Shah Rukh Khan
ಶಾರುಖ್ ಖಾನ್ ಅವರು ಬಾಲಿವುಡ್ನ ಬೇಡಿಕೆಯ ಹೀರೋ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಶಾರುಖ್ ಖಾನ್ ಜನಿಸಿದ್ದು 1965ರ ನವೆಂಬರ್ 2ರಂದು. ಅವರ ಆಸ್ತಿ ಮೌಲ್ಯ 6500 ಕೋಟಿ ರೂಪಾಯಿಗೂ ಮೀರಿದೆ. ಭಾರತದ ಅತ್ಯಂತ ಶ್ರೀಮಂತ ನಟ ಎನ್ನುವ ಹೆಗ್ಗಳಿಕೆ ಇವರಿಗೆ ಇದೆ.
ಶಾರುಖ್ ಖಾನ್ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಸಾಲು ಸಾಲು ಸಿನಿಮಾ ಮಾಡಿ ಫೇಮಸ್ ಆದರು. ಶಾರುಖ್ ಖಾನ್ ‘ಡಿಡಿಎಲ್ಜೆ’, ‘ಡಾನ್’, ‘ಡಾನ್ 2’, ‘ಚೆನ್ನೈ ಎಕ್ಸ್ಪ್ರೆಸ್’ ಸೇರಿ ಹಲವು ಸೂಪರ್ ಹಿಟ್ ಚಿತ್ರ ನೀಡಿದ್ದಾರೆ.
2023ರಲ್ಲಿ ರಿಲೀಸ್ ಆದ ‘ಪಠಾಣ್’, ‘ಜವಾನ್’ ಹಿಟ್ ಆಗಿವೆ. ಗೌರಿ ಖಾನ್ ಅವರನ್ನು ಶಾರುಖ್ ಮದುವೆ ಆಗಿದ್ದು, ಸುಹಾನಾ ಖಾನ್, ಆರ್ಯನ್ ಖಾನ್ ಹಾಗೂ ಅಬ್ರಾಮ್ ಖಾನ್ ಹೆಸರಿನ ಮಕ್ಕಳು ಇವರಿಗೆ ಇದ್ದಾರೆ.
‘ಕಿಂಗ್’ ಸಿನಿಮಾ ಚಿತ್ರೀಕರಣದ ವಿಡಿಯೋ ಲೀಕ್: ಬೀಚ್ನಲ್ಲಿ ಶಾರುಖ್, ದೀಪಿಕಾ ರೊಮ್ಯಾನ್ಸ್
ಶಾರುಖ್ ಖಾನ್ ನಟನೆಯ ‘ಕಿಂಗ್’ ಚಿತ್ರತಂಡಕ್ಕೆ ಲೀಕ್ ಕಾಟ ಮುಂದುವರಿದಿದೆ. ಎಷ್ಟೇ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡರೂ ಸಹ ಈ ಸಿನಿಮಾದ ಶೂಟಿಂಗ್ ಸಂದರ್ಭದ ಫೋಟೋ ಮತ್ತು ವಿಡಿಯೋಗಳು ಲೀಕ್ ಆಗುತ್ತಿವೆ. ಇದರಿಂದ ಚಿತ್ರತಂಡಕ್ಕೆ ಬೇಸರ ಆಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..
- Madan Kumar
- Updated on: May 6, 2026
- 8:03 am
‘ಕಿಂಗ್’ ಚಿತ್ರದ ಫೋಟೋ ಲೀಕ್ ಆಗಿದ್ದಕ್ಕೆ ನಿರ್ದೇಶಕ ಸಿದ್ದಾರ್ಥ್ ಆನಂದ್ ಗರಂ
ಈ ನಡುವೆ ಹಲವು ಚಿತ್ರತಂಡಗಳು ಲೀಕ್ ಕಾಟ ಅನುಭವಿಸುತ್ತಿವೆ. ‘ಪೆದ್ದಿ’, ‘ಜೈಲರ್ 2’ ಬಳಿಕ ‘ಕಿಂಗ್’ ಚಿತ್ರಕ್ಕೂ ಇದೇ ಸಮಸ್ಯೆ ಉಂಟಾಗಿದೆ. ಚಿತ್ರೀಕರಣದ ವೇಳೆ ತೆಗೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಮಾಡಲಾಗಿದೆ. ಇದನ್ನು ಕಂಡು ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರು ಗರಂ ಆಗಿದ್ದಾರೆ.
- Madan Kumar
- Updated on: May 1, 2026
- 9:24 pm
ಗರ್ಭಿಣಿ ಆದ ನಂತರವೂ ಸಾಹಸ ದೃಶ್ಯಗಳ ಚಿತ್ರೀಕರಣ ಮಾಡಿದ ದೀಪಿಕಾ ಪಡುಕೋಣೆ
ಈ ವರ್ಷ ಡಿಸೆಂಬರ್ 24ರಂದು ‘ಕಿಂಗ್’ ಸಿನಿಮಾ ಬಿಡುಗಡೆ ಆಗಬೇಕಿದೆ. ಅದಕ್ಕಾಗಿ ಚಿತ್ರೀಕರಣ ಭರದಿಂದ ಸಾಗಿದೆ. ನಟಿ ದೀಪಿಕಾ ಪಡುಕೋಣೆ ಅವರು ಪ್ರೆಗ್ನೆಂಟ್ ಆಗಿದ್ದರೂ ಕೂಡ ಶೂಟಿಂಗ್ ನಿಲ್ಲಿಸಿಲ್ಲ. ಶಾರುಖ್ ಖಾನ್ ಜೊತೆ ಅವರು ಸಾಹಸ ದೃಶ್ಯಗಳ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
- Madan Kumar
- Updated on: Apr 24, 2026
- 6:44 pm
‘ಜವಾನ್ 2’ ಚಿತ್ರಕ್ಕಾಗಿ ಮತ್ತೆ ಒಂದಾಗಲಿದ್ದಾರಾ ಶಾರುಖ್ ಖಾನ್ ಮತ್ತು ಅಟ್ಲಿ?
ನಿರ್ದೇಶಕ ಅಟ್ಲಿ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಇದೆ. ಅವರ ಜೊತೆ ಮತ್ತೆ ಕೆಲಸ ಮಾಡಲು ಶಾರುಖ್ ಖಾನ್ ಆಸಕ್ತಿ ತೋರಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಅಟ್ಲಿ ಮತ್ತು ಶಾರುಖ್ ಖಾನ್ ಅವರು ‘ಜವಾನ್ 2’ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ ಎಂದು ವರದಿ ಆಗಿದೆ.
- Madan Kumar
- Updated on: Apr 22, 2026
- 3:29 pm
‘ಜೈಲರ್ 2’ ಸಿನಿಮಾದಲ್ಲಿ ಪವನ್ ಕಲ್ಯಾಣ್? ಶಾರುಖ್ ಮಾಡಬೇಕಿದ್ದ ಪಾತ್ರ ಈಗ ಪವರ್ ಸ್ಟಾರ್ ಪಾಲು
ರಜನಿಕಾಂತ್ ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದಲ್ಲಿ ಅಭಿನಯಿಸಲು ಶಾರುಖ್ ಖಾನ್ ಒಪ್ಪಿಕೊಂಡಿಲ್ಲ. ಅವರ ಬದಲಿಗೆ ಪವನ್ ಕಲ್ಯಾಣ್ ಹೆಸರು ಕೇಳಿಬರುತ್ತಿದೆ. ಈ ಸಿನಿಮಾದಲ್ಲಿ ಅನೇಕ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ. ಹಾಗಾಗಿ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಆ ಕುರಿತು ಇಲ್ಲಿದೆ ವಿವರ..
- Madan Kumar
- Updated on: Apr 10, 2026
- 10:25 pm
ರಣವೀರ್ ತಲೆಗೇರಿತೇ ‘ಧುರಂಧರ್ 2’ ಯಶಸ್ಸು? ನಡೆದುಕೊಂಡ ರೀತಿಗೆ ಶುರುವಾಗಿದೆ ಚರ್ಚೆ
ರಣವೀರ್ ಸಿಂಗ್ಗೆ 'ಧುರಂಧರ್ 2' ಯಶಸ್ಸು ತಲೆಗೇರಿದೆ ಎಂಬ ಚರ್ಚೆ ಶುರುವಾಗಿದೆ. ಅನಂತ್ ಅಂಬಾನಿ ಪಾರ್ಟಿಯಲ್ಲಿ ಶಾರುಖ್ ಖಾನ್ ಅವರನ್ನು ರಣವೀರ್ ನಿರ್ಲಕ್ಷಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಘಟನೆ ರಣವೀರ್ ವರ್ತನೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ, ಇನ್ನೊಂದು ಪಾರ್ಟಿಯಲ್ಲಿ ಶಾರುಖ್ ಮತ್ತು ರಣವೀರ್ ಒಟ್ಟಾಗಿ ಕಾಣಿಸಿಕೊಂಡಿದ್ದು, ವಿವಾದಕ್ಕೆ ಬೇರೆ ಆಯಾಮ ನೀಡಿದೆ.
- Rajesh Duggumane
- Updated on: Apr 10, 2026
- 2:51 pm
ರಣವೀರ್ ಸಿಂಗ್ ಕೆನ್ನೆ ಮುಟ್ಟಿ ಮಾತಾಡಿಸಿದ ಶಾರುಖ್ ಖಾನ್; ವಿಡಿಯೋ ವೈರಲ್
ರಣವೀರ್ ಸಿಂಗ್ ಮತ್ತು ಶಾರುಖ್ ಖಾನ್ ನಡುವೆ ಅಸಮಾಧಾನ ಇದೆಯಾ ಎಂಬ ಪ್ರಶ್ನೆ ಹಲವರಿಗೆ ಇತ್ತು. ಆದರೆ ವೈರಲ್ ಆಗಿರುವ ವಿಡಿಯೋದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಸಿಕ್ಕಿದೆ. ರಣವೀರ್ ಸಿಂಗ್ ಅವರನ್ನು ಶಾರುಖ್ ಖಾನ್ ಬಹಳ ಆತ್ಮೀಯವಾಗಿ ಮಾತನಾಡಿಸಿದ್ದಾರೆ. ಪಾರ್ಟಿಯಲ್ಲಿ ಅವರಿಬ್ಬರು ಭೇಟಿ ಆದ ವಿಡಿಯೋ ಗಮನ ಸೆಳೆದಿದೆ.
- Madan Kumar
- Updated on: Apr 9, 2026
- 9:19 pm
ಶಾರುಖ್ ಖಾನ್ಗೂ ತಟ್ಟಿತು ಯುದ್ಧದ ಬಿಸಿ; ಮುಂಬೈನಲ್ಲೇ ಸೃಷ್ಟಿ ಆಗಲಿದೆ ಮರುಭೂಮಿ
ಶಾರುಖ್ ಖಾನ್, ಸುಹಾನಾ ಖಾನ್ ನಟನೆಯ ‘ಕಿಂಗ್’ ಸಿನಿಮಾದ ಪ್ಲ್ಯಾನ್ ತಲೆಕೆಳಗಾಗಿದೆ. ದುಬೈ ಬದಲು ಮುಂಬೈನಲ್ಲೇ ಈ ಚಿತ್ರಕ್ಕೆ ಶೂಟಿಂಗ್ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಇದು ಶಾರುಖ್ ಖಾನ್ ಅವರ ಬಹುನಿರೀಕ್ಷಿತ ಸಿನಿಮಾ. ಸಿದ್ದಾರ್ಥ್ ಆನಂದ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.
- Madan Kumar
- Updated on: Mar 30, 2026
- 10:41 pm
‘ಧುರಂಧರ್ 2’ ಬಗ್ಗೆ ಶಾರುಖ್ ಖಾನ್ ಮೌನ: ಆದರೂ ರಣವೀರ್ ಸಿಂಗ್ ಜೊತೆ ಪಾರ್ಟಿ
‘ಧುರಂಧರ್ 2’ ಬಗ್ಗೆ ಅನೇಕ ಸೆಲೆಬ್ರಿಟಿಗಳು ಹೊಗಳಿದ್ದರೂ ಕೂಡ ಶಾರುಖ್ ಖಾನ್ ಮೌನ ತಾಳಿದ್ದಾರೆ. ರಣವೀರ್ ಸಿಂಗ್ ಬಗ್ಗೆ ಅವರಿಗೆ ಅಸಮಾಧಾನ ಇರಬಹುದಾ ಎಂಬ ಅನುಮಾನ ಹಲವರಿಗೆ ಮೂಡಿತ್ತು. ಆದರೆ ಈಗ ಶಾರುಖ್ ಮತ್ತು ರಣವೀರ್ ಸಿಂಗ್ ಒಟ್ಟಿಗೆ ಪಾರ್ಟಿ ಮಾಡಿ, ಅನುಮಾನಕ್ಕೆ ತೆರೆ ಎಳೆದಿದ್ದಾರೆ.
- Madan Kumar
- Updated on: Mar 30, 2026
- 3:37 pm
‘ಶಾರುಖ್ ಖಾನ್ ಬಳಿ ನಾನು ಲಂಚ ಕೇಳಿಲ್ಲ’: ಬಾಂಬೆ ಹೈಕೋರ್ಟ್ನಲ್ಲಿ ಸಮೀರ್ ವಾಂಖೆಡೆ ವಾದ
ಆರ್ಯನ್ ಖಾನ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಚದ ಆರೋಪ ಎದುರಿಸುತ್ತಿರುವ ಮಾಜಿ ಎನ್ಸಿಬಿ ಅಧಿಕಾರಿ ಸಮೀರ್ ವಾಂಖೆಡೆ, ಈಗ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಶಾರುಖ್ ಖಾನ್ ಅವರಿಂದ ತಾವು ಯಾವುದೇ ಹಣದ ಬೇಡಿಕೆ ಇಟ್ಟಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..
- Madan Kumar
- Updated on: Mar 23, 2026
- 9:46 pm
ಶಾರುಖ್ ನಟನೆಯ ‘ಕಿಂಗ್’ ಸಿನಿಮಾದಲ್ಲಿ ಚಿತ್ರರಂಗದ ಮುಕ್ಕಾಲು ಭಾಗ ಕಲಾವಿದರು
‘ಕಿಂಗ್’ ಸಿನಿಮಾದಲ್ಲಿ ಶಾರುಖ್ ಖಾನ್ ಜೊತೆ ಅನೇಕ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ. ಈ ಬಗ್ಗೆ ಖ್ಯಾತ ನಟ ಸೌರಭ್ ಶುಕ್ಲಾ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಮಾತಾಡಿದ್ದಾರೆ. ಚಿತ್ರರಂಗದ ಶೇಕಡ 70ರಷ್ಟು ಕಲಾವಿದರು ಈ ಸಿನಿಮಾದಲ್ಲಿ ಇದ್ದಾರೆ ಎಂದು ಅವರು ಹೇಳಿದ್ದಾರೆ.
- Madan Kumar
- Updated on: Mar 5, 2026
- 10:50 pm
ಆರ್ಯನ್ ಖಾನ್ ಅಸಭ್ಯ ವರ್ತನೆ ಕೇಸ್ಗೆ ಇತಿಶ್ರೀ; ದೊಡ್ಡವರ ಒತ್ತಡ?
ಬೆಂಗಳೂರಿನಲ್ಲಿ ಆರ್ಯನ್ ಖಾನ್ ಅಸಭ್ಯ ವರ್ತನೆ ಪ್ರಕರಣಕ್ಕೆ ಬೆಂಗಳೂರು ಪೊಲೀಸರು ಸಾಕ್ಷ್ಯಾಧಾರಗಳ ಕೊರತೆಯಿಂದ ಇತಿಶ್ರೀ ಹಾಡಲು ಸಿದ್ಧತೆ ನಡೆಸಿದ್ದಾರೆ. ಕಳೆದ ವರ್ಷ ನವೆಂಬರ್ನಲ್ಲಿ ಪಬ್ ಉದ್ಘಾಟನೆ ವೇಳೆ ಮಧ್ಯ ಬೆರಳು ತೋರಿಸಿ ವಿಡಿಯೋ ವೈರಲ್ ಆಗಿತ್ತು. ಕಬ್ಬನ್ ಪಾರ್ಕ್ ಪೊಲೀಸರು ತನಿಖೆ ನಡೆಸಿ, ಉದ್ದೇಶಪೂರ್ವಕ ವರ್ತನೆಯಲ್ಲ ಎಂದು ನಿರ್ಧರಿಸಿದ್ದಾರೆ. ಇದರಿಂದ ದೂರುದಾರ ವಕೀಲ ಹುಸೇನ್ ಅಸಮಾಧಾನಗೊಂಡಿದ್ದಾರೆ.
- Rachappaji Naik S
- Updated on: Feb 6, 2026
- 10:58 am