Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan

Salman Khan

ನಟ ಸಲ್ಮಾನ್​ ಖಾನ್​ ಅವರು ಹಿಂದಿ ಚಿತ್ರರಂಗದಲ್ಲಿ ಭಾರಿ ಬೇಡಿಕೆ ಹೊಂದಿದ್ದಾರೆ. ಭಾರತದ ಶ್ರೀಮಂತ ನಟರಲ್ಲಿ ಅವರು ಕೂಡ ಇದ್ದಾರೆ. ಅಬ್ದಲ್​ ರಶೀದ್​ ಸಲೀಂ ಸಲ್ಮಾನ್​ ಖಾನ್​ ಎಂಬುದು ಅವರ ಪೂರ್ಣ ಹೆಸರು. 1988ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು.

ಆರಂಭದಲ್ಲೇ ಅವರಿಗೆ ಯಶಸ್ಸು ಸಿಕ್ಕಿತು. ವೃತ್ತಿಜೀವನದಲ್ಲಿ ಅವರು ಏಳು-ಬೀಳುಗಳನ್ನು ಕಂಡಿದ್ದಾರೆ. ಅವರ ಸಿನಿಮಾಗಳು ನೂರಾರು ಕೋಟಿ ರೂಪಾಯಿ ಬಿಸ್ನೆಸ್​ ಮಾಡಿವೆ. ಹಿಂದಿ ಚಿತ್ರರಂಗದ ಮಾಸ್​ ಹೀರೋ ಆಗಿ ಅವರು ಗುರುತಿಸಿಕೊಂಡಿದ್ದಾರೆ. ‘ಮೈ ನೇ ಪ್ಯಾರ್​ ಕಿಯಾ’, ‘ಸಾಜನ್​’, ‘ಹಮ್​ ಆಪ್ಕೆ ಹೈ ಕೌನ್​’, ‘ದಬಂಗ್​’, ‘ಬಜರಂಗಿ ಭಾಯಿಜಾನ್​’, ‘ಏಕ್​ ಥಾ ಟೈಗರ್​’ ಮುಂತಾದವು ಸಲ್ಮಾನ್​ ಖಾನ್​ ನಟನೆಯ ಸೂಪರ್​ ಹಿಟ್​ ಸಿನಿಮಾಗಳು.

ಬಿಗ್​ ಬಾಸ್​ ನಿರೂಪಕನಾಗಿಯೂ ಅವರು ಫೇಮಸ್​ ಆಗಿದ್ದಾರೆ. ನಿರ್ಮಾಪಕನಾಗಿ ಹಲವು ಸಿನಿಮಾಗಳಿಗೆ ಸಲ್ಮಾನ್​ ಖಾನ್​ ಬಂಡವಾಳ ಹೂಡಿದ್ದಾರೆ. ವೃತ್ತಿಜೀವನದ ರೀತಿಯ ಅವರ ಖಾಸಗಿ ಬದುಕು ಕೂಡ ಸುದ್ದಿ ಆಗುತ್ತದೆ. ಹಲವರನ್ನು ಸಲ್ಮಾನ್​ ಖಾನ್​ ಪ್ರೀತಿಸಿದ್ದರು. ಆದರೆ ಯಾರನ್ನೂ ಅವರು ಮದುವೆ ಆಗಲಿಲ್ಲ. ಅವರ ಜೀವನದಲ್ಲಿ ಸಾಕಷ್ಟು ವಿವಾದಗಳು ಕೂಡ ಆಗಿವೆ. ಗ್ಯಾಂಗ್​ಸ್ಟರ್​ಗಳಿಂದ ಅವರಿಗೆ ಜೀವ ಬೆದರಿಕೆಯೂ ಬಂದಿದೆ.

ಇನ್ನೂ ಹೆಚ್ಚು ಓದಿ

ಸಲ್ಮಾನ್ ಖಾನ್​ಗೆ ಜೀವ ಬೆದರಿಕೆ ಹಾಕಿದವನು ಮಾನಸಿಕ ಅಸ್ವಸ್ಥ; ಗುಜರಾತ್​​ನಲ್ಲಿ ಬಂಧನ

ಗುಜರಾಜ್​ನ ವಡೋದರದಿಂದ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಸಂದೇಶ ಬಂದಿತ್ತು. ಮುಂಬೈ ಪೊಲೀಸರು ಅಲ್ಲಿಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಆರೋಪಿಯು ಮಾನಸಿಕ ಅಸ್ವಸ್ಥನಾಗಿದ್ದಾನೆ ಎಂಬುದು ತಿಳಿದು ಬಂದಿದೆ. ಅಲ್ಲದೇ ಆತ ಚಿಕಿತ್ಸೆ ಕೂಡ ಪಡೆಯುತ್ತಿದ್ದಾನೆ. ಬೆದರಿಕೆ ಸಂದೇಶಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ.

ಸೋಲು ಮರೆತು ವರ್ಕೌಟ್ ಶುರು ಮಾಡಿದ ಸಲ್ಮಾನ್ ಖಾನ್; ಈ ವಯಸ್ಸಲ್ಲೂ ಎಂಥಾ ಬಾಡಿ

ಸಲ್ಮಾನ್ ಖಾನ್ ಅವರ ‘ಸಿಕಂದರ್’ ಸಿನಿಮಾ ನಿರೀಕ್ಷಿತ ಯಶಸ್ಸು ಗಳಿಸಿಲ್ಲ. ಈಗ ಅವರು ವರ್ಕೌಟ್ ಮೂಲಕ ಮತ್ತೆ ಫಿಟ್ ಆಗಲು ಪ್ರಯತ್ನಿಸುತ್ತಿದ್ದಾರೆ. 59ನೇ ವಯಸ್ಸಿನಲ್ಲೂ ಅವರ ಫಿಟ್ನೆಸ್‌ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾ ವೃತ್ತಿಜೀವನದ ಆರಂಭದಲ್ಲಿ ತೆಳ್ಳಗಿದ್ದ ಸಲ್ಮಾನ್, ನಂತರ ವರ್ಕೌಟ್ ಮತ್ತು ಆರೋಗ್ಯಕರ ಆಹಾರದ ಮಹತ್ವವನ್ನು ಅರಿತುಕೊಂಡು ನಿರಂತರ ವ್ಯಾಯಾಮ ಮಾಡುತ್ತಿದ್ದಾರೆ.

ಸಿಕಂದರ್ ಸೋಲು: ಅಭಿಮಾನಿಗಳ ಮಾತು ಕೇಳಲು ಒಪ್ಪಿದ ಸಲ್ಮಾನ್ ಖಾನ್

ಸೋಲಿನ ಸುಳಿಯಿಂದ ಹೊರಬರಲು ಸಲ್ಮಾನ್ ಖಾನ್ ಅವರು ದಾರಿ ಹುಡುಕುತ್ತಿದ್ದಾರೆ. ಹಾಗಾಗಿ ಅವರು ಅಭಿಮಾನಿಗಳನ್ನೇ ಭೇಟಿ ಮಾಡಿ ಸಲಹೆ ಕೇಳಿದ್ದಾರೆ. ಇನ್ಮುಂದೆ ಯಾವ ರೀತಿ ಸಿನಿಮಾ ಮಾಡುವುದು ಸೂಕ್ತ ಎಂಬ ವಿಚಾರವನ್ನು ಫ್ಯಾನ್ಸ್ ಜೊತೆ ಸಲ್ಮಾನ್ ಖಾನ್ ಚರ್ಚಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಬಜರಂಗಿ ಭಾಯಿಜಾನ್ 2’ ಚಿತ್ರಕ್ಕೆ ಕಥೆ ರೆಡಿ; ಸದ್ದಿಲ್ಲದೆ ನಡೆಯಿತು ಸಲ್ಮಾನ್-ವಿಜಯೇಂದ್ರ ಪ್ರಸಾದ್ ಭೇಟಿ

ಸಲ್ಮಾನ್ ಖಾನ್ ಮತ್ತು ವಿಜಯೇಂದ್ರ ಪ್ರಸಾದ್ ಅವರ ಇತ್ತೀಚಿನ ಭೇಟಿಯಿಂದ ಬಜರಂಗಿ ಭಾಯಿಜಾನ್ 2 ರ ಬಗ್ಗೆ ಉತ್ಸಾಹ ಹೆಚ್ಚಾಗಿದೆ. ವಿಜಯೇಂದ್ರ ಪ್ರಸಾದ್ ಮೊದಲ ಚಿತ್ರಕ್ಕೆ ಕಥೆ ಬರೆದಿದ್ದರು ಮತ್ತು ಈಗ ಸೀಕ್ವೆಲ್​ಗಾಗಿ ಕಥೆಯನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಸಲ್ಮಾನ್ ಖಾನ್ ಈ ಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದು ಖಚಿತವಾಗಿದೆ,

ಸಲ್ಮಾನ್ ಸಿನಿಮಾಗೆ ಚಿಲ್ಲರೆ ಗಳಿಕೆ; ಇನ್ನೂ ನೂರು ಕೋಟಿ ತಲುಪಿಲ್ಲ ‘ಸಿಕಂದರ್’ ಕಲೆಕ್ಷನ್

ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷೆಗಳನ್ನು ಮೀರುತ್ತಿಲ್ಲ. ರಿಲೀಸ್ ಆದ ಆರು ದಿನಗಳ ನಂತರವೂ 100 ಕೋಟಿ ರೂಪಾಯಿಗಳ ಗುರಿ ತಲುಪಲು ವಿಫಲವಾಗಿದೆ. ಚಿತ್ರದ ನಿರ್ದೇಶಕರ ಆಯ್ಕೆ ಮತ್ತು ಸ್ಕ್ರಿಪ್ಟ್‌ನಲ್ಲಿ ಸಲ್ಮಾನ್ ಖಾನ್ ಹೆಚ್ಚು ಗಮನ ಹರಿಸಬೇಕೆಂದು ಅಭಿಮಾನಿಗಳು ಸಲಹೆ ನೀಡಿದ್ದಾರೆ.

ಸಲ್ಮಾನ್ ಖಾನ್-ರಶ್ಮಿಕಾ ನಡುವಿನ 31 ವರ್ಷ ವಯಸ್ಸಿನ ಅಂತರ ಸಮರ್ಥಿಸಿಕೊಂಡ ಅಮೀಶಾ ಪಟೇಲ್

ಹಲವು ನೆಗೆಟಿವ್ ಕಾರಣಗಳಿಂದಾಗಿ ಸಲ್ಮಾನ್ ಖಾನ್ ಅವರ ‘ಸಿಕಂದರ್’ ಸಿನಿಮಾವನ್ನು ಜನರು ಟ್ರೋಲ್ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ಸಲ್ಮಾನ್ ಖಾನ್ ನಡುವೆ 31 ವರ್ಷಗಳ ವಯಸ್ಸಿನ ಅಂತರವಿದೆ ಎಂಬ ಕಾರಣಕ್ಕೆ ಕೆಲವರು ಟೀಕೆ ಮಾಡಿದ್ದಾರೆ. ಈ ಬಗ್ಗೆ ಬಾಲಿವುಡ್ ನಟಿ ಅಮೀಶಾ ಪಟೇಲ್ ಅವರು ಈಗ ಪ್ರತಿಕ್ರಿಯೆ ನೀಡಿದ್ದಾರೆ.

‘ಬಜರಂಗಿ ಭಾಯಿಜಾನ್’ ಆಫರ್ ಮೊದಲು ಹೋಗಿದ್ದು ಆಮಿರ್ ಬಳಿ; ಕಥೆ ಇಷ್ಟವಾದರೂ ಸಲ್ಲುಗೆ ಕೊಟ್ಟ ನಟ

ಬಜರಂಗಿ ಭಾಯಿಜಾನ್ ಚಿತ್ರದ ಕಥೆ ಮೊದಲು ಆಮೀರ್ ಖಾನ್ ಬಳಿ ಬಂದಿತ್ತು. ಆದರೆ, ಅವರು ಕಥೆ ತಮಗೆ ಹೊಂದುವುದಿಲ್ಲ ಎಂದು ತಿರಸ್ಕರಿಸಿ, ಸಲ್ಮಾನ್ ಖಾನ್ ಗೆ ಸೂಚಿಸಿದರು. ಸಲ್ಮಾನ್ ಖಾನ್ ಈ ಕಥೆಯನ್ನು ಒಪ್ಪಿಕೊಂಡು ಬಜರಂಗಿ ಭಾಯಿಜಾನ್ ಚಿತ್ರವನ್ನು ಒಂದು ದೊಡ್ಡ ಯಶಸ್ಸು ಮಾಡಿದರು.

‘ಸಿಕಂದರ್’ ಸಿನಿಮಾ ಲೀಕ್ ಮಾಡಿದ್ದು ಯಾರು? ಶಾರುಖ್ ಸಂಸ್ಥೆ ಮೇಲೆ ಅನುಮಾನ

ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಸಿನಿಮಾಗೆ ಸೋಲು ಉಂಟಾಗಿದೆ. ಚಿತ್ರದ ಸೋಲಿಗೆ ಪೈರಸಿ ಕೂಡ ಪ್ರಮುಖ ಕಾರಣ ಆಗಿದೆ. ಈ ಕೃತ್ಯದ ಹಿಂದಿರುವ ವ್ಯಕ್ತಿಗಳು ಯಾರು ಎಂದು ಹುಡುಕಾಟ ನಡೆಸಲಾಗುತ್ತಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮಾಡಿದವರಲ್ಲಿ ಯಾರೋ ಪೈರಸಿಗೆ ಕಾರಣ ಆಗಿದ್ದಾರೆ ಎಂಬ ಶಂಕೆ ಮೂಡಿದೆ.

Fact Check: ಸಲ್ಮಾನ್ ಖಾನ್ ಮನೆಯ ಮೇಲೆ ಗುಂಡಿನ ದಾಳಿ ಎಂದು ವಿಡಿಯೋ ವೈರಲ್

Salman Khan Sikandar Movie: ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಸಿಕಂದರ್ ಚಿತ್ರ ಬಿಡುಗಡೆಯಾದ ನಂತರ ಸಲ್ಮಾನ್ ಖಾನ್ ಮನೆಯ ಹೊರಗೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ. ವೈರಲ್ ಆಗುತ್ತಿರುವ ಈ ವಿಡಿಯೋ ಸಿರಿಯಾದ್ದಾಗಿದೆ.

ಒಂದಂಕಿ ತಲುಪಿದ ‘ಸಿಕಂದರ್’ ಕಲೆಕ್ಷನ್; ನನಗೆ ಬಾಲಿವುಡ್​ ಬೆಂಬಲ ಬೇಕಿದೆ ಎಂದ ಸಲ್ಮಾನ್ ಖಾನ್

Sikandar Box Office Collection: ಸಲ್ಮಾನ್ ಖಾನ್ ಅವರ ‘ಸಿಕಂದರ್’ ಚಿತ್ರದ ನಿರೀಕ್ಷೆಗಿಂತ ಕಡಿಮೆ ಗಳಿಕೆಯಿಂದಾಗಿ ಬಾಲಿವುಡ್‌ನಿಂದ ಬೆಂಬಲದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. ಈ ಚಿತ್ರದ ಗಳಿಕೆ ನಿರಾಶಾದಾಯಕವಾಗಿದ್ದು, ಸಲ್ಮಾನ್ ಖಾನ್ ಅವರು ಯಾವಾಗಲೂ ಬೆಂಬಲವನ್ನು ಕೇಳದಿದ್ದರೂ, ಈ ಬಾರಿ ಅವರಿಗೂ ಬೆಂಬಲ ಅಗತ್ಯವಿದೆ ಎಂದು ಒಪ್ಪಿಕೊಂಡಿದ್ದಾರೆ.

ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ