AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sankranti

Sankranti

ಮಕರ ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು. ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು “ಎಳ್ಳು ಬೆಲ್ಲ”. ಮನೆಯಲ್ಲಿ ಎಳ್ಳ್ಳು ಬೆಲ್ಲವನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ “ಎಳ್ಳುಹಂಚುವುದು” ಸಂಕ್ರಾಂತಿಯ ಸಂಪ್ರದಾಯ. ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು, ಹಣ್ಣು ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಬೆಲ್ಲ, ಒಣ ಕೊಬ್ಬರಿ, ಹುರಿಗಡಲೆ, ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ “ಎಳ್ಳು ಬೆಲ್ಲ” ತಯಾರಿಸಲಾಗುತ್ತದೆ. ಕರ್ನಾಟಕದ ರೈತರಿಗೆ ಸುಗ್ಗಿ ಅಥವಾ ಸುಗ್ಗಿಯ ಹಬ್ಬ. ಈ ಮಂಗಳಕರ ದಿನದಂದು, ಯುವ ಹೆಣ್ಣುಮಕ್ಕಳು, ಮಕ್ಕಳು ಮತ್ತು ಹದಿಹರೆಯದವರು ಹೊಸ ಬಟ್ಟೆಗಳನ್ನು ಧರಿಸಿ ಒಂದು ತಟ್ಟೆಯಲ್ಲಿ ಎಳ್ಳುಬೆಲ್ಲದೊಂದಿಗೆ ಹತ್ತಿರದ ಜನರನ್ನು ಮತ್ತು ಸಂಬಂಧಿಗಳನ್ನು ಭೇಟಿಯಾಗಿ ಎಳ್ಳುಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ. “ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡೋಣ” ಎಂದು ಹೇಳಿಕೊಳ್ಳುತ್ತಾರೆ. ಪ್ಲೇಟ್ ಸಹ ಕಬ್ಬಿನ ತುಂಡು ವಿವಿಧ ಆಕಾರಗಳನ್ನು ಸಕ್ಕರೆ ಅಚ್ಚುಗಳನ್ನು ಹೊಂದಿರುತ್ತದೆ.

ಇನ್ನೂ ಹೆಚ್ಚು ಓದಿ

Jallikattu: ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಆರಂಭ; 1 ಸಾವಿರಕ್ಕೂ ಹೆಚ್ಚು ಹೋರಿಗಳು ಭಾಗಿ

ಪೊಂಗಲ್ ಹಬ್ಬದ ಭಾಗವಾಗಿ ನಡೆಯುವ ತಮಿಳುನಾಡಿನ ಸಾಂಪ್ರದಾಯಿಕ ಹೋರಿ ಓಟದ ಸ್ಪರ್ಧೆಯಾದ ಜಲ್ಲಿಕಟ್ಟು ಇಂದು ಮಧುರೈನಲ್ಲಿ ಪ್ರಾರಂಭವಾಯಿತು. ಅವನಿಯಪುರಂ ಜಲ್ಲಿಕಟ್ಟಿನಲ್ಲಿ ಇಂದು ಸುಮಾರು 550 ಜನರು ಭಾಗವಹಿಸಿದ್ದರು. ಎರಡನೇ ಮತ್ತು ಮೂರನೇ ಕಾರ್ಯಕ್ರಮಗಳು ಮಧುರೈನ ಅಲಂಗನಲ್ಲೂರು ಮತ್ತು ಪಳಮೇಡುವಿನಲ್ಲಿ ನಡೆಯಲಿವೆ. ಒಟ್ಟು 1 ಸಾವಿರ ಹೋರಿಗಳು ಭಾಗವಹಿಸಲಿವೆ.

ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ

ವಾಡಿಕೆಯಂತೆ ಈ ವರ್ಷವೂ ಮಕರ ಸಂಕ್ರಾಂತಿ ದಿನ ಸೂರ್ಯ ರಶ್ಮಿ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗವನ್ನು ಸ್ಪರ್ಶಿಸಿದೆ. ಸುಮಾರು 2 ನಿಮಿಷ ಶಿವಲಿಂಗವನ್ನು ಸುರ್ಯ ರಶ್ಮಿ ಸ್ಪರ್ಶಿಸಿದ್ದು, ಭಕ್ತರು ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡರು. ಮೋಡ ಕವಿದ ವಾತಾವರಣದಿಂದಾಗಿ 2025ರಲ್ಲಿ ಸೂರ್ಯರಶ್ಮಿ ಶಿವಲಿಂಗವನ್ನು ಸ್ಪರ್ಶಿಸಲು ಸಾಧ್ಯವಾಗಿರಲಿಲ್ಲ.

ತಂದೆ ಕಣ್ಣೆದುರೇ ಬಾಲಕರು ನೀರುಪಾಲು: ಸಂಕ್ರಾಂತಿ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ಗ್ರಾಮದ ಕಲ್ಲು ಕ್ವಾರಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕರಿಬ್ಬರು ತಂದೆಯ ಕಣ್ಣೆದುರೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆ ಮೂಲಕ ಹಬ್ಬದ ಸಂಭ್ರಮದಲ್ಲಿರಬೇಕಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ

ಮಕರ ಸಂಕ್ರಾಂತಿ ದಿನವಾದ ಇಂದು(ಜನವರಿ 15) ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿ ಪ್ರವೇಶಿಸಲಿದೆ. ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ. ಇದರಂತೆ ದೇಗುಲದಲ್ಲಿ ಈಗಾಗಲೇ ವಿಶೇಷ ಪೂಜೆಗಳು ಆರಂಭವಾಗಿದ್ದು, ಶಿವನ ಲಿಂಗಕ್ಕೆ ಹಾಲು, ಎಳನೀರಿನ ಅಭಿಷೇಕಗಳನ್ನು ನಡೆಸಲಾಗುತ್ತದೆ.

ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ

ಮಾಘ ಮೇಳ ಮಕರ ಸಂಕ್ರಾಂತಿಯ ದಿನವಾದ ಇಂದು ಪ್ರಯಾಗರಾಜ್​ನ ಸಂಗಮದಲ್ಲಿ 36 ಲಕ್ಷಕ್ಕೂ ಹೆಚ್ಚು ಜನರು ತೀರ್ಥ ಸ್ನಾನ ಮಾಡಿದರು. ಅದರ ಡ್ರೋನ್ ವಿಡಿಯೋ ಇಲ್ಲಿದೆ. ಬುಧವಾರ ಮಧ್ಯರಾತ್ರಿಯಿಂದ ತೀರ್ಥ ಸ್ನಾನ ಪ್ರಾರಂಭವಾಯಿತು. ಇಂದು ಬೆಳಿಗ್ಗೆ 10 ಗಂಟೆಯ ಹೊತ್ತಿಗೆ 36 ಲಕ್ಷಕ್ಕೂ ಹೆಚ್ಚು ಜನರು ಧಾರ್ಮಿಕ ಸ್ನಾನ ಮಾಡಿದರು ಎಂದು ಮಾಘ ಮೇಳದ ಆಡಳಿತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

Video: ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ತಮ್ಮ ನಿವಾಸದಲ್ಲಿ ಗೋವುಗಳಿಗೆ ಮೇವು ನೀಡಿ ಅವುಗಳ ಜತೆ ಸ್ವಲ್ಪ ಸಮಯ ಕಳೆದಿದ್ದಾರೆ. ಪ್ರಧಾನಿ ಮೋದಿ ಭಾರತೀಯ ಸಂಪ್ರದಾಯ ಮತ್ತು ಸಾಂಸ್ಕೃತಿಕ ಮೌಲ್ಯಗಳ ಮೇಲಿನ ಗೌರವವನ್ನು ಪ್ರತಿಬಿಂಬಿಸುವ ಒಂದು ಸೂಚಕವಾಗಿ ಗೋಸೇವೆಯನ್ನು ಮಾಡಿದ್ದಾರೆ. ಇದಕ್ಕೂ ಮೊದಲು ಅವರು ಜನವರಿ 14 ರಂದು ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಗೋ ಸೇವೆ ಮಾಡಿದ್ದರು.

ಕುಟುಂಬದೊಂದಿಗೆ ಗಾಳಿಪಟ ಹಾರಿಸಿದ ಗೃಹ ಸಚಿವ ಅಮಿತ್ ಶಾ

ಗುಜರಾತ್‌ನಲ್ಲಿ ಉತ್ತರಾಯಣ ಆಚರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಕುಟುಂಬದೊಂದಿಗೆ ಗಾಳಿಪಟ ಹಾರಿಸಿ ಆನಂದಿಸಿದರು. ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಕುಟುಂಬ ಮತ್ತು ನರನ್‌ಪುರ ಪ್ರದೇಶದ ನಿವಾಸಿಗಳೊಂದಿಗೆ ಗಾಳಿಪಟ ಹಾರಿಸಿ ಆನಂದಿಸಿದರು. ಉತ್ತರ ಭಾರತದಲ್ಲಿ ಸಂಕ್ರಾಂತಿಯ ವೇಳೆ ಗಾಳಿಪಟ ಹಾರಿಸುವುದು ಸಂಪ್ರದಾಯವಾಗಿದೆ. ಹಾಗೇ, ಇಂದು ಬೆಳಗ್ಗೆ ಅಮಿತ್ ಶಾ ಜಮಾಲ್‌ಪುರ ಪ್ರದೇಶದ ಪ್ರಸಿದ್ಧ ಜಗನ್ನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಕೆಂಪೇಗೌಡ್ರು ಬೆಂಗಳೂರು ಕಟ್ಟಿದ್ದು ಹೇಗೆ? ಸಂಕ್ರಾಂತಿಗೂ ಕೆಂಪೇಗೌಡ್ರಿಗೂ ಇರೋ ನಂಟು ಬಿಚ್ಚಿಟ್ಟ ಧರ್ಮೇಂದ್ರ ಕುಮಾರ್

ಬೆಂಗಳೂರಿಗೆ ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂಬ ಬಿರುದುಗಳು ಇವೆ. ಇದನ್ನು ಕಟ್ಟಿ ಬೆಳೆಸಿದ್ದು ಕೆಂಪೇಗೌಡರು. ಹೌದು..ಜನವರಿ ಸಂಕ್ರಾಂತಿಯಂದೇ ಕೆಂಪೇಗೌಡರು ಬೆಂಗಳೂರು ಕಟ್ಟಲು ಶುರುಮಾಡಿದ ಪುಣ್ಯ ದಿನ. ಅವಿನ್ಯೂ ರಸ್ತೆಯಲ್ಲೇ ಭೂಮಿ ಪೂಜೆ ಮಾಡಿದ್ದರು. ಬಳಿಕ ಬೆಂಗಳೂರಿನ ಬೆಳವಣಿಗೆಗೆ ಅವರು ನೀಡಿದ ಕೊಡುಗೆಗಳು ಬಹಳ ಮಹತ್ವದ್ದಾಗಿವೆ.

Makara Jyothi: ಮಳೆಯ ಭೀತಿಯ ನಡುವೆಯೂ ಶಬರಿಮಲೆಯ ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನ

ಇಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆದ ಅಭೂತಪೂರ್ವ ಜನದಟ್ಟಣೆಯ ನಡುವೆಯೂ, ಬೆಟ್ಟದ ದೇವಾಲಯದಲ್ಲಿ ನಡೆದ ಮಕರವಿಳಕ್ಕು ಉತ್ಸವದಲ್ಲಿ ಭಕ್ತರು ಭಾಗವಹಿಸಿದ್ದರು. ಪವಿತ್ರ ಮಕರ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಯಾತ್ರಿಕರು ಈ ಆಚರಣೆಗೆ ಧಾವಿಸಿದರು. ಪವಿತ್ರ ಜ್ಯೋತಿಯನ್ನು ಬೆಳಗಿಸುವ ಸಾಂಪ್ರದಾಯಿಕ ಸ್ಥಳವಾದ ಪೊನ್ನಂಬಲಮೇಡು ಬೆಟ್ಟದ ಮೇಲಿರುವ ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡರು.

ಧಾರವಾಡ: ಇಳಕಲ್ ಸೀರೆ, ಬಗೆಬಗೆಯ ಊಟ; ಮಹಿಳೆಯರಲ್ಲಿ ಹಿಗ್ಗು ತಂದ ಸುಗ್ಗಿ ಹಬ್ಬ

Makara Sankranti: ಸಂಕ್ರಾಂತಿ, ಸೂರ್ಯ ತನ್ನ ಪಥ ಬದಲಾಯಿಸುವ ದಿನ. ಧಾರವಾಡದಲ್ಲಿ ಮಕರ ಸಂಕ್ರಾಂತಿಯನ್ನು ಮಹಿಳೆಯರು ಅತೀ ಸಂಭ್ರಮದಿಂದ ಆಚರಿಸಿದರು. ಬಗೆ ಬಗೆಯ ಅಡುಗೆ ಸವಿದು, ಜಾನಪದ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು. ಜಾನಪದ ಸಂಶೋಧನಾ ಕೇಂದ್ರದ ಸದಸ್ಯರ ಮಕರ ಸಂಕ್ರಾಂತಿ ಸಡಗರ ಹೀಗಿತ್ತು ಇಲ್ಲಿವೆ ಫೋಟೋಸ್​​.

ಕರ್ನಾಟಕದ ಜನರಿಗೆ ಕನ್ನಡದಲ್ಲೇ ಸಂಕ್ರಾಂತಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ

ಇಂದು ಮಕರ ಸಂಕ್ರಾಂತಿ. ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಈ ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ ಹಲವು ರಾಜ್ಯಗಳಲ್ಲಿ ಹಲವು ಹೆಸರುಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಹೀಗಾಗಿ, ಆಯಾ ರಾಜ್ಯದ ಜನರಿಗೆ ಆಯಾ ಭಾಷೆಯಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂಕ್ರಾಂತಿ ಹಾಗೂ ಪೊಂಗಲ್ ಶುಭಾಶಯ ಕೋರಿದ್ದಾರೆ. ಇಂದು ದೆಹಲಿಯಲ್ಲಿರುವ ದಕ್ಷಿಣ ಭಾರತದ ಸಂಸದರ ನಿವಾಸದಲ್ಲಿ ಪ್ರಧಾನಿ ಮೋದಿ ಪೊಂಗಲ್ ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ.

ಶಾಲೆಯೋ, ಹಳ್ಳಿಯೋ! ಹೇಗಿತ್ತು ನೋಡಿ ಮಯೂರ ಗ್ಲೋಬಲ್ ಸ್ಕೂಲ್ ಸಂಕ್ರಾಂತಿ ಸಂಭ್ರಮ

ದಾವಣಗೆರೆಯ ಮಯೂರ ಗ್ಲೋಬಲ್ ಸ್ಕೂಲ್‌ನಲ್ಲಿ ವಿಶೇಷ ಸಂಕ್ರಾಂತಿ ಸಂಭ್ರಮ ಆಯೋಜಿಸಲಾಗಿತ್ತು. ಶಾಲಾ ಆವರಣವನ್ನು ಹಳ್ಳಿಯ ವಾತಾವರಣದಂತೆ ರೂಪಿಸಿ, ಮಕ್ಕಳಿಗೆ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸಲಾಯಿತು. ಗೋ ಪೂಜೆ, ಬೀಸೋಕಲ್ಲು, ಎಳ್ಳು-ಬೆಲ್ಲ ಹಂಚಿಕೆ, ಸಾಂಪ್ರದಾಯಿಕ ಅಡುಗೆ ತಯಾರಿ ಮೂಲಕ ಸಂಕ್ರಾಂತಿ ಹಬ್ಬದ ಮಹತ್ವ ಮತ್ತು ಕೃಷಿ ಸಂಬಂಧವನ್ನು ಮಕ್ಕಳಿಗೆ ತಿಳಿಸಲಾಯಿತು. ಮಕ್ಕಳು ಸಂಭ್ರಮದಿಂದ ಪಾಲ್ಗೊಂಡ ಸಂಕ್ರಾಂತಿಯ ಫೋಟೋಗಳು ಇಲ್ಲಿವೆ, ನೋಡಿ.

ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್