ ಸಲೀಂ ಸಲ್ಮಾನ್​ ಖಾನ್​ ಎಂಬುದು ಅವರ ಪೂರ್ಣ ಹೆಸರು. 1988ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು.

ಆರಂಭದಲ್ಲೇ ಅವರಿಗೆ ಯಶಸ್ಸು ಸಿಕ್ಕಿತು. ವೃತ್ತಿಜೀವನದಲ್ಲಿ ಅವರು ಏಳು-ಬೀಳುಗಳನ್ನು ಕಂಡಿದ್ದಾರೆ. ಅವರ ಸಿನಿಮಾಗಳು ನೂರಾರು ಕೋಟಿ ರೂಪಾಯಿ ಬಿಸ್ನೆಸ್​ ಮಾಡಿವೆ. ಹಿಂದಿ ಚಿತ್ರರಂಗದ ಮಾಸ್​ ಹೀರೋ ಆಗಿ ಅವರು ಗುರುತಿಸಿಕೊಂಡಿದ್ದಾರೆ. ‘ಮೈ ನೇ ಪ್ಯಾರ್​ ಕಿಯಾ’, ‘ಸಾಜನ್​’, ‘ಹಮ್​ ಆಪ್ಕೆ ಹೈ ಕೌನ್​’, ‘ದಬಂಗ್​’, ‘ಬಜರಂಗಿ ಭಾಯಿಜಾನ್​’, ‘ಏಕ್​ ಥಾ ಟೈಗರ್​’ ಮುಂತಾದವು ಸಲ್ಮಾನ್​ ಖಾನ್​ ನಟನೆಯ ಸೂಪರ್​ ಹಿಟ್​ ಸಿನಿಮಾಗಳು.

ಬಿಗ್​ ಬಾಸ್​ ನಿರೂಪಕನಾಗಿಯೂ ಅವರು ಫೇಮಸ್​ ಆಗಿದ್ದಾರೆ. ನಿರ್ಮಾಪಕನಾಗಿ ಹಲವು ಸಿನಿಮಾಗಳಿಗೆ ಸಲ್ಮಾನ್​ ಖಾನ್​ ಬಂಡವಾಳ ಹೂಡಿದ್ದಾರೆ. ವೃತ್ತಿಜೀವನದ ರೀತಿಯ ಅವರ ಖಾಸಗಿ ಬದುಕು ಕೂಡ ಸುದ್ದಿ ಆಗುತ್ತದೆ. ಹಲವರನ್ನು ಸಲ್ಮಾನ್​ ಖಾನ್​ ಪ್ರೀತಿಸಿದ್ದರು. ಆದರೆ ಯಾರನ್ನೂ ಅವರು ಮದುವೆ ಆಗಲಿಲ್ಲ. ಅವರ ಜೀವನದಲ್ಲಿ ಸಾಕಷ್ಟು ವಿವಾದಗಳು ಕೂಡ ಆಗಿವೆ. ಗ್ಯಾಂಗ್​ಸ್ಟರ್​ಗಳಿಂದ ಅವರಿಗೆ ಜೀವ ಬೆದರಿಕೆಯೂ ಬಂದಿದೆ.

ಇನ್ನೂ ಹೆಚ್ಚು ಓದಿ

ಕೃಷ್ಣಮೃಗ ಬೇಟೆ ಪ್ರಕರಣ ಆಧಾರಿತ ‘ಕಾಲಾ ಹಿರಣ್’ ಸಿನಿಮಾ ಬಿಡುಗಡೆಗೆ ದೆಹಲಿ ಹೈಕೋರ್ಟ್ ತಡೆ

‘ಕಾಲಾ ಹಿರಣ್’ ಸಿನಿಮಾದ ಬಿಡುಗಡೆಗೆ ಸೆನ್ಸಾರ್ ಮಂಡಳಿಯ ಹಸಿರು ನಿಶಾನೆ ಸಿಕ್ಕಿಲ್ಲ. ಅಲ್ಲದೇ, ಕಾನೂನು ಸಂಕಷ್ಟ ಎದುರಾಗಿರುವುದರಿಂದ ಚಿತ್ರದ ಬಿಡುಗಡೆಗೆ ಹಿನ್ನಡೆಯಾಗಿದೆ. ಸಿನಿಮಾವನ್ನು ಬಿಡುಗಡೆ ಮಾಡದಂತೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ಸಲ್ಮಾನ್ ಖಾನ್ ಅವರು ಈ ಸಿನಿಮಾಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಸೈಫ್-ಕರೀನಾ ಮದುವೆಯಲ್ಲಿ ಪಾತ್ರೆ ತೊಳೆದಿದ್ದ ಈ ನಟ, ಬಿಗ್ ಬಾಸ್ ಮನೆಗೆ ಎಂಟ್ರಿ

ಬಾಲಿವುಡ್ ಅಂಗಳದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಆಸಿಫ್ ಖಾನ್ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಮದುವೆಯಲ್ಲಿ ವೇಟರ್ ಆಗಿ ಕೆಲಸ ಮಾಡಿ, ಪಾತ್ರೆ ತೊಳೆದಿದ್ದ ಇವರು, ಇಂದು ಸಲ್ಮಾನ್ ಖಾನ್ ನಿರೂಪಣೆಯ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿ ಎಲ್ಲರ ಗಮನ ಸೆಳೆದಿದ್ದಾರೆ.

‘ಬಿಗ್ ಬಾಸ್ 20’ ಪ್ರೋಮೋ ವೈರಲ್: ಪ್ರೀತಿ, ಮೋಸದ ಬಗ್ಗೆ ಮಾತನಾಡಿ ಅಚ್ಚರಿ ನೀಡಿದ ನಟಿ

ಇಂದು (ಸೆಪ್ಟೆಂಬರ್ 6) ‘ಬಿಗ್ ಬಾಸ್ ಹಿಂದಿ’ 20ನೇ ಸೀಸನ್ ಆರಂಭ ಆಗಲಿದೆ. ಈ ರಿಯಾಲಿಟಿ ಶೋನಲ್ಲಿ ನಟಿ ಇಶಾ ರಿಖಿ ಕೂಡ ಭಾಗವಹಿಸುತ್ತಾರಾ ಎಂಬ ಅನುಮಾನ ಮೂಡಿದೆ. ಅವರದ್ದು ಎನ್ನಲಾದ ಪ್ರೋಮೋ ಸಖತ್ ವೈರಲ್ ಆಗಿದೆ. ಆದರೆ ಅಧಿಕೃತವಾಗಿ ಈ ವಿಷಯವನ್ನು ಅವರು ಖಚಿತಪಡಿಸಿಲ್ಲ.

ರಣ್ವೀರ್ ಕೈಕೊಟ್ಟ ಬೆನ್ನಲ್ಲೆ, ಸಲ್ಮಾನ್ ಖಾನ್ ಕೈಹಿಡಿದ ಫರ್ಹಾನ್ ಅಖ್ತರ್

ರಣ್ವೀರ್ ಸಿಂಗ್ ನಾಯಕನಾಗಿ ನಟಿಸಬೇಕಿದ್ದ ‘ಡಾನ್ 3’ ಸಿನಿಮಾವನ್ನು ಫರ್ಹಾನ್ ಅಖ್ತರ್ ಘೋಷಿಸಿದ್ದರು. ಆದರೆ ರಣ್ವೀರ್ ಸಿಂಗ್ ಆ ಸಿನಿಮಾದಿಂದ ಹೊರ ನಡೆದರು. ಇಬ್ಬರ ನಡುವೆ ಸಾಕಷ್ಟು ವಿವಾದಗಳು ಸಹ ನಡೆದವು. ಇದೀಗ ರಣ್ವೀರ್ ಸಿಂಗ್ ಸಲ್ಮಾನ್ ಖಾನ್ ಜೊತೆ ಕೈ ಜೋಡಿಸಿದ್ದಾರೆ. ಸಲ್ಮಾನ್ ಖಾನ್ ಅವರಿಗೆ ಭಾರಿ ದೊಡ್ಡ ಬಜೆಟ್​​ನ ಸಿನಿಮಾ ಒಂದನ್ನು ಆಫರ್ ಮಾಡಿದ್ದಾರೆ ಎನ್ನಲಾಗುತ್ತಿದೆ.

‘ಇದು ನನ್ನ ಕೆಲಸವಲ್ಲ’; ಬಿಗ್ ಬಾಸ್ ಸೆಟ್​​ನಲ್ಲೇ ಸಲ್ಮಾನ್ ಖಾನ್ ಗರಂ

ಬಿಗ್ ಬಾಸ್ ಸೀಸನ್ 20ರ ಶೂಟಿಂಗ್ ವೇಳೆ ಬಾಲಿವುಡ್ ನಟ ಸಲ್ಮಾನ್ ಖಾನ್ ಫೋಟೋಗ್ರಾಫರ್‌ಗಳ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೌಬಾಯ್ ಲುಕ್‌ನಲ್ಲಿ ಕಾಣಿಸಿಕೊಂಡ ಸಲ್ಲು ತಮ್ಮಿಂದ ಸೂಕ್ತ ಅಂತರ ಕಾಯ್ದುಕೊಳ್ಳುವಂತೆ ಕ್ಯಾಮೆರಾಮೆನ್‌ಗಳಿಗೆ ಎಚ್ಚರಿಕೆ ನೀಡಿದ್ದಾರೆ. ಸೆಪ್ಟೆಂಬರ್ 6ರಿಂದ ಬಿಗ್ ಬಾಸ್ ಪ್ರಸಾರ ಆರಂಭವಾಗಲಿದೆ.

ಸಲ್ಮಾನ್ ಖಾನ್ ಜೊತೆ ಶಿವಣ್ಣ ಸಿನಿಮಾ ಮಾಡ್ತಾರಾ? ಶಿವರಾಜ್​ಕುಮಾರ್ ಕೊಟ್ಟರು ಉತ್ತರ

ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ‘ಒರಿಜಿನಲ್ ಮಾನ್ಸ್ಟರ್’ ಹಾಗೂ ಸಲ್ಮಾನ್ ಖಾನ್ ಅವರ ‘ಮಾನ್ಸ್ಟರ್’ ಸಿನಿಮಾಗಳ ನಡುವೆ ಯಾವುದೇ ಸ್ಪರ್ಧೆಯಿಲ್ಲ ಎಂದು ಶಿವಣ್ಣ ಸ್ಪಷ್ಟಪಡಿಸಿದ್ದಾರೆ. ಎರಡೂ ಸಿನಿಮಾಗಳ ಶೀರ್ಷಿಕೆಗಳು ಒಂದೇ ರೀತಿಯಲ್ಲಿದ್ದರೂ, ಕಥಾಹಂದರ ಸಂಪೂರ್ಣ ವಿಭಿನ್ನವಾಗಿದೆ ಎಂದು ಅವರು ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಹೆಮ್ಮೆಯಿಂದ ರಾಖಿ ತೋರಿಸಿದ ಸಲ್ಮಾನ್ ಖಾನ್; ಸಹೋದರಿ ಮನೆಯಲ್ಲಿ ರಕ್ಷಾ ಬಂಧನ ಸಡಗರ

ನಟ ಸಲ್ಮಾನ್ ಖಾನ್ ಅವರ ಮನೆಯಲ್ಲಿ ಎಲ್ಲ ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತದೆ. ಅದಕ್ಕೆ ರಾಖಿ ಹಬ್ಬ ಕೂಡ ಹೊರತಾಗಿಲ್ಲ. ಸಹೋದರಿ ಅಲ್ವಿರಾ ಖಾನ್ ನಿವಾಸದಲ್ಲಿ ಸಲ್ಮಾನ್ ಖಾನ್ ಅವರು ರಕ್ಷಾ ಬಂಧನ ಹಬ್ಬವನ್ನು ಆಚರಿಸಿದ್ದಾರೆ. ಅಲ್ಲಿಂದ ಹೊರಬರುವಾಗ ಅವರು ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡರು.

‘ಕಾಲಾ ಹಿರಣ್’ ವಿವಾದ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ

ಸಲ್ಮಾನ್ ಖಾನ್ ಅವರ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ‘ಕಾಲಾ ಹಿರಣ್’ ಸಿನಿಮಾ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಈ ವಿವಾದ ತೀವ್ರಗೊಂಡಿದೆ. ಈ ಚಿತ್ರದ ಟೀಸರ್ ಡಿಲೀಟ್ ಮಾಡಬೇಕು ಎಂದು ದೆಹಲಿ ಹೈಕೋರ್ಟ್ ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿ ನಿರ್ಮಾಪಕರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.

‘ಬಿಗ್ ಬಾಸ್ 20’ ಟ್ರೇಲರ್: ಈ ಬಾರಿ ಸಲ್ಮಾನ್ ಖಾನ್ ಕೊಡ್ತಾರೆ ‘ಎಕ್ಸ್‌ಟ್ರಾ ಜೀವನ್ ದಾನ್’

ಬಿಗ್ ಬಾಸ್ ರಿಯಾಲಿಟಿ ಶೋ ಹೊಸ ಸೀಸನ್ ಆರಂಭಕ್ಕೆ ಸಕಲ ತಯಾರಿ ನಡೆದಿದೆ. ಪ್ರತಿ ಬಾರಿಯಂತೆ ಈ ಸಲ ಕೂಡ ಹೊಸ ಟ್ವಿಸ್ಟ್ ನೀಡಲಾಗುತ್ತಿದೆ. ಶೋ ನಿರೂಪಕ ಸಲ್ಮಾನ್ ಖಾನ್ ಅವರು ‘ಬಿಗ್ ಬಾಸ್ 20’ ಟ್ರೇಲರ್​ನಲ್ಲಿ ಆ ಬಗ್ಗೆ ಸುಳಿವು ನೀಡಿದ್ದಾರೆ.

‘ಬೀಯಿಂಗ್ ಹ್ಯೂಮನ್’ ವಂಚನೆ ಪ್ರಕರಣ: ನಟ ಸಲ್ಮಾನ್ ಖಾನ್​ಗೆ ಸಮನ್ಸ್ ಜಾರಿ

‘ಬೀಯಿಂಗ್ ಹ್ಯೂಮನ್’ ಆಭರಣದ ವ್ಯವಹಾರದಲ್ಲಿ ಸಲ್ಮಾನ್ ಖಾನ್ ಮೋಸ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಡೀಗಢ ಕೋರ್ಟ್ ಸಮನ್ಸ್ ನೀಡಿದೆ. ಅಷ್ಟಕ್ಕೂ ಸಲ್ಮಾನ್ ಖಾನ್ ಮೇಲೆ ಕೋಟ್ಯಂತರ ರೂಪಾಯಿ ವಂಚನೆ ಆರೋಪ ಬಂದಿರುವುದು ಹೇಗೆ? ಇಲ್ಲಿದೆ ಉತ್ತರ..

ಸಲ್ಮಾನ್ ಖಾನ್ ಮನೆಯಲ್ಲಿ ಐಷಾರಾಮಿ ಜೀವನ ನಡೆಸಿದ್ದ ಪ್ರದೀಪ್ ರಾವತ್; ಹೊರ ಬಂದಿದ್ದೇಕೆ??

'ಗಜಿನಿ' ಖ್ಯಾತಿಯ ಹಿರಿಯ ನಟ ಪ್ರದೀಪ್ ರಾವತ್ ರಕ್ತದ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ. ಸಲ್ಮಾನ್ ಖಾನ್ ಅವರೊಂದಿಗೆ ನಿಕಟ ಬಾಂಧವ್ಯ ಹೊಂದಿದ್ದ ಅವರು, ಆರಂಭಿಕ ದಿನಗಳಲ್ಲಿ ಸಲ್ಮಾನ್ ಮನೆಯಲ್ಲೇ ಉಳಿದುಕೊಂಡಿದ್ದ ದಿನಗಳನ್ನು ನೆನಪಿಸಿಕೊಂಡಿದ್ದರು. ನಟನ ನಿಧನಕ್ಕೆ ಸಲ್ಮಾನ್ ಖಾನ್ ಸೇರಿದಂತೆ ಬಾಲಿವುಡ್ ಗಣ್ಯರು ಕಂಬನಿ ಮಿಡಿದಿದ್ದಾರೆ.

ವಿಪರೀತ ತೂಕ ಕಡಿಮೆ ಆಗಿದ್ದರ ಬಗ್ಗೆ ಮೌನ ಮುರಿದ ನಟ ಸಲ್ಮಾನ್ ಖಾನ್

ನಟ ಸಲ್ಮಾನ್ ಖಾನ್ ಅವರಿಗೆ ತೀವ್ರ ಅನಾರೋಗ್ಯ ಕಾಡುತ್ತಿರಬಹುದು ಎಂದು ಕೆಲವರು ಊಹಿಸಿದ್ದರು. ವಿಪರೀತವಾಗಿ ತೂಕ ಕಡಿಮೆ ಆಗಿದ್ದೇ ಈ ಅನುಮಾನಕ್ಕೆ ಕಾರಣ ಆಗಿತ್ತು. ತಾವು ತೂಕ ಕಳೆದುಕೊಂಡಿರುವ ಬಗ್ಗೆ ಸ್ವತಃ ಸಲ್ಮಾನ್ ಖಾನ್ ಅವರು ಈಗ ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..