AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha

Samantha

ಬಹುಭಾಷಾ ನಟಿ ಸಮಂತಾ ಋತ್ ಪ್ರಭು ಜನಿಸಿದ್ದು ತಮಿಳುನಾಡಿನ ಚೆನ್ನೈನಲ್ಲಿ 1987, ಏಪ್ರಿಲ್ 28ರಂದು. ವಾಣಿಜ್ಯ ಶಾಸ್ತ್ರದಲ್ಲಿ ಪದವಿ ಹೊಂದಿರುವ ಸಮಂತಾ, ಕಾಲೇಜು ದಿನಗಳಲ್ಲಿ ಕಾರ್ಯಕ್ರಮ ನಿರೂಪಣೆ, ಮಾಡೆಲಿಂಗ್ ಮಾಡುತ್ತಿದ್ದರು. 2010ರಲ್ಲಿ ‘ಯೇ ಮಾಯ ಚೇಸಾವೆ’ ತೆಲುಗು ಸಿನಿಮಾ ಮೂಲಕ ನಾಯಕಿಯಾದರು. ಬಳಿಕ ಒಂದರ ಹಿಂದೊಂದು ತಮಿಳು, ತೆಲುಗು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುತ್ತಾ ಸಾಗಿದ ಸಮಂತಾ, ತೆಲುಗು, ತಮಿಳಿನ ಹಲವು ಸ್ಟಾರ್ ನಟರಿಗೆ ನಾಯಕಿ ಆಗಿದ್ದಾರೆ. ಇತ್ತೀಚೆಗೆ ಹಿಂದಿ ಸಿನಿಮಾ, ವೆಬ್ ಸರಣಿಗಳಲ್ಲಿಯೂ ನಟಿಸುತ್ತಿದ್ದಾರೆ. 2017ರಲ್ಲಿ ನಟ ಅಕ್ಕಿನೇನಿ ನಾಗ ಚೈತನ್ಯ ಜೊತೆ ವಿವಾಹವಾದ ಸಮಂತಾ 2021ರಲ್ಲಿ ವಿಚ್ಛೇದನ ಪಡೆದುಕೊಂಡರು.

ಇನ್ನೂ ಹೆಚ್ಚು ಓದಿ

ಸಲ್ಮಾನ್ ಖಾನ್ ಸೂಪರ್ ಹೀರೋ ಸಿನಿಮಾಗೆ ಸಮಂತಾ ಬದಲು ಕರೀನಾ ನಾಯಕಿ?

ಸಲ್ಮಾನ್ ಖಾನ್ ಅವರು ಸೂಪರ್ ಹೀರೋ ಕಥೆ ಇರುವ ಸಿನಿಮಾಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ ಪಾತ್ರವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ನಾಯಕಿ ಯಾರು ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾದಿದ್ದಾರೆ. ಕರೀನಾ ಕಪೂರ್ ಖಾನ್ ಜೊತೆಗೆ ಚಿತ್ರತಂಡ ಈಗಾಗಲೇ ಮಾತುಕತೆ ನಡೆಸಿದೆ.

ಒಂದೇ ಮದುವೆ ಸಮಾರಂಭದಲ್ಲಿ ಸಮಂತಾ-ನಾಗ ಚೈತನ್ಯ; ಮಾಜಿ ಜೋಡಿಯ ಫೋಟೋ ವೈರಲ್

ಹೈದರಾಬಾದ್‌ನಲ್ಲಿ ನಡೆದ ಅದ್ದೂರಿ ವಿವಾಹವೊಂದರಲ್ಲಿ ಟಾಲಿವುಡ್ ಸೆಲೆಬ್ರಿಟಿಗಳಾದ ಸಮಂತಾ ರುತ್ ಪ್ರಭು, ನಾಗ ಚೈತನ್ಯ ಮುಂತಾದವರು ಭಾಗಿಯಾಗಿದ್ದರು. ಆ ಸಂದರ್ಭದ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ. ತಮ್ಮ ಹೊಸ ಬಾಳಸಂಗಾತಿಗಳೊಂದಿಗೆ ಕಾಣಿಸಿಕೊಂಡ ಅವರು ಎಲ್ಲರ ಗಮನ ಸೆಳೆದಿದ್ದಾರೆ. ಈ ಕುರಿತದ ಮಾಹಿತಿ ಇಲ್ಲಿದೆ.

ಸಮಂತಾ ಫಿಟ್ ಆಗಿರಲು ಇದೇ ಕಾರಣ; ಈ ಟಿಪ್ಸ್ ಅನುಸರಿಸಿ

Samantha Ruth Prabhu: ಸಮಂತಾ ಅವರು ಪಾಡ್‌ಕ್ಯಾಸ್ಟ್‌ಗಳನ್ನು ಮಾಡುತ್ತಿದ್ದಾರೆ. ಅವರು ಇತರ ಜನರ ಪಾಡ್‌ಕ್ಯಾಸ್ಟ್‌ಗಳಲ್ಲಿ ಭಾಗವಹಿಸುತ್ತಿದ್ದಾರೆ ಮತ್ತು ಫಿಟ್‌ನೆಸ್‌ನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಈಗ ಸಮಂತಾ ಫಿಟ್ ಆಗಿರಲು ಮತ್ತು ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಮಾಡುವ ಎಂಟು ಕೆಲಸಗಳನ್ನು ವಿವರಿಸಿದ್ದಾರೆ.

ದಿನವಿಡೀ ಎನರ್ಜಿಟಿಕ್‌ ಆಗಿರಲು ನಟಿ ಸಮಂತಾರ ಪವರ್‌ ಮಾರ್ನಿಂಗ್‌ ರೂಟೀನ್‌ ಫಾಲೋ ಮಾಡಿ

ನಟಿ ಸಮಂತಾ ರುತ್ ಪ್ರಭು ಅವರು ನಟನೆ ಮಾತ್ರವಲ್ಲದೆ ತಮ್ಮ ಫಿಟ್ನೆಸ್‌ ಕಾರಣದಿಂದಲೂ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಫಿಟ್ನೆಸ್‌ಗೆ ಸಂಬಂಧಿಸಿದ ಒಂದಷ್ಟು ವಿಚಾರಗಳನ್ನು ಅವರು ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ಅವರು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು, ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೆಳಗಿನ ದಿನಚರಿಯಲ್ಲಿ ಯಾವೆಲ್ಲಾ ಅಭ್ಯಾಸಗಳನ್ನು ಪಾಲಿಸಬೇಕು ಎಂಬ ಸಲಹೆಯನ್ನು ನೀಡಿದ್ದಾರೆ. ಈ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ.

ಸಲ್ಮಾನ್ ಖಾನ್ ಚಿತ್ರಕ್ಕೆ ಸಮಂತಾ ಎಂಟ್ರಿ? ರಾಜ್ ಮತ್ತು ಡಿಕೆ ಸಿನಿಮಾಗೆ ಹೆಚ್ಚಿದ ಹೈಪ್

ಸಮಂತಾ, ಸಲ್ಮಾನ್ ಖಾನ್, ರಾಜ್ ಮತ್ತು ಡಿಕೆ ಜೊತೆಯಾಗಿ ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಘಟಾನುಘಟಿಗಳು ಒಂದಾದರೆ ಅಭಿಮಾನಿಗಳಿಗೆ ಖಂಡಿತವಾಗಿಯೂ ಭರ್ಜರಿ ಮನರಂಜನೆ ಸಿಗಲಿದೆ. ಸೂಪರ್ ಹೀರೋ ಕಥಾಹಂದರ ಇರುವ ಸಿನಿಮಾದ ಬಗ್ಗೆ ಮಾತುಕಥೆ ನಡೆಯುತ್ತಿದ್ದು, ಆ ಬಗ್ಗೆ ಇಲ್ಲಿದೆ ಮಾಹಿತಿ..

ಶಿವಮೊಗ್ಗದ ಹೊಸನಗರದಲ್ಲಿ ಸಮಂತಾ ಹೋಳಿ: ಗಂಡನ ಜೊತೆ ಸಂಭ್ರಮ

ನಗರದ ಬಸ್ ನಿಲ್ದಾಣದಲ್ಲಿ ನಟಿ ಸಮಂತಾ ರುತ್ ಪ್ರಭು ಅವರು ಹೋಳಿ ಹಬ್ಬ ಆಚರಿಸಿದ್ದಾರೆ. ‘ಮಾ ಇಂಟಿ ಬಂಗಾರಂ’ ಚಿತ್ರದ ಶೂಟಿಂಗ್ ವೇಳೆ ಅವರು ಚಿತ್ರತಂಡದ ಜೊತೆ ಸಂಭ್ರಮಿಸಿದ್ದಾರೆ. ತೆಲುಗಿನ ಈ ಸಿನಿಮಾಗೆ ಹೊಸನಗರದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಬಿಡುವಿನಲ್ಲಿ ಹೋಳಿ ಆಡಿದ್ದಾರೆ.

ರಾಜ್​​ನಿಂದ ವಿಚ್ಛೇದವಾಯ್ತಾ? ಟ್ರೋಲ್ ಮಾಡುವವರಿಗೆ ಉತ್ತರಿಸಿದ ಸಮಂತಾ

ಸಮಂತಾ ರುತ್ ಪ್ರಭು ತಮ್ಮ ಎರಡನೇ ಮದುವೆ ಮತ್ತು ಹಿಂದಿನ ವಿಚ್ಛೇದನ ಕುರಿತು ಹಬ್ಬಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ ನಿಧಿಮೋರು ಜೊತೆಗಿನ ತಮ್ಮ ಸಂಬಂಧ ನಾಗ ಚೈತನ್ಯ ಅವರಿಂದ ವಿಚ್ಛೇದನ ಪಡೆದ ನಂತರವೇ ಆರಂಭವಾಯಿತು ಎಂದು ಸಮಂತಾ ತಿಳಿಸಿದ್ದಾರೆ. ವಿಚ್ಛೇದನದ ಬಳಿಕ ಮಾನಸಿಕವಾಗಿ ಕುಗ್ಗಿದ್ದಾಗ ರಾಜ್ ನೀಡಿದ ಬೆಂಬಲದಿಂದಲೇ ಮತ್ತೆ ಪ್ರೀತಿಯಲ್ಲಿ ಬೀಳುವಂತಾಯಿತು ಎಂದು ಅವರು ಹೇಳಿದ್ದಾರೆ.

ಹೆಮ್ಮೆಯಿಂದ ತಾಳಿ ಧರಿಸಿ ಓಡಾಡುತ್ತಿರುವ ನಟಿ ಸಮಂತಾ ರುತ್ ಪ್ರಭು

2ನೇ ಮದುವೆ ಆಗಿರುವ ಸಮಂತಾ ರುತ್ ಪ್ರಭು ಅವರು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಪತಿ ರಾಜ್ ನಿಡಿಮೋರು ಜೊತೆ ಅವರು ಪ್ರಯಾಣ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಮಂತಾ ಅವರ ಕತ್ತಿನಲ್ಲಿ ಇರುವ ಮಂಗಳಸೂತ್ರ ಹೈಲೈಟ್ ಆಗಿದೆ. ವಿಡಿಯೋಗೆ ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ.

ಮದುವೆ ಬಳಿಕ ಸಮಂತಾ ಮೊದಲ ಸಿನಿಮಾ; ಹೇಗಿದೆ ನೋಡಿ ಫಸ್ಟ್ ಲುಕ್

ಎರಡು ವರ್ಷಗಳ ಗ್ಯಾಪ್ ಬಳಿಕ ನಟಿ ಸಮಂತಾ ರುತ್ ಪ್ರಭು ಅವರು ಮತ್ತೆ ಬೆಳ್ಳಿತೆರೆ ಮೇಲೆ ಬರುತ್ತಿದ್ದಾರೆ. ಅವರು ನಟಿಸಿದ ‘ಮಾ ಇಂಟಿ ಬಂಗಾರಂ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿದೆ. ಜನವರಿ 9ರಂದು ಈ ಸಿನಿಮಾದ ಟೀಸರ್ ಕೂಡ ಬಿಡುಗಡೆ ಆಗಲಿದೆ. ಸಿನಿಮಾ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ನಿಧಿ ಅಗರ್​​ವಾಲ್ ಬಳಿಕ ಸಮಂತಾಗೂ ಫ್ಯಾನ್ಸ್ ಕಾಟ: ವಿಡಿಯೋ ವೈರಲ್

ಸಮಂತಾ ರುತ್ ಪ್ರಭು ಅವರಿಗೆ ಇರುವ ಅಭಿಮಾನಿಗಳ ಬಳಗ ದೊಡ್ಡದು. ಅವರು ಎಲ್ಲಿಯೇ ಹೋದರೂ ಜನರು ಸೇರುತ್ತಾರೆ. ಇತ್ತೀಚೆಗೆ ಹೈದರಾಬಾದ್​​ನಲ್ಲಿ ನಡೆದ ಕಾರ್ಯಕ್ರಮಕ್ಕೆ ಸಮಂತಾ ಅತಿಥಿ ಆಗಿ ಬಂದಾಗಲೂ ಹಾಗೆಯೇ ಆಯಿತು. ಬಾಡಿ ಗಾರ್ಡ್ಸ್ ಇದ್ದರೂ ಕೂಡ ಪರಿಸ್ಥಿತಿ ಕೈಮೀರುವ ಹಂತಕ್ಕೆ ಹೋಯಿತು.

ಸಮಂತಾ ಬಳಿಕ ಮದುವೆಗೆ ರೆಡಿ ಆದ ದಕ್ಷಿಣದ ಮತ್ತೋರ್ವ ಸ್ಟಾರ್ ನಟಿ

ನಟಿ ಸಮಂತಾ ರುತ್ ಪ್ರಭು ನಿರ್ದೇಶಕ ರಾಜ್ ಅವರನ್ನು ವರಿಸಿದ್ದಾರೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸಮಂತಾ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈಗ ದಕ್ಷಿಣದಲ್ಲಿ ಸೆಲೆಬ್ರಿಟಿ ಜೋಡಿ ಮದುವೆಗೆ ರೆಡಿ ಆಗಿದೆ. ಫೆಬ್ರವರಿಯಲ್ಲಿ ರಾಜಸ್ಥಾನದಲ್ಲಿ ಇವರ ವಿವಾಹ ನಡೆಯಲಿದೆ ಎನ್ನಲಾಗಿದೆ. ಇತ್ತೀಚೆಗೆ ಇವರು ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

2ನೇ ಮದುವೆ ಬಳಿಕ ಎಷ್ಟು ಖುಷಿಯಾಗಿ ಇದ್ದಾರೆ ನೋಡಿ ಸಮಂತಾ

ಈ ಮೊದಲು ವಿಚ್ಛೇದನ, ಅನಾರೋಗ್ಯ ಮುಂತಾದ ಕಾರಣಗಳಿಂದ ಸಮಂತಾ ಅವರು ಕುಗ್ಗಿದ್ದರು. ಆದರೆ ಈಗ ಅವರ ಮುಖದಲ್ಲಿ ನಗು ಅರಳಿದೆ. ಅದಕ್ಕೆಲ್ಲ ಕಾರಣ ಆಗಿರುವುದು 2ನೇ ಮದುವೆ. ನಿರ್ದೇಶಕ ರಾಜ್ ನಿಡಿಮೋರು ಜೊತೆ ಮದುವೆ ಆದ ಬಳಿಕ ಅವರು ತುಂಬಾ ಖುಷಿಯಾಗಿದ್ದಾರೆ.

ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​