AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan

Salman Khan

ನಟ ಸಲ್ಮಾನ್​ ಖಾನ್​ ಅವರು ಹಿಂದಿ ಚಿತ್ರರಂಗದಲ್ಲಿ ಭಾರಿ ಬೇಡಿಕೆ ಹೊಂದಿದ್ದಾರೆ. ಭಾರತದ ಶ್ರೀಮಂತ ನಟರಲ್ಲಿ ಅವರು ಕೂಡ ಇದ್ದಾರೆ. ಅಬ್ದಲ್​ ರಶೀದ್​ ಸಲೀಂ ಸಲ್ಮಾನ್​ ಖಾನ್​ ಎಂಬುದು ಅವರ ಪೂರ್ಣ ಹೆಸರು. 1988ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು.

ಆರಂಭದಲ್ಲೇ ಅವರಿಗೆ ಯಶಸ್ಸು ಸಿಕ್ಕಿತು. ವೃತ್ತಿಜೀವನದಲ್ಲಿ ಅವರು ಏಳು-ಬೀಳುಗಳನ್ನು ಕಂಡಿದ್ದಾರೆ. ಅವರ ಸಿನಿಮಾಗಳು ನೂರಾರು ಕೋಟಿ ರೂಪಾಯಿ ಬಿಸ್ನೆಸ್​ ಮಾಡಿವೆ. ಹಿಂದಿ ಚಿತ್ರರಂಗದ ಮಾಸ್​ ಹೀರೋ ಆಗಿ ಅವರು ಗುರುತಿಸಿಕೊಂಡಿದ್ದಾರೆ. ‘ಮೈ ನೇ ಪ್ಯಾರ್​ ಕಿಯಾ’, ‘ಸಾಜನ್​’, ‘ಹಮ್​ ಆಪ್ಕೆ ಹೈ ಕೌನ್​’, ‘ದಬಂಗ್​’, ‘ಬಜರಂಗಿ ಭಾಯಿಜಾನ್​’, ‘ಏಕ್​ ಥಾ ಟೈಗರ್​’ ಮುಂತಾದವು ಸಲ್ಮಾನ್​ ಖಾನ್​ ನಟನೆಯ ಸೂಪರ್​ ಹಿಟ್​ ಸಿನಿಮಾಗಳು.

ಬಿಗ್​ ಬಾಸ್​ ನಿರೂಪಕನಾಗಿಯೂ ಅವರು ಫೇಮಸ್​ ಆಗಿದ್ದಾರೆ. ನಿರ್ಮಾಪಕನಾಗಿ ಹಲವು ಸಿನಿಮಾಗಳಿಗೆ ಸಲ್ಮಾನ್​ ಖಾನ್​ ಬಂಡವಾಳ ಹೂಡಿದ್ದಾರೆ. ವೃತ್ತಿಜೀವನದ ರೀತಿಯ ಅವರ ಖಾಸಗಿ ಬದುಕು ಕೂಡ ಸುದ್ದಿ ಆಗುತ್ತದೆ. ಹಲವರನ್ನು ಸಲ್ಮಾನ್​ ಖಾನ್​ ಪ್ರೀತಿಸಿದ್ದರು. ಆದರೆ ಯಾರನ್ನೂ ಅವರು ಮದುವೆ ಆಗಲಿಲ್ಲ. ಅವರ ಜೀವನದಲ್ಲಿ ಸಾಕಷ್ಟು ವಿವಾದಗಳು ಕೂಡ ಆಗಿವೆ. ಗ್ಯಾಂಗ್​ಸ್ಟರ್​ಗಳಿಂದ ಅವರಿಗೆ ಜೀವ ಬೆದರಿಕೆಯೂ ಬಂದಿದೆ.

ಇನ್ನೂ ಹೆಚ್ಚು ಓದಿ

ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್

ಸಲೀಂ ಖಾನ್ ಅವರು ತಮ್ಮ ನಿವಾಸದ ಮುಂದೆ ನೆರೆದಿದ್ದ ಬೃಹತ್ ಜನಸಮೂಹದತ್ತ ಕೈಬೀಸುವ ಮೂಲಕ ಈದ್ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಈ ಸಂಭ್ರಮದ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟ ಸಲ್ಮಾನ್ ಖಾನ್, ‘ಈದ್ ಮುಬಾರಕ್. ನಿಮ್ಮೆಲ್ಲರ ಹಾರೈಕೆಗಳಿಗೆ ಧನ್ಯವಾದಗಳು. ತಂದೆ ಮನೆಗೆ ಮರಳಿದ್ದಾರೆ, ಎಲ್ಲರಿಗೂ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.

ತಿಂಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಲ್ಲು ತಂದೆ ಸಲೀಂ ಖಾನ್

ಸಲ್ಮಾನ್ ಖಾನ್ ತಂದೆ, ಹಿರಿಯ ಕಥೆಗಾರ ಸಲೀಮ್ ಖಾನ್ ಅವರು ಮಿದುಳಿನಲ್ಲಿ ಆದ ರಕ್ತಸ್ರಾವದಿಂದ ಆಸ್ಪತ್ರೆ ಸೇರಿದ್ದರು. ಈಗ ಒಂದು ತಿಂಗಳ ಬಳಿಕ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. 90ರ ವಯಸ್ಸಿನಲ್ಲಿ ಅವರ ಆರೋಗ್ಯ ಸುಧಾರಿಸಿದ್ದು, ಅಭಿಮಾನಿಗಳು ಹಾಗೂ ಕುಟುಂಬ ನಿಟ್ಟುಸಿರು ಬಿಟ್ಟಿದೆ. ಶೋಲೆ, ದೀವಾರ್ ಚಿತ್ರಗಳಿಗೆ ಕಥೆ ಬರೆದಿದ್ದ ಸಲೀಮ್ ಖಾನ್, ಎರಡು ಕನ್ನಡ ಸಿನಿಮಾಗಳಿಗೂ ಸಹ ಕಥೆ ನೀಡಿದ್ದರು.

‘ಬ್ಯಾಟಲ್ ಆಫ್ ಗಲ್ವಾನ್’ ಶೀರ್ಷಿಕೆ ಬದಲು: ಸಲ್ಮಾನ್ ಖಾನ್ ಚಿತ್ರಕ್ಕೆ ಈಗ ‘ಮಾತೃಭೂಮಿ’ ಟೈಟಲ್

ಸಲ್ಮಾನ್ ಖಾನ್ ನಟನೆಯ ‘ಬ್ಯಾಟಲ್ ಆಫ್ ಗಲ್ವಾನ್’ ಚಿತ್ರದ ಶೀರ್ಷಿಕೆಯನ್ನು ಏಕಾಏಕಿ ಬದಲಾಯಿಸಲಾಗಿದೆ. ಈ ಚಿತ್ರಕ್ಕೆ ‘ಮಾತೃಭೂಮಿ’ ಎಂದು ಹೆಸರು ಇಡಲಾಗಿದೆ. ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಹೆಸರು ಬದಲಾವಣೆ ಮಾತ್ರವಲ್ಲದೇ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆಯೂ ಜನರಿಗೆ ಗೊಂದಲ ಹೆಚ್ಚಾಗಿದೆ.

ಸಲ್ಮಾನ್ ಖಾನ್ ಚಿತ್ರಕ್ಕೆ ಸಮಂತಾ ಎಂಟ್ರಿ? ರಾಜ್ ಮತ್ತು ಡಿಕೆ ಸಿನಿಮಾಗೆ ಹೆಚ್ಚಿದ ಹೈಪ್

ಸಮಂತಾ, ಸಲ್ಮಾನ್ ಖಾನ್, ರಾಜ್ ಮತ್ತು ಡಿಕೆ ಜೊತೆಯಾಗಿ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಘಟಾನುಘಟಿಗಳು ಒಂದಾದರೆ ಅಭಿಮಾನಿಗಳಿಗೆ ಖಂಡಿತವಾಗಿಯೂ ಭರ್ಜರಿ ಮನರಂಜನೆ ಸಿಗಲಿದೆ. ಸೂಪರ್ ಹೀರೋ ಕಥಾಹಂದರ ಇರುವ ಸಿನಿಮಾದ ಬಗ್ಗೆ ಮಾತುಕಥೆ ನಡೆಯುತ್ತಿದ್ದು, ಆ ಬಗ್ಗೆ ಇಲ್ಲಿದೆ ಮಾಹಿತಿ..

ಸಲ್ಲು ತಂದೆ ಆರೋಗ್ಯ ಸ್ಥಿತಿ ಗಂಭೀರ? ಮೆದುಳು ಭಾಗದಲ್ಲಿ ಸರ್ಜರಿ

ಸಲ್ಮಾನ್ ಖಾನ್ ತಂದೆ, ಹಿರಿಯ ಕಥೆ ಬರಹಗಾರ ಸಲೀಂ ಖಾನ್ ರಕ್ತದೊತ್ತಡ ಏರಿಕೆಯಿಂದಾಗಿ ಮೆದುಳಿನ ಆಂತರಿಕ ರಕ್ತಸ್ರಾವದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಲ್ಮಾನ್ ಸೇರಿದಂತೆ ಕುಟುಂಬದ ಸದಸ್ಯರು ಮತ್ತು ಸ್ನೇಹಿತರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಹೇಗಿದೆ ಸಲೀಂ ಖಾನ್ ಆರೋಗ್ಯ ಸ್ಥಿತಿ? ಸಲ್ಮಾನ್ ಖಾನ್ ತಂದೆಗೆ ಐಸಿಯುನಲ್ಲಿ ಚಿಕಿತ್ಸೆ

ಸಲೀಂ ಖಾನ್ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪುತ್ರ ಸಲ್ಮಾನ್ ಖಾನ್ ಅವರು ಕೂಡಲೇ ಎಲ್ಲ ಕೆಲಸಗಳನ್ನು ಬಿಟ್ಟು ಆಸ್ಪತ್ರೆಗೆ ಬಂದಿದ್ದಾರೆ. ಕುಟುಂಬದವರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಸಲೀಂ ಖಾನ್ ಅವರಿಗೆ ಈಗ 90 ವರ್ಷ ವಯಸ್ಸು.

ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಲೀಮ್ ಖಾನ್; ಆಸ್ಪತ್ರೆಗೆ ದೌಡಾಯಿಸಿದ ಸಲ್ಮಾನ್ ಖಾನ್

ಹಿರಿಯ ಬರಹಗಾರ ಸಲೀಮ್ ಖಾನ್ ಅವರು ಅನಾರೋಗ್ಯದಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 90 ವರ್ಷದ ಸಲೀಮ್ ಖಾನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಲ್ಮಾನ್ ಖಾನ್ ತಕ್ಷಣ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಸಲೀಮ್ ಖಾನ್ ಆರೋಗ್ಯದ ಬಗ್ಗೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದು, ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.

ಸಲ್ಮಾನ್ ಶ್ರೇಷ್ಠ,ಉತ್ತಮ ಎಂದು ಕೊಂಡಾಡಿದ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್

ಇತ್ತೀಚೆಗೆ ನಡೆದ ಆರ್​​ಎಸ್​​ಎಸ್​​ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಟ ಸಲ್ಮಾನ್ ಖಾನ್ ಭಾಗವಹಿಸಿದ್ದರು. ಈ ವೇಳೆ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸಲ್ಮಾನ್ ಖಾನ್ ಅವರನ್ನು ಹೊಗಳಿದರು. ಅವರ ಈ ಮಾತು ವೈರಲ್ ಆಗಿದ್ದು, ಅನೇಕರು ಪ್ರತಿಕ್ರಿಯಿಸಿದ್ದಾರೆ. ಅಕ್ಷಯ್ ಕುಮಾರ್, ಕರಣ್ ಜೋಹರ್ ಸೇರಿದಂತೆ ಇಡೀ ಬಾಲಿವುಡ್ ಈ ಕಾರ್ಯಕ್ರಮದಲ್ಲಿ ಹಾಜರಿತ್ತು.

ಸ್ಯಾಂಡ್​​ವಿಚ್​ ಆಗೋದನ್ನು ತಪ್ಪಿಸಿಕೊಳ್ಳಲು ನಿರ್ಧರಿಸಿದ ಸಲ್ಮಾನ್ ಖಾನ್

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್‌ಗೆ ಈಗ ಮೊದಲಿನ ಬೇಡಿಕೆಯಿಲ್ಲ. ಅವರ 'ಬ್ಯಾಟಲ್ ಆಫ್ ಗಲ್ವಾನ್' ಸಿನಿಮಾ ಹಲವು ದೊಡ್ಡ ಚಿತ್ರಗಳಾದ 'ಟಾಕ್ಸಿಕ್', 'ಧುರಂಧರ್ 2', 'ಪೆದ್ದಿ' ಹಾಗೂ 'ಕೆಡಿ' ಜೊತೆಗಿನ ಬಾಕ್ಸ್ ಆಫೀಸ್ ಕ್ಲ್ಯಾಶ್ ತಪ್ಪಿಸಲು ಮುಂದೂಡಲ್ಪಟ್ಟಿದೆ. ಬಾಲಿಶ ಸ್ಕ್ರಿಪ್ಟ್‌ಗಳ ಆಯ್ಕೆ ಹಾಗೂ ಸ್ಪರ್ಧೆಯಿಂದ ವೃತ್ತಿಜೀವನ ಡಲ್ ಆಗಿದೆ.

ಪ್ರೇಮಿಗಳಿಗಾಗಿ ಮತ್ತೆ ರಿಲೀಸ್ ಆಗುತ್ತಿದೆ ಸಲ್ಮಾನ್ ಖಾನ್ ಸಿನಿಮಾ ‘ತೇರೆ ನಾಮ್’

‘ತೇರೆ ನಾಮ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರು ಅತ್ಯುತ್ತಮ ನಟನೆಯಿಂದ ಗಮನ ಸೆಳೆದಿದ್ದರು. 2003ರ ಆಗಸ್ಟ್ 15ರಂದು ಈ ಚಿತ್ರ ಬಿಡುಗಡೆ ಆಗಿ ಅಭಿಮಾನಿಗಳ ಮೆಚ್ಚುಗೆ ಪಡೆದುಕೊಂಡಿತ್ತು. 23 ವರ್ಷಗಳ ಬಳಿಕ ‘ತೇರೆ ನಾಮ್’ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್? ವೈರಲ್ ಆಗಿದೆ ಫೋಟೋ

‘ಧುರಂಧರ್’ ಕಥೆಯಲ್ಲಿ ಪ್ರತಿ ಪಾತ್ರಕ್ಕೂ ಮಹತ್ವ ಇದೆ. ಬಾಲಿವುಡ್​​ನ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾರ್ಚ್ 19ರಂದು ರಿಲೀಸ್ ಆಗಲಿರುವ ‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅತಿಥಿ ಪಾತ್ರ ಮಾಡಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. ಇಂಟರ್​​ನೆಟ್​ನಲ್ಲಿ ಒಂದು ಫೋಟೋ ವೈರಲ್ ಆಗಿದ್ದು, ಅದರ ಬಗ್ಗೆ ಸಲ್ಮಾನ್ ಖಾನ್ ಫ್ಯಾನ್ಸ್ ಮಾತನಾಡುತ್ತಿದ್ದಾರೆ.

ಅರಿಜಿತ್ ಚಿತ್ರರಂಗ ತೊರೆಯಲು ಸಲ್ಮಾನ್ ಖಾನ್ ಕಾರಣ?

ಗಾಯಕ ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿ, ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದ್ದಾರೆ. ಅವರು ಸಿನಿಮಾಗಳಲ್ಲಿ ಹಾಡುವುದನ್ನು ನಿಲ್ಲಿಸಿದ್ದರೂ, ಸಂಗೀತ ಕೆಲಸ ಮುಂದುವರಿಸಲಿದ್ದಾರೆ. ಈ ನಿರ್ಧಾರಕ್ಕೆ ಸಲ್ಮಾನ್ ಖಾನ್ ಅವರೊಂದಿಗಿನ ಹಳೆಯ ವಿವಾದವೇ ಕಾರಣವೆಂಬ ಪ್ರಶ್ನೆ ವ್ಯಾಪಕವಾಗಿ ಕೇಳಿಬರುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ 'ಮಾತೃಭೂಮಿ' ಹಾಡು ಅವರ ಕೊನೆಯ ಬಾಲಿವುಡ್ ಹಾಡಾಗಿರಬಹುದು ಎಂದು ಊಹಿಸಲಾಗಿದೆ.

ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ