AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan

Shah Rukh Khan

ಶಾರುಖ್ ಖಾನ್ ಅವರು ಬಾಲಿವುಡ್ನ ಬೇಡಿಕೆಯ ಹೀರೋ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಶಾರುಖ್ ಖಾನ್ ಜನಿಸಿದ್ದು 1965ರ ನವೆಂಬರ್ 2ರಂದು. ಅವರ ಆಸ್ತಿ ಮೌಲ್ಯ 6500 ಕೋಟಿ ರೂಪಾಯಿಗೂ ಮೀರಿದೆ. ಭಾರತದ ಅತ್ಯಂತ ಶ್ರೀಮಂತ ನಟ ಎನ್ನುವ ಹೆಗ್ಗಳಿಕೆ ಇವರಿಗೆ ಇದೆ.

ಶಾರುಖ್ ಖಾನ್ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಸಾಲು ಸಾಲು ಸಿನಿಮಾ ಮಾಡಿ ಫೇಮಸ್ ಆದರು. ಶಾರುಖ್ ಖಾನ್ ‘ಡಿಡಿಎಲ್ಜೆ’, ‘ಡಾನ್’, ‘ಡಾನ್ 2’, ‘ಚೆನ್ನೈ ಎಕ್ಸ್ಪ್ರೆಸ್’ ಸೇರಿ ಹಲವು ಸೂಪರ್ ಹಿಟ್ ಚಿತ್ರ ನೀಡಿದ್ದಾರೆ.

2023ರಲ್ಲಿ ರಿಲೀಸ್ ಆದ ‘ಪಠಾಣ್’, ‘ಜವಾನ್’ ಹಿಟ್ ಆಗಿವೆ. ಗೌರಿ ಖಾನ್ ಅವರನ್ನು ಶಾರುಖ್ ಮದುವೆ ಆಗಿದ್ದು, ಸುಹಾನಾ ಖಾನ್, ಆರ್ಯನ್ ಖಾನ್ ಹಾಗೂ ಅಬ್ರಾಮ್ ಖಾನ್ ಹೆಸರಿನ ಮಕ್ಕಳು ಇವರಿಗೆ ಇದ್ದಾರೆ.

ಇನ್ನೂ ಹೆಚ್ಚು ಓದಿ

ಲಂಡನ್‌ನಲ್ಲಿ ಫ್ಯಾಮಿಲಿ ಜತೆ ಶಾರುಖ್ ಖಾನ್ ಸುತ್ತಾಟ: ವಿದ್ಯಾರ್ಥಿಗಳ ಪ್ರತಿಭಟನೆಗೆ ನಟನ ಮೌನ ಪ್ರಶ್ನಿಸಿದ ನೆಟ್ಟಿಗರು

ದೇಶಾದ್ಯಂತ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಹಲವು ಸೆಲೆಬ್ರಿಟಿಗಳು ಮಾತನಾಡಿದ್ದಾರೆ. ಆದರೆ ಶಾರುಖ್ ಖಾನ್ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಆದ್ದರಿಂದ ನೆಟ್ಟಿಗರು ಅವರ ಮೇಲೆ ಗರಂ ಆಗಿದ್ದಾರೆ. ಸದ್ಯ ಲಂಡನ್​ನಲ್ಲಿ ಹೆಂಡತಿ-ಮಕ್ಕಳ ಜೊತೆ ಸುತ್ತಾಡುತ್ತಿರುವ ಶಾರುಖ್ ಖಾನ್ ಅವರನ್ನು ಜನರು ಟ್ರೋಲ್ ಮಾಡಿದ್ದಾರೆ. ಆದರೆ ಅಪ್ಪಟ ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ.

ಶಾರುಖ್ ಖಾನ್‌ ಒಡೆತನದ ಮನ್ನತ್ ಬಂಗಲೆಯ ನವೀಕರಣ ಪ್ರಶ್ನಿಸಿದ್ದ ಅರ್ಜಿ ವಜಾ

ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಅವರು ಮನ್ನತ್ ಬಂಗಲೆಯ ಆವರಣದಲ್ಲಿರುವ ಆರು ಅಂತಸ್ತಿನ ಕಟ್ಟಡಕ್ಕೆ ಹೆಚ್ಚುವರಿಯಾಗಿ ಇನ್ನೂ ಎರಡು ಮಹಡಿಗಳನ್ನು ನಿರ್ಮಿಸಲು ಪ್ರಸ್ತಾಪಿಸಿದ್ದರು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದರಿಂದ ಮನ್ನತ್ ಬಂಗಲೆಯ ವಿಸ್ತರಣಾ ಕಾರ್ಯ ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದೆ.

ದೆಹಲಿಯಲ್ಲಿ 37 ಕೋಟಿ ರೂ. ಆಸ್ತಿ ಖರೀದಿಸಿದ ಶಾರುಖ್; ಈ ಕಟ್ಟಡದಲ್ಲಿದೆ ಹಳೆಯ ನೆನಪು

ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ದೆಹಲಿಯ ಪಂಚಶೀಲ್ ಪಾರ್ಕ್‌ನಲ್ಲಿರುವ ತಮ್ಮ ಹಳೆಯ ಕುಟುಂಬದ ಮನೆಯ ಇನ್ನೂ ಎರಡು ಮಹಡಿಗಳನ್ನು ಬರೋಬ್ಬರಿ ₹37 ಕೋಟಿ ನೀಡಿ ಖರೀದಿಸಿದ್ದಾರೆ. ಈ ಮೂಲಕ 10,800 ಚದರ ಅಡಿಯ ಈ ಐತಿಹಾಸಿಕ ಮನೆಯ ಸಂಪೂರ್ಣ ಮಾಲೀಕತ್ವ ಈಗ ಕಿಂಗ್ ಖಾನ್ ವಶವಾಗಿದೆ. ಸಿನಿಮಾ ರಂಗಕ್ಕೆ ಬರುವ ಮುನ್ನ ವಾಸಿಸುತ್ತಿದ್ದ ಈ ಮನೆಯೊಂದಿಗೆ ಶಾರುಖ್‌ಗೆ ಭಾವನಾತ್ಮಕ ಸಂಬಂಧವಿದೆ.

‘ಕಿಂಗ್’ ಚಿತ್ರಕ್ಕೆ 450 ಕೋಟಿ ರೂ. ಬಜೆಟ್; ಶಾರುಖ್ ಖಾನ್ ವೃತ್ತಿಜೀವನದ ದುಬಾರಿ ಸಿನಿಮಾ

ನಟ ಶಾರುಖ್ ಖಾನ್ ಅವರು ‘ಕಿಂಗ್’ ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡಲಿದ್ದಾರೆ. ಈ ಸಿನಿಮಾಗಾಗಿ ಬರೋಬ್ಬರಿ 450 ಕೋಟಿ ರೂಪಾಯಿ ಬಂಡವಾಳ ಹಾಕಲಾಗುತ್ತಿದೆ. ಶಾರುಖ್ ಖಾನ್ ಅವರೇ ಈ ಚಿತ್ರಕ್ಕೆ ನಿರ್ಮಾಪಕರು. ಗುಣಮಟ್ಟದಲ್ಲಿ ಯಾವುದೇ ರಾಜಿ ಆಗದೇ ಅವರು ಅದ್ದೂರಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

‘ನನ್ನ ಗಂಡನಿಗಿಂತ ನಿಮ್ಮನ್ನು ಹೆಚ್ಚು ಪ್ರೀತಿಸುವೆ’ ಎಂದ ಮಹಿಳಾ ಅಭಿಮಾನಿ; ಶಾರುಖ್ ಖಾನ್ ಉತ್ತರ ಏನು?

ಖ್ಯಾತ ನಟ ಶಾರುಖ್ ಖಾನ್ ಜನಿಸಿದ್ದು ದೆಹಲಿಯಲ್ಲಾದರೂ, ಅವರ ಬಾಲ್ಯದ ಮೊದಲ 5 ವರ್ಷಗಳನ್ನು ಮಂಗಳೂರಿನಲ್ಲಿ ಕಳೆದಿದ್ದರು. ಆದ್ದರಿಂದ ಅವರಿಗೆ ಈ ಊರಿನ ಬಗ್ಗೆ ವಿಶೇಷ ಪ್ರೀತಿ ಇದೆ. ಖಾಸಗಿ ಕಾರ್ಯಕ್ರಮದ ಸಲುವಾಗಿ ಮಂಗಳೂರಿಗೆ ಬಂದಿರುವ ಅವರು ಅಭಿಮಾನಿಗಳ ಜೊತೆ ಸಂವಾದ ನಡೆಸಿದರು.

ಸೋಲಿಗೆ ವಿಚಿತ್ರ ಕಾರಣ ಕೊಟ್ಟರಾ ರಾಜ್‌ಕುಮಾರ್ ಹಿರಾನಿ; ನೆಟ್ಟಿಗರ ಆಕ್ರೋಶ

ಖ್ಯಾತ ನಿರ್ದೇಶಕ ರಾಜ್‌ಕುಮಾರ್ ಹಿರಾನಿ ತಮ್ಮ 'ಡಂಕಿ' ಸಿನಿಮಾ ಸೋಲಿಗೆ ವಿಚಿತ್ರ ಕಾರಣ ನೀಡಿದ್ದಾರೆ. ಭಾರತದ ಪ್ರೇಕ್ಷಕರಿಗೆ ಅಕ್ರಮ ವಲಸೆ ಕಥೆ ಕನೆಕ್ಟ್ ಆಗಲಿಲ್ಲ ಎಂಬ ಅವರ ಹೇಳಿಕೆ ಟೀಕೆಗೆ ಗುರಿಯಾಗಿದೆ. ಸಿದ್ದಾರ್ಥ್ ಆನಂದ್ ಅವರ 'ಫೈಟರ್' ಸಿನಿಮಾ ಸೋಲಿನ ಹೇಳಿಕೆಗೆ ಇದು ಹೋಲಿಕೆಯಾಗಿದೆ. ಕಥೆಯ ವೈಫಲ್ಯವನ್ನು ಪ್ರೇಕ್ಷಕರ ಮೇಲೆ ಹೇರಲಾಗುತ್ತಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಹಿರಾನಿ ಹೇಳಿಕೆಯನ್ನು ಖಂಡಿಸಿದ್ದಾರೆ

‘ಧುರಂಧರ್’ ಬಗ್ಗೆ ಮೌನ, ಆದ್ರೆ ಆಲಿಯಾ ಸಿನಿಮಾಗೆ ಹೊಗಳಿಕೆ: ಟ್ರೋಲ್ ಆದ ಶಾರುಖ್ ಖಾನ್

‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಗೆದ್ದಾಗ ಶಾರುಖ್ ಖಾನ್ ಮೌನ ತಾಳಿದ್ದರು. ಆದರೆ ಈಗ ‘ಆಲ್ಫಾ’ ಸಿನಿಮಾದ ಟೀಸರ್ ನೋಡಿ ಹೊಗಳಿದ್ದಾರೆ. ಅವರ ಈ ನಡೆ ಕಂಡು ಕೆಲವು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ‘ಧುರಂದರ್ ಯಶಸ್ಸಿನ ಬಗ್ಗೆ ನಿಮಗೆ ಅಸೂಯೆ ಇದೆಯೇ’ ಎಂದು ಅನೇಕರು ಪ್ರಶ್ನಿಸಿದ್ದಾರೆ.

ಶಾರುಖ್ ಖಾನ್ ಅಲಭ್ಯತೆ; ‘ಜೈಲರ್ 2’ ಸಿನಿಮಾದಲ್ಲಿ ಅತಿಥಿ ಪಾತ್ರವೇ ಡಿಲೀಟ್

‘ಜೈಲರ್ 2’ ಸಿನಿಮಾದಲ್ಲಿ ಒಂದು ಪ್ರಮುಖವಾದ ಅತಿಥಿ ಪಾತ್ರವನ್ನು ಪ್ಲ್ಯಾನ್ ಮಾಡಲಾಗಿತ್ತು. ಆದರೆ ಈಗ ಆ ಪ್ಲ್ಯಾನ್ ಕೈ ಬಿಡಲಾಗಿದೆ. ಶಾರುಖ್ ಖಾನ್, ಹೃತಿಕ್ ರೋಷನ್ ಮುಂತಾದವರು ಆ ಪಾತ್ರವನ್ನು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಇದರಿಂದಾಗಿ ಚಿತ್ರದ ಕಥೆಯಲ್ಲಿ ಬದಲಾವಣೆ ಮಾಡಿಕೊಳ್ಳುವುದು ಅನಿವಾರ್ಯ ಆಗಿದೆ.

ತಮ್ಮ ಗೋರಿಯನ್ನು ತಾವೇ ಕಟ್ಟಿಕೊಂಡಿದ್ದ ಹನಿ ಸಿಂಗ್

ಹನಿ ಸಿಂಗ್ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ ಎದುರಿಸಿದ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಬಹಿರಂಗಪಡಿಸಿದ್ದಾರೆ. ಅತಿರೇಕದ ಅಹಂಕಾರದಿಂದ ತಾನು 'ದೇವರು' ಎಂದು ಭಾವಿಸಿದ್ದ ಅವರ ದುರಹಂಕಾರದ ಬಗ್ಗೆ ಶಾರುಖ್ ಖಾನ್ ಮತ್ತು ಅಕ್ಷಯ್ ಕುಮಾರ್ ಮೊದಲೇ ಎಚ್ಚರಿಸಿದ್ದರು. ಅವರ ಮಾತುಗಳು ಹೇಗೆ ನಿಜವಾದವು.

ಜೈಲರ್ 2: ರಜನಿಕಾಂತ್ ಸಿನಿಮಾದಲ್ಲಿ ಶಾರುಖ್ ಖಾನ್ ಬದಲು ಹೃತಿಕ್ ರೋಷನ್ ನಟನೆ?

ಶಾರುಖ್ ಖಾನ್ ಅವರು ಡೇಟ್ಸ್ ಇಲ್ಲದ ಕಾರಣ ‘ಜೈಲರ್ 2’ ಸಿನಿಮಾದಲ್ಲಿ ನಟಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರತಂಡ ಈಗ ಹೃತಿಕ್ ರೋಷನ್ ಜೊತೆ ಮಾತುಕಥೆ ನಡೆಸುತ್ತಿದೆ ಎಂದು ವರದಿ ಆಗಿದೆ. ಆದರೆ ಈ ಬಗ್ಗೆ ತಂಡದ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

ರಣವೀರ್ ವಿವಾದ ಬಳಿಕ ‘ಡಾನ್ 3’ ಚಿತ್ರಕ್ಕೆ ಮರಳಲು ಶಾರುಖ್ ರೆಡಿ; ಹಾಕಿದ ಷರತ್ತೇನು?

‘ಡಾನ್ 3’ ಚಿತ್ರದ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ರಣವೀರ್ ಸಿಂಗ್ ನಿರ್ಗಮನದ ನಂತರ, ನಾಯಕನ ಆಯ್ಕೆ ಗೊಂದಲ ಸೃಷ್ಟಿಸಿದೆ. ಹೃತಿಕ್ ರೋಷನ್ ವದಂತಿಗಳನ್ನು ಅಲ್ಲಗಳೆದಿದ್ದಾರೆ. ಶಾರುಖ್ ಖಾನ್ ಅಟ್ಲೀ ನಿರ್ದೇಶನದ ಷರತ್ತಿನೊಂದಿಗೆ ಮರಳುವ ಸಾಧ್ಯತೆ ಇದೆ. ಫರ್ಹಾನ್ ಅಖ್ತರ್ ಅವರ ಮೌನವು ಮುಂದಿನ ‘ಡಾನ್’ ಯಾರು ಎಂಬ ಕುತೂಹಲ ಹೆಚ್ಚಿಸಿದೆ.

ಭಾರತದಲ್ಲಿ ಸಿಗದ 5 ಕೋಟಿ ರೂಪಾಯಿ ಬೆಲೆಯ ಹೊಸ ಕಾರು ತರಿಸಿಕೊಂಡ ಶಾರುಖ್ ಖಾನ್

ನಟ ಶಾರುಖ್ ಖಾನ್ ಅವರು ಈ ಕಾರನ್ನು ವಿದೇಶದಿಂದ ತರಿಸಿಕೊಂಡಿದ್ದಾರೆ. ಇದರ ಬೆಲೆ ಬರೋಬ್ಬರಿ 5 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈಗಾಗಲೇ ಅವರ ಬಳಿಕ ಕೋಟ್ಯಂತರ ರೂಪಾಯಿ ಬೆಲೆಬಾಳುವ ಹಲವು ಕಾರುಗಳು ಇವೆ. ಅವರು ಖರೀದಿಸಿರುವ ಹೊಸ ಕಾರಿನ ಬಗ್ಗೆ ಇಲ್ಲಿದೆ ಮಾಹಿತಿ..

ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ