AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha

Samantha

ಬಹುಭಾಷಾ ನಟಿ ಸಮಂತಾ ಋತ್ ಪ್ರಭು ಜನಿಸಿದ್ದು ತಮಿಳುನಾಡಿನ ಚೆನ್ನೈನಲ್ಲಿ 1987, ಏಪ್ರಿಲ್ 28ರಂದು. ವಾಣಿಜ್ಯ ಶಾಸ್ತ್ರದಲ್ಲಿ ಪದವಿ ಹೊಂದಿರುವ ಸಮಂತಾ, ಕಾಲೇಜು ದಿನಗಳಲ್ಲಿ ಕಾರ್ಯಕ್ರಮ ನಿರೂಪಣೆ, ಮಾಡೆಲಿಂಗ್ ಮಾಡುತ್ತಿದ್ದರು. 2010ರಲ್ಲಿ ‘ಯೇ ಮಾಯ ಚೇಸಾವೆ’ ತೆಲುಗು ಸಿನಿಮಾ ಮೂಲಕ ನಾಯಕಿಯಾದರು. ಬಳಿಕ ಒಂದರ ಹಿಂದೊಂದು ತಮಿಳು, ತೆಲುಗು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುತ್ತಾ ಸಾಗಿದ ಸಮಂತಾ, ತೆಲುಗು, ತಮಿಳಿನ ಹಲವು ಸ್ಟಾರ್ ನಟರಿಗೆ ನಾಯಕಿ ಆಗಿದ್ದಾರೆ. ಇತ್ತೀಚೆಗೆ ಹಿಂದಿ ಸಿನಿಮಾ, ವೆಬ್ ಸರಣಿಗಳಲ್ಲಿಯೂ ನಟಿಸುತ್ತಿದ್ದಾರೆ. 2017ರಲ್ಲಿ ನಟ ಅಕ್ಕಿನೇನಿ ನಾಗ ಚೈತನ್ಯ ಜೊತೆ ವಿವಾಹವಾದ ಸಮಂತಾ 2021ರಲ್ಲಿ ವಿಚ್ಛೇದನ ಪಡೆದುಕೊಂಡರು.

ಇನ್ನೂ ಹೆಚ್ಚು ಓದಿ

‘ಸಮಂತಾ ತಾಯಿ ಆಗುತ್ತಿರುವುದು ನಿಜ’; ಕೊನೆಗೂ ಸಿಕ್ತು ಗುಡ್ ನ್ಯೂಸ್

ಸಮಂತಾ ರುತ್ ಪ್ರಭು ತಾಯಿ ಆಗುತ್ತಿರುವುದು ಅವರ ಆಪ್ತರಿಂದ ಖಚಿತವಾಗಿದೆ. 'ಮಾ ಇಂಟಿ ಬಂಗಾರಂ' ಚಿತ್ರದ ನಿರ್ದೇಶಕಿ ನಂದಿನಿ ರೆಡ್ಡಿ ಸಮಂತಾ ಗರ್ಭಿಣಿಯಾಗಿರುವುದನ್ನು ದೃಢಪಡಿಸಿದ್ದಾರೆ. ಚಿತ್ರದ ಯಶಸ್ಸಿನ ಬೆನ್ನಲ್ಲೇ ಈ ಶುಭ ಸುದ್ದಿ ಸಿಕ್ಕಿದ್ದು, ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ನಾಗ ಚೈತನ್ಯ ಅವರಿಂದ ವಿಚ್ಛೇದನದ ಬಳಿಕ ರಾಜ್ ನಿಧಿಮೋರು ಅವರನ್ನು ಸಮಂತಾ ವಿವಾಹವಾಗಿದ್ದರು.

‘ಮಾ ಇಂಟಿ ಬಂಗಾರಂ’ ಬಿಡುಗಡೆ ಮುನ್ನ ತಿರುಪತಿಗೆ ಸಮಂತಾ ಭೇಟಿ; ಸಂಪ್ರದಾಯ ಮರೆಯದ ನಟಿ

ನಟಿ ಸಮಂತಾ ರುತ್ ಪ್ರಭು ಅಭಿನಯದ 'ಮಾ ಇಂಟಿ ಬಂಗಾರಂ' ತೆಲುಗು ಚಿತ್ರ ಇಂದು ಬಿಡುಗಡೆಯಾಗಿದೆ. ಸಿನಿಮಾ ರಿಲೀಸ್‌ಗೂ ಮುನ್ನ ಸಮಂತಾ ತಿರುಪತಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದರು. ಸಾಂಪ್ರದಾಯಿಕ ಉಡುಗೆಯಲ್ಲಿ ಅವರ ಫೋಟೋಗಳು ವೈರಲ್ ಆಗಿವೆ. ವಿಶೇಷವೆಂದರೆ, ಸಿನಿಮಾ ಬಿಡುಗಡೆಗೂ ಮುನ್ನವೇ ಲಾಭ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಓಪನಿಂಗ್ ಪಡೆಯುವ ನಿರೀಕ್ಷೆ ಇದೆ.

ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ನಟಿ ಸಮಂತಾ ರುತ್ ಪ್ರಭು

ಸಮಂತಾ ರುತ್ ಪ್ರಭು ಅವರು ತಮ್ಮ ಮುಂಬರುವ ಬಹುನಿರೀಕ್ಷಿತ ‘ಮಾ ಇಂಟಿ ಬಂಗಾರಂ’ ಚಿತ್ರದ ಪ್ರಚಾರಕ್ಕಾಗಿ ಚೆನ್ನೈಗೆ ಆಗಮಿಸಿದ್ದರು. ಈ ವೇಳೆ ಅವರು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಹಳ ಖುಷಿಯಿಂದ ಅವರು ಪೋಸ್ಟ್ ಮಾಡಿದ್ದಾರೆ.

ವೇದಿಕೆ ಮೇಲೆ ಸಮಂತಾಗೆ ‘ಐ ಲವ್ ಯೂ’ ಹೇಳಲು ನಿರಾಕರಿಸಿದ ಪತಿ ರಾಜ್ ನಿಡಿಮೋರು

2023ರ ‘ಶಾಕುಂತಲಂ’ ಮತ್ತು ‘ಖುಷಿ’ ಸಿನಿಮಾಗಳ ಬಳಿಕ ಸಮಂತಾ ನಟಿಸಿದ ‘ಮಾ ಇಂಟಿ ಬಂಗಾರಂ’ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಸಮಂತಾ ಪತಿ ರಾಜ್ ನಿಡಿಮೋರು ಕೂಡ ಭಾಗವಹಿಸಿದ್ದರು. ಈ ವೇದಿಕೆಯಲ್ಲಿ ಅವರು ಸಮಂತಾಗೆ ‘ಐ ಲವ್ ಯೂ’ ಎನ್ನಲು ಹಿಂದೇಟು ಹಾಕಿದರು.

ರಿಲೀಸ್​​ಗೂ ಮೊದಲೇ ಸೇಫ್ ಆದ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’

ಸಮಂತಾ ರುತ್ ಪ್ರಭು ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಜೂನ್ 19ರಂದು ತೆರೆಗೆ ಬರಲಿದೆ. ಆಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವು ಬಿಡುಗಡೆಗೂ ಮುನ್ನವೇ ಭಾರಿ ಲಾಭ ಗಳಿಸಿದೆ. ಥಿಯೇಟರಿಕಲ್, ಒಟಿಟಿ, ಸ್ಯಾಟಲೈಟ್ ಹಕ್ಕುಗಳಿಂದ ನಿರ್ಮಾಪಕರು ಈಗಾಗಲೇ ಬಂಡವಾಳ ಮರಳಿ ಪಡೆದಿದ್ದಾರೆ. ಮಹಿಳಾ ಪ್ರಧಾನ ಚಿತ್ರವೊಂದಕ್ಕೆ ಸಿಕ್ಕ ಈ ಯಶಸ್ಸು ಮಾರುಕಟ್ಟೆಯಲ್ಲಿ ಹೊಸ ಅಲೆ ಎಬ್ಬಿಸಿದೆ, ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ.

ರಜನಿಕಾಂತ್‌ ಅವರ ಈ ಚಿತ್ರದಿಂದ ಸ್ಫೂರ್ತಿ ಪಡೆದಿದೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ

ಸಮಂತಾ ರುತ್ ಪ್ರಭು ಅವರ 'ಮಾ ಇಂಟಿ ಬಂಗಾರಂ' ಸಿನಿಮಾ ಜೂನ್ 19ರಂದು ತೆರೆಗೆ ಬರಲಿದೆ. ನಿರ್ದೇಶಕಿ ನಂದಿನಿ ರೆಡ್ಡಿ ಇದು ಸೂಪರ್‌ಸ್ಟಾರ್ ರಜನಿಕಾಂತ್ ಅವರ 'ಬಾಷಾ' ಚಿತ್ರದಿಂದ ಸ್ಪೂರ್ತಿ ಪಡೆದಿದೆ ಎಂದು ಹೇಳಿದ್ದಾರೆ. 'ಬಾಷಾ' ಕಥೆಯ ಟೆಂಪ್ಲೇಟ್‌ಗೆ ಮಹಿಳಾ ಪಾತ್ರವನ್ನು ಸೇರಿಸಿ ಹೊಸ ಟ್ವಿಸ್ಟ್ ನೀಡಲಾಗಿದೆ. ಸಾಯಿ ಪಲ್ಲವಿ ಬದಲಿಗೆ ಸಮಂತಾ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡದ ದಿಗಂತ್ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ.

ಸಮಂತಾಗೆ ಮೋಸ ಮಾಡಿದ್ರಿ ಎಂದವರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ನಾಗ ಚೈತನ್ಯ

ಡೀಪ್‌ಫೇಕ್ ಮತ್ತು ಸುಳ್ಳು ಸುದ್ದಿಗಳು ನಟ ನಾಗ ಚೈತನ್ಯ ಅವರ ಗೌರವ, ಘನತೆ, ಖಾಸಗಿತನ ಮತ್ತು ಸಾರ್ವಜನಿಕ ಇಮೇಜ್‌ಗೆ ತೀವ್ರ ಧಕ್ಕೆ ತಂದಿವೆ ಎಂದು ಅವರ ಪರ ವಕೀಲರು ವಾದಿಸಿದ್ದಾರೆ. ಸದ್ಯ ನ್ಯಾಯಾಲಯದ ಆದೇಶದ ಬಳಿಕ ಕೆಲವು ಲಿಂಕ್‌ಗಳನ್ನು ಇಂಟರ್ನೆಟ್‌ನಿಂದ ತೆಗೆದುಹಾಕಲಾಗಿದೆ.

ಸಲ್ಮಾನ್ ಖಾನ್ ಸೂಪರ್ ಹೀರೋ ಸಿನಿಮಾಗೆ ಸಮಂತಾ ಬದಲು ಕರೀನಾ ನಾಯಕಿ?

ಸಲ್ಮಾನ್ ಖಾನ್ ಅವರು ಸೂಪರ್ ಹೀರೋ ಕಥೆ ಇರುವ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ನಾಯಕಿ ಯಾರು ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾದಿದ್ದಾರೆ. ಕರೀನಾ ಕಪೂರ್ ಖಾನ್ ಜೊತೆಗೆ ಚಿತ್ರತಂಡ ಈಗಾಗಲೇ ಮಾತುಕತೆ ನಡೆಸಿದೆ.

ಒಂದೇ ಮದುವೆ ಸಮಾರಂಭದಲ್ಲಿ ಸಮಂತಾ-ನಾಗ ಚೈತನ್ಯ; ಮಾಜಿ ಜೋಡಿಯ ಫೋಟೋ ವೈರಲ್

ಹೈದರಾಬಾದ್‌ನಲ್ಲಿ ನಡೆದ ಅದ್ದೂರಿ ವಿವಾಹವೊಂದರಲ್ಲಿ ಟಾಲಿವುಡ್ ಸೆಲೆಬ್ರಿಟಿಗಳಾದ ಸಮಂತಾ ರುತ್ ಪ್ರಭು, ನಾಗ ಚೈತನ್ಯ ಮುಂತಾದವರು ಭಾಗಿಯಾಗಿದ್ದರು. ಆ ಸಂದರ್ಭದ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ. ತಮ್ಮ ಹೊಸ ಬಾಳಸಂಗಾತಿಗಳೊಂದಿಗೆ ಕಾಣಿಸಿಕೊಂಡ ಅವರು ಎಲ್ಲರ ಗಮನ ಸೆಳೆದಿದ್ದಾರೆ. ಈ ಕುರಿತದ ಮಾಹಿತಿ ಇಲ್ಲಿದೆ.

ಸಮಂತಾ ಫಿಟ್ ಆಗಿರಲು ಇದೇ ಕಾರಣ; ಈ ಟಿಪ್ಸ್ ಅನುಸರಿಸಿ

Samantha Ruth Prabhu: ಸಮಂತಾ ಅವರು ಪಾಡ್‌ಕ್ಯಾಸ್ಟ್‌ಗಳನ್ನು ಮಾಡುತ್ತಿದ್ದಾರೆ. ಅವರು ಇತರ ಜನರ ಪಾಡ್‌ಕ್ಯಾಸ್ಟ್‌ಗಳಲ್ಲಿ ಭಾಗವಹಿಸುತ್ತಿದ್ದಾರೆ ಮತ್ತು ಫಿಟ್‌ನೆಸ್‌ನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಈಗ ಸಮಂತಾ ಫಿಟ್ ಆಗಿರಲು ಮತ್ತು ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಮಾಡುವ ಎಂಟು ಕೆಲಸಗಳನ್ನು ವಿವರಿಸಿದ್ದಾರೆ.

ದಿನವಿಡೀ ಎನರ್ಜಿಟಿಕ್‌ ಆಗಿರಲು ನಟಿ ಸಮಂತಾರ ಪವರ್‌ ಮಾರ್ನಿಂಗ್‌ ರೂಟೀನ್‌ ಫಾಲೋ ಮಾಡಿ

ನಟಿ ಸಮಂತಾ ರುತ್ ಪ್ರಭು ಅವರು ನಟನೆ ಮಾತ್ರವಲ್ಲದೆ ತಮ್ಮ ಫಿಟ್ನೆಸ್‌ ಕಾರಣದಿಂದಲೂ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಫಿಟ್ನೆಸ್‌ಗೆ ಸಂಬಂಧಿಸಿದ ಒಂದಷ್ಟು ವಿಚಾರಗಳನ್ನು ಅವರು ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ಅವರು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು, ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೆಳಗಿನ ದಿನಚರಿಯಲ್ಲಿ ಯಾವೆಲ್ಲಾ ಅಭ್ಯಾಸಗಳನ್ನು ಪಾಲಿಸಬೇಕು ಎಂಬ ಸಲಹೆಯನ್ನು ನೀಡಿದ್ದಾರೆ. ಈ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ.

ಸಲ್ಮಾನ್ ಖಾನ್ ಚಿತ್ರಕ್ಕೆ ಸಮಂತಾ ಎಂಟ್ರಿ? ರಾಜ್ ಮತ್ತು ಡಿಕೆ ಸಿನಿಮಾಗೆ ಹೆಚ್ಚಿದ ಹೈಪ್

ಸಮಂತಾ, ಸಲ್ಮಾನ್ ಖಾನ್, ರಾಜ್ ಮತ್ತು ಡಿಕೆ ಜೊತೆಯಾಗಿ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಘಟಾನುಘಟಿಗಳು ಒಂದಾದರೆ ಅಭಿಮಾನಿಗಳಿಗೆ ಖಂಡಿತವಾಗಿಯೂ ಭರ್ಜರಿ ಮನರಂಜನೆ ಸಿಗಲಿದೆ. ಸೂಪರ್ ಹೀರೋ ಕಥಾಹಂದರ ಇರುವ ಸಿನಿಮಾದ ಬಗ್ಗೆ ಮಾತುಕಥೆ ನಡೆಯುತ್ತಿದ್ದು, ಆ ಬಗ್ಗೆ ಇಲ್ಲಿದೆ ಮಾಹಿತಿ..

ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ