
Sankranti
ಮಕರ ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು. ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು “ಎಳ್ಳು ಬೆಲ್ಲ”. ಮನೆಯಲ್ಲಿ ಎಳ್ಳ್ಳು ಬೆಲ್ಲವನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ “ಎಳ್ಳುಹಂಚುವುದು” ಸಂಕ್ರಾಂತಿಯ ಸಂಪ್ರದಾಯ. ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು, ಹಣ್ಣು ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಬೆಲ್ಲ, ಒಣ ಕೊಬ್ಬರಿ, ಹುರಿಗಡಲೆ, ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ “ಎಳ್ಳು ಬೆಲ್ಲ” ತಯಾರಿಸಲಾಗುತ್ತದೆ. ಕರ್ನಾಟಕದ ರೈತರಿಗೆ ಸುಗ್ಗಿ ಅಥವಾ ಸುಗ್ಗಿಯ ಹಬ್ಬ. ಈ ಮಂಗಳಕರ ದಿನದಂದು, ಯುವ ಹೆಣ್ಣುಮಕ್ಕಳು, ಮಕ್ಕಳು ಮತ್ತು ಹದಿಹರೆಯದವರು ಹೊಸ ಬಟ್ಟೆಗಳನ್ನು ಧರಿಸಿ ಒಂದು ತಟ್ಟೆಯಲ್ಲಿ ಎಳ್ಳುಬೆಲ್ಲದೊಂದಿಗೆ ಹತ್ತಿರದ ಜನರನ್ನು ಮತ್ತು ಸಂಬಂಧಿಗಳನ್ನು ಭೇಟಿಯಾಗಿ ಎಳ್ಳುಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ. “ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡೋಣ” ಎಂದು ಹೇಳಿಕೊಳ್ಳುತ್ತಾರೆ. ಪ್ಲೇಟ್ ಸಹ ಕಬ್ಬಿನ ತುಂಡು ವಿವಿಧ ಆಕಾರಗಳನ್ನು ಸಕ್ಕರೆ ಅಚ್ಚುಗಳನ್ನು ಹೊಂದಿರುತ್ತದೆ.
7 ತಿಂಗಳ ಬಳಿಕ ಮೌನ ಮುರಿದ ನಟ ದರ್ಶನ್; ಅಭಿಮಾನಿಗಳಿಗೆ ಸಂಕ್ರಾಂತಿ ಸಂದೇಶ
ನಟ ದರ್ಶನ್ ಅವರು ಕಳೆದ ಹಲವು ತಿಂಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಏನನ್ನೂ ಪೋಸ್ಟ್ ಮಾಡಿರಲಿಲ್ಲ. ಇಂದು (ಜನವರಿ 14) ಸಂಕ್ರಾಂತಿ ಪ್ರಯುಕ್ತ ಅವರು ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ, ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ. ದರ್ಶನ್ ಅವರ ಈ ಪೋಸ್ಟ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.
- Madan Kumar
- Updated on: Jan 14, 2025
- 8:45 pm
ಗವಿಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶಿಸದಕ್ಕೆ ಗಂಡಾಂತರ ಇದ್ಯಾ? ಅರ್ಚಕರು ಹೇಳಿದ್ದೇನು?
ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ (Makar Sankranti) ದಿನವಾದ ಇಂದು ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯ (Gavi Gangadhareshwara Temple) ವಿಶೇಷ ವಿಸ್ಮಯಕ್ಕೆ ಮೋಡ ಅಡ್ಡಿ ಪಡಿಸಿದ್ದಾನೆ. ಈ ಬಾರಿ ಗವಿಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶವಾಗಿಲ್ಲ. ಇದರಿಂದ ಭಕ್ತರಿಗೆ ನಿರಾಸೆಯಾಗಿದೆ. ಇನ್ನು ಸೂರ್ಯರಶ್ಮಿ ಸ್ಪರ್ಶವಾಗದಿದ್ದಕ್ಕೆ ಮುಂದೆ ಗಂಡಾಂತರ ಕಾದಿದ್ಯಾ ಎನ್ನುವ ಆತಂಕ ಭಕ್ತರಲ್ಲಿ ಮನೆ ಮಾಡಿದೆ. ಇನ್ನು ಈ ಬಗ್ಗೆ ದೇವಸ್ಥಾನದ ಅರ್ಚಕರು ಪ್ರತಿಕ್ರಿಯಿಸಿದ್ದಾರೆ.
- Ramesh B Jawalagera
- Updated on: Jan 14, 2025
- 7:00 pm
ಬೆಂಗಳೂರಿನ ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿ, ಈ ಬಾರಿ ಕಾದಿದ್ಯಾ ಗಂಡಾಂತರ?
ದೇಶಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಜೋರಾಗಿದೆ. ದೇವಾಲಯ, ಗುಡಿ, ಗೋಪುರದಲ್ಲಿ ದೇವರಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನ ಗವಿಪುರದಲ್ಲಿರುವ ಗವಿಗಂಗಾಧರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಹಾಗೇ ಪ್ರತಿ ಸಂಕ್ರಮಣದಂದು ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿಯಾಗುತ್ತೆ. ಆದ್ರೆ, ಈ ಬಾರಿ ಸೂರ್ಯ ರಶ್ಮಿ ಸ್ಪರ್ಶಿವಾಗಿಲ್ಲ. ಇದರಿಂದ ಭಕ್ತರಿಗೆ ನಿರಾಸೆಯಾಗಿದೆ. ಹಾಗಾದ್ರೆ, ಸೂರ್ಯ ರಶ್ಮಿ ಸ್ಪರ್ಶಿಸದಕ್ಕೆ ಕಾರಣವೇನು? ಈ ಬಾರಿ ಕಾದಿದ್ಯಾ ಗಂಡಾಂತರ?
- Web contact
- Updated on: Jan 14, 2025
- 7:05 pm
ಅಹಮದಾಬಾದ್ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಅಹಮದಾಬಾದ್ನ ಕಟ್ಟಡವೊಂದರ ಮೇಲ್ಛಾವಣಿಯಿಂದ ಗಾಳಿಪಟ ಹಾರಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮಕರ ಸಂಕ್ರಾಂತಿಯ ದಿನವಾದ ಇಂದು ಗಾಳಿಪಟ ಹಾರಿಸುವ ಸಂಪ್ರದಾಯ ಹಲವು ಕಡೆಯಿದೆ. ಪ್ರತಿ ವರ್ಷ ಜನವರಿ 14ರಂದು ದೇಶಾದ್ಯಂತ ಆಚರಿಸಲಾಗುವ ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವುದು ಒಂದು ಸಂಪ್ರದಾಯವಾಗಿದೆ.
- Sushma Chakre
- Updated on: Jan 14, 2025
- 5:39 pm
Makar Sankranti 2025: ಮಕರ ಸಂಕ್ರಾಂತಿ; ಸೂರ್ಯ ಸಂಕ್ರಮಣ, ಆಚರಣೆ ಮತ್ತು ಮಹತ್ವ
ಮಕರ ಸಂಕ್ರಾಂತಿಯು ಸೂರ್ಯನ ದಕ್ಷಿಣಾಯನದಿಂದ ಉತ್ತರಾಯನಕ್ಕೆ ಸಂಕ್ರಮಣವನ್ನು ಸೂಚಿಸುತ್ತದೆ. ಈ ದಿನ ಹಗಲು ರಾತ್ರಿಗಳು ಸಮಾನವಾಗಿರುತ್ತವೆ. ಎಳ್ಳುಬೆಲ್ಲದ ವಿತರಣೆ, ಹೊಸ ಧಾನ್ಯಗಳನ್ನು ಸೂರ್ಯನಿಗೆ ಅರ್ಪಿಸುವುದು ಮುಂತಾದ ಆಚರಣೆಗಳು ನಡೆಯುತ್ತವೆ. ನದೀ ಸ್ನಾನ, ಸೂರ್ಯನಮಸ್ಕಾರ, ಆದಿತ್ಯಹೃದಯ ಪಠಣ ಮುಂತಾದವು ಆರೋಗ್ಯಕರ ಮತ್ತು ಶ್ರೇಯಸ್ಕರವೆಂದು ಪರಿಗಣಿಸಲಾಗಿದೆ.
- Lohitha Hebbar
- Updated on: Jan 14, 2025
- 9:57 am
ಮಕರ ಸಂಕ್ರಮಣ: ಗವಿಗಂಗಾಧರೇಶ್ವರ ದೇಗುಲದಲ್ಲಿ ಶಿವಲಿಂಗವನ್ನು ಸ್ಪರ್ಶಿಸಲಿದೆ ಸೂರ್ಯ ರಶ್ಮಿ
ಬೆಂಗಳೂರಿನ ಬಸವನಗುಡಿಯ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯಂದು ಸೂರ್ಯನ ಕಿರಣಗಳು ಶಿವಲಿಂಗವನ್ನು ಸ್ಪರ್ಶಿಸುವ ಅಪರೂಪದ ಘಟನೆಗೆ ಭಕ್ತರು ಸಾಕ್ಷಿಯಾಗಲಿದ್ದಾರೆ. ಸಂಜೆ 5:14ಕ್ಕೆ ಈ ಅದ್ಭುತ ಘಟನೆ ಸಂಭವಿಸಲಿದೆ. ಸೂರ್ಯನ ಕಿರಣ ಮೊದಲು ದೇವರ ಪಾದ ಸ್ಪರ್ಶಿಸಿ ನಂತರ ಶಿವಲಿಂಗವನ್ನು ಸ್ಪರ್ಶಿಸುತ್ತದೆ. ಇಂದು ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಈ ಹಿನ್ನಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಿದ್ದು ಗಂಗಾಧರನ ದರ್ಶನ ಪಡೆಯುತ್ತಿದ್ದಾರೆ.
- Vivek Biradar
- Updated on: Jan 14, 2025
- 8:01 am
ದೆಹಲಿಯ ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಉತ್ತರ ಭಾರತದಲ್ಲಿ ಲೋಹ್ರಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿಯ ಹಿಂದಿನ ದಿನ ಇದನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಲೋಹ್ರಿಯನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನರೈನಾ ಗ್ರಾಮಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಲೋಹ್ರಿಯ ಪವಿತ್ರ ಬೆಂಕಿಯನ್ನು ಬೆಳಗಿಸಿ, ಅಲ್ಲಿ ವಾಸಿಸುವ ಜನರೊಂದಿಗೆ ಸಂವಾದ ನಡೆಸಿದ್ದಾರೆ. ಮಕರ ಸಂಕ್ರಾಂತಿಯ ಮುನ್ನಾದಿನದಂದು ಕುಟುಂಬದವರು ಮತ್ತು ನೆರೆಹೊರೆಯ ಜನರು ರಾತ್ರಿಯಲ್ಲಿ ತೆರೆದ ಸ್ಥಳದಲ್ಲಿ ಬೆಂಕಿಯ ಸುತ್ತಲೂ ವೃತ್ತಾಕಾರದಲ್ಲಿ ಕುಳಿತು ರೇವ್ಡಿ, ಕಡಲೆಕಾಯಿ ಮತ್ತು ಲಾವಾ ಇತ್ಯಾದಿಗಳನ್ನು ತಿನ್ನುವ ಮೂಲಕ ಲೋಹ್ರಿ ಹಬ್ಬವನ್ನು ಆಚರಿಸುತ್ತಾರೆ.
- Sushma Chakre
- Updated on: Jan 13, 2025
- 9:19 pm
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ತೆಲಂಗಾಣ ಬಿಜೆಪಿ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರ ದೆಹಲಿ ನಿವಾಸದಲ್ಲಿ ಇಂದು ಸಂಜೆ ಆಯೋಜಿಸಲಾಗಿದ್ದ ಸಂಕ್ರಾಂತಿ, ಪೊಂಗಲ್ ಆಚರಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದಾರೆ. ದಕ್ಷಿಣ ಭಾರತದಲ್ಲಿ ವಿಶೇಷವಾಗಿ ಆಚರಿಸಲಾಗುವ ಸಂಕ್ರಾಂತಿ ಹಬ್ಬದ ಆಚರಣೆಗಳನ್ನು ಪ್ರಧಾನಿ ಮೋದಿ ಕೂಡ ನೆರವೇರಿಸಿದ್ದಾರೆ. ಮುಂಬರುವ ಋತುವಿನಲ್ಲಿ ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಸಮೃದ್ಧ ಸುಗ್ಗಿಯನ್ನು ನಾನು ಬಯಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
- Sushma Chakre
- Updated on: Jan 13, 2025
- 8:41 pm
International Kite Day 2025: ಭಾರತದಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ದಿನ ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ
ಆಕಾಶದಲ್ಲಿ ಬಣ್ಣ ಬಣ್ಣದ ಗಾಳಿಪಟಗಳು ಹಾರಾಡುವುದನ್ನು ನೋಡುತ್ತಿದ್ದರೆ ನಮ್ಮ ಬಾಲ್ಯದ ನೆನಪುಗಳು ತೆರೆದುಕೊಳ್ಳುತ್ತದೆ. ಹೌದು, ಈ ಗಾಳಿಪಟಕ್ಕೂ ಒಂದು ದಿನವನ್ನು ಮೀಸಲಿಡಲಾಗಿದೆ. ಭಾರತದಲ್ಲಿ ಪ್ರತಿ ವರ್ಷ ಜನವರಿ 14 ರಂದು ಅಂತಾರಾಷ್ಟ್ರೀಯ ಗಾಳಿಪಟ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಹಾಗಾದ್ರೆ ಈ ದಿನದ ಆಚರಣೆಯು ಹುಟ್ಟಿಕೊಂಡದ್ದು ಹೇಗೆ? ಏನಿದರ ವಿಶೇಷತೆ ? ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ
- Sainandha P
- Updated on: Jan 13, 2025
- 6:58 pm
Makar Sankranti 2025: ಸಂಕ್ರಾಂತಿ ಹಬ್ಬಕ್ಕೆ ಸುಲಭವಾಗಿ ಬಿಡಿಸಬಹುದಾದ ಆಕರ್ಷಕ ರಂಗೋಲಿ ವಿನ್ಯಾಸಗಳಿವು
ಹಬ್ಬಗಳು ಹತ್ತಿರ ಬರುತ್ತಿದ್ದಂತೆ ಮನೆಯ ಅಲಂಕಾರದ ಕಡೆಗೆ ಮಹಿಳೆಯರು ಹೆಚ್ಚು ಗಮನ ಕೊಡುತ್ತಾರೆ. ಇದೀಗ ಎಲ್ಲರ ಮನೆಯಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆಗಳನ್ನು ಮಾಡುತ್ತಿದ್ದು , ಮನೆಯ ಮುಂಭಾಗದಲ್ಲಿ ವಿವಿಧ ವಿನ್ಯಾಸದ ರಂಗೋಲಿ ಹಾಕಿ ಮನೆಯನ್ನು ಆಕರ್ಷಕವಾಗಿ ಕಾಣುವಂತೆ ಮಾಡಬಹುದು. ಹಾಗಾದ್ರೆ ಮಕರ ಸಂಕ್ರಾಂತಿ ಹಬ್ಬಕ್ಕೆ ಆಕರ್ಷಕ ರಂಗೋಲಿ ವಿನ್ಯಾಸವನ್ನು ಆಯ್ಕೆ ಮಾಡಿಕೊಳ್ಳಿ, ಈ ಕುರಿತಾದ ಸಿಂಪಲ್ ಟಿಪ್ಸ್ ಇಲ್ಲಿದೆ.
- Sainandha P
- Updated on: Jan 13, 2025
- 6:38 pm