AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha

Samantha

ಬಹುಭಾಷಾ ನಟಿ ಸಮಂತಾ ಋತ್ ಪ್ರಭು ಜನಿಸಿದ್ದು ತಮಿಳುನಾಡಿನ ಚೆನ್ನೈನಲ್ಲಿ 1987, ಏಪ್ರಿಲ್ 28ರಂದು. ವಾಣಿಜ್ಯ ಶಾಸ್ತ್ರದಲ್ಲಿ ಪದವಿ ಹೊಂದಿರುವ ಸಮಂತಾ, ಕಾಲೇಜು ದಿನಗಳಲ್ಲಿ ಕಾರ್ಯಕ್ರಮ ನಿರೂಪಣೆ, ಮಾಡೆಲಿಂಗ್ ಮಾಡುತ್ತಿದ್ದರು. 2010ರಲ್ಲಿ ‘ಯೇ ಮಾಯ ಚೇಸಾವೆ’ ತೆಲುಗು ಸಿನಿಮಾ ಮೂಲಕ ನಾಯಕಿಯಾದರು. ಬಳಿಕ ಒಂದರ ಹಿಂದೊಂದು ತಮಿಳು, ತೆಲುಗು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುತ್ತಾ ಸಾಗಿದ ಸಮಂತಾ, ತೆಲುಗು, ತಮಿಳಿನ ಹಲವು ಸ್ಟಾರ್ ನಟರಿಗೆ ನಾಯಕಿ ಆಗಿದ್ದಾರೆ. ಇತ್ತೀಚೆಗೆ ಹಿಂದಿ ಸಿನಿಮಾ, ವೆಬ್ ಸರಣಿಗಳಲ್ಲಿಯೂ ನಟಿಸುತ್ತಿದ್ದಾರೆ. 2017ರಲ್ಲಿ ನಟ ಅಕ್ಕಿನೇನಿ ನಾಗ ಚೈತನ್ಯ ಜೊತೆ ವಿವಾಹವಾದ ಸಮಂತಾ 2021ರಲ್ಲಿ ವಿಚ್ಛೇದನ ಪಡೆದುಕೊಂಡರು.

ಇನ್ನೂ ಹೆಚ್ಚು ಓದಿ

ಸಮಂತಾ 100 ಕೋಟಿ ಕ್ಲಬ್ ಕನಸಿಗೆ ಮಾಜಿ ಭಾವ ಅಖಿಲ್ ಅಕ್ಕಿನೇನಿ ಅಡ್ಡಿ? ಬಾಕ್ಸ್ ಆಫೀಸ್‌ನಲ್ಲಿ ಜಿದ್ದಾಜಿದ್ದಿ

ನಟಿ ಸಮಂತಾ ನಟನೆಯ 'ಮಾ ಇಂಟಿ ಬಂಗಾರಂ' ಸಿನಿಮಾ 95 ಕೋಟಿ ಗಳಿಸಿ 100 ಕೋಟಿ ಕ್ಲಬ್ ಸೇರುವತ್ತ ಸಾಗುತ್ತಿದೆ. ಇದು ತೆಲುಗು ಚಿತ್ರರಂಗದಲ್ಲಿ ಮಹಿಳಾ ಪ್ರಧಾನ ಸಿನಿಮಾವೊಂದಕ್ಕೆ ಹೊಸ ದಾಖಲೆಯಾಗಲಿದೆ. ಆದರೆ, ಅಖಿಲ್ ಅಕ್ಕಿನೇನಿ ನಟನೆಯ 'ಲೆನಿನ್' ಚಿತ್ರ ಬಿಡುಗಡೆ ಸಮಂತಾ ಚಿತ್ರದ ಗಳಿಕೆಗೆ ಅಡ್ಡಿಯಾಗುವ ಸಾಧ್ಯತೆಯಿದೆ. ಮಾಜಿ ಭಾವನ ಸಿನಿಮಾ ಸಮಂತಾ ಅವರ 100 ಕೋಟಿ ಕನಸಿಗೆ ಅಡ್ಡಿಯಾಗುತ್ತಾ ಕಾದು ನೋಡಬೇಕು.

‘ಇದು ನನ್ನ ಸಿಕ್ಸ್​ ಪ್ಯಾಕ್’; ಬೇಬಿ ಬಂಪ್ ಫೋಟೋ ಹಂಚಿಕೊಂಡ ನಟಿ ಸಮಂತಾ

ನಟಿ ಸಮಂತಾ ರುತ್ ಪ್ರಭು ತಮ್ಮ ಬೇಬಿ ಬಂಪ್ ಸಿಕ್ಸ್-ಪ್ಯಾಕ್ ಫೋಟೋವನ್ನು ಹಂಚಿಕೊಂಡು ವೈರಲ್ ಆಗಿದ್ದಾರೆ. ಇತ್ತೀಚೆಗೆ ತಮ್ಮ ಗರ್ಭಧಾರಣೆಯನ್ನು ಅಧಿಕೃತವಾಗಿ ಘೋಷಿಸಿದ ಸಮಂತಾ, ಸದ್ಯಕ್ಕೆ ಚಿತ್ರರಂಗದಿಂದ ವಿರಾಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ನಿರ್ದೇಶಕ ರಾಜ್ ನಿಡಿಮೋರು ಜೊತೆಗಿನ ಮದುವೆ ಮತ್ತು 'ಮಾ ಇಂಟಿ ಬಂಗಾರಂ' ಚಿತ್ರದ ಯಶಸ್ಸಿನ ನಂತರ, ಸಮಂತಾ ತಾಯ್ತನದ ಖುಷಿಯಲ್ಲಿದ್ದಾರೆ.

ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್

ತೆಲುಗು ಸಿನಿಮಾ 'ಮಾ ಇಂಟಿ ಬಂಗಾರಂ' ಬಾಕ್ಸ್ ಆಫೀಸ್‌ನಲ್ಲಿ ಭಾರಿ ಯಶಸ್ಸು ಗಳಿಸಿದೆ. ಇದರ ಸೀಕ್ವೆಲ್ ಸಿದ್ಧತೆ ನಡೆಯುತ್ತಿದ್ದು, ನಂದಿನಿ ರೆಡ್ಡಿ ನಿರ್ದೇಶನದ ಈ ಚಿತ್ರಕ್ಕೆ ರಾಜಾ ನಿಡಿಮೋರು ಕಥೆ ಹೆಣೆಯಲಿದ್ದಾರೆ. ನಟಿ ಸಮಂತಾ ಗರ್ಭಿಣಿಯಾಗಿರುವ ಕಾರಣ ಎರಡು ವರ್ಷಗಳ ನಂತರ ಕೆಲಸಗಳು ಆರಂಭವಾಗಲಿವೆ. ಈಗಾಗಲೇ ಚಿತ್ರವು ಜಗತ್ತಿನಾದ್ಯಂತ 65 ಕೋಟಿಗೂ ಹೆಚ್ಚು ಗಳಿಕೆ ಕಂಡಿದೆ.

ಶೋಭಿತಾ ಧೂಲಿಪಾಲಾಗೆ ಟಾಂಗ್ ಕೊಟ್ಟರಾ ನಟಿ ಸಮಂತಾ? ವಿಡಿಯೋ ವೈರಲ್

ನಟಿ ಸಮಂತಾ ರುತ್ ಪ್ರಭು ಗರ್ಭಿಣಿ ಆಗಿದ್ದು, ಸಂತೋಷದಲ್ಲಿದ್ದಾರೆ. ಇತ್ತೀಚೆಗೆ ಅವರು ನೀಡಿದ ಸಂಬಂಧಗಳ ಕುರಿತ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಶೋಭಿತಾ ಧೂಲಿಪಾಲಾರ ಹೇಳಿಕೆಗೆ ಇದು ಪರೋಕ್ಷ ಉತ್ತರ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ‘ಮಹಿಳೆಯರು ತಮ್ಮ ಮೇಲೆ ನಂಬಿಕೆ ಇಡಬೇಕು, ಮತ್ತೊಬ್ಬರ ಬರುವಿಕೆಗಾಗಿ ಕಾಯಬಾರದು’ ಎಂಬ ಸಮಂತಾ ಸಂದೇಶವು ಸ್ವಾವಲಂಬನೆಯ ಮಹತ್ವ ಸಾರಿದೆ.

ಸಮಂತಾ ಮೇಲೆ ವೈಯಕ್ತಿಕ ದಾಳಿ ಮಾಡಿದವರಿಗೆ ಕಾಲವೇ ಕೊಟ್ಟಿತು ತಕ್ಕ ಉತ್ತರ

ನಟಿ ಸಮಂತಾ ರುತ್ ಪ್ರಭು ತಮ್ಮ ಪ್ರೆಗ್ನೆನ್ಸಿ ಸುದ್ದಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಇದು ಅವರ ವೈಯಕ್ತಿಕ ಜೀವನ, ವಿಚ್ಛೇದನ ಹಾಗೂ ಮಕ್ಕಳ ಬಗ್ಗೆ ಹರಡಿದ್ದ ‘ಅವರಿಗೆ ಮಗು ಬೇಡವಿತ್ತು, ಅಫೇರ್‌ಗಳಿದ್ದವು, ಗರ್ಭಪಾತ ಮಾಡಿಸಿಕೊಂಡಿದ್ದರು’ ಎಂಬಂತಹ ಸುಳ್ಳು ವದಂತಿಗಳಿಗೆ ಕಾಲವೇ ನೀಡಿದ ತಕ್ಕ ಉತ್ತರವಾಗಿದೆ. ಅಂದು ತೀವ್ರ ದ್ವೇಷಕ್ಕೆ ಗುರಿಯಾಗಿದ್ದ ಸಮಂತಾ ನೀಡಿದ್ದ ಖಡಕ್ ಉತ್ತರ ಈಗ ಸತ್ಯವಾಗಿದೆ.

ಪ್ರೆಗ್ನೆಂಟ್ ಆಗಿರುವುದು ನಿಜ; ಎಲ್ಲರ ಎದುರು ಗುಡ್ ನ್ಯೂಸ್ ನೀಡಿದ ಸಮಂತಾ

ಸದ್ಯಕ್ಕೆ ಸಿನಿಮಾಗಳಿಂದ ಬ್ರೇಕ್ ಪಡೆಯಲಿರುವ ನಟಿ ಸಮಂತಾ ರುತ್ ಪ್ರಭು ಅವರು ಮಗುವಿನ ಜನನದ ಬಳಿಕ ಮತ್ತೆ ಚಿತ್ರರಂಗಕ್ಕೆ ಮರಳುವುದಾಗಿ ಹೇಳಿದ್ದಾರೆ. ‘ಮಾ ಇಂಟಿ ಬಂಗಾರಂ’ ಸಿನಿಮಾದ ಸಕ್ಸಸ್ ಮೀಟ್​ನಲ್ಲಿ ಅವರು ಈ ವಿಷಯ ಹಂಚಿಕೊಂಡಿದ್ದಾರೆ. ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಸಂದೇಶ ಹರಿದುಬರುತ್ತಿದೆ.

ಸಮಂತಾ ತಾಯಿ ಆಗೋ ವಿಷಯವನ್ನು ಖಚಿತಪಡಿಸಿದ ಚಿರಂಜೀವಿ

‘ಮಾ ಇಂಟಿ ಬಂಗಾರಂ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 50 ಕೋಟಿ ಗಳಿಸಿ ಭಾರಿ ಯಶಸ್ಸು ಗಳಿಸಿದೆ. ಮೆಗಾಸ್ಟಾರ್ ಚಿರಂಜೀವಿ ಈ ಚಿತ್ರದ ನಿರ್ದೇಶಕಿ ನಂದಿನಿ ರೆಡ್ಡಿ ಮತ್ತು ನಟಿ ಸಮಂತಾ ನಟನೆ, ಮಹಿಳಾ ಪ್ರಧಾನ ಕಥೆಯನ್ನು ಶ್ಲಾಘಿಸಿದ್ದಾರೆ. ಇದೇ ವೇಳೆ, ಸಮಂತಾ ಜೀವನದ ಹೊಸ ಅಧ್ಯಾಯಕ್ಕೆ ಶುಭಕೋರಿ ಅವರ ಗರ್ಭಿಣಿ ಸುದ್ದಿ ಪರೋಕ್ಷವಾಗಿ ಖಚಿತಪಡಿಸಿದ್ದಾರೆ. ಈ ಮೂಲಕ ಸಿನಿಮಾ ಯಶಸ್ಸಿನ ಜೊತೆ ಸಮಂತಾ ಖುಷಿ ಹೆಚ್ಚಿದೆ.

‘ಸಮಂತಾ ತಾಯಿ ಆಗುತ್ತಿರುವುದು ನಿಜ’; ಕೊನೆಗೂ ಸಿಕ್ತು ಗುಡ್ ನ್ಯೂಸ್

ಸಮಂತಾ ರುತ್ ಪ್ರಭು ತಾಯಿ ಆಗುತ್ತಿರುವುದು ಅವರ ಆಪ್ತರಿಂದ ಖಚಿತವಾಗಿದೆ. 'ಮಾ ಇಂಟಿ ಬಂಗಾರಂ' ಚಿತ್ರದ ನಿರ್ದೇಶಕಿ ನಂದಿನಿ ರೆಡ್ಡಿ ಸಮಂತಾ ಗರ್ಭಿಣಿಯಾಗಿರುವುದನ್ನು ದೃಢಪಡಿಸಿದ್ದಾರೆ. ಚಿತ್ರದ ಯಶಸ್ಸಿನ ಬೆನ್ನಲ್ಲೇ ಈ ಶುಭ ಸುದ್ದಿ ಸಿಕ್ಕಿದ್ದು, ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ನಾಗ ಚೈತನ್ಯ ಅವರಿಂದ ವಿಚ್ಛೇದನದ ಬಳಿಕ ರಾಜ್ ನಿಧಿಮೋರು ಅವರನ್ನು ಸಮಂತಾ ವಿವಾಹವಾಗಿದ್ದರು.

‘ಮಾ ಇಂಟಿ ಬಂಗಾರಂ’ ಬಿಡುಗಡೆ ಮುನ್ನ ತಿರುಪತಿಗೆ ಸಮಂತಾ ಭೇಟಿ; ಸಂಪ್ರದಾಯ ಮರೆಯದ ನಟಿ

ನಟಿ ಸಮಂತಾ ರುತ್ ಪ್ರಭು ಅಭಿನಯದ 'ಮಾ ಇಂಟಿ ಬಂಗಾರಂ' ತೆಲುಗು ಚಿತ್ರ ಇಂದು ಬಿಡುಗಡೆಯಾಗಿದೆ. ಸಿನಿಮಾ ರಿಲೀಸ್‌ಗೂ ಮುನ್ನ ಸಮಂತಾ ತಿರುಪತಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದರು. ಸಾಂಪ್ರದಾಯಿಕ ಉಡುಗೆಯಲ್ಲಿ ಅವರ ಫೋಟೋಗಳು ವೈರಲ್ ಆಗಿವೆ. ವಿಶೇಷವೆಂದರೆ, ಸಿನಿಮಾ ಬಿಡುಗಡೆಗೂ ಮುನ್ನವೇ ಲಾಭ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಓಪನಿಂಗ್ ಪಡೆಯುವ ನಿರೀಕ್ಷೆ ಇದೆ.

ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ನಟಿ ಸಮಂತಾ ರುತ್ ಪ್ರಭು

ಸಮಂತಾ ರುತ್ ಪ್ರಭು ಅವರು ತಮ್ಮ ಮುಂಬರುವ ಬಹುನಿರೀಕ್ಷಿತ ‘ಮಾ ಇಂಟಿ ಬಂಗಾರಂ’ ಚಿತ್ರದ ಪ್ರಚಾರಕ್ಕಾಗಿ ಚೆನ್ನೈಗೆ ಆಗಮಿಸಿದ್ದರು. ಈ ವೇಳೆ ಅವರು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಹಳ ಖುಷಿಯಿಂದ ಅವರು ಪೋಸ್ಟ್ ಮಾಡಿದ್ದಾರೆ.

ವೇದಿಕೆ ಮೇಲೆ ಸಮಂತಾಗೆ ‘ಐ ಲವ್ ಯೂ’ ಹೇಳಲು ನಿರಾಕರಿಸಿದ ಪತಿ ರಾಜ್ ನಿಡಿಮೋರು

2023ರ ‘ಶಾಕುಂತಲಂ’ ಮತ್ತು ‘ಖುಷಿ’ ಸಿನಿಮಾಗಳ ಬಳಿಕ ಸಮಂತಾ ನಟಿಸಿದ ‘ಮಾ ಇಂಟಿ ಬಂಗಾರಂ’ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಸಮಂತಾ ಪತಿ ರಾಜ್ ನಿಡಿಮೋರು ಕೂಡ ಭಾಗವಹಿಸಿದ್ದರು. ಈ ವೇದಿಕೆಯಲ್ಲಿ ಅವರು ಸಮಂತಾಗೆ ‘ಐ ಲವ್ ಯೂ’ ಎನ್ನಲು ಹಿಂದೇಟು ಹಾಕಿದರು.

ರಿಲೀಸ್​​ಗೂ ಮೊದಲೇ ಸೇಫ್ ಆದ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’

ಸಮಂತಾ ರುತ್ ಪ್ರಭು ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಜೂನ್ 19ರಂದು ತೆರೆಗೆ ಬರಲಿದೆ. ಆಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವು ಬಿಡುಗಡೆಗೂ ಮುನ್ನವೇ ಭಾರಿ ಲಾಭ ಗಳಿಸಿದೆ. ಥಿಯೇಟರಿಕಲ್, ಒಟಿಟಿ, ಸ್ಯಾಟಲೈಟ್ ಹಕ್ಕುಗಳಿಂದ ನಿರ್ಮಾಪಕರು ಈಗಾಗಲೇ ಬಂಡವಾಳ ಮರಳಿ ಪಡೆದಿದ್ದಾರೆ. ಮಹಿಳಾ ಪ್ರಧಾನ ಚಿತ್ರವೊಂದಕ್ಕೆ ಸಿಕ್ಕ ಈ ಯಶಸ್ಸು ಮಾರುಕಟ್ಟೆಯಲ್ಲಿ ಹೊಸ ಅಲೆ ಎಬ್ಬಿಸಿದೆ, ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ.

ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್