Samantha

Samantha

ಬಹುಭಾಷಾ ನಟಿ ಸಮಂತಾ ಋತ್ ಪ್ರಭು ಜನಿಸಿದ್ದು ತಮಿಳುನಾಡಿನ ಚೆನ್ನೈನಲ್ಲಿ 1987, ಏಪ್ರಿಲ್ 28ರಂದು. ವಾಣಿಜ್ಯ ಶಾಸ್ತ್ರದಲ್ಲಿ ಪದವಿ ಹೊಂದಿರುವ ಸಮಂತಾ, ಕಾಲೇಜು ದಿನಗಳಲ್ಲಿ ಕಾರ್ಯಕ್ರಮ ನಿರೂಪಣೆ, ಮಾಡೆಲಿಂಗ್ ಮಾಡುತ್ತಿದ್ದರು. 2010ರಲ್ಲಿ ‘ಯೇ ಮಾಯ ಚೇಸಾವೆ’ ತೆಲುಗು ಸಿನಿಮಾ ಮೂಲಕ ನಾಯಕಿಯಾದರು. ಬಳಿಕ ಒಂದರ ಹಿಂದೊಂದು ತಮಿಳು, ತೆಲುಗು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುತ್ತಾ ಸಾಗಿದ ಸಮಂತಾ, ತೆಲುಗು, ತಮಿಳಿನ ಹಲವು ಸ್ಟಾರ್ ನಟರಿಗೆ ನಾಯಕಿ ಆಗಿದ್ದಾರೆ. ಇತ್ತೀಚೆಗೆ ಹಿಂದಿ ಸಿನಿಮಾ, ವೆಬ್ ಸರಣಿಗಳಲ್ಲಿಯೂ ನಟಿಸುತ್ತಿದ್ದಾರೆ. 2017ರಲ್ಲಿ ನಟ ಅಕ್ಕಿನೇನಿ ನಾಗ ಚೈತನ್ಯ ಜೊತೆ ವಿವಾಹವಾದ ಸಮಂತಾ 2021ರಲ್ಲಿ ವಿಚ್ಛೇದನ ಪಡೆದುಕೊಂಡರು.

ಇನ್ನೂ ಹೆಚ್ಚು ಓದಿ

ಸಮಂತಾಗೆ ಚಿಕಿತ್ಸೆ ನೀಡುತ್ತಿರುವ ವ್ಯಕ್ತಿ ವೈದ್ಯನೇ ಅಲ್ಲ; ಹೊರಬಿತ್ತು ಶಾಕಿಂಗ್ ವಿಚಾರ

ನಟಿ ಸಮಂತಾ ರುತ್ ಪ್ರಭು ಮೈಯೋಸಿಟಿಸ್ ಕಾಯಿಲೆ ಕಾಣಿಸಿಕೊಂಡಿತು. ಇದಾದ ಬಳಿಕ ಅವರು ಸಿನಿಮಾಗಳಿಂದ ದೂರ ಆದರು. ಈಗ ಸಮಂತಾ ಅಭಿಮಾನಿಗಳಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಇದರಿಂದ ಅವರು ಅನೇಕರ ಜೀವವನ್ನು ತೊಂದರೆಗೆ ಸಿಲುಕಿಸುತ್ತಿದ್ದಾರೆ. ಸಮಂತಾ ವೈದ್ಯರ ಬಗ್ಗೆ ಕೆಲವರು ಅಪಸ್ವರ ತೆಗೆದಿದ್ದಾರೆ.

ನಾಗ ಚೈತನ್ಯ, ಶೋಭಿತಾ ಧುಲಿಪಾಲ ಜೊತೆಯಾಗಿರುವ ಇನ್ನೊಂದು ಫೋಟೋ ವೈರಲ್​

ಕಳೆದೊಂದು ವರ್ಷದಿಂದ ನಾಗ ಚೈತನ್ಯ ಮತ್ತು ನಟಿ ಶೋಭಿತಾ ಧುಲಿಪಾಲ ಅವರ ಸಂಬಂಧದ ಬಗ್ಗೆ ಸುದ್ದಿ ಹರಿದಾಡುತ್ತಲೇ ಇದೆ. ಅನೇಕ ಸಂದರ್ಭಗಳಲ್ಲಿ ಅವರಿಬ್ಬರು ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಈಗ ಮತ್ತೆ ಅವರಿಬ್ಬರು ಜೊತೆಯಾಗಿರುವ ಫೋಟೋ ವೈರಲ್​ ಆಗಿದೆ. ಯುರೋಪ್​ನಲ್ಲಿ ಅವರಿಬ್ಬರು ಎಂಜಾಯ್​ ಮಾಡುತ್ತಿದ್ದಾರೆ.

ದೊಡ್ಡ ಪರದೆಮೇಲೆ ಸಮಂತಾ ಸಿನಿಮಾ ನೋಡಿದ ನಾಗ ಚೈತನ್ಯ; ಮಾಜಿ ಪತ್ನಿಯ ಎಂಟ್ರಿಗೆ ನಕ್ಕ ಹೀರೋ

‘ಮನಂ’ ಸಿನಿಮಾ 2014ರ ಮೇ 23ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಈಗ ದಶಕಗಳ ಸಂಭ್ರಮ. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆಯ ಗಳಿಕೆ ಮಾಡಿತ್ತು. ಈಗ ಸಿನಿಮಾನ ಮತ್ತೊಮ್ಮೆ ಬಿಡುಗಡೆ ಮಾಡಲಾಗಿದೆ. ಚಿತ್ರದ ನಿರ್ದೇಶಕ ವಿಕ್ರಮ್ ಕುಮಾರ್ ಜೊತೆಗೆ ನಾಗ ಚೈತನ್ಯ ಸಿನಿಮಾ ನೋಡಿದ್ದಾರೆ. ಅಭಿಮಾನಿಗಳ ಮಧ್ಯೆ ಕುಳಿತು ಸಿನಿಮಾ ನೋಡಿ ಎಂಜಾಯ್ ಮಾಡಿದರು.

Samantha: ‘ನೀವು ಗೆಲುವಿಗೆ ಅರ್ಹರು’; ಆರ್​​ಸಿಬಿ ಜಯಕ್ಕೆ ಪ್ರಾರ್ಥಿಸಿದ್ರಾ ಸಮಂತಾ?

ಇಂದಿನ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ತಂಡವನ್ನು ಆರ್​ಸಿಬಿ ಎದುರಿಸಲಿದೆ. ಆರ್​ಸಿಬಿ ಗೆಲ್ಲಲಿ ಎಂದು ಅನೇಕರು ಪ್ರಾರ್ಥಿಸುತ್ತಿದ್ದಾರೆ. ಸಮಂತಾ ಅವರು ವಿರಾಟ್ ಕೊಹ್ಲಿ ಅವರ ಆರ್​ಸಿಬಿ ತಂಡ ಗೆಲ್ಲಲಿ ಎಂದು ಪ್ರಾರ್ಥಿಸಿದರೇ ಎನ್ನುವ ಅನುಮಾನ ಮೂಡಿದೆ.

ಅರೆಬೆತ್ತಲೆ ಫೋಟೋ ವಿವಾದ; ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ ಸಮಂತಾ

ಸೋಶಿಯಲ್​ ಮೀಡಿಯಾದಲ್ಲಿ ಒಂದು ಫೋಟೋ ವೈರಲ್​ ಆಗಿದೆ. ಅದು ಸಮಂತಾ ರುತ್​ ಪ್ರಭು ಅವರ ಫೋಟೋ ಎಂದು ಕೆಲವರು ಪೋಸ್ಟ್​ ಮಾಡಿದ್ದಾರೆ. ಆದರೆ ಅದು ಮಾರ್ಫ್​ ಮಾಡಿದ ಫೋಟೋ ಎಂಬುದು ತಿಳಿದುಬಂದಿದೆ. ಈ ವೈರಲ್​ ಫೋಟೋದ ವಿಚಾರದ ಬಗ್ಗೆ ಸಮಂತಾ ಅವರು ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ನಾಗ ಚೈತನ್ಯ ಮಾಡಿದ ಪರಸ್ತ್ರೀ ಸಹವಾಸದಿಂದಲೇ ಸಮಂತಾ ವಿಚ್ಛೇದನ? ವೈರಲ್​ ವಿಡಿಯೋ ಸಾಕ್ಷಿ

ಆ ವಿಚಾರವನ್ನು ನಾಗ ಚೈತನ್ಯ ಅವರು ನೇರವಾಗಿ ಒಪ್ಪಿಕೊಂಡಿದ್ದರು. ಆಗಿನ್ನೂ ಸಮಂತಾಗೆ ಅವರು ವಿಚ್ಛೇದನ ನೀಡಿರಲಿಲ್ಲ. ‘ನಾನು ಎಲ್ಲ ಅನುಭವ ಪಡೆದಿದ್ದೇನೆ’ ಎಂದು ಅವರು ಹೇಳಿದ್ದರು. ಆ ವಿಡಿಯೋವನ್ನು ಈಗ ಸೋಶಿಯಲ್​ ಮೀಡಿಯಾದಲ್ಲಿ ಕೆಲವರು ಹಂಚಿಕೊಂಡಿದ್ದಾರೆ. ವಿಚ್ಛೇದನಕ್ಕೆ ನಾಗ ಚೈತನ್ಯ ಅವರ ಈ ವರ್ತನೆಯೇ ಕಾರಣ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

ಅಟ್ಲಿ ಜೊತೆಗಿನ ಅಲ್ಲು ಅರ್ಜುನ್ ಸಿನಿಮಾಗೆ ಸಮಂತಾ ರುತ್​ ಪ್ರಭು ನಾಯಕಿ?

ಖ್ಯಾತ ನಟಿ ಸಮಂತಾ ರುತ್​ ಪ್ರಭು ಅವರಿಗೆ ಹತ್ತು ಹಲವು ಆಫರ್​ಗಳು ಬರುತ್ತಿವೆ. ಪ್ಯಾನ್​ ಇಂಡಿಯಾ ಡೈರೆಕ್ಟರ್​ ಅಟ್ಲಿ ನಿರ್ದೇಶನ ಮಾಡಲಿರುವ ಸಿನಿಮಾದಲ್ಲಿ ಅಲ್ಲು ಅರ್ಜುನ್​ ಜೊತೆ ಸಮಂತಾ ರುತ್​ ಪ್ರಭು ಅವರು ನಟಿಸುತ್ತಾರೆ ಎಂದು ಹೇಳಲಾಗುತ್ತಿದೆ. ಸಮಂತಾ ಬಗ್ಗೆ ಈ ರೀತಿ ಅಂತೆ-ಕಂತೆಗಳು ಹಬ್ಬಲು ಒಂದಷ್ಟು ಕಾರಣಗಳಿವೆ.

ಒಂದೇ ವೇದಿಕೆಯಲ್ಲಿ ಮಾಜಿ ದಂಪತಿ ಸಮಂತಾ-ನಾಗ ಚೈತನ್ಯ? ಆದರೆ ಒಂದು ಟ್ವಿಸ್ಟ್​

ಒಟಿಟಿ ಸಂಸ್ಥೆಯೊಂದರ ಜೊತೆ ಸಮಂತಾ ರುತ್​ ಪ್ರಭು ಮತ್ತು ನಾಗ ಚೈತನ್ಯ ಅವರು ಕೈ ಜೋಡಿಸಿದ್ದಾರೆ. ಇಬ್ಬರು ಕೂಡ ಚಿತ್ರರಂಗದಲ್ಲಿ ಇರುವುದರಿಂದ ಮುಖಾಮುಖಿ ಆಗುವಂತಹ ಸಂದರ್ಭ ಎದುರಾಗುವುದು ಸರ್ವೇ ಸಾಮಾನ್ಯ. ಮುಂಬೈನಲ್ಲಿ ಇಂದು (ಮಾರ್ಚ್​ 19) ನಡೆದ ಕಾರ್ಯಕ್ರಮದಲ್ಲಿ ಸಮಂತಾ, ನಾಗ ಚೈತನ್ಯ, ವರುಣ್​ ಧವನ್​ ಮುಂತಾದವರು ವೇದಿಕೆ ಏರಿಕೆ ಏರಿದ್ದಾರೆ.

‘ಆ ಡ್ಯಾನ್ಸ್​ ಮಾಡುವಾಗ ಕಂಫರ್ಟ್​ ಇರಲಿಲ್ಲ’: ಈಗ ಬಾಯ್ಬಿಟ್ಟ ಸಮಂತಾ

‘ಪುಷ್ಪ’ ಸಿನಿಮಾದ ಐಟಂ ಸಾಂಗ್​ನಲ್ಲಿ ಅಲ್ಲು ಅರ್ಜುನ್​ ಮತ್ತು ಸಮಂತಾ ರುತ್​ ಪ್ರಭು ಅವರು ತುಂಬ ಬೋಲ್ಡ್​ ಆದಂತಹ ಸ್ಟೆಪ್​ಗಳನ್ನು ಹಾಕಿದ್ದಾರೆ. ಆ ಹಾಡಿನ ಚಿತ್ರೀಕರಣ ಮಾಡುವಾಗ ಬಹಳ ಕಷ್ಟ ಆಗಿತ್ತು ಎಂಬುದನ್ನು ಸಮಂತಾ ಈಗ ಬಾಯಿಬಿಟ್ಟಿದ್ದಾರೆ. ಇಷ್ಟು ದಿನಗಳ ಕಾಲ ಅವರು ಆ ಬಗ್ಗೆ ಏನನ್ನೂ ಮಾತನಾಡಿರಲಿಲ್ಲ ಎಂಬುದೇ ಅಚ್ಚರಿ.

ಆರೋಗ್ಯದ ಬಗ್ಗೆ ತಪ್ಪು ಮಾಹಿತಿ ನೀಡಿದ ಸಮಂತಾ; ಸತ್ಯ ಬಯಲಿಗೆ ಎಳೆದ ಡಾಕ್ಟರ್​

ಸಮಂತಾ ಅವರು ಭಾರಿ ಉತ್ಸಾಹದಿಂದ ಆರೋಗ್ಯದ ಕುರಿತು ಪಾಡ್​ ಕಾಸ್ಟ್​ ಮಾಡುತ್ತಿದ್ದಾರೆ. ‘ಟೇಕ್​ 20’ ಹೆಸರಿನ ಈ ಕಾರ್ಯಕ್ರಮದಲ್ಲಿ ಅವರು ಕೆಲವು ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಆ ಮಾಹಿತಿ ತಪ್ಪಾಗಿದ್ದು, ಜನರ ದಾರಿ ತಪ್ಪಿಸುತ್ತಿದೆ ಎಂದು ವೈದ್ಯರೊಬ್ಬರು ಟೀಕೆ ವ್ಯಕ್ತಪಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ.

ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ