AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan

Shah Rukh Khan

ಶಾರುಖ್ ಖಾನ್ ಅವರು ಬಾಲಿವುಡ್ನ ಬೇಡಿಕೆಯ ಹೀರೋ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಶಾರುಖ್ ಖಾನ್ ಜನಿಸಿದ್ದು 1965ರ ನವೆಂಬರ್ 2ರಂದು. ಅವರ ಆಸ್ತಿ ಮೌಲ್ಯ 6500 ಕೋಟಿ ರೂಪಾಯಿಗೂ ಮೀರಿದೆ. ಭಾರತದ ಅತ್ಯಂತ ಶ್ರೀಮಂತ ನಟ ಎನ್ನುವ ಹೆಗ್ಗಳಿಕೆ ಇವರಿಗೆ ಇದೆ.

ಶಾರುಖ್ ಖಾನ್ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಸಾಲು ಸಾಲು ಸಿನಿಮಾ ಮಾಡಿ ಫೇಮಸ್ ಆದರು. ಶಾರುಖ್ ಖಾನ್ ‘ಡಿಡಿಎಲ್ಜೆ’, ‘ಡಾನ್’, ‘ಡಾನ್ 2’, ‘ಚೆನ್ನೈ ಎಕ್ಸ್ಪ್ರೆಸ್’ ಸೇರಿ ಹಲವು ಸೂಪರ್ ಹಿಟ್ ಚಿತ್ರ ನೀಡಿದ್ದಾರೆ.

2023ರಲ್ಲಿ ರಿಲೀಸ್ ಆದ ‘ಪಠಾಣ್’, ‘ಜವಾನ್’ ಹಿಟ್ ಆಗಿವೆ. ಗೌರಿ ಖಾನ್ ಅವರನ್ನು ಶಾರುಖ್ ಮದುವೆ ಆಗಿದ್ದು, ಸುಹಾನಾ ಖಾನ್, ಆರ್ಯನ್ ಖಾನ್ ಹಾಗೂ ಅಬ್ರಾಮ್ ಖಾನ್ ಹೆಸರಿನ ಮಕ್ಕಳು ಇವರಿಗೆ ಇದ್ದಾರೆ.

ಇನ್ನೂ ಹೆಚ್ಚು ಓದಿ

‘ಶಾರುಖ್​ ಕೇವಲ ಸಹೋದ್ಯೋಗಿ, ಅವರು ಎಂದಿಗೂ ಗೆಳೆಯರಾಗಲ್ಲ’; ಸನ್ನಿ ಡಿಯೋಲ್ 

'ಡರ್' ಸಿನಿಮಾ ಶೂಟಿಂಗ್ ವೇಳೆ ಶಾರುಖ್ ಖಾನ್ ಜೊತೆ ನಡೆದ ಗಲಾಟೆಯ ಬಗ್ಗೆ ಸನ್ನಿ ಡಿಯೋಲ್ ಸ್ಪಷ್ಟನೆ ನೀಡಿದ್ದಾರೆ. ನಟರಲ್ಲಿರುವ ಅಭದ್ರತೆಯೇ ಇಂತಹ ಜಗಳಕ್ಕೆ ಕಾರಣ ಎಂದಿದ್ದಾರೆ. ಶಾರುಖ್ ಖಾನ್ ತನಗೆ ಸ್ನೇಹಿತನಲ್ಲ, ಕೇವಲ ಚಿತ್ರರಂಗದ ಸಹದ್ಯೋಗಿ ಎಂದು ಸನ್ನಿ ಹೇಳಿದ್ದಾರೆ.

ವಿಮಲ್ ಏಲಕ್ಕಿ ಜಾಹೀರಾತು: ಶಾರುಖ್, ಅಜಯ್ ದೇವಗನ್, ಟೈಗರ್ ಶ್ರಾಫ್​ಗೆ ನೋಟೀಸ್

Vimal Elaichi ad, Maharashtra FDA sends notice to Bollywood stars: ವಿಮಲ್ ಏಲಕ್ಕಿ ಜಾಹೀರಾತಿನಲ್ಲಿ ನಟಿಸಿರುವ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್​ಗೆ ಮಹಾರಾಷ್ಟ್ರ ಎಫ್​ಡಿಎ ನೋಟೀಸ್ ನೀಡಿದೆ. ವಿಮಲ್ ಏಲಕ್ಕಿ ಜಾಹೀರಾತು ಮೂಲಕ ವಿಮಲ್ ಪಾನ್ ಮಸಾಲ ಉತ್ಪನ್ನಗೆ ಪರೋಕ್ಷವಾಗಿ ಪ್ರಚಾರ ಮಾಡಿದಂತೆ ಎಂಬುದು ಪ್ರಾಧಿಕಾರದ ಆರೋಪ. ಮಹಾರಾಷ್ಟ್ರದಲ್ಲಿ ಪಾನ್ ಮಸಾಲ ಹಾಗು ಅದರ ಜಾಹಿರಾತನ್ನು ನಿಷೇಧಿಸಲಾಗಿದೆ.

ಗುಟ್ಕಾ ಪ್ರಚಾರ: ಶಾರುಖ್, ಅಜಯ್, ಟೈಗರ್ ಶ್ರಾಫ್​​ಗೆ ನೊಟೀಸ್

Notice to Shah Rukh Khan: ಶ್ರೀಮಂತ ಗುಟ್ಕಾ ಸಂಸ್ಥೆಗಲು ಭಾರತದ ದೊಡ್ಡ ದೊಡ್ಡ ಸ್ಟಾರ್ ನಟರನ್ನು ಮಾತ್ರವಲ್ಲ, ಹಾಲಿವುಡ್​​ನ ಸ್ಟಾರ್ ನಟರನ್ನು ಕರೆತಂದು ಪ್ರಚಾರ ಮಾಡಿಸುತ್ತಾರೆ. ಈಗ ಭಾರತದ ಸೂಪರ್ ಸ್ಟಾರ್​ಗಳಾದ ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್ ಇನ್ನೂ ಕೆಲವು ಸ್ಟಾರ್ ನಟರು ಗುಟ್ಕಾ ಜಾಹೀರಾತಿನಲ್ಲಿ ನಟಿಸುತ್ತಿದ್ದಾರೆ. ಆದರೆ ಇದೀಗ ನೆರೆಯ ಮಹಾರಾಷ್ಟ್ರ ಸರ್ಕಾರವು ಇಂಥಹಾ ನಟರಿಗೆ ಶಾಕ್ ನೀಡಿದೆ.

ಶಾರುಖ್ ನಟಿಸಿದ ಆ ಸಿನಿಮಾ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಸ್ಪಷ್ಟನೆ

‘ಕಭಿ ಅಲ್ವಿದಾ ನಾ ಕೆಹನಾ’ ಸಿನಿಮಾದಲ್ಲಿ ಶಾರುಖ್ ಖಾನ್ ಮತ್ತು ರಾಣಿ ಮುಖರ್ಜಿ ನಡುವಿನ ಒಂದು ದೃಶ್ಯವನ್ನು ನೋಡಿ ಪ್ರೇಕ್ಷಕರು ಗರಂ ಆಗಿದ್ದರು. ಸಮಾಜಕ್ಕೆ ಈ ಸಿನಿಮಾ ಮಾರಕವಾಗಿದೆ ಎಂದು ಕೆಲವರು ತೀವ್ರವಾಗಿ ಟೀಕಿಸಿದ್ದರು. ಆ ಘಟನೆಯನ್ನು ಈಗ ನಿರ್ದೇಶಕ ಕರಣ್ ಜೋಹರ್ ನೆನಪು ಮಾಡಿಕೊಂಡಿದ್ದಾರೆ.

ಶಾರುಖ್ ‘ಕಿಂಗ್’ ಚಿತ್ರದ ಹೈಪ್​​ಗೆ ದಕ್ಷಿಣದಲ್ಲಿ ಹಬ್ಬಿಸಲಾಗುತ್ತಿದೆ ಸುಳ್ಳುಸುದ್ದಿ?

ದಕ್ಷಿಣ ಭಾರತದ ಸಿನಿಮಾಗಳಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರ ಮಾಡಲಿದ್ದಾರೆ ಎಂಬ ವದಂತಿ ಮತ್ತೆ ಹರಿದಾಡುತ್ತಿದೆ. ಜೈಲರ್ ಎರಡು ಸಿನಿಮಾದ ನಂತರ ಇದೀಗ ರಾಕಾ ಚಿತ್ರದ ಬಗ್ಗೆ ಚರ್ಚೆ ಶುರುವಾಗಿದೆ. ಇದು ಕಿಂಗ್ ಸಿನಿಮಾದ ಬಿಡುಗಡೆಗೂ ಮುನ್ನ ಅವರು ಸದಾ ಸುದ್ದಿಯಲ್ಲಿರುವಂತೆ ಮಾಡಲು ಚಿತ್ರತಂಡ ರೂಪಿಸಿರುವ ಕೇವಲ ಒಂದು ಪ್ರಚಾರದ ತಂತ್ರ ಆಗಿರಬಹುದು ಎಂಬ ಗುಮಾನಿಯಿದೆ.

ಹಾಲಿವುಡ್‌ ಸಿನಿಮಾಗಳಿಗೆ ಶಾರುಖ್‌ ಖಾನ್‌ ಪೈಪೋಟಿ: ಬದಲಾಗಲ್ಲ ‘ಕಿಂಗ್‌’ ರಿಲೀಸ್‌ ದಿನಾಂಕ

ಮೂರು ವರ್ಷಗಳ ನಂತರ ಶಾರುಖ್‌ ಖಾನ್‌ ಅವರು ಕಮ್​ಬ್ಯಾಕ್ ಮಾಡುತ್ತಿದ್ದಾರೆ. ಅವರು ನಟಿಸಿರುವ ‘ಕಿಂಗ್‌’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ. ನಿಗದಿತ ದಿನಾಂಕದಂದೇ ಚಿತ್ರಮಂದಿರಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಾ ಇಲ್ಲವಾ ಎಂಬ ಅನುಮಾನ ಕೆಲವರಿಗೆ ಇದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

50 ಕೋಟಿ ರೂಪಾಯಿಗೆ ‘ಕಿಂಗ್’ ಆಡಿಯೋ ರೈಟ್ಸ್‌ ಮಾರಾಟ? ಶಾರುಖ್ ಖಾನ್ ಹೊಸ ದಾಖಲೆ

ಶಾರುಖ್ ಖಾನ್ ನಟನೆಯ ‘ಕಿಂಗ್’ ಸಿನಿಮಾದ ಹಾಡುಗಳ ಮೇಲೆ ಸಖತ್ ನಿರೀಕ್ಷೆ ಇದೆ. ಹಾಗಾಗಿ ದಾಖಲೆಯ ಮೊತ್ತಕ್ಕೆ ಡೀಲ್ ಕುದುರುತ್ತಿದೆ. ಆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗಿದೆ. 50 ಕೋಟಿ ರೂಪಾಯಿಗೆ ಆಡಿಯೋ ಹಕ್ಕುಗಳನ್ನು ಮಾರಾಟ ಮಾಡಲು ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ.

ಲಂಡನ್‌ನಲ್ಲಿ ಫ್ಯಾಮಿಲಿ ಜತೆ ಶಾರುಖ್ ಖಾನ್ ಸುತ್ತಾಟ: ವಿದ್ಯಾರ್ಥಿಗಳ ಪ್ರತಿಭಟನೆಗೆ ನಟನ ಮೌನ ಪ್ರಶ್ನಿಸಿದ ನೆಟ್ಟಿಗರು

ದೇಶಾದ್ಯಂತ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಹಲವು ಸೆಲೆಬ್ರಿಟಿಗಳು ಮಾತನಾಡಿದ್ದಾರೆ. ಆದರೆ ಶಾರುಖ್ ಖಾನ್ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಆದ್ದರಿಂದ ನೆಟ್ಟಿಗರು ಅವರ ಮೇಲೆ ಗರಂ ಆಗಿದ್ದಾರೆ. ಸದ್ಯ ಲಂಡನ್​ನಲ್ಲಿ ಹೆಂಡತಿ-ಮಕ್ಕಳ ಜೊತೆ ಸುತ್ತಾಡುತ್ತಿರುವ ಶಾರುಖ್ ಖಾನ್ ಅವರನ್ನು ಜನರು ಟ್ರೋಲ್ ಮಾಡಿದ್ದಾರೆ. ಆದರೆ ಅಪ್ಪಟ ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ.

ಶಾರುಖ್ ಖಾನ್‌ ಒಡೆತನದ ಮನ್ನತ್ ಬಂಗಲೆಯ ನವೀಕರಣ ಪ್ರಶ್ನಿಸಿದ್ದ ಅರ್ಜಿ ವಜಾ

ಶಾರುಖ್ ಖಾನ್ ಪತ್ನಿ ಗೌರಿ ಖಾನ್ ಅವರು ಮನ್ನತ್ ಬಂಗಲೆಯ ಆವರಣದಲ್ಲಿರುವ ಆರು ಅಂತಸ್ತಿನ ಕಟ್ಟಡಕ್ಕೆ ಹೆಚ್ಚುವರಿಯಾಗಿ ಇನ್ನೂ ಎರಡು ಮಹಡಿಗಳನ್ನು ನಿರ್ಮಿಸಲು ಪ್ರಸ್ತಾಪಿಸಿದ್ದರು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದರಿಂದ ಮನ್ನತ್ ಬಂಗಲೆಯ ವಿಸ್ತರಣಾ ಕಾರ್ಯ ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದೆ.

ದೆಹಲಿಯಲ್ಲಿ 37 ಕೋಟಿ ರೂ. ಆಸ್ತಿ ಖರೀದಿಸಿದ ಶಾರುಖ್; ಈ ಕಟ್ಟಡದಲ್ಲಿದೆ ಹಳೆಯ ನೆನಪು

ಬಾಲಿವುಡ್ ಬಾದ್‌ಷಾ ಶಾರುಖ್ ಖಾನ್ ದೆಹಲಿಯ ಪಂಚಶೀಲ್ ಪಾರ್ಕ್‌ನಲ್ಲಿರುವ ತಮ್ಮ ಹಳೆಯ ಕುಟುಂಬದ ಮನೆಯ ಇನ್ನೂ ಎರಡು ಮಹಡಿಗಳನ್ನು ಬರೋಬ್ಬರಿ ₹37 ಕೋಟಿ ನೀಡಿ ಖರೀದಿಸಿದ್ದಾರೆ. ಈ ಮೂಲಕ 10,800 ಚದರ ಅಡಿಯ ಈ ಐತಿಹಾಸಿಕ ಮನೆಯ ಸಂಪೂರ್ಣ ಮಾಲೀಕತ್ವ ಈಗ ಕಿಂಗ್ ಖಾನ್ ವಶವಾಗಿದೆ. ಸಿನಿಮಾ ರಂಗಕ್ಕೆ ಬರುವ ಮುನ್ನ ವಾಸಿಸುತ್ತಿದ್ದ ಈ ಮನೆಯೊಂದಿಗೆ ಶಾರುಖ್‌ಗೆ ಭಾವನಾತ್ಮಕ ಸಂಬಂಧವಿದೆ.

‘ಕಿಂಗ್’ ಚಿತ್ರಕ್ಕೆ 450 ಕೋಟಿ ರೂ. ಬಜೆಟ್; ಶಾರುಖ್ ಖಾನ್ ವೃತ್ತಿಜೀವನದ ದುಬಾರಿ ಸಿನಿಮಾ

ನಟ ಶಾರುಖ್ ಖಾನ್ ಅವರು ‘ಕಿಂಗ್’ ಸಿನಿಮಾ ಮೂಲಕ ಕಮ್​ಬ್ಯಾಕ್ ಮಾಡಲಿದ್ದಾರೆ. ಈ ಸಿನಿಮಾಗಾಗಿ ಬರೋಬ್ಬರಿ 450 ಕೋಟಿ ರೂಪಾಯಿ ಬಂಡವಾಳ ಹಾಕಲಾಗುತ್ತಿದೆ. ಶಾರುಖ್ ಖಾನ್ ಅವರೇ ಈ ಚಿತ್ರಕ್ಕೆ ನಿರ್ಮಾಪಕರು. ಗುಣಮಟ್ಟದಲ್ಲಿ ಯಾವುದೇ ರಾಜಿ ಆಗದೇ ಅವರು ಅದ್ದೂರಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

‘ನನ್ನ ಗಂಡನಿಗಿಂತ ನಿಮ್ಮನ್ನು ಹೆಚ್ಚು ಪ್ರೀತಿಸುವೆ’ ಎಂದ ಮಹಿಳಾ ಅಭಿಮಾನಿ; ಶಾರುಖ್ ಖಾನ್ ಉತ್ತರ ಏನು?

ಖ್ಯಾತ ನಟ ಶಾರುಖ್ ಖಾನ್ ಜನಿಸಿದ್ದು ದೆಹಲಿಯಲ್ಲಾದರೂ, ಅವರ ಬಾಲ್ಯದ ಮೊದಲ 5 ವರ್ಷಗಳನ್ನು ಮಂಗಳೂರಿನಲ್ಲಿ ಕಳೆದಿದ್ದರು. ಆದ್ದರಿಂದ ಅವರಿಗೆ ಈ ಊರಿನ ಬಗ್ಗೆ ವಿಶೇಷ ಪ್ರೀತಿ ಇದೆ. ಖಾಸಗಿ ಕಾರ್ಯಕ್ರಮದ ಸಲುವಾಗಿ ಮಂಗಳೂರಿಗೆ ಬಂದಿರುವ ಅವರು ಅಭಿಮಾನಿಗಳ ಜೊತೆ ಸಂವಾದ ನಡೆಸಿದರು.

ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ