AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan

Salman Khan

ನಟ ಸಲ್ಮಾನ್​ ಖಾನ್​ ಅವರು ಹಿಂದಿ ಚಿತ್ರರಂಗದಲ್ಲಿ ಭಾರಿ ಬೇಡಿಕೆ ಹೊಂದಿದ್ದಾರೆ. ಭಾರತದ ಶ್ರೀಮಂತ ನಟರಲ್ಲಿ ಅವರು ಕೂಡ ಇದ್ದಾರೆ. ಅಬ್ದಲ್​ ರಶೀದ್​ ಸಲೀಂ ಸಲ್ಮಾನ್​ ಖಾನ್​ ಎಂಬುದು ಅವರ ಪೂರ್ಣ ಹೆಸರು. 1988ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು.

ಆರಂಭದಲ್ಲೇ ಅವರಿಗೆ ಯಶಸ್ಸು ಸಿಕ್ಕಿತು. ವೃತ್ತಿಜೀವನದಲ್ಲಿ ಅವರು ಏಳು-ಬೀಳುಗಳನ್ನು ಕಂಡಿದ್ದಾರೆ. ಅವರ ಸಿನಿಮಾಗಳು ನೂರಾರು ಕೋಟಿ ರೂಪಾಯಿ ಬಿಸ್ನೆಸ್​ ಮಾಡಿವೆ. ಹಿಂದಿ ಚಿತ್ರರಂಗದ ಮಾಸ್​ ಹೀರೋ ಆಗಿ ಅವರು ಗುರುತಿಸಿಕೊಂಡಿದ್ದಾರೆ. ‘ಮೈ ನೇ ಪ್ಯಾರ್​ ಕಿಯಾ’, ‘ಸಾಜನ್​’, ‘ಹಮ್​ ಆಪ್ಕೆ ಹೈ ಕೌನ್​’, ‘ದಬಂಗ್​’, ‘ಬಜರಂಗಿ ಭಾಯಿಜಾನ್​’, ‘ಏಕ್​ ಥಾ ಟೈಗರ್​’ ಮುಂತಾದವು ಸಲ್ಮಾನ್​ ಖಾನ್​ ನಟನೆಯ ಸೂಪರ್​ ಹಿಟ್​ ಸಿನಿಮಾಗಳು.

ಬಿಗ್​ ಬಾಸ್​ ನಿರೂಪಕನಾಗಿಯೂ ಅವರು ಫೇಮಸ್​ ಆಗಿದ್ದಾರೆ. ನಿರ್ಮಾಪಕನಾಗಿ ಹಲವು ಸಿನಿಮಾಗಳಿಗೆ ಸಲ್ಮಾನ್​ ಖಾನ್​ ಬಂಡವಾಳ ಹೂಡಿದ್ದಾರೆ. ವೃತ್ತಿಜೀವನದ ರೀತಿಯ ಅವರ ಖಾಸಗಿ ಬದುಕು ಕೂಡ ಸುದ್ದಿ ಆಗುತ್ತದೆ. ಹಲವರನ್ನು ಸಲ್ಮಾನ್​ ಖಾನ್​ ಪ್ರೀತಿಸಿದ್ದರು. ಆದರೆ ಯಾರನ್ನೂ ಅವರು ಮದುವೆ ಆಗಲಿಲ್ಲ. ಅವರ ಜೀವನದಲ್ಲಿ ಸಾಕಷ್ಟು ವಿವಾದಗಳು ಕೂಡ ಆಗಿವೆ. ಗ್ಯಾಂಗ್​ಸ್ಟರ್​ಗಳಿಂದ ಅವರಿಗೆ ಜೀವ ಬೆದರಿಕೆಯೂ ಬಂದಿದೆ.

ಇನ್ನೂ ಹೆಚ್ಚು ಓದಿ

ಸಲ್ಮಾನ್ ಖಾನ್ ತಂಗಿಯ ರೆಸ್ಟೋರೆಂಟ್; 1 ಪ್ಲೇಟ್ ಪಾಸ್ತಾ ಬೆಲೆ 5 ಸಾವಿರ ರೂಪಾಯಿ

ನಟ ಸಲ್ಮಾನ್ ಖಾನ್ ಅವರ ಸಹೋದರಿ ಅರ್ಪಿತಾ ಖಾನ್ ಮುಂಬೈನಲ್ಲಿ ರೆಸ್ಟೋರೆಂಟ್ ಹೊಂದಿದ್ದಾರೆ. ಅದರಲ್ಲಿನ ಆಹಾರ ಮತ್ತು ಪಾನೀಯದ ದರ ಕೇಳಿ ಜನರು ಹೌಹಾರಿದ್ದಾರೆ. ಒಂದು ಪ್ಲೇಟ್ ಪಾಸ್ತಾ ಬೆಲೆ ಬರೋಬ್ಬರಿ 5 ಸಾವಿರ ರೂಪಾಯಿ ಇದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ರಾಜ್ ಬಿ. ಶೆಟ್ಟಿ ನಟನೆಯ ಹಿಂದಿ ಸಿನಿಮಾಗೆ ಸಿಕ್ತು ಸಲ್ಮಾನ್ ಖಾನ್ ಬೆಂಬಲ

‘ಬಂದರ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಸಲ್ಮಾನ್ ಖಾನ್ ಅವರು ಶೇರ್ ಮಾಡಿಕೊಂಡಿದ್ದಾರೆ. ಜೂನ್ 5ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಬಾಬಿ ಡಿಯೋಲ್, ರಾಜ್ ಬಿ. ಶೆಟ್ಟಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ.

ಸಲ್ಮಾನ್ ಖಾನ್ ಸೂಪರ್ ಹೀರೋ ಸಿನಿಮಾಗೆ ಸಮಂತಾ ಬದಲು ಕರೀನಾ ನಾಯಕಿ?

ಸಲ್ಮಾನ್ ಖಾನ್ ಅವರು ಸೂಪರ್ ಹೀರೋ ಕಥೆ ಇರುವ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ನಾಯಕಿ ಯಾರು ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾದಿದ್ದಾರೆ. ಕರೀನಾ ಕಪೂರ್ ಖಾನ್ ಜೊತೆಗೆ ಚಿತ್ರತಂಡ ಈಗಾಗಲೇ ಮಾತುಕತೆ ನಡೆಸಿದೆ.

‘ರಾಜ ಶಿವಾಜಿ’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅಬ್ಬರ: ಜೀವಾ ಮಹಾಲಾ ಪಾತ್ರ ಕಂಡು ಫ್ಯಾನ್ಸ್ ಫಿದಾ

ಕೇಸರಿ ಪೇಟ ಧರಿಸಿ, ಕೈಯಲ್ಲಿ ಮರಾಠಾ ಖಡ್ಗ ಹಿಡಿದು ಸಲ್ಮಾನ್ ಖಾನ್ ಅವರು ಅಬ್ಬರಿಸಿದ್ದಾರೆ. ‘ರಾಜಾ ಶಿವಾಜಿ’ ಸಿನಿಮಾದಲ್ಲಿ ಅವರ ಪಾತ್ರವನ್ನು ಕಂಡು ಅಭಿಮಾನಿಗಳಿಗೆ ಥ್ರಿಲ್ ಆಗಿದೆ. ಸಲ್ಮಾನ್ ಖಾನ್ ಅವರು ಅತಿಥಿ ಪಾತ್ರ ಮಾಡಿದ್ದರಿಂದ ಈ ಚಿತ್ರದ ಸ್ಟಾರ್ ಮೆರುಗು ಹೆಚ್ಚಾಗಿದೆ.

ಪ್ರಭಾಸ್ ವಿರುದ್ಧ ಸಲ್ಮಾನ್ ಖಾನ್​​ನ ಎತ್ತಿಕಟ್ಟಿದ ಟಾಲಿವುಡ್ ಮಂದಿ

ಪ್ರಭಾಸ್ ಅವರ 'ಸ್ಪಿರಿಟ್' ಹಾಗೂ ಸಲ್ಮಾನ್ ಖಾನ್ ಅವರ ಹೊಸ ಸಿನಿಮಾ (SVC 63) 2027ರ ಈದ್ ಹಬ್ಬದಂದು ಬಿಡುಗಡೆಯಾಗಲು ಸಜ್ಜಾಗಿವೆ. ಟಾಲಿವುಡ್ ಮಂದಿ ಸಲ್ಮಾನ್ ಖಾನ್ ಚಿತ್ರದ ನಿರ್ದೇಶನ ಮತ್ತು ನಿರ್ಮಾಣದಲ್ಲಿ ಭಾಗಿಯಾಗಿರುವುದು ಪ್ರಭಾಸ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಪ್ರಭಾಸ್ ವಿರುದ್ಧ ಸಲ್ಮಾನ್ ಅವರನ್ನು ಎತ್ತಿಕಟ್ಟುವ ಪ್ರಯತ್ನ ನಡೆದಿದೆಯೇ ಎಂಬ ಚರ್ಚೆ ಶುರುವಾಗಿದೆ.

ಸಲ್ಮಾನ್ ಖಾನ್ ಹೊಸ ಸಿನಿಮಾಗೆ ಸಂಕಷ್ಟ: ಕಥೆ ಬದಲಾದರೂ ತಪ್ಪದ ‘ಮಾತೃಭೂಮಿ’ ವಿವಾದ

ಸಲ್ಮಾನ್ ಖಾನ್ ಅವರ ಹೊಸ ಸಿನಿಮಾ ‘ಮಾತೃಭೂಮಿ’ ಒಂದಲ್ಲಾ ಒಂದು ಕಾರಣದಿಂದ ವಿಘ್ನಗಳನ್ನು ಎದುರಿಸುತ್ತಿದೆ. ಏಪ್ರಿಲ್‌ನಲ್ಲಿ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಜೂನ್‌ಗೆ ಮುಂದೂಡಲ್ಪಟ್ಟಿತ್ತು. ಆದರೆ ಈಗಿನ ಬೆಳವಣಿಗೆಗಳನ್ನು ನೋಡಿದರೆ ಸಲ್ಮಾನ್ ಖಾನ್ ಅಭಿಮಾನಿಗಳು ಈ ಚಿತ್ರಕ್ಕಾಗಿ ಇನ್ನೂ ಹೆಚ್ಚಿನ ಕಾಲ ಕಾಯುವುದು ಅನಿವಾರ್ಯವಾಗಿದೆ.

ಸಾಲದ ವಿಚಾರದಲ್ಲಿ ರಾಜ್‌ಪಾಲ್ ಯಾದವ್​ರನ್ನು ಅಪಹಾಸ್ಯ ಮಾಡಿದವರಿಗೆ ಸಲ್ಮಾನ್ ನೇರ ಉತ್ತರ

ಇತ್ತೀಚೆಗೆ ನಡೆದ ಪ್ರಶಸ್ತಿ ಸಮಾರಂಭದಲ್ಲಿ ನಟ ರಾಜ್‌ಪಾಲ್ ಯಾದವ್ ಅವರನ್ನು ಅವರ ಹಳೆಯ ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ನಿರೂಪಕರು ಗೇಲಿ ಮಾಡಿದರು. ಈ ವಿಡಿಯೋ ವೈರಲ್ ಆದ ನಂತರ, ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರು ರಾಜ್‌ಪಾಲ್‌ಗೆ ಬಲವಾಗಿ ಬೆಂಬಲ ನೀಡಿದ್ದಾರೆ. ‘ನೀವು 30 ವರ್ಷಗಳಿಂದ ಉದ್ಯಮದಲ್ಲಿದ್ದೀರಿ, ನಿಮ್ಮ ಕೆಲಸಕ್ಕೆ ಗೌರವವಿದೆ’ ಎಂದು ಸಲ್ಮಾನ್ ಹೇಳಿದ್ದಾರೆ.

‘ಟಾಕ್ಸಿಕ್’ ಎದುರು ಬರಲು ರೆಡಿ ಆಯ್ತು ಬಾಲಿವುಡ್​​ನ ಸ್ಟಾರ್ ನಟನ ಸಿನಿಮಾ

'ಟಾಕ್ಸಿಕ್' ಚಿತ್ರದ ಬಿಡುಗಡೆ ದಿನಾಂಕ ಜೂನ್ 4ಕ್ಕೆ ಮುಂದೂಡಲಾಗಿದೆ. ಈ ನಡುವೆ ಸಲ್ಮಾನ್ ಖಾನ್ ಅಭಿನಯದ 'ಮಾತೃಭೂಮಿ' ಸಿನಿಮಾ (ಹಿಂದಿನ 'ಬ್ಯಾಟಲ್ ಆಫ್ ಗಲ್ವಾನ್') ಕೂಡ ಜೂನ್ ತಿಂಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ. ರೀಶೂಟ್, ಸೆನ್ಸಾರ್ ವಿಳಂಬದಿಂದ ಮೇ 15ರ ಬಿಡುಗಡೆ ಸಾಧ್ಯವಾಗಿಲ್ಲ. 'ಮಾತೃಭೂಮಿ' 'ಟಾಕ್ಸಿಕ್' ಜೊತೆ ಕ್ಲಾಶ್ ಆಗುವ ಸಾಧ್ಯತೆ ಇದೆ.

ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್

ಸಲೀಂ ಖಾನ್ ಅವರು ತಮ್ಮ ನಿವಾಸದ ಮುಂದೆ ನೆರೆದಿದ್ದ ಬೃಹತ್ ಜನಸಮೂಹದತ್ತ ಕೈಬೀಸುವ ಮೂಲಕ ಈದ್ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. ಈ ಸಂಭ್ರಮದ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟ ಸಲ್ಮಾನ್ ಖಾನ್, ‘ಈದ್ ಮುಬಾರಕ್. ನಿಮ್ಮೆಲ್ಲರ ಹಾರೈಕೆಗಳಿಗೆ ಧನ್ಯವಾದಗಳು. ತಂದೆ ಮನೆಗೆ ಮರಳಿದ್ದಾರೆ, ಎಲ್ಲರಿಗೂ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.

ತಿಂಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸಲ್ಲು ತಂದೆ ಸಲೀಂ ಖಾನ್

ಸಲ್ಮಾನ್ ಖಾನ್ ತಂದೆ, ಹಿರಿಯ ಕಥೆಗಾರ ಸಲೀಮ್ ಖಾನ್ ಅವರು ಮಿದುಳಿನಲ್ಲಿ ಆದ ರಕ್ತಸ್ರಾವದಿಂದ ಆಸ್ಪತ್ರೆ ಸೇರಿದ್ದರು. ಈಗ ಒಂದು ತಿಂಗಳ ಬಳಿಕ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ. 90ರ ವಯಸ್ಸಿನಲ್ಲಿ ಅವರ ಆರೋಗ್ಯ ಸುಧಾರಿಸಿದ್ದು, ಅಭಿಮಾನಿಗಳು ಹಾಗೂ ಕುಟುಂಬ ನಿಟ್ಟುಸಿರು ಬಿಟ್ಟಿದೆ. ಶೋಲೆ, ದೀವಾರ್ ಚಿತ್ರಗಳಿಗೆ ಕಥೆ ಬರೆದಿದ್ದ ಸಲೀಮ್ ಖಾನ್, ಎರಡು ಕನ್ನಡ ಸಿನಿಮಾಗಳಿಗೂ ಸಹ ಕಥೆ ನೀಡಿದ್ದರು.

‘ಬ್ಯಾಟಲ್ ಆಫ್ ಗಲ್ವಾನ್’ ಶೀರ್ಷಿಕೆ ಬದಲು: ಸಲ್ಮಾನ್ ಖಾನ್ ಚಿತ್ರಕ್ಕೆ ಈಗ ‘ಮಾತೃಭೂಮಿ’ ಟೈಟಲ್

ಸಲ್ಮಾನ್ ಖಾನ್ ನಟನೆಯ ‘ಬ್ಯಾಟಲ್ ಆಫ್ ಗಲ್ವಾನ್’ ಚಿತ್ರದ ಶೀರ್ಷಿಕೆಯನ್ನು ಏಕಾಏಕಿ ಬದಲಾಯಿಸಲಾಗಿದೆ. ಈ ಚಿತ್ರಕ್ಕೆ ‘ಮಾತೃಭೂಮಿ’ ಎಂದು ಹೆಸರು ಇಡಲಾಗಿದೆ. ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಹೆಸರು ಬದಲಾವಣೆ ಮಾತ್ರವಲ್ಲದೇ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆಯೂ ಜನರಿಗೆ ಗೊಂದಲ ಹೆಚ್ಚಾಗಿದೆ.

ಸಲ್ಮಾನ್ ಖಾನ್ ಚಿತ್ರಕ್ಕೆ ಸಮಂತಾ ಎಂಟ್ರಿ? ರಾಜ್ ಮತ್ತು ಡಿಕೆ ಸಿನಿಮಾಗೆ ಹೆಚ್ಚಿದ ಹೈಪ್

ಸಮಂತಾ, ಸಲ್ಮಾನ್ ಖಾನ್, ರಾಜ್ ಮತ್ತು ಡಿಕೆ ಜೊತೆಯಾಗಿ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಘಟಾನುಘಟಿಗಳು ಒಂದಾದರೆ ಅಭಿಮಾನಿಗಳಿಗೆ ಖಂಡಿತವಾಗಿಯೂ ಭರ್ಜರಿ ಮನರಂಜನೆ ಸಿಗಲಿದೆ. ಸೂಪರ್ ಹೀರೋ ಕಥಾಹಂದರ ಇರುವ ಸಿನಿಮಾದ ಬಗ್ಗೆ ಮಾತುಕಥೆ ನಡೆಯುತ್ತಿದ್ದು, ಆ ಬಗ್ಗೆ ಇಲ್ಲಿದೆ ಮಾಹಿತಿ..

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?