AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan

Shah Rukh Khan

ಶಾರುಖ್ ಖಾನ್ ಅವರು ಬಾಲಿವುಡ್ನ ಬೇಡಿಕೆಯ ಹೀರೋ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಶಾರುಖ್ ಖಾನ್ ಜನಿಸಿದ್ದು 1965ರ ನವೆಂಬರ್ 2ರಂದು. ಅವರ ಆಸ್ತಿ ಮೌಲ್ಯ 6500 ಕೋಟಿ ರೂಪಾಯಿಗೂ ಮೀರಿದೆ. ಭಾರತದ ಅತ್ಯಂತ ಶ್ರೀಮಂತ ನಟ ಎನ್ನುವ ಹೆಗ್ಗಳಿಕೆ ಇವರಿಗೆ ಇದೆ.

ಶಾರುಖ್ ಖಾನ್ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದರು. ಆ ಬಳಿಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಸಾಲು ಸಾಲು ಸಿನಿಮಾ ಮಾಡಿ ಫೇಮಸ್ ಆದರು. ಶಾರುಖ್ ಖಾನ್ ‘ಡಿಡಿಎಲ್ಜೆ’, ‘ಡಾನ್’, ‘ಡಾನ್ 2’, ‘ಚೆನ್ನೈ ಎಕ್ಸ್ಪ್ರೆಸ್’ ಸೇರಿ ಹಲವು ಸೂಪರ್ ಹಿಟ್ ಚಿತ್ರ ನೀಡಿದ್ದಾರೆ.

2023ರಲ್ಲಿ ರಿಲೀಸ್ ಆದ ‘ಪಠಾಣ್’, ‘ಜವಾನ್’ ಹಿಟ್ ಆಗಿವೆ. ಗೌರಿ ಖಾನ್ ಅವರನ್ನು ಶಾರುಖ್ ಮದುವೆ ಆಗಿದ್ದು, ಸುಹಾನಾ ಖಾನ್, ಆರ್ಯನ್ ಖಾನ್ ಹಾಗೂ ಅಬ್ರಾಮ್ ಖಾನ್ ಹೆಸರಿನ ಮಕ್ಕಳು ಇವರಿಗೆ ಇದ್ದಾರೆ.

ಇನ್ನೂ ಹೆಚ್ಚು ಓದಿ

ಬೆಂಗಳೂರಲ್ಲಿ ಮಧ್ಯ ಬೆರಳು ತೋರಿಸಿದ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್

ಇತ್ತೀಚೆಗೆ ಆರ್ಯನ್ ಖಾನ್ ಅವರು ಬೆಂಗಳೂರಿಗೆ ಬಂದಿದ್ದರು. ಆ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆರ್ಯನ್ ಖಾನ್ ಅವರು ಜನರ ಕಡೆಗೆ ಮಧ್ಯದ ಬೆರಳು ತೋರಿಸಿದ ವಿಡಿಯೋ ಈಗ ವೈರಲ್ ಆಗಿದೆ. ಸಾರ್ವಜನಿಕವಾಗಿ ಅಸಭ್ಯ ಸನ್ನೆ ಮಾಡಿದ ಅವರ ವಿರುದ್ಧ ಪೊಲೀಸರು ಈವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ.

ಸಮೀರ್ ವಾಂಖೆಡೆ ಆರೋಪಗಳಿಗೆ ಕೋರ್ಟ್​ನಲ್ಲೇ ಉತ್ತರ ಕೊಟ್ಟ ಶಾರುಖ್ ಕಂಪನಿ

ಐಆರ್​ಎಸ್ ಅಧಿಕಾರಿ ಸಮೀರ್ ವಾಂಖೆಡೆ, ಶಾರುಖ್ ಖಾನ್ ಕಂಪನಿ ರೆಡ್ ಚಿಲ್ಲೀಸ್ ನಿರ್ಮಿತ 'ಬ್ಯಾಡ್ಸ್ ಆಫ್ ಬಾಲಿವುಡ್' ಸರಣಿ ವಿರುದ್ಧ ದೂರು ನೀಡಿದ್ದಾರೆ. ಸರಣಿಯಲ್ಲಿ ತಮ್ಮನ್ನು ಹೋಲುವ ಪಾತ್ರವಿದೆ ಎಂದು ವಾಂಖೆಡೆ ಆರೋಪಿಸಿದ್ದಾರೆ. ಆದರೆ, ರೆಡ್ ಚಿಲ್ಲೀಸ್ ವಕೀಲರು, ಇದು ಕಾಲ್ಪನಿಕ ಕಥೆ, ಆರ್ಯನ್ ಖಾನ್ ಕ್ರೂಸ್ ಕೇಸ್​ಗೆ ಸಂಬಂಧವಿಲ್ಲ ಎಂದು ದೆಹಲಿ ಹೈಕೋರ್ಟ್​ ಅಲ್ಲಿ ವಾದ ಮಂಡಿಸಿದ್ದಾರೆ.

ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಶಾರುಖ್ ಖಾನ್

ಮುಂಬೈನಲ್ಲಿ ‘ಗ್ಲೋಬಲ್ ಪೀಸ್ ಆನರ್ಸ್ 2025’ ಕಾರ್ಯಕ್ರಮ ನಡೆದಿದ್ದು, ಅನೇಕ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ಶಾರುಖ್ ಖಾನ್, ರಣವೀರ್ ಸಿಂಗ್, ಸುನೀಲ್ ಶೆಟ್ಟಿ, ರಕುಲ್ ಪ್ರೀತ್ ಸಿಂಗ್ ಮುಂತಾದವರು ಇದರಲ್ಲಿ ಪಾಲ್ಗೊಂಡಿದ್ದಾರೆ. ಶಾರುಖ್ ಖಾನ್ ಅವರು ಮಾತನಾಡಿದ ವಿಡಿಯೋ ತುಣುಕು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

2050ಕ್ಕೆ ಶಾರುಖ್ ಖಾನ್ ಯಾರು ಅನ್ನೋದನ್ನೇ ಜನ ಮರೆಯುತ್ತಾರೆ: ವಿವೇಕ್ ಒಬೆರಾಯ್

ಬಾಲಿವುಡ್ ಸ್ಟಾರ್ ನಟ ಶಾರುಖ್ ಖಾನ್ ಅವರಿಗೆ ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ಫ್ಯಾನ್ಸ್ ಇದ್ದಾರೆ. ಹಾಗಿದ್ದರೂ ಕೂಡ ಅವರನ್ನು ಜನರು 2050ರ ವೇಳೆಗೆ ಮರೆಯುತ್ತಾರೆ ಎಂದು ವಿವೇಕ್ ಒಬೆರಾಯ್ ಹೇಳಿದ್ದಾರೆ. ಈ ಅಭಿಪ್ರಾಯಕ್ಕೆ ಉದಾಹರಣೆಯಾಗಿ ರಾಜ್ ಕಪೂರ್ ಅವರ ಹೆಸರನ್ನು ವಿವೇಕ್ ಒಬೆರಾಯ್ ಹೇಳಿದ್ದಾರೆ.

150 ಕೋಟಿಯಿಂದ 350 ಕೋಟಿ ರೂಪಾಯಿಗೆ ಏರಿತು ಶಾರುಖ್ ನಟನೆಯ ‘ಕಿಂಗ್’ ಸಿನಿಮಾ ಬಜೆಟ್

ಶಾರುಖ್ ಖಾನ್ ನಟನೆಯ ಬಹುನಿರೀಕ್ಷಿತ ‘ಕಿಂಗ್’ ಸಿನಿಮಾದ ಬಿಡುಗಡೆಗೆ ಇನ್ನೂ ಸಾಕಷ್ಟು ಸಮಯ ಇದೆ. ಅಷ್ಟರಲ್ಲಾಗಲೇ ಈ ಚಿತ್ರದ ಕುರಿತು ಸಿಕ್ಕಾಪಟ್ಟೆ ಇಂಟರೆಸ್ಟಿಂಗ್ ಮಾಹಿತಿಗಳು ಕೇಳಿಬರಲು ಆರಂಭಿಸಿವೆ. ಈ ಸಿನಿಮಾದ ಬಜೆಟ್ 350 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಆ ಕುರಿತು ಇಲ್ಲಿದೆ ಮಾಹಿತಿ..

‘ಕಿಂಗ್’ ಚಿತ್ರಕ್ಕಾಗಿ ಹಾಲಿವುಡ್ ಪೋಸ್ ಕದ್ದ ಶಾರುಖ್ ಖಾನ್? ಶುರುವಾಯ್ತು ಚರ್ಚೆ  

ಶಾರುಖ್ ಖಾನ್ 'ಕಿಂಗ್' ಚಿತ್ರದ ಹೊಸ ಲುಕ್, ಬ್ರಾಡ್ ಪಿಟ್ 'ಎಫ್1' ಸಿನಿಮಾದ ಲುಕ್ ಹೋಲುತ್ತಿದೆ. ನೆಟ್ಟಿಗರು ಈ ವಿಚಾರದಲ್ಲಿ ಚರ್ಚೆ ನಡೆಯತ್ತದೆ. ಶಾರುಖ್ ಹಳೆಯ 'ಜಬ್ ಹ್ಯಾರಿ ಮೆಟ್ ಸೇಜಲ್' ಲುಕ್‌ನಂತೆ ಇದೆಯೆಂದೂ ಕೆಲವರು ಗುರುತಿಸಿದ್ದಾರೆ. ಸಾಮಾಜಿಕ ಮಾಧ್ಯಮದ ಯುಗದಲ್ಲಿ ಇಂತಹ ಹೋಲಿಕೆಗಳು ತಕ್ಷಣ ವೈರಲ್ ಆಗುತ್ತಿವೆ.

ಹೊಸ ಅವತಾರದಲ್ಲಿ ಬಂದ ಶಾರುಖ್ ಖಾನ್: ಹುಟ್ಟುಹಬ್ಬಕ್ಕೆ ‘ಕಿಂಗ್’ ಟೀಸರ್ ರಿಲೀಸ್

ಶಾರುಖ್ ಖಾನ್ ಅವರ ಬರ್ತ್​ಡೇ ಪ್ರಯುಕ್ತ ಅಭಿಮಾನಿಗಳಿಗೆ ‘ಕಿಂಗ್’ ಸಿನಿಮಾ ತಂಡದಿಂದ ಗಿಫ್ಟ್ ಸಿಕ್ಕಿದೆ. ಈ ಬಹುನಿರೀಕ್ಷಿತ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿದೆ. ಇದು ಸಖತ್ ಮಾಸ್ ಆಗಿದೆ. ರಗಡ್ ಅವತಾರದಲ್ಲಿ ಅಭಿಮಾನಿಗಳನ್ನು ರಂಜಿಸಲು ಶಾರುಖ್ ಸಜ್ಜಾಗಿದ್ದಾರೆ. 2026ರಲ್ಲಿ ಚಿತ್ರ ಬಿಡುಗಡೆ ಆಗಲಿದೆ.

12 ಸಾವಿರ ಕೋಟಿ ಒಡೆಯ ಶಾರುಖ್ ಅವರ ಮೊದಲ ಸಂಭಾವನೆ ಎಷ್ಟು?

ಶಾರುಖ್ ಖಾನ್ ತಮ್ಮ ನಟನಾ ವೃತ್ತಿಜೀವನವನ್ನು ಸಣ್ಣ ಪರದೆಯಿಂದ ಪ್ರಾರಂಭಿಸಿದರು. ಆ ಬಳಿಕ ಅವರಿಗೆ ಬಾಲಿವುಡ್‌ನಿಂದ ಆಫರ್‌ಗಳು ಬಂದವು. ಅವರು ತಮ್ಮ ಮೊದಲ ಚಿತ್ರದಿಂದಲೇ ಬಾಲಿವುಡ್‌ನಲ್ಲಿ ಸಂಚಲನ ಮೂಡಿಸಿದರು. ಈ ಜನಪ್ರಿಯತೆ ಇಂದಿಗೂ ಮುಂದುವರೆದಿದೆ. ಈ ನಟ ಈಗ ವಿಶ್ವದ ಅತ್ಯಂತ ಶ್ರೀಮಂತ ನಟರಲ್ಲಿ ಒಬ್ಬರು.

ಶಾರುಖ್ ಖಾನ್ 60ನೇ ವರ್ಷದ ಹುಟ್ಟುಹಬ್ಬ: ಮನ್ನತ್ ಎದುರು ಜನಸಾಗರ

ನಟ ಶಾರುಖ್ ಖಾನ್ ಅವರಿಗೆ ಈಗ 60 ವರ್ಷ ವಯಸ್ಸು. ಇಂದು (ನವೆಂಬರ್ 2) ಅವರಿಗೆ ಜನ್ಮದಿನದ ಸಂಭ್ರಮ. ಮುಂಬೈನಲ್ಲಿರುವ ಮನ್ನತ್ ನಿವಾಸದ ಎದುರು ಶಾರುಖ್ ಖಾನ್ ಅವರ ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ. ಬೇರೆ ಬೇರೆ ರಾಜ್ಯಗಳಿಂದ ಅಭಿಮಾನಿಗಳು ಬಂದಿದ್ದಾರೆ. ಎಲ್ಲರೂ ಶಾರುಖ್​​ ಖಾನ್​​ಗೆ ಶುಭಾಶಯ ತಿಳಿಸುತ್ತಿದ್ದಾರೆ.

ಹಣವಲ್ಲ, ಶಾರುಖ್ ಖಾನ್ ಈ ಸೂತ್ರ ನಿಮ್ಮ ಜೀವನದಲ್ಲೂ ಅಳವಡಿಸಿಕೊಂಡರೆ ಲೈಫ್ ಖುಷ್

ಶಾರುಖ್ ಖಾನ್ ಜೀವನದ ಕಷ್ಟಗಳ ನಡುವೆಯೂ ಸಂತೋಷದಿಂದ ಇರಲು ಒಂದು ವಿಶಿಷ್ಟ ಸೂತ್ರವನ್ನು ಹಂಚಿಕೊಂಡಿದ್ದಾರೆ. 99.999% ಜನರ ಬಗ್ಗೆ ಯೋಚಿಸದೆ, ಕೇವಲ ಕುಟುಂಬ ಮತ್ತು ಆತ್ಮೀಯ ಗೆಳೆಯರ ಮೇಲೆ ಗಮನ ಹರಿಸುವುದು ಅವರ ಮಂತ್ರ. ಈ ಸರಳ ತಂತ್ರವನ್ನು ಅಳವಡಿಸಿಕೊಂಡರೆ ಯಾರಾದರೂ ಖುಷಿಯಿಂದ ಇರಬಹುದು ಎಂದು SRK ಹೇಳುತ್ತಾರೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ