
Shiva Rajkumar
ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಶಿವರಾಜ್ಕುಮಾರ್ ಕೂಡ ಪ್ರಮುಖರು. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಅನುಭವ ಅಪಾರ. 130ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಶಿವರಾಜ್ಕುಮಾರ್ ಜನಿಸಿದ್ದು 1962ರ ಜುಲೈ 12ರಂದು. ಡಾ. ರಾಜ್ಕುಮಾರ್ ಅವರ ಪುತ್ರನಾದರೂ ಕೂಡ ತಮ್ಮದೇ ಛಾಪನ್ನು ಶಿವರಾಜ್ಕುಮಾರ್ ಮೂಡಿಸಿದ್ದಾರೆ. ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ‘ಆನಂದ್’ ಸೂಪರ್ ಹಿಟ್ ಆಯಿತು. ನಂತರದ ವರ್ಷಗಳಲ್ಲಿ ಅವರು ಕನ್ನಡ ಚಿತ್ರರಂಗದ ಪ್ರಮುಖ ಸ್ಟಾರ್ ನಟನಾಗಿ ಬೆಳೆದರು. ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಜನುಮದ ಜೋಡಿ, ಓಂ, ಜೋಗಿ, ಟಗರು, ತವರಿಗೆ ಬಾ ತಂಗಿ, ಮಫ್ತಿ ಮುಂತಾದವು ಶಿವರಾಜ್ಕುಮಾರ್ ನಟನೆಯ ಪ್ರಮುಖ ಸಿನಿಮಾಗಳು. ನಟನೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಿಂದಲೂ ಶಿವರಾಜ್ಕುಮಾರ್ ಅವರು ಜನಮೆಚ್ಚುಗೆ ಪಡೆದಿದ್ದಾರೆ
Shivarajkumar Birthday: 63ನೇ ವಯಸ್ಸಲ್ಲಿ ಶಿವರಾಜ್ಕುಮಾರ್ ಕೈಯಲ್ಲಿದೆ ಒಂದು ಡಜನ್ ಸಿನಿಮಾ
ಶಿವರಾಜ್ ಕುಮಾರ್ ಅವರು ತಮ್ಮ 63ನೇ ವಯಸ್ಸಿನಲ್ಲೂ ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರ ಬರ್ತ್ಡೇ ಪ್ರಯುಕ್ತ ಹಲವು ಹೊಸ ಚಿತ್ರಗಳು ಘೋಷಣೆಯಾಗಿವೆ. 'ಟಗರು 2', 'ಜೈಲರ್ 2' ಮುಂತಾದ ಸೀಕ್ವೆಲ್ಗಳ ಜೊತೆಗೆ ಹೊಸ ಚಿತ್ರಗಳಲ್ಲೂ ಅವರು ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ತೆಲುಗು ಮತ್ತು ತಮಿಳು ಚಿತ್ರಗಳಲ್ಲೂ ಅವರು ಬ್ಯುಸಿ ಇದ್ದಾರೆ.
- Rajesh Duggumane
- Updated on: Jul 12, 2025
- 12:27 pm
ಶಿವರಾಜ್ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳು ತಂದ ಕೇಕ್ ಕತ್ತರಿಸಿದ ಶಿವಣ್ಣ
Shivarajkumar Birthday: ಶಿವರಾಜ್ಕುಮಾರ್ ಅವರಿಗೆ ಇಂದು ಜನ್ಮದಿನ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳು ಬರುತ್ತಿವೆ. ಈ ವೇಳೆ ಎಲ್ಲರೂ ನಟನಿಗೆ ವಿಶ್ ತಿಳಿಸುತ್ತಿದ್ದಾರೆ. ಅವರ ಮನೆಯ ಎದುರು ಫ್ಯಾನ್ಸ್ ನೆರೆದಿದ್ದಾರೆ. ಈ ವೇಳೆ ಎಲ್ಲರೂ ಸಂಭ್ರಮಿಸಿದ್ದಾರೆ. ಅಭಿಮಾನಿಗಳು ತಂದ ಕೇಕ್ನ ಅವರು ಕತ್ತರಿಸಿದ್ದಾರೆ.
- Rajesh Duggumane
- Updated on: Jul 12, 2025
- 9:00 am
‘ಶಿವರಾಜ್ಕುಮಾರ್ ತಾಯಿಯಾಗಿ ಗುರುತಿಸಿದ್ರು’; 80ರ ದಶಕದ ಕಥೆ ಹೇಳಿಕೊಂಡಿದ್ದ ಪಾರ್ವತಮ್ಮ
Shivarajkumar Birthday: ಪಾರ್ವತಮ್ಮ ಅವರು ರಾಜ್ ಕುಮಾರ್ ಅವರ ಪತ್ನಿ ಮತ್ತು ಶಿವರಾಜ್ ಕುಮಾರ್ ಅವರ ತಾಯಿಯಾಗಿ ಹೆಚ್ಚು ಗುರುತಿಸಲ್ಪಟ್ಟರು. ಶಿವರಾಜ್ ಕುಮಾರ್ ಅವರ ಚಿತ್ರರಂಗ ಪ್ರವೇಶದ ನಂತರ, ಅವರನ್ನು "ಶಿವರಾಜ್ ಕುಮಾರ್ ಅವರ ತಾಯಿ" ಎಂದು ಕರೆಯಲಾರಂಭಿಸಿದ್ದು ಅವರಿಗೆ ಸಂತೋಷವನ್ನು ನೀಡಿತು. ಈ ಬಗ್ಗೆ ಅವರ ಅಪರೂಪದ ಸಂದರ್ಶನವೊಂದು ಈಗ ಮತ್ತೆ ಸುದ್ದಿಯಾಗಿದೆ.
- Shreelaxmi H
- Updated on: Jul 12, 2025
- 7:35 am
ಶಿವಣ್ಣ ಹುಟ್ಟಿದ ಬಳಿಕ ಸಂಜೆಯಿಂದ ಬೆಳಗ್ಗಿನವರೆಗೆ ಸ್ವೀಟ್ ಹಂಚಿದ್ದ ರಾಜ್ಕುಮಾರ್
Shivarajkumr Birthday: ಶಿವರಾಜ್ ಕುಮಾರ್ ಅವರು ಇಂದು ತಮ್ಮ 63ನೇ ಜನ್ಮದಿನ ಆಚರಿಸುತ್ತಿದ್ದಾರೆ. ಕ್ಯಾನ್ಸರ್ನಿಂದ ಚೇತರಿಸಿಕೊಂಡ ನಂತರ ಈ ಹುಟ್ಟುಹಬ್ಬ ಅವರಿಗೆ ವಿಶೇಷವಾಗಿದೆ. ಅವರ ಕುಟುಂಬ, ಅಭಿಮಾನಿಗಳು ಮತ್ತು ಸ್ನೇಹಿತರು ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯ ತಿಳಿಸುತ್ತಿದ್ದಾರೆ. ರಾಜ್ ಕುಮಾರ್ ಅವರ ಮಗನಾಗಿ ಹುಟ್ಟಿದ ಶಿವಣ್ಣ ಅವರ ಜೀವನದ ಕೆಲವು ಆಸಕ್ತಿಕರ ವಿವರಗಳು ಈ ಲೇಖನದಲ್ಲಿವೆ.
- Shreelaxmi H
- Updated on: Jul 12, 2025
- 7:19 am
666 ಆಪರೇಷನ್ ಡ್ರೀಮ್ ಥಿಯೇಟರ್: ಶಿವರಾಜ್ಕುಮಾರ್ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಹಾಗೂ ಡಾಲಿ ಧನಂಜಯ ಅವರು ಪ್ರಮುಖ ಪಾತಗಳನ್ನು ಮಾಡುತ್ತಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾಗೆ ಚಿತ್ರೀಕರಣ ಪ್ರಾರಂಭ ಆಗಲಿದೆ. ದೊಡ್ಡ ಬಜೆಟ್ನಲ್ಲಿ ಈ ಸಿನಿಮಾವನ್ನು ನಿರ್ಮಿಸಲಾಗುತ್ತಿದೆ. ಏಕಕಾಲಕ್ಕೆ ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆ ಮಾಡುವ ಪ್ಲ್ಯಾನ್ ಇದೆ.
- Madan Kumar
- Updated on: Jul 9, 2025
- 5:04 pm
ಕೋಳಿ ಸಾರಿನ ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ತರುಣ್ ಸುಧೀರ್ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ‘ಏಳುಮಲೆ’ ಎಂಬ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಟೈಟಲ್ ಟೀಸರ್ ಲಾಂಚ್ಗೆ ಶಿವಣ್ಣ ಆಗಮಿಸಿ ಶುಭ ಹಾರೈಸಿದರು. ಈ ವೇಳೆ ಅವರು ಒಂದು ವಿಚಾರವನ್ನು ರಿವೀಲ್ ಮಾಡಿದರು .
- Rajesh Duggumane
- Updated on: Jul 9, 2025
- 11:17 am
ಚಾಮುಂಡೇಶ್ವರಿ ದರ್ಶನ ಪಡೆದ ನಟ ಶಿವರಾಜ್ ಕುಮಾರ್, ಗೀತಾ
ನಟ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಇಂದು (ಜುಲೈ 2) ಮೈಸೂರಿಗೆ ತೆರಳಿದ್ದಾರೆ. ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನವನ್ನು ಅವರು ಪಡೆದಿದ್ದಾರೆ. ಅವರ ಜೊತೆ ಪತ್ನಿ ಗೀತಾ ಶಿವರಾಜ್ಕುಮಾರ್ ಸಹ ಚಾಮುಂಡೇಶ್ವರಿ ಸನ್ನಿಧಾನಕೆ ಭೇಟಿ ನೀಡಿದ್ದಾರೆ. ಈ ದಂಪತಿಯು ವಿಶೇಷ ಪೂಜೆ ಸಲ್ಲಿಸಿದ ವಿಡಿಯೋ ಇಲ್ಲಿದೆ..
- Madan Kumar
- Updated on: Jul 2, 2025
- 9:47 am
‘ಆನಂದ್’ ಸಿನಿಮಾದ ಸಾಂಗ್ ಶೂಟಿಂಗ್ ವೇಳೆ ನಡೆದಿತ್ತು ಫನ್ನಿ ಘಟನೆ; ವಿವರಿಸಿದ ಸುಧಾರಾಣಿ
Anand Movie: ಸುಧಾರಾಣಿ ಅವರು ಆನಂದ್ ಚಿತ್ರದ ‘ನೀಲ ಮೇಘ..’ ಹಾಡಿನ ಚಿತ್ರೀಕರಣದ ವೇಳೆ ನಡೆದ ಒಂದು ಫನ್ನಿ ಘಟನೆಯನ್ನು ವಿವರಿಸಿದ್ದಾರೆ. ಶಿವರಾಜ್ ಕುಮಾರ್ ಅವರೊಂದಿಗಿನ ದೃಶ್ಯದಲ್ಲಿ ಅವರು ತಡವಾಗಿ ಅರ್ಥಮಾಡಿಕೊಂಡ ಒಂದು ವಿಷಯ ಮತ್ತು ನಿರ್ದೇಶಕರ ಸಹಾಯದ ಬಗ್ಗೆ ಮಾತನಾಡಿದ್ದಾರೆ.
- Shreelaxmi H
- Updated on: Jun 25, 2025
- 8:19 am
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಜನರು ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದ ‘ಉತ್ತರಕಾಂಡ’ ಚಿತ್ರದ ಶೂಟಿಂಗ್ ಸದ್ಯಕ್ಕೆ ನಿಂತಿವೆ. ಅದಕ್ಕೆ ಕಾರಣವೇನು ಎಂಬುದನ್ನು ನಿರ್ದೇಶಕ ರೋಹಿತ್ ಪದಕಿ ಹಾಗೂ ನಿರ್ಮಾಪಕ ಕಾರ್ತಿಕ್ ಗೌಡ ಅವರು ವಿವರಿಸಿದ್ದಾರೆ. ಈ ಚಿತ್ರದ ಪಾತ್ರವರ್ಗದಲ್ಲಿ ಡಾಲಿ ಧನಂಜಯ, ಶಿವರಾಜ್ಕುಮಾರ್ ಮುಂತಾದವರಿಗೆ ಪ್ರಮುಖ ಪಾತ್ರವಿದೆ.
- Madan Kumar
- Updated on: Jun 19, 2025
- 7:50 pm
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ನಟ ಮಡೆನೂರು ಮನು ಅವರು ಇತ್ತೀಚೆಗೆ ವಿವಾದಗಳಿಂದಲೇ ಹೆಚ್ಚು ಸುದ್ದಿ ಆಗಿದ್ದಾರೆ. ಕನ್ನಡ ಚಿತ್ರರಂಗ ಖ್ಯಾತ ಹೀರೋಗಳ ಬಗ್ಗೆ ಮನು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ಒಂದು ಆಡಿಯೋ ವೈರಲ್ ಆಗಿದೆ. ಆ ಕುರಿತು ‘ಮಾದೇವ’ ಸಿನಿಮಾದ ನಟ ವಿನೋದ್ ಪ್ರಭಾಕರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
- Madan Kumar
- Updated on: Jun 15, 2025
- 9:13 am