AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan

Salman Khan

ನಟ ಸಲ್ಮಾನ್​ ಖಾನ್​ ಅವರು ಹಿಂದಿ ಚಿತ್ರರಂಗದಲ್ಲಿ ಭಾರಿ ಬೇಡಿಕೆ ಹೊಂದಿದ್ದಾರೆ. ಭಾರತದ ಶ್ರೀಮಂತ ನಟರಲ್ಲಿ ಅವರು ಕೂಡ ಇದ್ದಾರೆ. ಅಬ್ದಲ್​ ರಶೀದ್​ ಸಲೀಂ ಸಲ್ಮಾನ್​ ಖಾನ್​ ಎಂಬುದು ಅವರ ಪೂರ್ಣ ಹೆಸರು. 1988ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು.

ಆರಂಭದಲ್ಲೇ ಅವರಿಗೆ ಯಶಸ್ಸು ಸಿಕ್ಕಿತು. ವೃತ್ತಿಜೀವನದಲ್ಲಿ ಅವರು ಏಳು-ಬೀಳುಗಳನ್ನು ಕಂಡಿದ್ದಾರೆ. ಅವರ ಸಿನಿಮಾಗಳು ನೂರಾರು ಕೋಟಿ ರೂಪಾಯಿ ಬಿಸ್ನೆಸ್​ ಮಾಡಿವೆ. ಹಿಂದಿ ಚಿತ್ರರಂಗದ ಮಾಸ್​ ಹೀರೋ ಆಗಿ ಅವರು ಗುರುತಿಸಿಕೊಂಡಿದ್ದಾರೆ. ‘ಮೈ ನೇ ಪ್ಯಾರ್​ ಕಿಯಾ’, ‘ಸಾಜನ್​’, ‘ಹಮ್​ ಆಪ್ಕೆ ಹೈ ಕೌನ್​’, ‘ದಬಂಗ್​’, ‘ಬಜರಂಗಿ ಭಾಯಿಜಾನ್​’, ‘ಏಕ್​ ಥಾ ಟೈಗರ್​’ ಮುಂತಾದವು ಸಲ್ಮಾನ್​ ಖಾನ್​ ನಟನೆಯ ಸೂಪರ್​ ಹಿಟ್​ ಸಿನಿಮಾಗಳು.

ಬಿಗ್​ ಬಾಸ್​ ನಿರೂಪಕನಾಗಿಯೂ ಅವರು ಫೇಮಸ್​ ಆಗಿದ್ದಾರೆ. ನಿರ್ಮಾಪಕನಾಗಿ ಹಲವು ಸಿನಿಮಾಗಳಿಗೆ ಸಲ್ಮಾನ್​ ಖಾನ್​ ಬಂಡವಾಳ ಹೂಡಿದ್ದಾರೆ. ವೃತ್ತಿಜೀವನದ ರೀತಿಯ ಅವರ ಖಾಸಗಿ ಬದುಕು ಕೂಡ ಸುದ್ದಿ ಆಗುತ್ತದೆ. ಹಲವರನ್ನು ಸಲ್ಮಾನ್​ ಖಾನ್​ ಪ್ರೀತಿಸಿದ್ದರು. ಆದರೆ ಯಾರನ್ನೂ ಅವರು ಮದುವೆ ಆಗಲಿಲ್ಲ. ಅವರ ಜೀವನದಲ್ಲಿ ಸಾಕಷ್ಟು ವಿವಾದಗಳು ಕೂಡ ಆಗಿವೆ. ಗ್ಯಾಂಗ್​ಸ್ಟರ್​ಗಳಿಂದ ಅವರಿಗೆ ಜೀವ ಬೆದರಿಕೆಯೂ ಬಂದಿದೆ.

ಇನ್ನೂ ಹೆಚ್ಚು ಓದಿ

2027ಕ್ಕೆ ಮುಂದೂಡಿಕೆ ಆಯ್ತಾ ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ಚಿತ್ರದ ರಿಲೀಸ್?

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಮಾತೃಭೂಮಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಚಿತ್ರದ ಬಿಡುಗಡೆಗೆ ಅನುಮತಿ ಸಿಗಲಲ್ಲ. ಚಿತ್ರದ ಶೀರ್ಷಿಕೆ ಬದಲಾವಣೆ ಮಾಡಿದರೂ ಗ್ರೀನ್ ಸಿಗ್ನಲ್ ಸಿಗಲಿಲ್ಲ. ಸಲ್ಮಾನ್ ಖಾನ್ ನಟನೆಯ ಈ ಚಿತ್ರದ ಬಿಡುಗಡೆ ಇನ್ನಷ್ಟು ತಡವಾಗುವ ಸಾಧ್ಯತೆ ದಟ್ಟವಾಗಿದೆ.

ಸಲ್ಮಾನ್ ಖಾನ್‌ ‘ಮಾತೃಭೂಮಿ’ ಚಿತ್ರಕ್ಕೆ ಸೆನ್ಸಾರ್ ಸಮಸ್ಯೆ? ಬಿಡುಗಡೆ ಬಗ್ಗೆ ಹೆಚ್ಚಿದ ಆತಂಕ

ಭಾರತೀಯ ಚಿತ್ರರಂಗದಲ್ಲಿ ಸಿನಿಮಾಗಳ ಸೆನ್ಸಾರ್ ಸವಾಲುಗಳು ಹೆಚ್ಚುತ್ತಿವೆ. ಸಲ್ಮಾನ್ ಖಾನ್ ನಟನೆಯ 'ಮಾತೃಭೂಮಿ' ಚಿತ್ರವು ಗಾಲ್ವಾನ್ ಕಣಿವೆಯ ಸೂಕ್ಷ್ಮ ಕಥಾಹಂದರದಿಂದಾಗಿ ಸೆನ್ಸಾರ್ ಮಂಡಳಿಯ ಅಡೆತಡೆ ಎದುರಿಸುತ್ತಿದೆ. ಹಲವು ಬದಲಾವಣೆಗಳ ನಂತರವೂ ಅನುಮತಿ ದೊರೆತಿಲ್ಲ, ಬಿಡುಗಡೆ ಅನಿಶ್ಚಿತವಾಗಿದೆ. ದಳಪತಿ ವಿಜಯ್ ಅವರ 'ಜನ ನಾಯಗನ್' ಸಹ ಇದೇ ಸಮಸ್ಯೆಯಿಂದ ಆರು ತಿಂಗಳಿಂದ ವಿಳಂಬವಾಗಿದೆ.

52 ವರ್ಷಗಳಿಂದ ಸಲ್ಮಾನ್ ಖಾನ್ ಕೇವಲ 1 ಬಿಎಚ್​​ಕೆ ಮನೆಯಲ್ಲಿ ವಾಸಿಸುತ್ತಿರುವುದೇಕೆ ಗೊತ್ತಾ?

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಕಳೆದ 52 ವರ್ಷಗಳಿಂದ ವಾಸವಿರುವ ಮುಂಬೈನ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಬಿಡಲಿದ್ದಾರೆ ಎಂಬ ವರದಿಗಳು ಭಾರಿ ಕುತೂಹಲ ಮೂಡಿಸಿವೆ. ಇಂದು ಸಾವಿರಾರು ಕೋಟಿ ಒಡೆಯರಾದರೂ ಸಲ್ಮಾನ್ ಖಾನ್ ಅವರು ಕೇವಲ 1 BHK ಫ್ಲಾಟ್‌ನಲ್ಲೇ ಉಳಿದುಕೊಂಡಿರುವುದರ ಹಿಂದಿನ ರಹಸ್ಯ ಇಲ್ಲಿದೆ. ಅವರ ತಂದೆ ಸಲೀಂ ಖಾನ್ ಇಂದೋರ್‌ನಿಂದ ಬಂದು ತಿಂಗಳಿಗೆ 55 ರೂಪಾಯಿ ಬಾಡಿಗೆ ಕೋಣೆಯಿಂದ ಈ ಐತಿಹಾಸಿಕ ಮನೆಯನ್ನು ಖರೀದಿಸುವವರೆಗಿನ ಸಂಪೂರ್ಣ ಹೋರಾಟದ ಕಥೆ ಇಲ್ಲಿದೆ.

ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ತೊರೆಯಲಿದ್ದಾರಾ ಸಲ್ಮಾನ್ ಖಾನ್? ಆರು ಅಂತಸ್ತಿನ ಹೊಸ ಮನೆ ನಿರ್ಮಾಣಕ್ಕೆ ಸಜ್ಜು

ಸಲ್ಮಾನ್ ಖಾನ್ ತಮ್ಮ ನೆಚ್ಚಿನ 'ಗ್ಯಾಲಕ್ಸಿ ಅಪಾರ್ಟ್‌ಮೆಂಟ್' ತೊರೆದು ಬಾಂದ್ರಾದಲ್ಲಿ 6 ಅಂತಸ್ತಿನ ಹೊಸ ಬೀಚ್ ಹೌಸ್‌ಗೆ ಸ್ಥಳಾಂತರಗೊಳ್ಳಲಿದ್ದಾರೆ. 2024 ರ ಗುಂಡಿನ ದಾಳಿ ನಂತರ ಭದ್ರತಾ ಕಾರಣಗಳಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಖಾನ್ ಕುಟುಂಬ ಒಟ್ಟಾಗಿ ವಾಸಿಸಲು ಈ ಭವ್ಯ ಮನೆಯನ್ನು ನಿರ್ಮಿಸಲಾಗುತ್ತಿದ್ದು, ಇದು ಹೆಚ್ಚಿನ ಭದ್ರತೆ ಮತ್ತು ಗೌಪ್ಯತೆಯನ್ನು ನೀಡಲಿದೆ. ಪರಿಸರ ಸ್ನೇಹಿ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ.

ಸಲ್ಮಾನ್ ಖಾನ್‌ಗೆ ಹಿನ್ನಡೆ: ‘ಕಾಲಾ ಹಿರಣ್’ ಚಿತ್ರದ ತುರ್ತು ನಿಷೇಧಕ್ಕೆ ದೆಹಲಿ ಹೈಕೋರ್ಟ್ ನಿರಾಕರಣೆ

ಸಲ್ಮಾನ್ ಖಾನ್ ಅವರು ‘ಕಾಲಾ ಹಿರಣ್’ ಚಿತ್ರತಂಡದ ವಿರುದ್ಧ ಕಾನೂನು ಸಮರಕ್ಕೆ ಇಳಿದಿದ್ದಾರೆ. ವಾದ ಆಲಿಸಿದ ನ್ಯಾಯಾಲಯವು ಸದ್ಯಕ್ಕೆ ಈ ಸಿನಿಮಾಗೆ ತಡೆ ನೀಡಲು ನಿರಾಕರಿಸಿದೆ. ಮೊದಲು ಚಿತ್ರತಂಡಕ್ಕೆ ಎಲ್ಲಾ ದಾಖಲೆಗಳನ್ನು ನೀಡಿ, ಅವರು ತಮ್ಮ ಪರ ವಾದ ಸಿದ್ಧಪಡಿಸಿಕೊಳ್ಳಲು ಅವಕಾಶ ಕೊಡಿ ಎಂದು ಸಲ್ಮಾನ್ ತಂಡಕ್ಕೆ ಕೋರ್ಟ್ ಸೂಚಿಸಿದೆ.

ಬಿಗ್ ಬಜೆಟ್ ಐತಿಹಾಸಿಕ ಸಿನಿಮಾಗಾಗಿ ಸಲ್ಮಾನ್ ಖಾನ್ ಜತೆ ಕೈ ಜೋಡಿಸಿದ ಫರ್ಹಾನ್ ಅಖ್ತರ್?

ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಅವರು ರಣವೀರ್ ಸಿಂಗ್ ಜೊತೆಗಿನ ‘ಡಾನ್ 3’ ವಿವಾದ ಬದಿಗಿಟ್ಟು ಮುಂದೆ ಸಾಗುತ್ತಿದ್ದಾರೆ. ಈಗ ಅವರು ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾದ ಮಾತುಕಥೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಐತಿಹಾಸಿಕ ಕಥಾಹಂದರ ಸಿನಿಮಾಗೆ ಅವರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ನಟ ಸಲ್ಮಾನ್ ಖಾನ್ ಹೊಸ ಲುಕ್ ವೈರಲ್: ‘ತೇರೆ ನಾಮ್ 2’ ಬರುತ್ತಿದೆ ಎಂದ ಅಭಿಮಾನಿಗಳು

ವೇದಿಕೆಯಲ್ಲಿ ನಟ ಸಲ್ಮಾನ್ ಖಾನ್ ಅವರ ಹೊಸ ಲುಕ್ ನೋಡಿ, ಪಕ್ಕದಲ್ಲಿದ್ದ ಕರೀನಾ ಕಪೂರ್ ಖಾನ್ ಅವರಿಗೂ ಅಚ್ಚರಿ ಆಯಿತು. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು, ಜನರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರಿಗೆ ‘ತೇರೆ ನಾಮ್’ ಸಿನಿಮಾದ ಪಾತ್ರವೇ ನೆನಪಾಗಿದೆ.

‘ಕಾಲಾ ಹಿರಣ್’ ಚಿತ್ರತಂಡಕ್ಕೆ ದೆಹಲಿ ಹೈಕೋರ್ಟ್ ನೋಟಿಸ್: ಬಿಡುಗಡೆಗೆ ತಡೆ ಕೋರಿದ ಸಲ್ಮಾನ್ ಖಾನ್

ಕೃಷ್ಣಮೃಗ ಬೇಟೆ ಪ್ರಕರಣದ ಕುರಿತು ‘ಕಾರಾ ಹಿರಣ್’ ಸಿನಿಮಾ ಮಾಡಲಾಗಿದೆ. ಈ ಸಿನಿಮಾಗೆ ಸಲ್ಮಾನ್ ಖಾನ್ ತಕರಾರು ತೆಗೆದಿದ್ದಾರೆ. ದೆಹಲಿ ಹೈಕೋರ್ಟ್​​ನಲ್ಲಿ ಅವರು ಅರ್ಜಿ ಸಲ್ಲಿಸಿದ್ದಾರೆ. ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಎಂದು ಸಲ್ಮಾನ್ ಖಾನ್ ಕೋರಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ...

‘ಕಾಲಾ ಹಿರಣ್’ ಚಿತ್ರದ ತಡೆ ಕೋರಿ ಸಲ್ಮಾನ್ ಖಾನ್ ಅರ್ಜಿ: ದೆಹಲಿ ಹೈಕೋರ್ಟ್‌ನಲ್ಲಿ ಜೂನ್ 19ರಂದು ವಿಚಾರಣೆ

‘ಕಾಲಾ ಹಿರಣ್’ ಸಿನಿಮಾದ ವಿರುದ್ಧ ನಟ ಸಲ್ಮಾನ್ ಖಾನ್ ಅವರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಈ ಸಿನಿಮಾದ ಟೀಸರ್ ಬಿಡುಗಡೆ ಆದ ಬಳಿಕ ವಿವಾದ ಹೆಚ್ಚಾಗಿದೆ. ಸಲ್ಮಾನ್ ಖಾನ್ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ಜೂನ್ 19ರಂದು ಅವರ ಅರ್ಜಿಯ ವಿಚಾರಣೆ ನಡೆಯಲಿದೆ.

‘ಕಾಲಾ ಹಿರಣ್’ ಟೀಸರ್: ವಿವಾದಿತ ಸಿನಿಮಾದಲ್ಲಿ ಸಲ್ಮಾನ್ ಖಾನ್ ರೀತಿಯೇ ಕಾಣುವ ನಟ

‘ಕಾಲಾ ಹಿರಣ್’ ಸಿನಿಮಾದ ವಿವಾದ ಜೋರಾಗಿದೆ. ‘ಇದು ಯಾವುದೇ ಬಯೋಪಿಕ್ ಅಲ್ಲ, ಇದೊಂದು ಕಲ್ಪಿತ ಚಿತ್ರ’ ಎಂದು ನಿರ್ಮಾಪಕ ಅಮಿತ್ ಜಾನಿ ವಾದಿಸುತ್ತಿದ್ದಾರೆ. ಆದರೆ ‘ಕಾಲಾ ಹಿರಣ್’ ಚಿತ್ರದ ಟೀಸರ್ ನೋಡಿದರೆ ಇದು ನೇರವಾಗಿ ನಟ ಸಲ್ಮಾನ್ ಖಾನ್ ಅವರಿಗೆ ಸಂಬಂಧಿಸಿದ ಕಥೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ.

ಸೆಪ್ಟೆಂಬರ್ 21ರಿಂದ ‘ಬಿಗ್ ಬಾಸ್ 20’ ಆರಂಭ: ಈ ಬಾರಿಯೂ ಸಲ್ಮಾನ್ ಖಾನ್ ನಿರೂಪಣೆ

ನಟ ಸಲ್ಮಾನ್ ಖಾನ್ ಅವರು ಹಿಂದಿ ‘ಬಿಗ್ ಬಾಸ್’ 20ನೇ ಸೀಸನ್ ನಡೆಸಿಕೊಡಲು ಸಜ್ಜಾಗಿದ್ದಾರೆ. ಸಿನಿಮಾ ಕೆಲಸಗಳನ್ನು ಬೇಗ ಮುಗಿಸಿ, ಬಿಗ್ ಬಾಸ್ ನಿರೂಪಣೆಗೆ ಅವರು ಸಮಯ ಮಾಡಿಕೊಳ್ಳಲಿದ್ದಾರೆ. 20ನೇ ಸೀಸನ್ ಆದ್ದರಿಂದ ಹೆಚ್ಚು ನಿರೀಕ್ಷೆ ಇದೆ. ಯಾವಾಗ ಶೋ ಆರಂಭ ಆಗಲಿದೆ ಎಂಬ ಬಗ್ಗೆ ಮಾಹಿತಿ ಕೇಳಿಬಂದಿದೆ.

370 ರೂ. ಬಿರಿಯಾನಿ ವಿವಾದ: ಕಾಮಿಡಿಯನ್ ಪ್ರಣೀತ್‌ಗೆ ಮೊದಲೇ ವಾರ್ನಿಂಗ್ ನೀಡಿದ್ದ ಸಲ್ಮಾನ್ ಖಾನ್

370 Rupees Biryani Controversy: ಪ್ರಣೀತ್ ಮೋರೆ ಕಾಮಿಡಿ ಶೋನಲ್ಲಿ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಲಾಗಿದೆ. ಆ ವಿಡಿಯೋಗಳು ವೈರಲ್ ಆದ ಬಳಿಕ ಜನರು ಕ್ಲಾಸ್ ತೆಗೆದುಕೊಂಡಿದ್ದಾರೆ. ನಟ ಸಲ್ಮಾನ್ ಖಾನ್ ಅವರು ಒಂದು ವರ್ಷದ ಹಿಂದೆಯೇ ಪ್ರಣೀತ್ ಮೋರೆಗೆ ಖಡಕ್ ಎಚ್ಚರಿಕೆ ನೀಡಿದ್ದರು. ಆ ಬಗ್ಗೆ ಇಲ್ಲಿದೆ ಮಾಹಿತಿ..

ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ