AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan

Salman Khan

ನಟ ಸಲ್ಮಾನ್​ ಖಾನ್​ ಅವರು ಹಿಂದಿ ಚಿತ್ರರಂಗದಲ್ಲಿ ಭಾರಿ ಬೇಡಿಕೆ ಹೊಂದಿದ್ದಾರೆ. ಭಾರತದ ಶ್ರೀಮಂತ ನಟರಲ್ಲಿ ಅವರು ಕೂಡ ಇದ್ದಾರೆ. ಅಬ್ದಲ್​ ರಶೀದ್​ ಸಲೀಂ ಸಲ್ಮಾನ್​ ಖಾನ್​ ಎಂಬುದು ಅವರ ಪೂರ್ಣ ಹೆಸರು. 1988ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು.

ಆರಂಭದಲ್ಲೇ ಅವರಿಗೆ ಯಶಸ್ಸು ಸಿಕ್ಕಿತು. ವೃತ್ತಿಜೀವನದಲ್ಲಿ ಅವರು ಏಳು-ಬೀಳುಗಳನ್ನು ಕಂಡಿದ್ದಾರೆ. ಅವರ ಸಿನಿಮಾಗಳು ನೂರಾರು ಕೋಟಿ ರೂಪಾಯಿ ಬಿಸ್ನೆಸ್​ ಮಾಡಿವೆ. ಹಿಂದಿ ಚಿತ್ರರಂಗದ ಮಾಸ್​ ಹೀರೋ ಆಗಿ ಅವರು ಗುರುತಿಸಿಕೊಂಡಿದ್ದಾರೆ. ‘ಮೈ ನೇ ಪ್ಯಾರ್​ ಕಿಯಾ’, ‘ಸಾಜನ್​’, ‘ಹಮ್​ ಆಪ್ಕೆ ಹೈ ಕೌನ್​’, ‘ದಬಂಗ್​’, ‘ಬಜರಂಗಿ ಭಾಯಿಜಾನ್​’, ‘ಏಕ್​ ಥಾ ಟೈಗರ್​’ ಮುಂತಾದವು ಸಲ್ಮಾನ್​ ಖಾನ್​ ನಟನೆಯ ಸೂಪರ್​ ಹಿಟ್​ ಸಿನಿಮಾಗಳು.

ಬಿಗ್​ ಬಾಸ್​ ನಿರೂಪಕನಾಗಿಯೂ ಅವರು ಫೇಮಸ್​ ಆಗಿದ್ದಾರೆ. ನಿರ್ಮಾಪಕನಾಗಿ ಹಲವು ಸಿನಿಮಾಗಳಿಗೆ ಸಲ್ಮಾನ್​ ಖಾನ್​ ಬಂಡವಾಳ ಹೂಡಿದ್ದಾರೆ. ವೃತ್ತಿಜೀವನದ ರೀತಿಯ ಅವರ ಖಾಸಗಿ ಬದುಕು ಕೂಡ ಸುದ್ದಿ ಆಗುತ್ತದೆ. ಹಲವರನ್ನು ಸಲ್ಮಾನ್​ ಖಾನ್​ ಪ್ರೀತಿಸಿದ್ದರು. ಆದರೆ ಯಾರನ್ನೂ ಅವರು ಮದುವೆ ಆಗಲಿಲ್ಲ. ಅವರ ಜೀವನದಲ್ಲಿ ಸಾಕಷ್ಟು ವಿವಾದಗಳು ಕೂಡ ಆಗಿವೆ. ಗ್ಯಾಂಗ್​ಸ್ಟರ್​ಗಳಿಂದ ಅವರಿಗೆ ಜೀವ ಬೆದರಿಕೆಯೂ ಬಂದಿದೆ.

ಇನ್ನೂ ಹೆಚ್ಚು ಓದಿ

ಸಲ್ಲು ತಂದೆ ಆರೋಗ್ಯ ಸ್ಥಿತಿ ಗಂಭೀರ? ಮೆದುಳು ಭಾಗದಲ್ಲಿ ಸರ್ಜರಿ

ಸಲ್ಮಾನ್ ಖಾನ್ ತಂದೆ, ಹಿರಿಯ ಕಥೆ ಬರಹಗಾರ ಸಲೀಂ ಖಾನ್ ರಕ್ತದೊತ್ತಡ ಏರಿಕೆಯಿಂದಾಗಿ ಮೆದುಳಿನ ಆಂತರಿಕ ರಕ್ತಸ್ರಾವದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಲ್ಮಾನ್ ಸೇರಿದಂತೆ ಕುಟುಂಬದ ಸದಸ್ಯರು ಮತ್ತು ಸ್ನೇಹಿತರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಹೇಗಿದೆ ಸಲೀಂ ಖಾನ್ ಆರೋಗ್ಯ ಸ್ಥಿತಿ? ಸಲ್ಮಾನ್ ಖಾನ್ ತಂದೆಗೆ ಐಸಿಯುನಲ್ಲಿ ಚಿಕಿತ್ಸೆ

ಸಲೀಂ ಖಾನ್ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪುತ್ರ ಸಲ್ಮಾನ್ ಖಾನ್ ಅವರು ಕೂಡಲೇ ಎಲ್ಲ ಕೆಲಸಗಳನ್ನು ಬಿಟ್ಟು ಆಸ್ಪತ್ರೆಗೆ ಬಂದಿದ್ದಾರೆ. ಕುಟುಂಬದವರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ. ಸಲೀಂ ಖಾನ್ ಅವರಿಗೆ ಈಗ 90 ವರ್ಷ ವಯಸ್ಸು.

ಏಕಾಏಕಿ ಆಸ್ಪತ್ರೆಗೆ ದಾಖಲಾದ ಸಲೀಮ್ ಖಾನ್; ಆಸ್ಪತ್ರೆಗೆ ದೌಡಾಯಿಸಿದ ಸಲ್ಮಾನ್ ಖಾನ್

ಹಿರಿಯ ಬರಹಗಾರ ಸಲೀಮ್ ಖಾನ್ ಅವರು ಅನಾರೋಗ್ಯದಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 90 ವರ್ಷದ ಸಲೀಮ್ ಖಾನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಲ್ಮಾನ್ ಖಾನ್ ತಕ್ಷಣ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಸಲೀಮ್ ಖಾನ್ ಆರೋಗ್ಯದ ಬಗ್ಗೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದು, ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.

ಸಲ್ಮಾನ್ ಶ್ರೇಷ್ಠ,ಉತ್ತಮ ಎಂದು ಕೊಂಡಾಡಿದ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್

ಇತ್ತೀಚೆಗೆ ನಡೆದ ಆರ್​​ಎಸ್​​ಎಸ್​​ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಟ ಸಲ್ಮಾನ್ ಖಾನ್ ಭಾಗವಹಿಸಿದ್ದರು. ಈ ವೇಳೆ ಆರ್​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸಲ್ಮಾನ್ ಖಾನ್ ಅವರನ್ನು ಹೊಗಳಿದರು. ಅವರ ಈ ಮಾತು ವೈರಲ್ ಆಗಿದ್ದು, ಅನೇಕರು ಪ್ರತಿಕ್ರಿಯಿಸಿದ್ದಾರೆ. ಅಕ್ಷಯ್ ಕುಮಾರ್, ಕರಣ್ ಜೋಹರ್ ಸೇರಿದಂತೆ ಇಡೀ ಬಾಲಿವುಡ್ ಈ ಕಾರ್ಯಕ್ರಮದಲ್ಲಿ ಹಾಜರಿತ್ತು.

ಸ್ಯಾಂಡ್​​ವಿಚ್​ ಆಗೋದನ್ನು ತಪ್ಪಿಸಿಕೊಳ್ಳಲು ನಿರ್ಧರಿಸಿದ ಸಲ್ಮಾನ್ ಖಾನ್

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್‌ಗೆ ಈಗ ಮೊದಲಿನ ಬೇಡಿಕೆಯಿಲ್ಲ. ಅವರ 'ಬ್ಯಾಟಲ್ ಆಫ್ ಗಲ್ವಾನ್' ಸಿನಿಮಾ ಹಲವು ದೊಡ್ಡ ಚಿತ್ರಗಳಾದ 'ಟಾಕ್ಸಿಕ್', 'ಧುರಂಧರ್ 2', 'ಪೆದ್ದಿ' ಹಾಗೂ 'ಕೆಡಿ' ಜೊತೆಗಿನ ಬಾಕ್ಸ್ ಆಫೀಸ್ ಕ್ಲ್ಯಾಶ್ ತಪ್ಪಿಸಲು ಮುಂದೂಡಲ್ಪಟ್ಟಿದೆ. ಬಾಲಿಶ ಸ್ಕ್ರಿಪ್ಟ್‌ಗಳ ಆಯ್ಕೆ ಹಾಗೂ ಸ್ಪರ್ಧೆಯಿಂದ ವೃತ್ತಿಜೀವನ ಡಲ್ ಆಗಿದೆ.

ಪ್ರೇಮಿಗಳಿಗಾಗಿ ಮತ್ತೆ ರಿಲೀಸ್ ಆಗುತ್ತಿದೆ ಸಲ್ಮಾನ್ ಖಾನ್ ಸಿನಿಮಾ ‘ತೇರೆ ನಾಮ್’

‘ತೇರೆ ನಾಮ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರು ಅತ್ಯುತ್ತಮ ನಟನೆಯಿಂದ ಗಮನ ಸೆಳೆದಿದ್ದರು. 2003ರ ಆಗಸ್ಟ್ 15ರಂದು ಈ ಚಿತ್ರ ಬಿಡುಗಡೆ ಆಗಿ ಅಭಿಮಾನಿಗಳ ಮೆಚ್ಚುಗೆ ಪಡೆದುಕೊಂಡಿತ್ತು. 23 ವರ್ಷಗಳ ಬಳಿಕ ‘ತೇರೆ ನಾಮ್’ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್? ವೈರಲ್ ಆಗಿದೆ ಫೋಟೋ

‘ಧುರಂಧರ್’ ಕಥೆಯಲ್ಲಿ ಪ್ರತಿ ಪಾತ್ರಕ್ಕೂ ಮಹತ್ವ ಇದೆ. ಬಾಲಿವುಡ್​​ನ ಘಟಾನುಘಟಿ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಾರ್ಚ್ 19ರಂದು ರಿಲೀಸ್ ಆಗಲಿರುವ ‘ಧುರಂಧರ್ 2’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅತಿಥಿ ಪಾತ್ರ ಮಾಡಿದ್ದಾರೆ ಎಂಬ ಗಾಸಿಪ್ ಹಬ್ಬಿದೆ. ಇಂಟರ್​​ನೆಟ್​ನಲ್ಲಿ ಒಂದು ಫೋಟೋ ವೈರಲ್ ಆಗಿದ್ದು, ಅದರ ಬಗ್ಗೆ ಸಲ್ಮಾನ್ ಖಾನ್ ಫ್ಯಾನ್ಸ್ ಮಾತನಾಡುತ್ತಿದ್ದಾರೆ.

ಅರಿಜಿತ್ ಚಿತ್ರರಂಗ ತೊರೆಯಲು ಸಲ್ಮಾನ್ ಖಾನ್ ಕಾರಣ?

ಗಾಯಕ ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿ, ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದ್ದಾರೆ. ಅವರು ಸಿನಿಮಾಗಳಲ್ಲಿ ಹಾಡುವುದನ್ನು ನಿಲ್ಲಿಸಿದ್ದರೂ, ಸಂಗೀತ ಕೆಲಸ ಮುಂದುವರಿಸಲಿದ್ದಾರೆ. ಈ ನಿರ್ಧಾರಕ್ಕೆ ಸಲ್ಮಾನ್ ಖಾನ್ ಅವರೊಂದಿಗಿನ ಹಳೆಯ ವಿವಾದವೇ ಕಾರಣವೆಂಬ ಪ್ರಶ್ನೆ ವ್ಯಾಪಕವಾಗಿ ಕೇಳಿಬರುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ 'ಮಾತೃಭೂಮಿ' ಹಾಡು ಅವರ ಕೊನೆಯ ಬಾಲಿವುಡ್ ಹಾಡಾಗಿರಬಹುದು ಎಂದು ಊಹಿಸಲಾಗಿದೆ.

ಸಲ್ಲು ಜೊತೆ ಕಾರು ಡ್ರಿಫ್ಟ್ ಮಾಡಿದ ಧೋನಿ; ಫಾರ್ಮ್​​ಹೌಸ್​​ನಲ್ಲಿ ಮಸ್ತಿ

ನಟ ಸಲ್ಮಾನ್ ಖಾನ್ ಹಾಗೂ ಕ್ರಿಕೆಟರ್ ಎಂಎಸ್​ ಧೋನಿ ಮಧ್ಯೆ ಒಳ್ಳೆಯ ಒಡನಾಟ ಇದೆ. ಇದು ಆಗಾಗ ಸಾಬೀತಾಗುತ್ತಾ ಇರುತ್ತದೆ. ಈಗ ಸಲ್ಲು ಫಾರ್ಮ್​​ಹೌಸ್​​ನಲ್ಲಿ ಸೇರಿರೋ ಇವರು ಕಾರುಗಳನ್ನು ಡ್ರಿಫ್ಟ್ ಮಾಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇದನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

‘ದಿ ಫ್ಯಾಮಿಲಿ ಮ್ಯಾನ್’ ನಿರ್ದೇಶಕರ ಜೊತೆ ಸಲ್ಮಾನ್ ಖಾನ್ ಹೊಸ ಸಿನಿಮಾ?

‘ದಿ ಫ್ಯಾಮಿಲಿ ಮ್ಯಾನ್’ ಡೈರೆಕ್ಟರ್ ರಾಜ್ ಮತ್ತು ಡಿಕೆ ಜೊತೆ ಸಲ್ಮಾನ್ ಖಾನ್ ಅವರು ಮಾತುಕತೆ ನಡೆಸುತ್ತಿದ್ದಾರೆ. ಈಗಾಗಲೇ ಒಂದು ಸುತ್ತಿನ ಮಾತುಕಥೆ ನಡೆದಿದ್ದು, ಆ್ಯಕ್ಷನ್-ಕಾಮಿಡಿ ಶೈಲಿಯ ಸಿನಿಮಾಗಾಗಿ ಪ್ಲ್ಯಾನ್ ಮಾಡಲಾಗುತ್ತಿದೆ. ಈ ಬಗ್ಗೆ ಸಲ್ಮಾನ್ ಖಾನ್ ಕಡೆಯಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಎಲ್ಲವೂ ಅಂತೆ-ಕಂತೆಯ ಹಂತದಲ್ಲಿದೆ.

‘ಗಲ್ವಾನ್’ ಟ್ರೇಲರ್ ಮೂಲಕ ಟ್ರೋಲ್ ಆದ ಸಲ್ಮಾನ್ ಖಾನ್; ನೆನಪಾಯ್ತು GOT ದೃಶ್ಯ

ಸಲ್ಮಾನ್ ಖಾನ್ ಅವರ 'ಬ್ಯಾಟಲ್ ಆಫ್ ಗಲ್ವಾನ್' ಚಿತ್ರವು 2020ರ ಗಲ್ವಾನ್ ಕಣಿವೆ ಘರ್ಷಣೆಯನ್ನು ಆಧರಿಸಿದೆ. ಈ ಚಿತ್ರದಲ್ಲಿ ಸಲ್ಮಾನ್ ಕರ್ನಲ್ ಬಿ. ಸಂತೋಷ್ ಬಾಬು ಪಾತ್ರದಲ್ಲಿ ನಟಿಸಿದ್ದಾರೆ. ಏಪ್ರಿಲ್ 17, 2026 ರಂದು ಬಿಡುಗಡೆಯಾಗಲಿರುವ ಈ ಸಿನಿಮಾ ಟೀಸರ್‌ನಿಂದ ಚರ್ಚೆಯಲ್ಲಿದೆ. ನೈಜ ಘಟನೆಯನ್ನು ಆಧರಿಸಿದ ಕಥಾಹಂದರವು ಕುತೂಹಲ ಮೂಡಿಸಿದೆ. ಆದರೆ, ಟೀಸರ್ ಟ್ರೋಲ್ ಆಗಿರುವುದೂ ಚರ್ಚೆಗೆ ಕಾರಣವಾಗಿದೆ.

ಕೇವಲ 1 ರೂಪಾಯಿ ಸಂಭಾವನೆ ಪಡೆದು ಹೆಚ್​ಐವಿ ಪೀಡಿತನ ಪಾತ್ರ ಮಾಡಿದ್ದ ಸಲ್ಮಾನ್ ಖಾನ್

ಹೆಚ್​ಐವಿ ಪೀಡಿತ ಯುವಕನ ಪಾತ್ರ ಮಾಡಲು ಬೇರೆ ಯಾವುದೇ ಹೀರೋಗಳು ಕೂಡ ಒಪ್ಪಿಕೊಂಡಿರಲಿಲ್ಲ. ಸಲ್ಮಾನ್ ಖಾನ್ ಅವರು ಆ ಬೋಲ್ಡ್ ನಿರ್ಧಾರ ಮಾಡಿದ್ದರು. ಅದು ಸಮಾಜಕ್ಕೆ ಸಂದೇಶ ನೀಡುವ ಸಲುವಾಗಿ. ಕೇವಲ ಒಂದು ರೂಪಾಯಿ ಸಂಭಾವನೆ ಪಡೆದು ‘ಫಿರ್ ಮಿಲೇಂಗೆ’ ಸಿನಿಮಾದಲ್ಲಿ ಅವರು ನಟಿಸಿದ್ದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್