AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sankranti

Sankranti

ಮಕರ ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು. ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು “ಎಳ್ಳು ಬೆಲ್ಲ”. ಮನೆಯಲ್ಲಿ ಎಳ್ಳ್ಳು ಬೆಲ್ಲವನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ “ಎಳ್ಳುಹಂಚುವುದು” ಸಂಕ್ರಾಂತಿಯ ಸಂಪ್ರದಾಯ. ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು, ಹಣ್ಣು ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಬೆಲ್ಲ, ಒಣ ಕೊಬ್ಬರಿ, ಹುರಿಗಡಲೆ, ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ “ಎಳ್ಳು ಬೆಲ್ಲ” ತಯಾರಿಸಲಾಗುತ್ತದೆ. ಕರ್ನಾಟಕದ ರೈತರಿಗೆ ಸುಗ್ಗಿ ಅಥವಾ ಸುಗ್ಗಿಯ ಹಬ್ಬ. ಈ ಮಂಗಳಕರ ದಿನದಂದು, ಯುವ ಹೆಣ್ಣುಮಕ್ಕಳು, ಮಕ್ಕಳು ಮತ್ತು ಹದಿಹರೆಯದವರು ಹೊಸ ಬಟ್ಟೆಗಳನ್ನು ಧರಿಸಿ ಒಂದು ತಟ್ಟೆಯಲ್ಲಿ ಎಳ್ಳುಬೆಲ್ಲದೊಂದಿಗೆ ಹತ್ತಿರದ ಜನರನ್ನು ಮತ್ತು ಸಂಬಂಧಿಗಳನ್ನು ಭೇಟಿಯಾಗಿ ಎಳ್ಳುಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ. “ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡೋಣ” ಎಂದು ಹೇಳಿಕೊಳ್ಳುತ್ತಾರೆ. ಪ್ಲೇಟ್ ಸಹ ಕಬ್ಬಿನ ತುಂಡು ವಿವಿಧ ಆಕಾರಗಳನ್ನು ಸಕ್ಕರೆ ಅಚ್ಚುಗಳನ್ನು ಹೊಂದಿರುತ್ತದೆ.

ಇನ್ನೂ ಹೆಚ್ಚು ಓದಿ

ಕುಟುಂಬದೊಂದಿಗೆ ಗಾಳಿಪಟ ಹಾರಿಸಿದ ಗೃಹ ಸಚಿವ ಅಮಿತ್ ಶಾ

ಗುಜರಾತ್‌ನಲ್ಲಿ ಉತ್ತರಾಯಣ ಆಚರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಕುಟುಂಬದೊಂದಿಗೆ ಗಾಳಿಪಟ ಹಾರಿಸಿ ಆನಂದಿಸಿದರು. ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಕುಟುಂಬ ಮತ್ತು ನರನ್‌ಪುರ ಪ್ರದೇಶದ ನಿವಾಸಿಗಳೊಂದಿಗೆ ಗಾಳಿಪಟ ಹಾರಿಸಿ ಆನಂದಿಸಿದರು. ಉತ್ತರ ಭಾರತದಲ್ಲಿ ಸಂಕ್ರಾಂತಿಯ ವೇಳೆ ಗಾಳಿಪಟ ಹಾರಿಸುವುದು ಸಂಪ್ರದಾಯವಾಗಿದೆ. ಹಾಗೇ, ಇಂದು ಬೆಳಗ್ಗೆ ಅಮಿತ್ ಶಾ ಜಮಾಲ್‌ಪುರ ಪ್ರದೇಶದ ಪ್ರಸಿದ್ಧ ಜಗನ್ನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಕೆಂಪೇಗೌಡ್ರು ಬೆಂಗಳೂರು ಕಟ್ಟಿದ್ದು ಹೇಗೆ? ಸಂಕ್ರಾಂತಿಗೂ ಕೆಂಪೇಗೌಡ್ರಿಗೂ ಇರೋ ನಂಟು ಬಿಚ್ಚಿಟ್ಟ ಧರ್ಮೇಂದ್ರ ಕುಮಾರ್

ಬೆಂಗಳೂರಿಗೆ ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಎಂಬ ಬಿರುದುಗಳು ಇವೆ. ಇದನ್ನು ಕಟ್ಟಿ ಬೆಳೆಸಿದ್ದು ಕೆಂಪೇಗೌಡರು. ಹೌದು..ಜನವರಿ ಸಂಕ್ರಾಂತಿಯಂದೇ ಕೆಂಪೇಗೌಡರು ಬೆಂಗಳೂರು ಕಟ್ಟಲು ಶುರುಮಾಡಿದ ಪುಣ್ಯ ದಿನ. ಅವಿನ್ಯೂ ರಸ್ತೆಯಲ್ಲೇ ಭೂಮಿ ಪೂಜೆ ಮಾಡಿದ್ದರು. ಬಳಿಕ ಬೆಂಗಳೂರಿನ ಬೆಳವಣಿಗೆಗೆ ಅವರು ನೀಡಿದ ಕೊಡುಗೆಗಳು ಬಹಳ ಮಹತ್ವದ್ದಾಗಿವೆ.

Makara Jyothi: ಮಳೆಯ ಭೀತಿಯ ನಡುವೆಯೂ ಶಬರಿಮಲೆಯ ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನ

ಇಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ನಡೆದ ಅಭೂತಪೂರ್ವ ಜನದಟ್ಟಣೆಯ ನಡುವೆಯೂ, ಬೆಟ್ಟದ ದೇವಾಲಯದಲ್ಲಿ ನಡೆದ ಮಕರವಿಳಕ್ಕು ಉತ್ಸವದಲ್ಲಿ ಭಕ್ತರು ಭಾಗವಹಿಸಿದ್ದರು. ಪವಿತ್ರ ಮಕರ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಸಾವಿರಾರು ಯಾತ್ರಿಕರು ಈ ಆಚರಣೆಗೆ ಧಾವಿಸಿದರು. ಪವಿತ್ರ ಜ್ಯೋತಿಯನ್ನು ಬೆಳಗಿಸುವ ಸಾಂಪ್ರದಾಯಿಕ ಸ್ಥಳವಾದ ಪೊನ್ನಂಬಲಮೇಡು ಬೆಟ್ಟದ ಮೇಲಿರುವ ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡರು.

ಧಾರವಾಡ: ಇಳಕಲ್ ಸೀರೆ, ಬಗೆಬಗೆಯ ಊಟ; ಮಹಿಳೆಯರಲ್ಲಿ ಹಿಗ್ಗು ತಂದ ಸುಗ್ಗಿ ಹಬ್ಬ

Makara Sankranti: ಸಂಕ್ರಾಂತಿ, ಸೂರ್ಯ ತನ್ನ ಪಥ ಬದಲಾಯಿಸುವ ದಿನ. ಧಾರವಾಡದಲ್ಲಿ ಮಕರ ಸಂಕ್ರಾಂತಿಯನ್ನು ಮಹಿಳೆಯರು ಅತೀ ಸಂಭ್ರಮದಿಂದ ಆಚರಿಸಿದರು. ಬಗೆ ಬಗೆಯ ಅಡುಗೆ ಸವಿದು, ಜಾನಪದ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಸಂಭ್ರಮಿಸಿದರು. ಜಾನಪದ ಸಂಶೋಧನಾ ಕೇಂದ್ರದ ಸದಸ್ಯರ ಮಕರ ಸಂಕ್ರಾಂತಿ ಸಡಗರ ಹೀಗಿತ್ತು ಇಲ್ಲಿವೆ ಫೋಟೋಸ್​​.

ಕರ್ನಾಟಕದ ಜನರಿಗೆ ಕನ್ನಡದಲ್ಲೇ ಸಂಕ್ರಾಂತಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ

ಇಂದು ಮಕರ ಸಂಕ್ರಾಂತಿ. ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಈ ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ ಹಲವು ರಾಜ್ಯಗಳಲ್ಲಿ ಹಲವು ಹೆಸರುಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಹೀಗಾಗಿ, ಆಯಾ ರಾಜ್ಯದ ಜನರಿಗೆ ಆಯಾ ಭಾಷೆಯಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂಕ್ರಾಂತಿ ಹಾಗೂ ಪೊಂಗಲ್ ಶುಭಾಶಯ ಕೋರಿದ್ದಾರೆ. ಇಂದು ದೆಹಲಿಯಲ್ಲಿರುವ ದಕ್ಷಿಣ ಭಾರತದ ಸಂಸದರ ನಿವಾಸದಲ್ಲಿ ಪ್ರಧಾನಿ ಮೋದಿ ಪೊಂಗಲ್ ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ.

ಶಾಲೆಯೋ, ಹಳ್ಳಿಯೋ! ಹೇಗಿತ್ತು ನೋಡಿ ಮಯೂರ ಗ್ಲೋಬಲ್ ಸ್ಕೂಲ್ ಸಂಕ್ರಾಂತಿ ಸಂಭ್ರಮ

ದಾವಣಗೆರೆಯ ಮಯೂರ ಗ್ಲೋಬಲ್ ಸ್ಕೂಲ್‌ನಲ್ಲಿ ವಿಶೇಷ ಸಂಕ್ರಾಂತಿ ಸಂಭ್ರಮ ಆಯೋಜಿಸಲಾಗಿತ್ತು. ಶಾಲಾ ಆವರಣವನ್ನು ಹಳ್ಳಿಯ ವಾತಾವರಣದಂತೆ ರೂಪಿಸಿ, ಮಕ್ಕಳಿಗೆ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸಲಾಯಿತು. ಗೋ ಪೂಜೆ, ಬೀಸೋಕಲ್ಲು, ಎಳ್ಳು-ಬೆಲ್ಲ ಹಂಚಿಕೆ, ಸಾಂಪ್ರದಾಯಿಕ ಅಡುಗೆ ತಯಾರಿ ಮೂಲಕ ಸಂಕ್ರಾಂತಿ ಹಬ್ಬದ ಮಹತ್ವ ಮತ್ತು ಕೃಷಿ ಸಂಬಂಧವನ್ನು ಮಕ್ಕಳಿಗೆ ತಿಳಿಸಲಾಯಿತು. ಮಕ್ಕಳು ಸಂಭ್ರಮದಿಂದ ಪಾಲ್ಗೊಂಡ ಸಂಕ್ರಾಂತಿಯ ಫೋಟೋಗಳು ಇಲ್ಲಿವೆ, ನೋಡಿ.

Makar Sankranti 2026: ಸಂಕ್ರಾಂತಿಯಂದು ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ; ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಮಕರ ಸಂಕ್ರಾಂತಿ ಉತ್ತರಾಯಣದ ಆರಂಭವನ್ನು ಸೂಚಿಸುವ ಪವಿತ್ರ ಹಬ್ಬ. ಈ ದಿನದಂದು ಮಾಡುವ ಸಣ್ಣ ತಪ್ಪುಗಳು ವರ್ಷವಿಡೀ ನಕಾರಾತ್ಮಕ ಪರಿಣಾಮ ಬೀರಬಹುದು. ದಕ್ಷಿಣ ದಿಕ್ಕಿಗೆ ಪ್ರಯಾಣ, ಕಪ್ಪು ಎಳ್ಳು ದಾನ, ತಾಮಸ ಆಹಾರ ಸೇವನೆ, ಕೋಪ ಮತ್ತು ಸುಳ್ಳು ಹೇಳುವುದನ್ನು ತಪ್ಪಿಸಿ. ಪೂಜೆ ಮತ್ತು ದಾನದಲ್ಲಿ ಎಚ್ಚರ ವಹಿಸಿ ಉತ್ತಮ ಭವಿಷ್ಯಕ್ಕಾಗಿ ಶುದ್ಧತೆ ಹಾಗೂ ಸಕಾರಾತ್ಮಕ ಚಿಂತನೆಗಳಿಂದ ಇರಿ.

ಸಂಕ್ರಾಂತಿ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸೌಮ್ಯ ರೆಡ್ಡಿ!

ನಗರದಲ್ಲಿ ಮಕರ ಸಂಕ್ರಾಂತಿ (Makar Sankranti) ಹಬ್ಬದ ಅಂಗವಾಗಿ ಲೋಹ್ರಿ ಆಚರಣೆಯನ್ನು ವಿಜೃಂಭಣೆಯಿಂದ ಆಯೋಜಿಸಲಾಗಿತ್ತು. ನಗರದ ಪಂಜಾಬಿ ಸಮುದಾಯದ ಮುಖಂಡರು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸೌಮ್ಯಾರೆಡ್ಡಿ ಭಾಗವಹಿಸಿ ಸಂಭ್ರಮಪಟ್ಟರು. ಈ ಹಬ್ಬದ ಆಚರಣೆಯು ಕೆಆರ್ ಮಾರುಕಟ್ಟೆ ಪ್ರದೇಶ ಸೇರಿದಂತೆ ಹಲವೆಡೆ ಹಬ್ಬದ ಕಳೆ ಹೆಚ್ಚಿಸಿತ್ತು. ಕಾರ್ಯಕ್ರಮದ ವೇಳೆ ಡೋಲು ಸದ್ದು ಕೇಳುತ್ತಿದ್ದಂತೆ, ಸೌಮ್ಯಾರೆಡ್ಡಿ ಅವರು ಸಖತ್ ಡ್ಯಾನ್ಸ್ ಮಾಡಿ ನೆರೆದಿದ್ದವರ ಗಮನ ಸೆಳೆದರು.

Video: ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್ ಆಚರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪೊಂಗಲ್ ಹಬ್ಬವನ್ನು ಆಚರಿಸಿದ್ದಾರೆ. ಪ್ರಧಾನಿ ಸಾಂಪ್ರದಾಯಿಕ ಪೂಜೆ ಮತ್ತು ಆರತಿಯನ್ನು ನೆರವೇರಿಸಿದ್ದಾರೆ. ಅಷ್ಟೇ ಅಲ್ಲದೆ ಗೋಸೇವೆ ಕೂಡ ಮಾಡಿದ್ದಾರೆ.ಪ್ರಕೃತಿಯ ಬಗ್ಗೆ ಕೃತಜ್ಞತೆಯನ್ನು ಪದಗಳಿಗೆ ಸೀಮಿತಗೊಳಿಸಬಾರದು, ಅದನ್ನು ನಮ್ಮ ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು ಎಂದು ಪೊಂಗಲ್ ಜನರಿಗೆ ಕಲಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಭೂಮಿಯು ನಮಗೆ ಇಷ್ಟೊಂದು ನೀಡಿದಾಗ, ಅದನ್ನು ಪಾಲಿಸುವುದು ನಮ್ಮ ಜವಾಬ್ದಾರಿಯಾಗಿದೆ. ಮಣ್ಣನ್ನು ಆರೋಗ್ಯಕರವಾಗಿಡುವುದು, ನೀರನ್ನು ಸಂರಕ್ಷಿಸುವುದು ಮತ್ತು ಸಂಪನ್ಮೂಲಗಳನ್ನು ವಿವೇಚನೆಯಿಂದ ಬಳಸುವುದು ಮುಂದಿನ ಪೀಳಿಗೆಗೆ ಅತ್ಯಂತ ಮುಖ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Makar Sankranti: ಮಕರ ಸಂಕ್ರಾಂತಿಗೆ ಈ ವಸ್ತು ಮನೆಗೆ ತನ್ನಿ; ನಿಮ್ಮ ಅದೃಷ್ಟವೇ ಬದಲಾಗಲಿದೆ

ಮಕರ ಸಂಕ್ರಾಂತಿಗೆ ಹಿಂದೂ ಸಂಪ್ರದಾಯದಲ್ಲಿ ವಿಶೇಷ ಮಹತ್ವವಿದೆ. ಈ ಶುಭ ದಿನದಂದು ಕೆಲವು ಅದೃಷ್ಟ ತರುವ ವಸ್ತುಗಳನ್ನು ಮನೆಗೆ ತರುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚಾಗಿ, ಆರ್ಥಿಕ ಸಮಸ್ಯೆಗಳು ದೂರವಾಗಿ ಲಕ್ಷ್ಮಿ ದೇವಿಯ ಅನುಗ್ರಹ ಲಭಿಸುತ್ತದೆ. ಗಾಳಿ ಗಂಟೆಗಳು, ಲೋಹದ ಆಮೆ, ಸ್ಫಟಿಕ, ಅದೃಷ್ಟದ ನಾಣ್ಯಗಳು ಮತ್ತು ಬಾತುಕೋಳಿ ಜೋಡಿಗಳು ಮನೆಯಲ್ಲಿ ಶಾಂತಿ ಮತ್ತು ಸಮೃದ್ಧಿ ತರಲು ಸಹಾಯಕವಾಗಿವೆ.

Happy Makara Sankranti 2026: ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿ

ನಾಡಿನೆಲ್ಲೆಡೆ ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯ ಸಂಭ್ರಮ. ಈ ದಿನ ಎಳ್ಳು ಬೆಲ್ಲ ಹಂಚುವ ಮೂಲಕ ಪ್ರೀತಿಯನ್ನು ಹಂಚಲಾಗುತ್ತದೆ. ಎಳ್ಳು ಬೆಲ್ಲದ ಜೊತೆಗೆ ಅರ್ಥಪೂರ್ಣವಾದ ಶುಭಾಶಯಗಳನ್ನು ತಿಳಿಸುವ ಮೂಲಕ ನಿಮ್ಮ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿ. ನಿಮ್ಮ ಆಪ್ತರಿಗೆ ವರ್ಷದ ಮೊದಲ ಹಬ್ಬದ ಶುಭಾಶಯಗಳನ್ನು ತಿಳಿಸಲು ಇಲ್ಲಿವೆ ಮುತ್ತಿನಂತಹ ಸಂದೇಶಗಳು.

ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ; ಹಾಡು, ನೃತ್ಯದ ವಿಡಿಯೋ ಇಲ್ಲಿದೆ

ಪೊಂಗಲ್ ಅಥವಾ ಸಂಕ್ರಾಂತಿ ಭಾರತದ ಅತ್ಯಂತ ವ್ಯಾಪಕವಾಗಿ ಗುರುತಿಸಲ್ಪಟ್ಟ ಹಿಂದೂ ಸುಗ್ಗಿಯ ಹಬ್ಬಗಳಲ್ಲಿ ಒಂದಾಗಿದೆ. ಇದನ್ನು ಭಾರತ ಮತ್ತು ಪ್ರಪಂಚದಾದ್ಯಂತ ತಮಿಳರು ಮತ್ತು ಕನ್ನಡಿಗರು ಆಚರಿಸುತ್ತಾರೆ. ಸೂರ್ಯ ದೇವರಿಗೆ ಸಮರ್ಪಿತವಾದ ಈ 4 ದಿನಗಳ ಆಚರಣೆಯು ಉತ್ತರಾಯಣ, ಸೂರ್ಯನ ಉತ್ತರಾಭಿಮುಖ ಪ್ರಯಾಣದ ಆರಂಭವನ್ನು ಸೂಚಿಸುತ್ತದೆ. ಈ ಕಾರ್ಯಕ್ರಮವನ್ನು ಪುದುಚೇರಿ ಸರ್ಕಾರಿ ಮದರ್ ತೆರೇಸಾ ಕಾಲೇಜಿನ ಪ್ರಾಂಶುಪಾಲರು ಮತ್ತು ಶಿಕ್ಷಕರು ಆಯೋಜಿಸಿದ್ದರು.