AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan

Shah Rukh Khan

ಶಾರುಖ್ ಖಾನ್ ಅವರು ಬಾಲಿವುಡ್ನ ಬೇಡಿಕೆಯ ಹೀರೋ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಶಾರುಖ್ ಖಾನ್ ಜನಿಸಿದ್ದು 1965ರ ನವೆಂಬರ್ 2ರಂದು. ಅವರ ಆಸ್ತಿ ಮೌಲ್ಯ 6500 ಕೋಟಿ ರೂಪಾಯಿಗೂ ಮೀರಿದೆ. ಭಾರತದ ಅತ್ಯಂತ ಶ್ರೀಮಂತ ನಟ ಎನ್ನುವ ಹೆಗ್ಗಳಿಕೆ ಇವರಿಗೆ ಇದೆ.

ಶಾರುಖ್ ಖಾನ್ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಸಾಲು ಸಾಲು ಸಿನಿಮಾ ಮಾಡಿ ಫೇಮಸ್ ಆದರು. ಶಾರುಖ್ ಖಾನ್ ‘ಡಿಡಿಎಲ್ಜೆ’, ‘ಡಾನ್’, ‘ಡಾನ್ 2’, ‘ಚೆನ್ನೈ ಎಕ್ಸ್ಪ್ರೆಸ್’ ಸೇರಿ ಹಲವು ಸೂಪರ್ ಹಿಟ್ ಚಿತ್ರ ನೀಡಿದ್ದಾರೆ.

2023ರಲ್ಲಿ ರಿಲೀಸ್ ಆದ ‘ಪಠಾಣ್’, ‘ಜವಾನ್’ ಹಿಟ್ ಆಗಿವೆ. ಗೌರಿ ಖಾನ್ ಅವರನ್ನು ಶಾರುಖ್ ಮದುವೆ ಆಗಿದ್ದು, ಸುಹಾನಾ ಖಾನ್, ಆರ್ಯನ್ ಖಾನ್ ಹಾಗೂ ಅಬ್ರಾಮ್ ಖಾನ್ ಹೆಸರಿನ ಮಕ್ಕಳು ಇವರಿಗೆ ಇದ್ದಾರೆ.

ಇನ್ನೂ ಹೆಚ್ಚು ಓದಿ

‘ಜೈಲರ್ 2’ ಸಿನಿಮಾದಲ್ಲಿ ಪವನ್ ಕಲ್ಯಾಣ್? ಶಾರುಖ್ ಮಾಡಬೇಕಿದ್ದ ಪಾತ್ರ ಈಗ ಪವರ್ ಸ್ಟಾರ್ ಪಾಲು

ರಜನಿಕಾಂತ್ ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದಲ್ಲಿ ಅಭಿನಯಿಸಲು ಶಾರುಖ್ ಖಾನ್ ಒಪ್ಪಿಕೊಂಡಿಲ್ಲ. ಅವರ ಬದಲಿಗೆ ಪವನ್ ಕಲ್ಯಾಣ್ ಹೆಸರು ಕೇಳಿಬರುತ್ತಿದೆ. ಈ ಸಿನಿಮಾದಲ್ಲಿ ಅನೇಕ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ. ಹಾಗಾಗಿ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಆ ಕುರಿತು ಇಲ್ಲಿದೆ ವಿವರ..

ರಣವೀರ್​​ ತಲೆಗೇರಿತೇ ‘ಧುರಂಧರ್ 2’ ಯಶಸ್ಸು? ನಡೆದುಕೊಂಡ ರೀತಿಗೆ ಶುರುವಾಗಿದೆ ಚರ್ಚೆ

ರಣವೀರ್ ಸಿಂಗ್‌ಗೆ 'ಧುರಂಧರ್ 2' ಯಶಸ್ಸು ತಲೆಗೇರಿದೆ ಎಂಬ ಚರ್ಚೆ ಶುರುವಾಗಿದೆ. ಅನಂತ್ ಅಂಬಾನಿ ಪಾರ್ಟಿಯಲ್ಲಿ ಶಾರುಖ್ ಖಾನ್ ಅವರನ್ನು ರಣವೀರ್ ನಿರ್ಲಕ್ಷಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಘಟನೆ ರಣವೀರ್ ವರ್ತನೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ, ಇನ್ನೊಂದು ಪಾರ್ಟಿಯಲ್ಲಿ ಶಾರುಖ್ ಮತ್ತು ರಣವೀರ್ ಒಟ್ಟಾಗಿ ಕಾಣಿಸಿಕೊಂಡಿದ್ದು, ವಿವಾದಕ್ಕೆ ಬೇರೆ ಆಯಾಮ ನೀಡಿದೆ.

ರಣವೀರ್ ಸಿಂಗ್ ಕೆನ್ನೆ ಮುಟ್ಟಿ ಮಾತಾಡಿಸಿದ ಶಾರುಖ್ ಖಾನ್; ವಿಡಿಯೋ ವೈರಲ್

ರಣವೀರ್ ಸಿಂಗ್ ಮತ್ತು ಶಾರುಖ್ ಖಾನ್ ನಡುವೆ ಅಸಮಾಧಾನ ಇದೆಯಾ ಎಂಬ ಪ್ರಶ್ನೆ ಹಲವರಿಗೆ ಇತ್ತು. ಆದರೆ ವೈರಲ್ ಆಗಿರುವ ವಿಡಿಯೋದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಸಿಕ್ಕಿದೆ. ರಣವೀರ್ ಸಿಂಗ್ ಅವರನ್ನು ಶಾರುಖ್ ಖಾನ್ ಬಹಳ ಆತ್ಮೀಯವಾಗಿ ಮಾತನಾಡಿಸಿದ್ದಾರೆ. ಪಾರ್ಟಿಯಲ್ಲಿ ಅವರಿಬ್ಬರು ಭೇಟಿ ಆದ ವಿಡಿಯೋ ಗಮನ ಸೆಳೆದಿದೆ.

ಶಾರುಖ್ ಖಾನ್​ಗೂ ತಟ್ಟಿತು ಯುದ್ಧದ ಬಿಸಿ; ಮುಂಬೈನಲ್ಲೇ ಸೃಷ್ಟಿ ಆಗಲಿದೆ ಮರುಭೂಮಿ

ಶಾರುಖ್ ಖಾನ್, ಸುಹಾನಾ ಖಾನ್ ನಟನೆಯ ‘ಕಿಂಗ್’ ಸಿನಿಮಾದ ಪ್ಲ್ಯಾನ್ ತಲೆಕೆಳಗಾಗಿದೆ. ದುಬೈ ಬದಲು ಮುಂಬೈನಲ್ಲೇ ಈ ಚಿತ್ರಕ್ಕೆ ಶೂಟಿಂಗ್ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಇದು ಶಾರುಖ್ ಖಾನ್ ಅವರ ಬಹುನಿರೀಕ್ಷಿತ ಸಿನಿಮಾ. ಸಿದ್ದಾರ್ಥ್ ಆನಂದ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

‘ಧುರಂಧರ್ 2’ ಬಗ್ಗೆ ಶಾರುಖ್ ಖಾನ್​ ಮೌನ: ಆದರೂ ರಣವೀರ್ ಸಿಂಗ್ ಜೊತೆ ಪಾರ್ಟಿ

‘ಧುರಂಧರ್ 2’ ಬಗ್ಗೆ ಅನೇಕ ಸೆಲೆಬ್ರಿಟಿಗಳು ಹೊಗಳಿದ್ದರೂ ಕೂಡ ಶಾರುಖ್ ಖಾನ್ ಮೌನ ತಾಳಿದ್ದಾರೆ. ರಣವೀರ್ ಸಿಂಗ್ ಬಗ್ಗೆ ಅವರಿಗೆ ಅಸಮಾಧಾನ ಇರಬಹುದಾ ಎಂಬ ಅನುಮಾನ ಹಲವರಿಗೆ ಮೂಡಿತ್ತು. ಆದರೆ ಈಗ ಶಾರುಖ್ ಮತ್ತು ರಣವೀರ್ ಸಿಂಗ್ ಒಟ್ಟಿಗೆ ಪಾರ್ಟಿ ಮಾಡಿ, ಅನುಮಾನಕ್ಕೆ ತೆರೆ ಎಳೆದಿದ್ದಾರೆ.

‘ಶಾರುಖ್ ಖಾನ್ ಬಳಿ ನಾನು ಲಂಚ ಕೇಳಿಲ್ಲ’: ಬಾಂಬೆ ಹೈಕೋರ್ಟ್‌ನಲ್ಲಿ ಸಮೀರ್ ವಾಂಖೆಡೆ ವಾದ

ಆರ್ಯನ್ ಖಾನ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಚದ ಆರೋಪ ಎದುರಿಸುತ್ತಿರುವ ಮಾಜಿ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ, ಈಗ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಶಾರುಖ್ ಖಾನ್ ಅವರಿಂದ ತಾವು ಯಾವುದೇ ಹಣದ ಬೇಡಿಕೆ ಇಟ್ಟಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಶಾರುಖ್ ನಟನೆಯ ‘ಕಿಂಗ್’ ಸಿನಿಮಾದಲ್ಲಿ ಚಿತ್ರರಂಗದ ಮುಕ್ಕಾಲು ಭಾಗ ಕಲಾವಿದರು

‘ಕಿಂಗ್’ ಸಿನಿಮಾದಲ್ಲಿ ಶಾರುಖ್ ಖಾನ್ ಜೊತೆ ಅನೇಕ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ. ಈ ಬಗ್ಗೆ ಖ್ಯಾತ ನಟ ಸೌರಭ್ ಶುಕ್ಲಾ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಮಾತಾಡಿದ್ದಾರೆ. ಚಿತ್ರರಂಗದ ಶೇಕಡ 70ರಷ್ಟು ಕಲಾವಿದರು ಈ ಸಿನಿಮಾದಲ್ಲಿ ಇದ್ದಾರೆ ಎಂದು ಅವರು ಹೇಳಿದ್ದಾರೆ.

ಆರ್ಯನ್ ಖಾನ್ ಅಸಭ್ಯ ವರ್ತನೆ ಕೇಸ್​​​ಗೆ ಇತಿಶ್ರೀ; ದೊಡ್ಡವರ ಒತ್ತಡ?

ಬೆಂಗಳೂರಿನಲ್ಲಿ ಆರ್ಯನ್ ಖಾನ್ ಅಸಭ್ಯ ವರ್ತನೆ ಪ್ರಕರಣಕ್ಕೆ ಬೆಂಗಳೂರು ಪೊಲೀಸರು ಸಾಕ್ಷ್ಯಾಧಾರಗಳ ಕೊರತೆಯಿಂದ ಇತಿಶ್ರೀ ಹಾಡಲು ಸಿದ್ಧತೆ ನಡೆಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಪಬ್ ಉದ್ಘಾಟನೆ ವೇಳೆ ಮಧ್ಯ ಬೆರಳು ತೋರಿಸಿ ವಿಡಿಯೋ ವೈರಲ್ ಆಗಿತ್ತು. ಕಬ್ಬನ್ ಪಾರ್ಕ್ ಪೊಲೀಸರು ತನಿಖೆ ನಡೆಸಿ, ಉದ್ದೇಶಪೂರ್ವಕ ವರ್ತನೆಯಲ್ಲ ಎಂದು ನಿರ್ಧರಿಸಿದ್ದಾರೆ. ಇದರಿಂದ ದೂರುದಾರ ವಕೀಲ ಹುಸೇನ್ ಅಸಮಾಧಾನಗೊಂಡಿದ್ದಾರೆ.

ಒಂದೇ ವರ್ಷದಲ್ಲಿ ಅಕ್ಷಯ್ ಖನ್ನಾ ಸಿನಿಮಾಗಳ ಕಲೆಕ್ಷನ್ 2 ಸಾವಿರ ಕೋಟಿ ರೂಪಾಯಿ!

‘ಧುರಂಧರ್’ ಸಿನಿಮಾದ ಯಶಸ್ಸಿನಿಂದ ಬಾಲಿವುಡ್ ನಟ ಅಕ್ಷಯ್ ಖನ್ನಾ ಅವರು ಸೂಪರ್ ಸ್ಟಾರ್ ಆಗಿದ್ದಾರೆ. 2025ರಲ್ಲಿ ಅವರು ನಟಿಸಿದ ಎರಡು ಸಿನಿಮಾಗಳು ಬ್ಲಾಕ್ ಬಸ್ಟರ್ ಹಿಟ್ ಆಗಿ ಅಪಾರ ಖ್ಯಾತಿ ತಂದುಕೊಟ್ಟಿವೆ. ಬಾಕ್ಸ್ ಆಫೀಸ್​ ಕಲೆಕ್ಷನ್ ವಿಚಾರದಲ್ಲಿ ಅಕ್ಷಯ್ ಖನ್ನಾ ಅವರು ಒಂದು ಅಪರೂಪದ ದಾಖಲೆ ಮಾಡಿದ್ದಾರೆ.

ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಬಾಯ್ಬಿಟ್ಟ ಸ್ಟಾರ್ ನಟ

ಹಿಂದಿ ಚಿತ್ರರಂಗದ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳಿಗೆ ಸಖತ್ ಖುಷಿ ಆಗಿದೆ. ಸಿನಿಮಾದ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ಶಾರುಖ್ ಖಾನ್, ರಜನಿಕಾಂತ್, ಶಿವಣ್ಣ ಅವರನ್ನು ಒಟ್ಟಿಗೆ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

‘ಕಿಂಗ್’ ಸಿನಿಮಾ ಬಿಡುಗಡೆಗೂ ಮುನ್ನವೇ ಹಾಡು ಸೋರಿಕೆ?

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ರೊಮ್ಯಾಂಟಿಕ್ ಹಾಡು ಗಮನ ಸೆಳೆದಿದೆ. ಇವರು ಡ್ಯಾನ್ಸ್ ಮಾಡುತ್ತಿದ್ದು ಹಿನ್ನೆಲೆಯಲ್ಲಿ ಒಂದು ಹಾಡು ಪ್ಲೇ ಆಗುತ್ತಿದೆ. ಇಬ್ಬರ ನಡುವಿನ ಚುಂಬನ ದೃಶ್ಯವೂ ವೀಡಿಯೊದಲ್ಲಿ ಕಂಡುಬರುತ್ತದೆ. ಈ ಕಾರಣದಿಂದಾಗಿ, ಸೋರಿಕೆಯಾದ ಈ ವೀಡಿಯೊ ನಿಜವಾಗಿಯೂ 'ಕಿಂಗ್' ಚಿತ್ರದ್ದೇ ಎಂದು ಅಭಿಮಾನಿಗಳಲ್ಲಿ ಗೊಂದಲ ಉಂಟಾಗಿದೆ.

Shahrukhz Tower: ಶಾರುಕ್ ಖಾನ್ ಎಂದ್ರೆ ದುಬೈನಲ್ಲಿ ಬಲು ಕ್ರೇಜ್; ಅವರ ಹೆಸರಿನ ಟವರ್​ಗೆ 5,000 ಕೋಟಿ ರೂಗೂ ಅಧಿಕ ಬೆಲೆ

Danube Group sells Sharukhz Tower for Rs 5,000 crore in Dubai: ದುಬೈನ ಶೇಖ್ ಜಾಯೇದ್ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಶಾರುಖ್ಸ್ ಟವರ್ 5,000 ಕೋಟಿ ರೂಗೆ ಮಾರಾಟವಾಗಿದೆ. 3,500 ಕೋಟಿ ರೂ ವೆಚ್ಚದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಹೆಸರಿನ ಈ 55 ಮಹಡಿಯ ಕಮರ್ಷಿಯಲ್ ಟವರ್​ಗೆ ನಿರೀಕ್ಷೆಮೀರದ ಬೆಲೆ ಸಿಕ್ಕಿದೆ. ಮುಂಬೈ ಸಂಜಾತ ರಿಜ್ವಾಲ್ ಸಾಜನ್ ಮಾಲೀಕರಾಗಿರುವ ಡ್ಯಾನೂಬ್ ಗ್ರೂಪ್ ಈ ಕಮರ್ಷಿಯಲ್ ಟವರ್ ಕಟ್ಟುತ್ತಿದೆ.

ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ
ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ
ಮೊದಲ ಹೆಜ್ಜೆಯನ್ನಿಟ್ಟ ಮಗಳನ್ನು ಕಂಡು ಭಾವುಕಳಾದ ತಾಯಿ!
ಮೊದಲ ಹೆಜ್ಜೆಯನ್ನಿಟ್ಟ ಮಗಳನ್ನು ಕಂಡು ಭಾವುಕಳಾದ ತಾಯಿ!
ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?: ಸಿದ್ದರಾಮಯ್ಯರಿಂದಲೇ ಸಿಕ್ತು ಉತ್ತರ
ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?: ಸಿದ್ದರಾಮಯ್ಯರಿಂದಲೇ ಸಿಕ್ತು ಉತ್ತರ
"ಬ್ರೋ ಕೊನೆಗೂ ಪ್ರೀತಿ ಜಿಂಟಾ ಅಪ್ಪುಗೆ ಸಿಕ್ತು!"