Salman Khan
ನಟ ಸಲ್ಮಾನ್ ಖಾನ್ ಅವರು ಹಿಂದಿ ಚಿತ್ರರಂಗದಲ್ಲಿ ಭಾರಿ ಬೇಡಿಕೆ ಹೊಂದಿದ್ದಾರೆ. ಭಾರತದ ಶ್ರೀಮಂತ ನಟರಲ್ಲಿ ಅವರು ಕೂಡ ಇದ್ದಾರೆ. ಅಬ್ದಲ್ ರಶೀದ್ ಸಲೀಂ ಸಲ್ಮಾನ್ ಖಾನ್ ಎಂಬುದು ಅವರ ಪೂರ್ಣ ಹೆಸರು. 1988ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು.
ಆರಂಭದಲ್ಲೇ ಅವರಿಗೆ ಯಶಸ್ಸು ಸಿಕ್ಕಿತು. ವೃತ್ತಿಜೀವನದಲ್ಲಿ ಅವರು ಏಳು-ಬೀಳುಗಳನ್ನು ಕಂಡಿದ್ದಾರೆ. ಅವರ ಸಿನಿಮಾಗಳು ನೂರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿವೆ. ಹಿಂದಿ ಚಿತ್ರರಂಗದ ಮಾಸ್ ಹೀರೋ ಆಗಿ ಅವರು ಗುರುತಿಸಿಕೊಂಡಿದ್ದಾರೆ. ‘ಮೈ ನೇ ಪ್ಯಾರ್ ಕಿಯಾ’, ‘ಸಾಜನ್’, ‘ಹಮ್ ಆಪ್ಕೆ ಹೈ ಕೌನ್’, ‘ದಬಂಗ್’, ‘ಬಜರಂಗಿ ಭಾಯಿಜಾನ್’, ‘ಏಕ್ ಥಾ ಟೈಗರ್’ ಮುಂತಾದವು ಸಲ್ಮಾನ್ ಖಾನ್ ನಟನೆಯ ಸೂಪರ್ ಹಿಟ್ ಸಿನಿಮಾಗಳು.
ಬಿಗ್ ಬಾಸ್ ನಿರೂಪಕನಾಗಿಯೂ ಅವರು ಫೇಮಸ್ ಆಗಿದ್ದಾರೆ. ನಿರ್ಮಾಪಕನಾಗಿ ಹಲವು ಸಿನಿಮಾಗಳಿಗೆ ಸಲ್ಮಾನ್ ಖಾನ್ ಬಂಡವಾಳ ಹೂಡಿದ್ದಾರೆ. ವೃತ್ತಿಜೀವನದ ರೀತಿಯ ಅವರ ಖಾಸಗಿ ಬದುಕು ಕೂಡ ಸುದ್ದಿ ಆಗುತ್ತದೆ. ಹಲವರನ್ನು ಸಲ್ಮಾನ್ ಖಾನ್ ಪ್ರೀತಿಸಿದ್ದರು. ಆದರೆ ಯಾರನ್ನೂ ಅವರು ಮದುವೆ ಆಗಲಿಲ್ಲ. ಅವರ ಜೀವನದಲ್ಲಿ ಸಾಕಷ್ಟು ವಿವಾದಗಳು ಕೂಡ ಆಗಿವೆ. ಗ್ಯಾಂಗ್ಸ್ಟರ್ಗಳಿಂದ ಅವರಿಗೆ ಜೀವ ಬೆದರಿಕೆಯೂ ಬಂದಿದೆ.
ಇನ್ನೂ ಹೆಚ್ಚು ಓದಿ‘ಕಾಲಾ ಹಿರಣ್’ ವಿವಾದ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ
ಸಲ್ಮಾನ್ ಖಾನ್ ಅವರ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ‘ಕಾಲಾ ಹಿರಣ್’ ಸಿನಿಮಾ ನಿರ್ಮಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಈ ವಿವಾದ ತೀವ್ರಗೊಂಡಿದೆ. ಈ ಚಿತ್ರದ ಟೀಸರ್ ಡಿಲೀಟ್ ಮಾಡಬೇಕು ಎಂದು ದೆಹಲಿ ಹೈಕೋರ್ಟ್ ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿ ನಿರ್ಮಾಪಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
- Madan Kumar
- Updated on: Aug 19, 2026
- 8:48 pm
‘ಬಿಗ್ ಬಾಸ್ 20’ ಟ್ರೇಲರ್: ಈ ಬಾರಿ ಸಲ್ಮಾನ್ ಖಾನ್ ಕೊಡ್ತಾರೆ ‘ಎಕ್ಸ್ಟ್ರಾ ಜೀವನ್ ದಾನ್’
ಬಿಗ್ ಬಾಸ್ ರಿಯಾಲಿಟಿ ಶೋ ಹೊಸ ಸೀಸನ್ ಆರಂಭಕ್ಕೆ ಸಕಲ ತಯಾರಿ ನಡೆದಿದೆ. ಪ್ರತಿ ಬಾರಿಯಂತೆ ಈ ಸಲ ಕೂಡ ಹೊಸ ಟ್ವಿಸ್ಟ್ ನೀಡಲಾಗುತ್ತಿದೆ. ಶೋ ನಿರೂಪಕ ಸಲ್ಮಾನ್ ಖಾನ್ ಅವರು ‘ಬಿಗ್ ಬಾಸ್ 20’ ಟ್ರೇಲರ್ನಲ್ಲಿ ಆ ಬಗ್ಗೆ ಸುಳಿವು ನೀಡಿದ್ದಾರೆ.
- Madan Kumar
- Updated on: Aug 12, 2026
- 8:43 pm
‘ಬೀಯಿಂಗ್ ಹ್ಯೂಮನ್’ ವಂಚನೆ ಪ್ರಕರಣ: ನಟ ಸಲ್ಮಾನ್ ಖಾನ್ಗೆ ಸಮನ್ಸ್ ಜಾರಿ
‘ಬೀಯಿಂಗ್ ಹ್ಯೂಮನ್’ ಆಭರಣದ ವ್ಯವಹಾರದಲ್ಲಿ ಸಲ್ಮಾನ್ ಖಾನ್ ಮೋಸ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂಡೀಗಢ ಕೋರ್ಟ್ ಸಮನ್ಸ್ ನೀಡಿದೆ. ಅಷ್ಟಕ್ಕೂ ಸಲ್ಮಾನ್ ಖಾನ್ ಮೇಲೆ ಕೋಟ್ಯಂತರ ರೂಪಾಯಿ ವಂಚನೆ ಆರೋಪ ಬಂದಿರುವುದು ಹೇಗೆ? ಇಲ್ಲಿದೆ ಉತ್ತರ..
- Madan Kumar
- Updated on: Aug 6, 2026
- 3:43 pm
ಸಲ್ಮಾನ್ ಖಾನ್ ಮನೆಯಲ್ಲಿ ಐಷಾರಾಮಿ ಜೀವನ ನಡೆಸಿದ್ದ ಪ್ರದೀಪ್ ರಾವತ್; ಹೊರ ಬಂದಿದ್ದೇಕೆ??
'ಗಜಿನಿ' ಖ್ಯಾತಿಯ ಹಿರಿಯ ನಟ ಪ್ರದೀಪ್ ರಾವತ್ ರಕ್ತದ ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ. ಸಲ್ಮಾನ್ ಖಾನ್ ಅವರೊಂದಿಗೆ ನಿಕಟ ಬಾಂಧವ್ಯ ಹೊಂದಿದ್ದ ಅವರು, ಆರಂಭಿಕ ದಿನಗಳಲ್ಲಿ ಸಲ್ಮಾನ್ ಮನೆಯಲ್ಲೇ ಉಳಿದುಕೊಂಡಿದ್ದ ದಿನಗಳನ್ನು ನೆನಪಿಸಿಕೊಂಡಿದ್ದರು. ನಟನ ನಿಧನಕ್ಕೆ ಸಲ್ಮಾನ್ ಖಾನ್ ಸೇರಿದಂತೆ ಬಾಲಿವುಡ್ ಗಣ್ಯರು ಕಂಬನಿ ಮಿಡಿದಿದ್ದಾರೆ.
- Shreelaxmi H
- Updated on: Aug 6, 2026
- 8:47 am
ವಿಪರೀತ ತೂಕ ಕಡಿಮೆ ಆಗಿದ್ದರ ಬಗ್ಗೆ ಮೌನ ಮುರಿದ ನಟ ಸಲ್ಮಾನ್ ಖಾನ್
ನಟ ಸಲ್ಮಾನ್ ಖಾನ್ ಅವರಿಗೆ ತೀವ್ರ ಅನಾರೋಗ್ಯ ಕಾಡುತ್ತಿರಬಹುದು ಎಂದು ಕೆಲವರು ಊಹಿಸಿದ್ದರು. ವಿಪರೀತವಾಗಿ ತೂಕ ಕಡಿಮೆ ಆಗಿದ್ದೇ ಈ ಅನುಮಾನಕ್ಕೆ ಕಾರಣ ಆಗಿತ್ತು. ತಾವು ತೂಕ ಕಳೆದುಕೊಂಡಿರುವ ಬಗ್ಗೆ ಸ್ವತಃ ಸಲ್ಮಾನ್ ಖಾನ್ ಅವರು ಈಗ ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..
- Madan Kumar
- Updated on: Aug 4, 2026
- 5:11 pm
‘70 ಜನ ಒಂದೇ ಟಾಯ್ಲೆಟ್ ಬಳಸಬೇಕಿತ್ತು’: ಜೈಲು ದಿನಗಳ ಕಷ್ಟ ನೆನೆದ ಸಲ್ಮಾನ್ ಖಾನ್
ನಟ ಸಲ್ಮಾನ್ ಖಾನ್ ಅವರು ‘ಅಲೈಯನ್ಸ್’ ಶೋಗೆ ಕಾಲಿಟ್ಟಿದ್ದಾರೆ. ಅಲ್ಲಿ ಅವರು ತಮ್ಮ ಜೈಲಿನ ದಿನಗಳ ಬಗ್ಗೆ ಮಾತನಾಡಿದ್ದಾರೆ. ಜೈಲಿನಲ್ಲಿ ತಾವು ಅನುಭವಿಸಿದ ಕಷ್ಟದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಈ ರಿಯಾಲಿಟಿ ಶೋನಲ್ಲಿ ಸಲ್ಮಾನ್ ಖಾನ್ ಸಹೋದರ ಸೊಹೈಲ್ ಖಾನ್ ಸ್ಪರ್ಧಿಸುತ್ತಿದ್ದಾರೆ. ಸಲ್ಮಾನ್ ಖಾನ್ ಅವರು ಅತಿಥಿಯಾಗಿ ಬಂದಿದ್ದಾರೆ.
- Madan Kumar
- Updated on: Aug 3, 2026
- 7:08 pm
ಸಂಜಯ್ ದತ್ನ ಗಟ್ಟಿಯಾಗಿ ತಬ್ಬಿಕೊಂಡು ಪ್ರೀತಿ ವ್ಯಕ್ತಪಡಿಸಿದ ಸಲ್ಮಾನ್ ಖಾನ್
ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ತಮ್ಮ ದಶಕಗಳ ಹಳೆಯ ಆಪ್ತ ಸ್ನೇಹಿತ ಸಂಜಯ್ ದತ್ ಅವರನ್ನು ಭೇಟಿಯಾಗಿ ಭಾವುಕರಾಗಿದ್ದಾರೆ. ಸಂಜು ಬಾಬಾ ಅವರನ್ನು ತಮ್ಮ ಹಿರಿಯ ಅಣ್ಣ ಎಂದು ಕರೆದಿರುವ ಸಲ್ಮಾನ್, ಪರಸ್ಪರ ಗಟ್ಟಿಯಾಗಿ ತಬ್ಬಿಕೊಂಡಿರುವ ಅಪರೂಪದ ಸುಂದರ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಇಂಟರ್ನೆಟ್ನಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.
- Shreelaxmi H
- Updated on: Aug 1, 2026
- 10:58 am
‘ಕಾಲಾ ಹಿರಣ್’ ಟೀಸರ್ ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ: ಸಲ್ಮಾನ್ ಖಾನ್ಗೆ ರಿಲೀಫ್
‘ಕಾಲಾ ಹಿರಣ್’ ಸಿನಿಮಾದ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಪರವಾಗಿ ನ್ಯಾಯಾಲಯ ಆದೇಶ ನೀಡಿದೆ. ನ್ಯಾಯಾಲಯದ ಆದೇಶದ ಅನುಸಾರ ಯೂಟ್ಯೂಬ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಿಂದ ‘ಕಾಲಾ ಹಿರಣ್’ ಸಿನಿಮಾದ ಟೀಸರ್, ಟ್ರೇಲರ್ ಮುಂತಾದ ಲಿಂಕ್ಗಳನ್ನು ತೆಗೆದುಹಾಕಬೇಕಿದೆ. ಆ ಬಗ್ಗೆ ಇಲ್ಲಿದೆ ವಿವರ..
- Madan Kumar
- Updated on: Jul 27, 2026
- 8:39 pm
‘ಯಾರು ಹೆದರುತ್ತಾರೋ ಅವರು ಸತ್ತಂತೆ’; ನಿಗೂಢಾರ್ಥದ ಪೋಸ್ಟ್ ಹಂಚಿಕೊಂಡ ಸಲ್ಮಾನ್ ಖಾನ್
ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶರ್ಟ್ಲೆಸ್ ಜಿಮ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಬೆಂಕಿ ಹಚ್ಚಿದ್ದಾರೆ. ವಿಮರ್ಶಕರು ಮತ್ತು ಟ್ರೋಲರ್ಗಳಿಗೆ 'ಶೋಲೆ' ಚಿತ್ರದ ಡೈಲಾಗ್ ಹೊಡೆಯುವ ಮೂಲಕ ಖಡಕ್ ಸಂದೇಶ ರವಾನಿಸಿದ್ದಾರೆ. ಭಾಯ್ಜಾನ್ ಲುಕ್ ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ.
- Rajesh Duggumane
- Updated on: Jul 25, 2026
- 8:29 am
‘ಮನೆಗೆ ವಾಪಸ್ ಹೋಗಿ’: ಮೋದಿ ಟ್ವೀಟ್ ಬಳಿಕ ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
ಪ್ರತಿಭಟನೆ ನಿಲ್ಲಿಸಿ ಮನೆಗೆ ಹಿಂದಿಗಿರುವಂತೆ ನಟ ಸಲ್ಮಾನ್ ಖಾನ್ ಅವರು ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. ಅಲ್ಲದೇ, ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಸೋನಮ್ ವಾಂಗ್ಚುಕ್ ಅವರಲ್ಲಿ ಸಲ್ಮಾನ್ ಖಾನ್ ಕೇಳಿಕೊಂಡಿದ್ದಾರೆ. ಒಂದು ದಿನ ಮುಂಚೆ ಸಲ್ಮಾನ್ ಖಾನ್ ಅವರು ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಬೆಂಬಲಿಸಿ ಪೋಸ್ಟ್ ಮಾಡಿದ್ದರು.
- Madan Kumar
- Updated on: Jul 23, 2026
- 10:06 pm
ಪೇಪರ್ ಲೀಕ್ನಿಂದ ಪಾಸ್ ಆಗ್ತಿದ್ದ ಸಲ್ಮಾನ್ ಖಾನ್; ಹಳೆಯ ಹೇಳಿಕೆ ವೈರಲ್
ನೀಟ್ ಪೇಪರ್ ಲೀಕ್ ಪ್ರಕರಣದ ವಿರುದ್ಧ ಸಿಜೆಪಿ (CJP) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ಸಲ್ಮಾನ್ ಖಾನ್ ಬೆಂಬಲ ಸೂಚಿಸಿದ್ದಾರೆ. ಪೇಪರ್ ಲೀಕ್ ಅತ್ಯಂತ ಗಂಭೀರ ಸಮಸ್ಯೆ ಎಂದು ಅವರು ಹೇಳಿದ್ದಾರೆ. ಜುಲೈ 20 ರ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಗಾಯಗೊಂಡಿದ್ದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಈ ಬೆಂಬಲದ ಬೆನ್ನಲ್ಲೇ ಸಲ್ಮಾನ್ ಖಾನ್ಗೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮುಖಭಂಗವಾಗಿದೆ. ಅವರ ಹಳೆಯ ವಿಡಿಯೋವೊಂದನ್ನು ನೆಟ್ಟಿಗರು ಈಗ ರೀ-ಶೇರ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.
- Rajesh Duggumane
- Updated on: Jul 23, 2026
- 10:47 am
ನೀಟ್ ಪೇಪರ್ ಲೀಕ್ ಪ್ರತಿಭಟನೆಗೆ ಸಲ್ಮಾನ್ ಖಾನ್ ಬೆಂಬಲ; ಹಿಂಸಾಚಾರಕ್ಕೆ ಸಲ್ಲು ಬೇಸರ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಬೆಂಬಲ ನೀಡಿದ್ದಾರೆ. ಹೋರಾಟ ಹಿಂಸಾರೂಪಕ್ಕೆ ತಿರುಗಿದ್ದಕ್ಕೆ ಬೇಸರ ವ್ಯಕ್ತಪಡಿಸಿರುವ ಸಲ್ಲು, ಈ ವಿದ್ಯಾರ್ಥಿ ಆಂದೋಲನಕ್ಕೆ ಯಾವುದೇ ರಾಜಕೀಯ ಬಣ್ಣ ಬಳಿಯದಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ವಿದ್ಯಾರ್ಥಿಗಳ ಪರ ನಿಲ್ಲಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.
- Rajesh Duggumane
- Updated on: Jul 23, 2026
- 7:03 am