AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan

Shah Rukh Khan

ಶಾರುಖ್ ಖಾನ್ ಅವರು ಬಾಲಿವುಡ್ನ ಬೇಡಿಕೆಯ ಹೀರೋ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಶಾರುಖ್ ಖಾನ್ ಜನಿಸಿದ್ದು 1965ರ ನವೆಂಬರ್ 2ರಂದು. ಅವರ ಆಸ್ತಿ ಮೌಲ್ಯ 6500 ಕೋಟಿ ರೂಪಾಯಿಗೂ ಮೀರಿದೆ. ಭಾರತದ ಅತ್ಯಂತ ಶ್ರೀಮಂತ ನಟ ಎನ್ನುವ ಹೆಗ್ಗಳಿಕೆ ಇವರಿಗೆ ಇದೆ.

ಶಾರುಖ್ ಖಾನ್ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಸಾಲು ಸಾಲು ಸಿನಿಮಾ ಮಾಡಿ ಫೇಮಸ್ ಆದರು. ಶಾರುಖ್ ಖಾನ್ ‘ಡಿಡಿಎಲ್ಜೆ’, ‘ಡಾನ್’, ‘ಡಾನ್ 2’, ‘ಚೆನ್ನೈ ಎಕ್ಸ್ಪ್ರೆಸ್’ ಸೇರಿ ಹಲವು ಸೂಪರ್ ಹಿಟ್ ಚಿತ್ರ ನೀಡಿದ್ದಾರೆ.

2023ರಲ್ಲಿ ರಿಲೀಸ್ ಆದ ‘ಪಠಾಣ್’, ‘ಜವಾನ್’ ಹಿಟ್ ಆಗಿವೆ. ಗೌರಿ ಖಾನ್ ಅವರನ್ನು ಶಾರುಖ್ ಮದುವೆ ಆಗಿದ್ದು, ಸುಹಾನಾ ಖಾನ್, ಆರ್ಯನ್ ಖಾನ್ ಹಾಗೂ ಅಬ್ರಾಮ್ ಖಾನ್ ಹೆಸರಿನ ಮಕ್ಕಳು ಇವರಿಗೆ ಇದ್ದಾರೆ.

ಇನ್ನೂ ಹೆಚ್ಚು ಓದಿ

‘ಧುರಂಧರ್’ ಬಗ್ಗೆ ಮೌನ, ಆದ್ರೆ ಆಲಿಯಾ ಸಿನಿಮಾಗೆ ಹೊಗಳಿಕೆ: ಟ್ರೋಲ್ ಆದ ಶಾರುಖ್ ಖಾನ್

‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಗೆದ್ದಾಗ ಶಾರುಖ್ ಖಾನ್ ಮೌನ ತಾಳಿದ್ದರು. ಆದರೆ ಈಗ ‘ಆಲ್ಫಾ’ ಸಿನಿಮಾದ ಟೀಸರ್ ನೋಡಿ ಹೊಗಳಿದ್ದಾರೆ. ಅವರ ಈ ನಡೆ ಕಂಡು ಕೆಲವು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ‘ಧುರಂದರ್ ಯಶಸ್ಸಿನ ಬಗ್ಗೆ ನಿಮಗೆ ಅಸೂಯೆ ಇದೆಯೇ’ ಎಂದು ಅನೇಕರು ಪ್ರಶ್ನಿಸಿದ್ದಾರೆ.

ಶಾರುಖ್ ಖಾನ್ ಅಲಭ್ಯತೆ; ‘ಜೈಲರ್ 2’ ಸಿನಿಮಾದಲ್ಲಿ ಅತಿಥಿ ಪಾತ್ರವೇ ಡಿಲೀಟ್

‘ಜೈಲರ್ 2’ ಸಿನಿಮಾದಲ್ಲಿ ಒಂದು ಪ್ರಮುಖವಾದ ಅತಿಥಿ ಪಾತ್ರವನ್ನು ಪ್ಲ್ಯಾನ್ ಮಾಡಲಾಗಿತ್ತು. ಆದರೆ ಈಗ ಆ ಪ್ಲ್ಯಾನ್ ಕೈ ಬಿಡಲಾಗಿದೆ. ಶಾರುಖ್ ಖಾನ್, ಹೃತಿಕ್ ರೋಷನ್ ಮುಂತಾದವರು ಆ ಪಾತ್ರವನ್ನು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಇದರಿಂದಾಗಿ ಚಿತ್ರದ ಕಥೆಯಲ್ಲಿ ಬದಲಾವಣೆ ಮಾಡಿಕೊಳ್ಳುವುದು ಅನಿವಾರ್ಯ ಆಗಿದೆ.

ತಮ್ಮ ಗೋರಿಯನ್ನು ತಾವೇ ಕಟ್ಟಿಕೊಂಡಿದ್ದ ಹನಿ ಸಿಂಗ್

ಹನಿ ಸಿಂಗ್ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ ಎದುರಿಸಿದ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಬಹಿರಂಗಪಡಿಸಿದ್ದಾರೆ. ಅತಿರೇಕದ ಅಹಂಕಾರದಿಂದ ತಾನು 'ದೇವರು' ಎಂದು ಭಾವಿಸಿದ್ದ ಅವರ ದುರಹಂಕಾರದ ಬಗ್ಗೆ ಶಾರುಖ್ ಖಾನ್ ಮತ್ತು ಅಕ್ಷಯ್ ಕುಮಾರ್ ಮೊದಲೇ ಎಚ್ಚರಿಸಿದ್ದರು. ಅವರ ಮಾತುಗಳು ಹೇಗೆ ನಿಜವಾದವು.

ಜೈಲರ್ 2: ರಜನಿಕಾಂತ್ ಸಿನಿಮಾದಲ್ಲಿ ಶಾರುಖ್ ಖಾನ್ ಬದಲು ಹೃತಿಕ್ ರೋಷನ್ ನಟನೆ?

ಶಾರುಖ್ ಖಾನ್ ಅವರು ಡೇಟ್ಸ್ ಇಲ್ಲದ ಕಾರಣ ‘ಜೈಲರ್ 2’ ಸಿನಿಮಾದಲ್ಲಿ ನಟಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರತಂಡ ಈಗ ಹೃತಿಕ್ ರೋಷನ್ ಜೊತೆ ಮಾತುಕಥೆ ನಡೆಸುತ್ತಿದೆ ಎಂದು ವರದಿ ಆಗಿದೆ. ಆದರೆ ಈ ಬಗ್ಗೆ ತಂಡದ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

ರಣವೀರ್ ವಿವಾದ ಬಳಿಕ ‘ಡಾನ್ 3’ ಚಿತ್ರಕ್ಕೆ ಮರಳಲು ಶಾರುಖ್ ರೆಡಿ; ಹಾಕಿದ ಷರತ್ತೇನು?

‘ಡಾನ್ 3’ ಚಿತ್ರದ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ರಣವೀರ್ ಸಿಂಗ್ ನಿರ್ಗಮನದ ನಂತರ, ನಾಯಕನ ಆಯ್ಕೆ ಗೊಂದಲ ಸೃಷ್ಟಿಸಿದೆ. ಹೃತಿಕ್ ರೋಷನ್ ವದಂತಿಗಳನ್ನು ಅಲ್ಲಗಳೆದಿದ್ದಾರೆ. ಶಾರುಖ್ ಖಾನ್ ಅಟ್ಲೀ ನಿರ್ದೇಶನದ ಷರತ್ತಿನೊಂದಿಗೆ ಮರಳುವ ಸಾಧ್ಯತೆ ಇದೆ. ಫರ್ಹಾನ್ ಅಖ್ತರ್ ಅವರ ಮೌನವು ಮುಂದಿನ ‘ಡಾನ್’ ಯಾರು ಎಂಬ ಕುತೂಹಲ ಹೆಚ್ಚಿಸಿದೆ.

ಭಾರತದಲ್ಲಿ ಸಿಗದ 5 ಕೋಟಿ ರೂಪಾಯಿ ಬೆಲೆಯ ಹೊಸ ಕಾರು ತರಿಸಿಕೊಂಡ ಶಾರುಖ್ ಖಾನ್

ನಟ ಶಾರುಖ್ ಖಾನ್ ಅವರು ಈ ಕಾರನ್ನು ವಿದೇಶದಿಂದ ತರಿಸಿಕೊಂಡಿದ್ದಾರೆ. ಇದರ ಬೆಲೆ ಬರೋಬ್ಬರಿ 5 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈಗಾಗಲೇ ಅವರ ಬಳಿಕ ಕೋಟ್ಯಂತರ ರೂಪಾಯಿ ಬೆಲೆಬಾಳುವ ಹಲವು ಕಾರುಗಳು ಇವೆ. ಅವರು ಖರೀದಿಸಿರುವ ಹೊಸ ಕಾರಿನ ಬಗ್ಗೆ ಇಲ್ಲಿದೆ ಮಾಹಿತಿ..

‘ಕಿಂಗ್’ ಸಿನಿಮಾ ಚಿತ್ರೀಕರಣದ ವಿಡಿಯೋ ಲೀಕ್: ಬೀಚ್‌ನಲ್ಲಿ ಶಾರುಖ್, ದೀಪಿಕಾ ರೊಮ್ಯಾನ್ಸ್

ಶಾರುಖ್ ಖಾನ್ ನಟನೆಯ ‘ಕಿಂಗ್’ ಚಿತ್ರತಂಡಕ್ಕೆ ಲೀಕ್ ಕಾಟ ಮುಂದುವರಿದಿದೆ. ಎಷ್ಟೇ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡರೂ ಸಹ ಈ ಸಿನಿಮಾದ ಶೂಟಿಂಗ್ ಸಂದರ್ಭದ ಫೋಟೋ ಮತ್ತು ವಿಡಿಯೋಗಳು ಲೀಕ್ ಆಗುತ್ತಿವೆ. ಇದರಿಂದ ಚಿತ್ರತಂಡಕ್ಕೆ ಬೇಸರ ಆಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

‘ಕಿಂಗ್’ ಚಿತ್ರದ ಫೋಟೋ ಲೀಕ್ ಆಗಿದ್ದಕ್ಕೆ ನಿರ್ದೇಶಕ ಸಿದ್ದಾರ್ಥ್ ಆನಂದ್ ಗರಂ

ಈ ನಡುವೆ ಹಲವು ಚಿತ್ರತಂಡಗಳು ಲೀಕ್ ಕಾಟ ಅನುಭವಿಸುತ್ತಿವೆ. ‘ಪೆದ್ದಿ’, ‘ಜೈಲರ್ 2’ ಬಳಿಕ ‘ಕಿಂಗ್’ ಚಿತ್ರಕ್ಕೂ ಇದೇ ಸಮಸ್ಯೆ ಉಂಟಾಗಿದೆ. ಚಿತ್ರೀಕರಣದ ವೇಳೆ ತೆಗೆದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಮಾಡಲಾಗಿದೆ. ಇದನ್ನು ಕಂಡು ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರು ಗರಂ ಆಗಿದ್ದಾರೆ.

ಗರ್ಭಿಣಿ ಆದ ನಂತರವೂ ಸಾಹಸ ದೃಶ್ಯಗಳ ಚಿತ್ರೀಕರಣ ಮಾಡಿದ ದೀಪಿಕಾ ಪಡುಕೋಣೆ

ಈ ವರ್ಷ ಡಿಸೆಂಬರ್ 24ರಂದು ‘ಕಿಂಗ್’ ಸಿನಿಮಾ ಬಿಡುಗಡೆ ಆಗಬೇಕಿದೆ. ಅದಕ್ಕಾಗಿ ಚಿತ್ರೀಕರಣ ಭರದಿಂದ ಸಾಗಿದೆ. ನಟಿ ದೀಪಿಕಾ ಪಡುಕೋಣೆ ಅವರು ಪ್ರೆಗ್ನೆಂಟ್ ಆಗಿದ್ದರೂ ಕೂಡ ಶೂಟಿಂಗ್ ನಿಲ್ಲಿಸಿಲ್ಲ. ಶಾರುಖ್ ಖಾನ್ ಜೊತೆ ಅವರು ಸಾಹಸ ದೃಶ್ಯಗಳ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

‘ಜವಾನ್ 2’ ಚಿತ್ರಕ್ಕಾಗಿ ಮತ್ತೆ ಒಂದಾಗಲಿದ್ದಾರಾ ಶಾರುಖ್ ಖಾನ್ ಮತ್ತು ಅಟ್ಲಿ?

ನಿರ್ದೇಶಕ ಅಟ್ಲಿ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೇಡಿಕೆ ಇದೆ. ಅವರ ಜೊತೆ ಮತ್ತೆ ಕೆಲಸ ಮಾಡಲು ಶಾರುಖ್ ಖಾನ್ ಆಸಕ್ತಿ ತೋರಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಅಟ್ಲಿ ಮತ್ತು ಶಾರುಖ್ ಖಾನ್ ಅವರು ‘ಜವಾನ್ 2’ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ ಎಂದು ವರದಿ ಆಗಿದೆ.

‘ಜೈಲರ್ 2’ ಸಿನಿಮಾದಲ್ಲಿ ಪವನ್ ಕಲ್ಯಾಣ್? ಶಾರುಖ್ ಮಾಡಬೇಕಿದ್ದ ಪಾತ್ರ ಈಗ ಪವರ್ ಸ್ಟಾರ್ ಪಾಲು

ರಜನಿಕಾಂತ್ ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದಲ್ಲಿ ಅಭಿನಯಿಸಲು ಶಾರುಖ್ ಖಾನ್ ಒಪ್ಪಿಕೊಂಡಿಲ್ಲ. ಅವರ ಬದಲಿಗೆ ಪವನ್ ಕಲ್ಯಾಣ್ ಹೆಸರು ಕೇಳಿಬರುತ್ತಿದೆ. ಈ ಸಿನಿಮಾದಲ್ಲಿ ಅನೇಕ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ. ಹಾಗಾಗಿ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಆ ಕುರಿತು ಇಲ್ಲಿದೆ ವಿವರ..

ರಣವೀರ್​​ ತಲೆಗೇರಿತೇ ‘ಧುರಂಧರ್ 2’ ಯಶಸ್ಸು? ನಡೆದುಕೊಂಡ ರೀತಿಗೆ ಶುರುವಾಗಿದೆ ಚರ್ಚೆ

ರಣವೀರ್ ಸಿಂಗ್‌ಗೆ 'ಧುರಂಧರ್ 2' ಯಶಸ್ಸು ತಲೆಗೇರಿದೆ ಎಂಬ ಚರ್ಚೆ ಶುರುವಾಗಿದೆ. ಅನಂತ್ ಅಂಬಾನಿ ಪಾರ್ಟಿಯಲ್ಲಿ ಶಾರುಖ್ ಖಾನ್ ಅವರನ್ನು ರಣವೀರ್ ನಿರ್ಲಕ್ಷಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಘಟನೆ ರಣವೀರ್ ವರ್ತನೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ, ಇನ್ನೊಂದು ಪಾರ್ಟಿಯಲ್ಲಿ ಶಾರುಖ್ ಮತ್ತು ರಣವೀರ್ ಒಟ್ಟಾಗಿ ಕಾಣಿಸಿಕೊಂಡಿದ್ದು, ವಿವಾದಕ್ಕೆ ಬೇರೆ ಆಯಾಮ ನೀಡಿದೆ.

ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ