AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha

Samantha

ಬಹುಭಾಷಾ ನಟಿ ಸಮಂತಾ ಋತ್ ಪ್ರಭು ಜನಿಸಿದ್ದು ತಮಿಳುನಾಡಿನ ಚೆನ್ನೈನಲ್ಲಿ 1987, ಏಪ್ರಿಲ್ 28ರಂದು. ವಾಣಿಜ್ಯ ಶಾಸ್ತ್ರದಲ್ಲಿ ಪದವಿ ಹೊಂದಿರುವ ಸಮಂತಾ, ಕಾಲೇಜು ದಿನಗಳಲ್ಲಿ ಕಾರ್ಯಕ್ರಮ ನಿರೂಪಣೆ, ಮಾಡೆಲಿಂಗ್ ಮಾಡುತ್ತಿದ್ದರು. 2010ರಲ್ಲಿ ‘ಯೇ ಮಾಯ ಚೇಸಾವೆ’ ತೆಲುಗು ಸಿನಿಮಾ ಮೂಲಕ ನಾಯಕಿಯಾದರು. ಬಳಿಕ ಒಂದರ ಹಿಂದೊಂದು ತಮಿಳು, ತೆಲುಗು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುತ್ತಾ ಸಾಗಿದ ಸಮಂತಾ, ತೆಲುಗು, ತಮಿಳಿನ ಹಲವು ಸ್ಟಾರ್ ನಟರಿಗೆ ನಾಯಕಿ ಆಗಿದ್ದಾರೆ. ಇತ್ತೀಚೆಗೆ ಹಿಂದಿ ಸಿನಿಮಾ, ವೆಬ್ ಸರಣಿಗಳಲ್ಲಿಯೂ ನಟಿಸುತ್ತಿದ್ದಾರೆ. 2017ರಲ್ಲಿ ನಟ ಅಕ್ಕಿನೇನಿ ನಾಗ ಚೈತನ್ಯ ಜೊತೆ ವಿವಾಹವಾದ ಸಮಂತಾ 2021ರಲ್ಲಿ ವಿಚ್ಛೇದನ ಪಡೆದುಕೊಂಡರು.

ಇನ್ನೂ ಹೆಚ್ಚು ಓದಿ

ಮಗು ಹೊಂದೋದು ಬೇಡ ಎಂದು ನಿರ್ಧರಿಸಿದ್ದ ಸಮಂತಾ; ಮನಸ್ಸು ಬದಲಾಗಿದ್ದೇಕೆ?

ಖ್ಯಾತ ನಟಿ ಸಮಂತಾ ರುತ್ ಪ್ರಭು ತಾಯಿಯಾಗುತ್ತಿರುವ ಸಂತಸದಲ್ಲಿದ್ದಾರೆ. ಮಗು ಇಲ್ಲದಿದ್ದರೂ ಪರವಾಗಿಲ್ಲ ಎಂದುಕೊಂಡಿದ್ದ ತಮಗೆ ಈ ಗರ್ಭಧಾರಣೆ ದೊಡ್ಡ ಸರ್ಪ್ರೈಸ್ ನೀಡಿದೆ ಎಂದು ಹೇಳಿಕೊಂಡಿದ್ದಾರೆ. 'ಮಾ ಇಂಟಿ ಬಂಗಾರಂ' ಸಿನಿಮಾ ಶೂಟಿಂಗ್ ವೇಳೆ ಈ ವಿಷಯ ತಿಳಿದಿದ್ದು, ಕೆಲವೇ ತಿಂಗಳಲ್ಲಿ ಮಗುವಿನ ಆಗಮನವಾಗಲಿದೆ ಎಂದು ತಿಳಿಸಿದ್ದಾರೆ.

ಆ ಘಟನೆ ಬಳಿಕ ಚಿತ್ರರಂಗ ಬಿಡಬೇಕು ಎಂದುಕೊಂಡೆ; ಸಮಂತಾ

ಮಯೋಸೈಟಿಸ್ ಅನಾರೋಗ್ಯದ ಕಾರಣ ನಟಿ ಸಮಂತಾ ಸಿನಿಮಾ ರಂಗ ತೊರೆಯಲು ನಿರ್ಧರಿಸಿದ್ದರು. ಉದ್ಯಮ ರಂಗಕ್ಕೆ ಕಾಲಿಟ್ಟಿದ್ದ ಅವರು, ಮತ್ತೆ ಬಣ್ಣದ ಲೋಕಕ್ಕೆ ಮರಳಿದ್ದಾರೆ. ನಿರ್ದೇಶಕ ರಾಜ್ ನಿಡಿಮೋರು ಅವರ ಒತ್ತಾಯದ ಮೇರೆಗೆ 'ಮಾ ಇಂಟಿ ಬಂಗಾರಂ' ಚಿತ್ರದಲ್ಲಿ ನಟಿಸಿ, ನೂರು ಕೋಟಿ ಬಾಕ್ಸ್ ಆಫೀಸ್ ಗಳಿಕೆ ಕಾಣುವ ಮೂಲಕ ಯಶಸ್ವಿ ಕಮ್‌ಬ್ಯಾಕ್ ಮಾಡಿದ್ದಾರೆ.

‘ಪ್ರೆಗ್ನೆನ್ಸಿ ಬಳಿಕ ದೇಹದ ತೂಕ 11 ಕೆಜಿ ಹೆಚ್ಚಿದೆ’; ಅಭಿಮಾನಿಗಳ ಎದುರು ಹೇಳಿಕೊಂಡ ಸಮಂತಾ

ನಟಿ ಸಮಂತಾ ರುತ್ ಪ್ರಭು ತಾಯ್ತನದ ಮಧುರ ಹಂತದಲ್ಲಿದ್ದಾರೆ. ಸಾಮಾಜಿಕ ಜಾಲತಾಣದ ಸಂವಾದದಲ್ಲಿ ತಾವು ಈಗಾಗಲೇ 11 ಕೆಜಿ ತೂಕ ಹೆಚ್ಚಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಪತಿ ರಾಜ್ ನಿಡಿಮೋರು ಜೊತೆ ಬೇಬಿಮೂನ್ ಕ್ಷಣಗಳನ್ನು ಹಂಚಿಕೊಂಡಿರುವ ನಟಿ, ಪ್ರಸ್ತುತ ಹೆರಿಗೆಯ ವಿಶ್ರಾಂತಿಯಲ್ಲಿದ್ದು ಅಭಿಮಾನಿಗಳಿಗೆ ನಿರಂತರ ಅಪ್ಡೇಟ್ ನೀಡುತ್ತಿದ್ದಾರೆ.

ಬೇಬಿಮೂನ್ ಫೋಟೋ ಹಂಚಿಕೊಂಡ ಸಮಂತಾ; ವಿದೇಶದಲ್ಲಿ ಎಂಜಾಯ್ ಮಾಡಿದ ನಟಿ

ನಟಿ ಸಮಂತಾ ರುತ್ ಪ್ರಭು ಪತಿ ರಾಜ್ ನಿಡಿಮೋರು ಅವರೊಂದಿಗೆ ಬೇಬಿಮೂನ್ ಪ್ರವಾಸದಲ್ಲಿದ್ದು, ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ಈ ದಂಪತಿ, ವಿವಿಧ ಖಾದ್ಯಗಳನ್ನು ಸವಿಯುತ್ತಾ ಗುಣಮಟ್ಟದ ಸಮಯ ಕಳೆಯುತ್ತಿದ್ದಾರೆ. ಈ ಮುದ್ದಾದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳ ಮನಗೆದ್ದು, ಭಾರಿ ವೈರಲ್ ಆಗುತ್ತಿವೆ.

ನಟಿ ಸಮಂತಾ ರುತ್ ಪ್ರಭು ಸರಳ ಸೀಮಂತ ಶಾಸ್ತ್ರದ ಫೋಟೋಗಳು ವೈರಲ್

ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ನಟಿ ಸಮಂತಾ ರುತ್ ಪ್ರಭು ಅವರಿಗೆ ಸೀಮಂತ ಶಾಸ್ತ್ರ ಮಾಡಲಾಗಿದ್ದು, ಕೆಲವು ಫೋಟೋಗಳು ವೈರಲ್ ಆಗಿವೆ. ಕುಟುಂಬದ ಕಡೆಯಿಂದ ಈ ಬಗ್ಗೆ ಖಚಿತ ಮಾಹಿತಿ ಹೊರಬಿದ್ದಿಲ್ಲ. ಆದರೆ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಪ್ರಕಟ ಆಗಿದೆ.

ಒಟಿಟಿಗೆ ಬರ್ತಿದೆ ಸಮಂತಾ ನಟನೆಯ ಸೂಪರ್ ಹಿಟ್ ಸಿನಿಮಾ ‘ಮಾ ಇಂಟಿ ಬಂಗಾರಂ’

ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡಿ ದಾಖಲೆ ಬರೆದಿರುವ ಸಮಂತಾ ರುತ್ ಪ್ರಭು ನಟನೆಯ 'ಮಾ ಇಂಟಿ ಬಂಗಾರಂ' ಸಿನಿಮಾ ಒಟಿಟಿ ಬಿಡುಗಡೆಗೆ ಸಿದ್ಧವಾಗಿದೆ. ಮಹಿಳಾ ಪ್ರಧಾನ ತೆಲುಗು ಚಿತ್ರಗಳಲ್ಲಿಯೇ ಅತಿ ಹೆಚ್ಚು ಗಳಿಕೆ ಕಂಡಿರುವ ಈ ಆಕ್ಷನ್ ಸಿನಿಮಾ ಜುಲೈ 17 ರಿಂದ ಜಿಯೋ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮಿಂಗ್ ಆಗಲಿದ್ದು, ಸಿನಿಮಾ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಅಡೆತಡೆ ಮೀರಿ 100 ಕೋಟಿ ಕ್ಲಬ್ ಸೇರಿದ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’

ನಟಿ ಸಮಂತಾ ರುತ್ ಪ್ರಭು ಅವರ 'ಮಾ ಇಂಟಿ ಬಂಗಾರಂ' ಸಿನಿಮಾ ವಿಶ್ವಾದ್ಯಂತ 100 ಕೋಟಿ ಗಳಿಸಿ ಭರ್ಜರಿ ಯಶಸ್ಸು ಕಂಡಿದೆ. ತಮ್ಮ ಪ್ರೆಗ್ನೆನ್ಸಿ ಸಂಭ್ರಮದ ನಡುವೆಯೇ ಸಮಂತಾ ಈ ಬಿಗ್ ಅಚೀವ್‌ಮೆಂಟ್ ಆಚರಿಸಿದ್ದಾರೆ. ಮಹಿಳಾ ಪ್ರಧಾನ ಸಿನಿಮಾಗಳ ಬಗ್ಗೆ ಚಿತ್ರರಂಗದಲ್ಲಿದ್ದ ನೆಗೆಟಿವ್ ಅಭಿಪ್ರಾಯವನ್ನು ಈ ಚಿತ್ರ ಸುಳ್ಳು ಮಾಡಿದೆ. ಇದು ಇಂಡಿಯನ್ ಸಿನಿಮಾದಲ್ಲಿ ಹೊಸ ಬದಲಾವಣೆಯ ಆರಂಭ ಎಂದು ಸಮಂತಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಮಂತಾ 100 ಕೋಟಿ ಕ್ಲಬ್ ಕನಸಿಗೆ ಮಾಜಿ ಭಾವ ಅಖಿಲ್ ಅಕ್ಕಿನೇನಿ ಅಡ್ಡಿ? ಬಾಕ್ಸ್ ಆಫೀಸ್‌ನಲ್ಲಿ ಜಿದ್ದಾಜಿದ್ದಿ

ನಟಿ ಸಮಂತಾ ನಟನೆಯ 'ಮಾ ಇಂಟಿ ಬಂಗಾರಂ' ಸಿನಿಮಾ 95 ಕೋಟಿ ಗಳಿಸಿ 100 ಕೋಟಿ ಕ್ಲಬ್ ಸೇರುವತ್ತ ಸಾಗುತ್ತಿದೆ. ಇದು ತೆಲುಗು ಚಿತ್ರರಂಗದಲ್ಲಿ ಮಹಿಳಾ ಪ್ರಧಾನ ಸಿನಿಮಾವೊಂದಕ್ಕೆ ಹೊಸ ದಾಖಲೆಯಾಗಲಿದೆ. ಆದರೆ, ಅಖಿಲ್ ಅಕ್ಕಿನೇನಿ ನಟನೆಯ 'ಲೆನಿನ್' ಚಿತ್ರ ಬಿಡುಗಡೆ ಸಮಂತಾ ಚಿತ್ರದ ಗಳಿಕೆಗೆ ಅಡ್ಡಿಯಾಗುವ ಸಾಧ್ಯತೆಯಿದೆ. ಮಾಜಿ ಭಾವನ ಸಿನಿಮಾ ಸಮಂತಾ ಅವರ 100 ಕೋಟಿ ಕನಸಿಗೆ ಅಡ್ಡಿಯಾಗುತ್ತಾ ಕಾದು ನೋಡಬೇಕು.

‘ಇದು ನನ್ನ ಸಿಕ್ಸ್​ ಪ್ಯಾಕ್’; ಬೇಬಿ ಬಂಪ್ ಫೋಟೋ ಹಂಚಿಕೊಂಡ ನಟಿ ಸಮಂತಾ

ನಟಿ ಸಮಂತಾ ರುತ್ ಪ್ರಭು ತಮ್ಮ ಬೇಬಿ ಬಂಪ್ ಸಿಕ್ಸ್-ಪ್ಯಾಕ್ ಫೋಟೋವನ್ನು ಹಂಚಿಕೊಂಡು ವೈರಲ್ ಆಗಿದ್ದಾರೆ. ಇತ್ತೀಚೆಗೆ ತಮ್ಮ ಗರ್ಭಧಾರಣೆಯನ್ನು ಅಧಿಕೃತವಾಗಿ ಘೋಷಿಸಿದ ಸಮಂತಾ, ಸದ್ಯಕ್ಕೆ ಚಿತ್ರರಂಗದಿಂದ ವಿರಾಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ನಿರ್ದೇಶಕ ರಾಜ್ ನಿಡಿಮೋರು ಜೊತೆಗಿನ ಮದುವೆ ಮತ್ತು 'ಮಾ ಇಂಟಿ ಬಂಗಾರಂ' ಚಿತ್ರದ ಯಶಸ್ಸಿನ ನಂತರ, ಸಮಂತಾ ತಾಯ್ತನದ ಖುಷಿಯಲ್ಲಿದ್ದಾರೆ.

ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್

ತೆಲುಗು ಸಿನಿಮಾ 'ಮಾ ಇಂಟಿ ಬಂಗಾರಂ' ಬಾಕ್ಸ್ ಆಫೀಸ್‌ನಲ್ಲಿ ಭಾರಿ ಯಶಸ್ಸು ಗಳಿಸಿದೆ. ಇದರ ಸೀಕ್ವೆಲ್ ಸಿದ್ಧತೆ ನಡೆಯುತ್ತಿದ್ದು, ನಂದಿನಿ ರೆಡ್ಡಿ ನಿರ್ದೇಶನದ ಈ ಚಿತ್ರಕ್ಕೆ ರಾಜಾ ನಿಡಿಮೋರು ಕಥೆ ಹೆಣೆಯಲಿದ್ದಾರೆ. ನಟಿ ಸಮಂತಾ ಗರ್ಭಿಣಿಯಾಗಿರುವ ಕಾರಣ ಎರಡು ವರ್ಷಗಳ ನಂತರ ಕೆಲಸಗಳು ಆರಂಭವಾಗಲಿವೆ. ಈಗಾಗಲೇ ಚಿತ್ರವು ಜಗತ್ತಿನಾದ್ಯಂತ 65 ಕೋಟಿಗೂ ಹೆಚ್ಚು ಗಳಿಕೆ ಕಂಡಿದೆ.

ಶೋಭಿತಾ ಧೂಲಿಪಾಲಾಗೆ ಟಾಂಗ್ ಕೊಟ್ಟರಾ ನಟಿ ಸಮಂತಾ? ವಿಡಿಯೋ ವೈರಲ್

ನಟಿ ಸಮಂತಾ ರುತ್ ಪ್ರಭು ಗರ್ಭಿಣಿ ಆಗಿದ್ದು, ಸಂತೋಷದಲ್ಲಿದ್ದಾರೆ. ಇತ್ತೀಚೆಗೆ ಅವರು ನೀಡಿದ ಸಂಬಂಧಗಳ ಕುರಿತ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಶೋಭಿತಾ ಧೂಲಿಪಾಲಾರ ಹೇಳಿಕೆಗೆ ಇದು ಪರೋಕ್ಷ ಉತ್ತರ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ‘ಮಹಿಳೆಯರು ತಮ್ಮ ಮೇಲೆ ನಂಬಿಕೆ ಇಡಬೇಕು, ಮತ್ತೊಬ್ಬರ ಬರುವಿಕೆಗಾಗಿ ಕಾಯಬಾರದು’ ಎಂಬ ಸಮಂತಾ ಸಂದೇಶವು ಸ್ವಾವಲಂಬನೆಯ ಮಹತ್ವ ಸಾರಿದೆ.

ಸಮಂತಾ ಮೇಲೆ ವೈಯಕ್ತಿಕ ದಾಳಿ ಮಾಡಿದವರಿಗೆ ಕಾಲವೇ ಕೊಟ್ಟಿತು ತಕ್ಕ ಉತ್ತರ

ನಟಿ ಸಮಂತಾ ರುತ್ ಪ್ರಭು ತಮ್ಮ ಪ್ರೆಗ್ನೆನ್ಸಿ ಸುದ್ದಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಇದು ಅವರ ವೈಯಕ್ತಿಕ ಜೀವನ, ವಿಚ್ಛೇದನ ಹಾಗೂ ಮಕ್ಕಳ ಬಗ್ಗೆ ಹರಡಿದ್ದ ‘ಅವರಿಗೆ ಮಗು ಬೇಡವಿತ್ತು, ಅಫೇರ್‌ಗಳಿದ್ದವು, ಗರ್ಭಪಾತ ಮಾಡಿಸಿಕೊಂಡಿದ್ದರು’ ಎಂಬಂತಹ ಸುಳ್ಳು ವದಂತಿಗಳಿಗೆ ಕಾಲವೇ ನೀಡಿದ ತಕ್ಕ ಉತ್ತರವಾಗಿದೆ. ಅಂದು ತೀವ್ರ ದ್ವೇಷಕ್ಕೆ ಗುರಿಯಾಗಿದ್ದ ಸಮಂತಾ ನೀಡಿದ್ದ ಖಡಕ್ ಉತ್ತರ ಈಗ ಸತ್ಯವಾಗಿದೆ.

ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ