AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan

Salman Khan

ನಟ ಸಲ್ಮಾನ್​ ಖಾನ್​ ಅವರು ಹಿಂದಿ ಚಿತ್ರರಂಗದಲ್ಲಿ ಭಾರಿ ಬೇಡಿಕೆ ಹೊಂದಿದ್ದಾರೆ. ಭಾರತದ ಶ್ರೀಮಂತ ನಟರಲ್ಲಿ ಅವರು ಕೂಡ ಇದ್ದಾರೆ. ಅಬ್ದಲ್​ ರಶೀದ್​ ಸಲೀಂ ಸಲ್ಮಾನ್​ ಖಾನ್​ ಎಂಬುದು ಅವರ ಪೂರ್ಣ ಹೆಸರು. 1988ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು.

ಆರಂಭದಲ್ಲೇ ಅವರಿಗೆ ಯಶಸ್ಸು ಸಿಕ್ಕಿತು. ವೃತ್ತಿಜೀವನದಲ್ಲಿ ಅವರು ಏಳು-ಬೀಳುಗಳನ್ನು ಕಂಡಿದ್ದಾರೆ. ಅವರ ಸಿನಿಮಾಗಳು ನೂರಾರು ಕೋಟಿ ರೂಪಾಯಿ ಬಿಸ್ನೆಸ್​ ಮಾಡಿವೆ. ಹಿಂದಿ ಚಿತ್ರರಂಗದ ಮಾಸ್​ ಹೀರೋ ಆಗಿ ಅವರು ಗುರುತಿಸಿಕೊಂಡಿದ್ದಾರೆ. ‘ಮೈ ನೇ ಪ್ಯಾರ್​ ಕಿಯಾ’, ‘ಸಾಜನ್​’, ‘ಹಮ್​ ಆಪ್ಕೆ ಹೈ ಕೌನ್​’, ‘ದಬಂಗ್​’, ‘ಬಜರಂಗಿ ಭಾಯಿಜಾನ್​’, ‘ಏಕ್​ ಥಾ ಟೈಗರ್​’ ಮುಂತಾದವು ಸಲ್ಮಾನ್​ ಖಾನ್​ ನಟನೆಯ ಸೂಪರ್​ ಹಿಟ್​ ಸಿನಿಮಾಗಳು.

ಬಿಗ್​ ಬಾಸ್​ ನಿರೂಪಕನಾಗಿಯೂ ಅವರು ಫೇಮಸ್​ ಆಗಿದ್ದಾರೆ. ನಿರ್ಮಾಪಕನಾಗಿ ಹಲವು ಸಿನಿಮಾಗಳಿಗೆ ಸಲ್ಮಾನ್​ ಖಾನ್​ ಬಂಡವಾಳ ಹೂಡಿದ್ದಾರೆ. ವೃತ್ತಿಜೀವನದ ರೀತಿಯ ಅವರ ಖಾಸಗಿ ಬದುಕು ಕೂಡ ಸುದ್ದಿ ಆಗುತ್ತದೆ. ಹಲವರನ್ನು ಸಲ್ಮಾನ್​ ಖಾನ್​ ಪ್ರೀತಿಸಿದ್ದರು. ಆದರೆ ಯಾರನ್ನೂ ಅವರು ಮದುವೆ ಆಗಲಿಲ್ಲ. ಅವರ ಜೀವನದಲ್ಲಿ ಸಾಕಷ್ಟು ವಿವಾದಗಳು ಕೂಡ ಆಗಿವೆ. ಗ್ಯಾಂಗ್​ಸ್ಟರ್​ಗಳಿಂದ ಅವರಿಗೆ ಜೀವ ಬೆದರಿಕೆಯೂ ಬಂದಿದೆ.

ಇನ್ನೂ ಹೆಚ್ಚು ಓದಿ

ಸಲ್ಮಾನ್ ಖಾನ್‌ಗೆ ಹಿನ್ನಡೆ: ‘ಕಾಲಾ ಹಿರಣ್’ ಚಿತ್ರದ ತುರ್ತು ನಿಷೇಧಕ್ಕೆ ದೆಹಲಿ ಹೈಕೋರ್ಟ್ ನಿರಾಕರಣೆ

ಸಲ್ಮಾನ್ ಖಾನ್ ಅವರು ‘ಕಾಲಾ ಹಿರಣ್’ ಚಿತ್ರತಂಡದ ವಿರುದ್ಧ ಕಾನೂನು ಸಮರಕ್ಕೆ ಇಳಿದಿದ್ದಾರೆ. ವಾದ ಆಲಿಸಿದ ನ್ಯಾಯಾಲಯವು ಸದ್ಯಕ್ಕೆ ಈ ಸಿನಿಮಾಗೆ ತಡೆ ನೀಡಲು ನಿರಾಕರಿಸಿದೆ. ಮೊದಲು ಚಿತ್ರತಂಡಕ್ಕೆ ಎಲ್ಲಾ ದಾಖಲೆಗಳನ್ನು ನೀಡಿ, ಅವರು ತಮ್ಮ ಪರ ವಾದ ಸಿದ್ಧಪಡಿಸಿಕೊಳ್ಳಲು ಅವಕಾಶ ಕೊಡಿ ಎಂದು ಸಲ್ಮಾನ್ ತಂಡಕ್ಕೆ ಕೋರ್ಟ್ ಸೂಚಿಸಿದೆ.

ಬಿಗ್ ಬಜೆಟ್ ಐತಿಹಾಸಿಕ ಸಿನಿಮಾಗಾಗಿ ಸಲ್ಮಾನ್ ಖಾನ್ ಜತೆ ಕೈ ಜೋಡಿಸಿದ ಫರ್ಹಾನ್ ಅಖ್ತರ್?

ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಅವರು ರಣವೀರ್ ಸಿಂಗ್ ಜೊತೆಗಿನ ‘ಡಾನ್ 3’ ವಿವಾದ ಬದಿಗಿಟ್ಟು ಮುಂದೆ ಸಾಗುತ್ತಿದ್ದಾರೆ. ಈಗ ಅವರು ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾದ ಮಾತುಕಥೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಐತಿಹಾಸಿಕ ಕಥಾಹಂದರ ಸಿನಿಮಾಗೆ ಅವರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ನಟ ಸಲ್ಮಾನ್ ಖಾನ್ ಹೊಸ ಲುಕ್ ವೈರಲ್: ‘ತೇರೆ ನಾಮ್ 2’ ಬರುತ್ತಿದೆ ಎಂದ ಅಭಿಮಾನಿಗಳು

ವೇದಿಕೆಯಲ್ಲಿ ನಟ ಸಲ್ಮಾನ್ ಖಾನ್ ಅವರ ಹೊಸ ಲುಕ್ ನೋಡಿ, ಪಕ್ಕದಲ್ಲಿದ್ದ ಕರೀನಾ ಕಪೂರ್ ಖಾನ್ ಅವರಿಗೂ ಅಚ್ಚರಿ ಆಯಿತು. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು, ಜನರು ಹಲವು ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅನೇಕರಿಗೆ ‘ತೇರೆ ನಾಮ್’ ಸಿನಿಮಾದ ಪಾತ್ರವೇ ನೆನಪಾಗಿದೆ.

‘ಕಾಲಾ ಹಿರಣ್’ ಚಿತ್ರತಂಡಕ್ಕೆ ದೆಹಲಿ ಹೈಕೋರ್ಟ್ ನೋಟಿಸ್: ಬಿಡುಗಡೆಗೆ ತಡೆ ಕೋರಿದ ಸಲ್ಮಾನ್ ಖಾನ್

ಕೃಷ್ಣಮೃಗ ಬೇಟೆ ಪ್ರಕರಣದ ಕುರಿತು ‘ಕಾರಾ ಹಿರಣ್’ ಸಿನಿಮಾ ಮಾಡಲಾಗಿದೆ. ಈ ಸಿನಿಮಾಗೆ ಸಲ್ಮಾನ್ ಖಾನ್ ತಕರಾರು ತೆಗೆದಿದ್ದಾರೆ. ದೆಹಲಿ ಹೈಕೋರ್ಟ್​​ನಲ್ಲಿ ಅವರು ಅರ್ಜಿ ಸಲ್ಲಿಸಿದ್ದಾರೆ. ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಎಂದು ಸಲ್ಮಾನ್ ಖಾನ್ ಕೋರಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ...

‘ಕಾಲಾ ಹಿರಣ್’ ಚಿತ್ರದ ತಡೆ ಕೋರಿ ಸಲ್ಮಾನ್ ಖಾನ್ ಅರ್ಜಿ: ದೆಹಲಿ ಹೈಕೋರ್ಟ್‌ನಲ್ಲಿ ಜೂನ್ 19ರಂದು ವಿಚಾರಣೆ

‘ಕಾಲಾ ಹಿರಣ್’ ಸಿನಿಮಾದ ವಿರುದ್ಧ ನಟ ಸಲ್ಮಾನ್ ಖಾನ್ ಅವರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಈ ಸಿನಿಮಾದ ಟೀಸರ್ ಬಿಡುಗಡೆ ಆದ ಬಳಿಕ ವಿವಾದ ಹೆಚ್ಚಾಗಿದೆ. ಸಲ್ಮಾನ್ ಖಾನ್ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ಜೂನ್ 19ರಂದು ಅವರ ಅರ್ಜಿಯ ವಿಚಾರಣೆ ನಡೆಯಲಿದೆ.

‘ಕಾಲಾ ಹಿರಣ್’ ಟೀಸರ್: ವಿವಾದಿತ ಸಿನಿಮಾದಲ್ಲಿ ಸಲ್ಮಾನ್ ಖಾನ್ ರೀತಿಯೇ ಕಾಣುವ ನಟ

‘ಕಾಲಾ ಹಿರಣ್’ ಸಿನಿಮಾದ ವಿವಾದ ಜೋರಾಗಿದೆ. ‘ಇದು ಯಾವುದೇ ಬಯೋಪಿಕ್ ಅಲ್ಲ, ಇದೊಂದು ಕಲ್ಪಿತ ಚಿತ್ರ’ ಎಂದು ನಿರ್ಮಾಪಕ ಅಮಿತ್ ಜಾನಿ ವಾದಿಸುತ್ತಿದ್ದಾರೆ. ಆದರೆ ‘ಕಾಲಾ ಹಿರಣ್’ ಚಿತ್ರದ ಟೀಸರ್ ನೋಡಿದರೆ ಇದು ನೇರವಾಗಿ ನಟ ಸಲ್ಮಾನ್ ಖಾನ್ ಅವರಿಗೆ ಸಂಬಂಧಿಸಿದ ಕಥೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ.

ಸೆಪ್ಟೆಂಬರ್ 21ರಿಂದ ‘ಬಿಗ್ ಬಾಸ್ 20’ ಆರಂಭ: ಈ ಬಾರಿಯೂ ಸಲ್ಮಾನ್ ಖಾನ್ ನಿರೂಪಣೆ

ನಟ ಸಲ್ಮಾನ್ ಖಾನ್ ಅವರು ಹಿಂದಿ ‘ಬಿಗ್ ಬಾಸ್’ 20ನೇ ಸೀಸನ್ ನಡೆಸಿಕೊಡಲು ಸಜ್ಜಾಗಿದ್ದಾರೆ. ಸಿನಿಮಾ ಕೆಲಸಗಳನ್ನು ಬೇಗ ಮುಗಿಸಿ, ಬಿಗ್ ಬಾಸ್ ನಿರೂಪಣೆಗೆ ಅವರು ಸಮಯ ಮಾಡಿಕೊಳ್ಳಲಿದ್ದಾರೆ. 20ನೇ ಸೀಸನ್ ಆದ್ದರಿಂದ ಹೆಚ್ಚು ನಿರೀಕ್ಷೆ ಇದೆ. ಯಾವಾಗ ಶೋ ಆರಂಭ ಆಗಲಿದೆ ಎಂಬ ಬಗ್ಗೆ ಮಾಹಿತಿ ಕೇಳಿಬಂದಿದೆ.

370 ರೂ. ಬಿರಿಯಾನಿ ವಿವಾದ: ಕಾಮಿಡಿಯನ್ ಪ್ರಣೀತ್‌ಗೆ ಮೊದಲೇ ವಾರ್ನಿಂಗ್ ನೀಡಿದ್ದ ಸಲ್ಮಾನ್ ಖಾನ್

370 Rupees Biryani Controversy: ಪ್ರಣೀತ್ ಮೋರೆ ಕಾಮಿಡಿ ಶೋನಲ್ಲಿ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಲಾಗಿದೆ. ಆ ವಿಡಿಯೋಗಳು ವೈರಲ್ ಆದ ಬಳಿಕ ಜನರು ಕ್ಲಾಸ್ ತೆಗೆದುಕೊಂಡಿದ್ದಾರೆ. ನಟ ಸಲ್ಮಾನ್ ಖಾನ್ ಅವರು ಒಂದು ವರ್ಷದ ಹಿಂದೆಯೇ ಪ್ರಣೀತ್ ಮೋರೆಗೆ ಖಡಕ್ ಎಚ್ಚರಿಕೆ ನೀಡಿದ್ದರು. ಆ ಬಗ್ಗೆ ಇಲ್ಲಿದೆ ಮಾಹಿತಿ..

ಗೆಳತಿ ಸಾವಿನ ನೋವಲ್ಲಿ ಸಲ್ಮಾನ್ ಖಾನ್; ಅಂತಿಮ ನಮನ ಸಲ್ಲಿಸಿದ ನಟ

ಬಾಲಿವುಡ್ ನಟ ಸಲ್ಮಾನ್ ಖಾನ್ ತಮ್ಮ ಆಪ್ತ ಸ್ನೇಹಿತೆ ಹಾಗೂ ಕೇಶ ವಿನ್ಯಾಸಕಿ ಕುಮುದ್ ರಾಣೆ ನಿಧನದಿಂದ ತೀವ್ರ ದುಃಖಿತರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕುಮುದ್‌ಗೆ ಸಲ್ಮಾನ್ ಖಾನ್ ಕುಟುಂಬದವರು ಅಂತಿಮ ನಮನ ಸಲ್ಲಿಸಿದ್ದಾರೆ. ಸಲ್ಮಾನ್ ಮತ್ತು ಸೊಹೈಲ್ ಪುತ್ರ ನಿರ್ವಾಣ ಭಾವುಕರಾಗಿ ಅಳುತ್ತಿರುವ ವಿಡಿಯೋಗಳು ವೈರಲ್ ಆಗಿದ್ದು, ಸಲ್ಮಾನ್ ಅವರ ದುಃಖ ಸ್ಪಷ್ಟವಾಗಿ ಕಾಣಿಸುತ್ತಿದೆ. ಈ ಘಟನೆ ಸಲ್ಮಾನ್ ಕುಟುಂಬಕ್ಕೆ ದೊಡ್ಡ ಆಘಾತ ನೀಡಿದೆ.

ಕ್ಯಾಮೆರಾ ಎದುರಲ್ಲೇ ನೋಟಿಸ್ ಹರಿದು ಸಲ್ಮಾನ್ ಖಾನ್ಗೆ ಸವಾಲು ಹಾಕಿದ ನಿರ್ಮಾಪಕ

‘ಕಾಲಾ ಹಿರನ್’ ಸಿನಿಮಾ ತಂಡ ಮತ್ತು ಸಲ್ಮಾನ್ ಖಾನ್ ನಡುವಿನ ಕಿರಿಕ್ ಮತ್ತೊಂದು ಹಂತಕ್ಕೆ ಹೋಗಿದೆ. ಸಲ್ಮಾನ್ ಖಾನ್ ಅಭಿಮಾನಿಗಳು ತಮಗೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ನಿರ್ಮಾಪಕ ಅಮಿತ್ ಜಾನಿ ಹೇಳಿದ್ದಾರೆ. ಅಲ್ಲದೇ, ಸಲ್ಮಾನ್ ಖಾನ್ ಅವರ ಟೀಮ್ ಕಳಿಸಿದ ಲೀಗಲ್ ನೋಟಿಸ್ ಅನ್ನು ಅಮಿತ್ ಜಾನಿ ಅವರು ಹರಿದು ಹಾಕಿದ್ದಾರೆ.

ಕೃಷ್ಣಮೃಗ ಬೇಟೆ ಕುರಿತ ‘ಕಾಲಾ ಹಿರನ್’ ಸಿನಿಮಾ ಸಲ್ಮಾನ್ ಖಾನ್ ಬಯೋಪಿಕ್ ಅಲ್ಲ: ನಿರ್ಮಾಪಕರ ಸ್ಪಷ್ಟನೆ

‘ಕಾಲಾ ಹಿರನ್’ ಸಿನಿಮಾ ಮೇಲೆ ಸಲ್ಮಾನ್ ಖಾನ್ ಅವರಿಗೆ ಅಸಮಾಧಾನ ಇದೆ. ಈ ಚಿತ್ರದ ಟೀಸರ್ ಬಿಡುಗಡೆಯನ್ನು ತಕ್ಷಣವೇ ತಡೆಹಿಡಿಯಬೇಕು ಮತ್ತು ಈಗಾಗಲೇ ಬಿಡುಗಡೆ ಮಾಡಲಾಗಿರುವ ಪೋಸ್ಟರ್‌ಗಳನ್ನು ಹಿಂಪಡೆಯಬೇಕು ಎಂದು ಸಲ್ಮಾನ್ ಖಾನ್ ಅವರ ತಂಡವು ನೋಟಿಸ್‌ ಕಳಿಸಿದೆ. ಅದಕ್ಕೆ ಚಿತ್ರದ ನಿರ್ಮಾಪಕ ಅಮಿತ್ ಜಾನಿ ಪ್ರತಿಕ್ರಿಯಿಸಿದ್ದಾರೆ.

ಕೃಷ್ಣಮೃಗ ಬೇಟೆ ಕೇಸ್ ಕುರಿತು ಸಿನಿಮಾ: ಚಿತ್ರತಂಡಕ್ಕೆ ನೋಟಿಸ್ ಕಳಿಸಿದ ಸಲ್ಮಾನ್ ಖಾನ್

‘ಕಾಲಾ ಹಿರನ್’ ಚಿತ್ರವು ಸಲ್ಮಾನ್ ಖಾನ್ ಅವರ ವರ್ಚಸ್ಸು ಮತ್ತು ವೃತ್ತಿಪರ ಗೌರವಕ್ಕೆ ಧಕ್ಕೆ ತರುವಂತಹ ಸುಳ್ಳು ಹಾಗೂ ತಪ್ಪುದಾರಿಗೆಳೆಯುವ ಅಂಶಗಳನ್ನು ಒಳಗೊಂಡಿದೆ. ಇದು ಸಂಪೂರ್ಣವಾಗಿ ಮಾನಹಾನಿಕರವಾಗಿದೆ ಮತ್ತು ನಟನ ಇಮೇಜ್ ಬಳಸಿಕೊಂಡು ವಿವಾದ ಸೃಷ್ಟಿಸುವ ಪ್ರಯತ್ನವಾಗಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ