AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiva Rajkumar

Shiva Rajkumar

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಶಿವರಾಜ್​ಕುಮಾರ್ ಕೂಡ ಪ್ರಮುಖರು. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಅನುಭವ ಅಪಾರ. 130ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಶಿವರಾಜ್​ಕುಮಾರ್​ ಜನಿಸಿದ್ದು 1962ರ ಜುಲೈ 12ರಂದು. ಡಾ. ರಾಜ್​ಕುಮಾರ್ ಅವರ ಪುತ್ರನಾದರೂ ಕೂಡ ತಮ್ಮದೇ ಛಾಪನ್ನು ಶಿವರಾಜ್​ಕುಮಾರ್​ ಮೂಡಿಸಿದ್ದಾರೆ. ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ‘ಆನಂದ್’ ಸೂಪರ್​ ಹಿಟ್​ ಆಯಿತು. ನಂತರದ ವರ್ಷಗಳಲ್ಲಿ ಅವರು ಕನ್ನಡ ಚಿತ್ರರಂಗದ ಪ್ರಮುಖ ಸ್ಟಾರ್​ ನಟನಾಗಿ ಬೆಳೆದರು. ಅವರ ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಜನುಮದ ಜೋಡಿ, ಓಂ, ಜೋಗಿ, ಟಗರು, ತವರಿಗೆ ಬಾ ತಂಗಿ, ಮಫ್ತಿ ಮುಂತಾದವು ಶಿವರಾಜ್​ಕುಮಾರ್​ ನಟನೆಯ ಪ್ರಮುಖ ಸಿನಿಮಾಗಳು. ನಟನೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಿಂದಲೂ ಶಿವರಾಜ್​ಕುಮಾರ್​ ಅವರು ಜನಮೆಚ್ಚುಗೆ ಪಡೆದಿದ್ದಾರೆ

ಇನ್ನೂ ಹೆಚ್ಚು ಓದಿ

ಯಶ್​​ಗೆ ಶಿವಣ್ಣ ಬಗ್ಗೆ ಇರೋ ಕೇರ್​ ನೋಡಿ; ಕಣ್ಣಲ್ಲೆ ಸನ್ನೆ ಕೊಟ್ಟ ರಾಕಿ

'ಟಾಕ್ಸಿಕ್' ಸಿನಿಮಾದ ಈವೆಂಟ್‌ನಲ್ಲಿ ನಟ ಯಶ್ ಅವರು ಹಿರಿಯ ನಟ ಶಿವರಾಜ್‌ಕುಮಾರ್ ಅವರ ಮೇಲಿಟ್ಟಿರುವ ಗೌರವ ಹಾಗೂ ಕಾಳಜಿ ಎಲ್ಲರ ಗಮನ ಸೆಳೆದಿದೆ. ಕಾರ್ಯಕ್ರಮದಿಂದ ಅರ್ಧಕ್ಕೆ ತೆರಳಿದ ಶಿವಣ್ಣ ಅವರನ್ನು ಕಾರಿನವರೆಗೆ ಸುರಕ್ಷಿತವಾಗಿ ಕಳುಹಿಸಲು ತಮ್ಮ ಬಾಡಿಗಾರ್ಡ್‌ಗೆ ಸೂಚಿಸಿದ ಯಶ್ ಅವರ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗುತ್ತಿದೆ.

ಯಶ್​ ‘ಟಾಕ್ಸಿಕ್’ ಟ್ರೇಲರ್​ ನೋಡಿ ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು’ ಎಂದ ಶಿವಣ್ಣ

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಶಿವರಾಜಕುಮಾರ್ ಅವರು ಯಶ್ ಅವರ ಪ್ಯಾನ್ ಇಂಡಿಯಾ ಬೆಳವಣಿಗೆಯನ್ನು ಕಂಡು ತೀವ್ರ ಸಂತೋಷ ವ್ಯಕ್ತಪಡಿಸಿದರು. ‘ನಾನೇ ಸಿನಿಮಾ ಮಾಡಿದಷ್ಟು ಖುಷಿಯಾಯ್ತು, ನನ್ನ ಸಹೋದರ ಯಶ್ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿರುವುದು ಹೆಮ್ಮೆ" ಎಂದು ಶಿವಣ್ಣ ಹೇಳಿದ್ದಾರೆ.

‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ

ಶಿವರಾಜ್‌ಕುಮಾರ್ ಅವರು ಟಾಕ್ಸಿಕ್ ಚಿತ್ರದ ಟ್ರೈಲರ್ ಅನ್ನು ಬೆಂಗಳೂರಿನ AMB ಕಾಪಾಲಿ ಮಾಲ್‌ನಲ್ಲಿ ಬಿಡುಗಡೆ ಮಾಡಿದರು. ಯಶ್‌ಗೆ "ಆಲ್ ದಿ ಬೆಸ್ಟ್ ಟಾಕ್ಸಿಕ್" ಎಂದು ಶುಭ ಹಾರೈಸಿದರು. ಈ ಡಾರ್ಕ್ ಥ್ರಿಲ್ಲರ್ ಚಿತ್ರದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಈ ತಿಂಗಳ 26 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

‘ಓಂ ನನ್ನ ಆಲ್​ ಟೈಮ್​ ಫೇವರಿಟ್’; ಹಾಡಿ ಹೊಗಳಿದ ಪ್ರಥ್ವಿರಾಜ್ ಸುಕುಮಾರನ್

ಮಾಲಿವುಡ್ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಅವರು ‘ಓಂ’ ಚಿತ್ರ ಹೊಗಳಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ ಈ ಚಿತ್ರ ಅವರ ಆಲ್ ಟೈಮ್ ಫೇವರಿಟ್. ಭಾರತದ 5 ಪ್ರಮುಖ ಚಿತ್ರರಂಗದ ಅತ್ಯುತ್ತಮ ಸಿನಿಮಾಗಳನ್ನು ಆಯ್ಕೆ ಮಾಡುವಾಗ ಕನ್ನಡದಿಂದ 'ಓಂ' ಚಿತ್ರವನ್ನು ಶ್ಲಾಘಿಸಿರುವ ಅವರ ವಿಡಿಯೋ ಈಗ ವೈರಲ್ ಆಗಿದೆ.

ತಮನ್ನಾ ಜೊತೆ ಹಾಡು ಬೇಕು ಎಂದ ಶಿವಣ್ಣ; ಗೀತಕ್ಕನ ಬಳಿ ಪಿಟ್ಟಿಂಗ್ ಇಟ್ಟ ಶ್ರೀನಿ

ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಹುಟ್ಟುಹಬ್ಬದ ಅಂಗವಾಗಿ 'A For ಆನಂದ್' ಚಿತ್ರದ ಸಖತ್ ಇಂಟರೆಸ್ಟಿಂಗ್ ಪ್ರೋಮೋ ರಿಲೀಸ್ ಆಗಿದೆ. ವಿಡಿಯೋದಲ್ಲಿ ನಿರ್ದೇಶಕ ಶ್ರೀನಿ, ಶಿವಣ್ಣ ಅವರ ಪತ್ನಿ ಗೀತಕ್ಕನ ಮುಂದೆ ಸಾಲು ಸಾಲು ಚಾಡಿ (ಪಿಟ್ಟಿಂಗ್) ಹೇಳುವ ದೃಶ್ಯಗಳು ಜಬರ್ದಸ್ತ್ ಕಾಮಿಡಿಯಾಗಿ ಮೂಡಿಬಂದಿವೆ. ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿರುವ ಈ ಪ್ರೋಮೋದಲ್ಲಿ ಸೆಂಚುರಿ ಸ್ಟಾರ್ ಅವರ ಲುಕ್ ಕೂಡ ರಿವೀಲ್ ಆಗಿದೆ.

‘ಈ ಮರುಜನ್ಮ ನಿಮಗೆ ಅರ್ಪಣೆ’: ಬಹಿರಂಗ ಆಗುತ್ತಿದೆ ಶಿವಣ್ಣ ಕಷ್ಟದ ದಿನಗಳ ಪೂರ್ತಿ ಮಾಹಿತಿ

ನಟ ಶಿವರಾಜ್​ಕುಮಾರ್ ಅವರು ಅನಾರೋಗ್ಯವನ್ನು ಎದುರಿಸಿ ಮತ್ತೆ ಮೊದಲಿನಂತೆ ಆ್ಯಕ್ಟೀವ್ ಆಗಿದ್ದಾರೆ. ಆದರೆ ಆ ಜರ್ನಿ ಅಷ್ಟು ಸುಲಭದ್ದಾಗಿರಲಿಲ್ಲ. ಈ ಕುರಿತು ಸ್ವತಃ ಶಿವಣ್ಣ ಮಾತನಾಡಿದ್ದಾರೆ. ‘ಸರ್ವೈವರ್’ ಸಾಕ್ಷ್ಯಚಿತ್ರದ ಪ್ರೋಮೋ ಹಂಚಿಕೊಂಡಿರುವ ಅವರು ‘ಈ ಮರುಜನ್ಮ ನಿಮಗೆ ಅರ್ಪಣೆ’ ಎಂದು ಕ್ಯಾಪ್ಷನ್ ನೀಡಿದ್ದಾರೆ.

ಎಸ್. ಜಾನಕಿ ನಿಧನ: ಶಿವಣ್ಣ, ಜಗ್ಗೇಶ್, ತ್ರಿಶಾ ಸೇರಿ ಹಲವು ಸೆಲೆಬ್ರಿಟಿಗಳ ಸಂತಾಪ

ಖ್ಯಾತ ಗಾಯಕಿ ಎಸ್. ಜಾನಕಿ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಾನಕಿ ಅವರು ಮೈಸೂರಿನಲ್ಲಿ ಶನಿವಾರ (ಜುಲೈ 11) ನಿಧನರಾದರು. ಅವರ ಅಗಲಿಕೆಗೆ ಶಿವರಾಜ್​ಕುಮಾರ್, ಜಗ್ಗೇಶ್, ತ್ರಿಶಾ ಸೇರಿದಂತೆ ಹಲವು ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.

ರಜನಿಕಾಂತ್ ನಟನೆಯ ‘ಜೈಲರ್ 2’ ಅಕ್ಟೋಬರ್ 15ರಂದು ಬಿಡುಗಡೆ ಆಗೋದು ಖಚಿತ

2023ರಲ್ಲಿ ಬಿಡುಗಡೆಯಾಗಿದ್ದ ‘ಜೈಲರ್’ ಸಿನಿಮಾ ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿತ್ತು. ಆ ಸಿನಿಮಾದ ಯಶಸ್ಸಿನ ಬಳಿಕ ‘ಜೈಲರ್ 2’ ಘೋಷಿಸಲಾಯಿತು. ಈಗ ಈ ಚಿತ್ರದ ರಿಲೀಸ್ ದಿನಾಂಕ ಪ್ರಕಟಿಸಲಾಗಿದೆ. ರಜನಿಕಾಂತ್ ಜೊತೆ ಅನೇಕ ಘಟಾನುಘಟಿ ಸ್ಟಾರ್ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಮತ್ತೆ ಲಾಯರ್ ಪಾತ್ರ ಮಾಡಿದ ಶಿವರಾಜ್​ಕುಮಾರ್; ‘ಮಹಾನ್’ ಸಿನಿಮಾದಲ್ಲಿ ನಟನೆ

ವಿಜಯ್ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ, ಕಿರಣ್ ಶ್ರೀನಿವಾಸ್ ಮುಂತಾದವರು ‘ಮಹಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಅವರಿಗೆ ವಿಶೇಷವಾದ ಪಾತ್ರವಿದೆ. ಲಾಯರ್ ಪಾತ್ರದಲ್ಲಿ ಶಿವಣ್ಣ ಅವರ ಫಸ್ಟ್ ಲುಕ್ ಕೂಡ ಅನಾವರಣ ಆಗಿದೆ.

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಹುಟ್ಟುಹಬ್ಬ ಆಚರಿಸಿದ ಶಿವಣ್ಣ ಫ್ಯಾನ್ಸ್

ಶಿವರಾಜ್​ಕುಮಾರ್ ಅವರು ಈಗ ಶೂಟಿಂಗ್ ಸಲುವಾಗಿ ಚೆನ್ನೈನಲ್ಲಿ ಇದ್ದಾರೆ. ಅವರ ಜೊತೆ ಗೀತಾ ಕೂಡ ಇದ್ದಾರೆ. ಹಾಗಾಗಿ ಅಭಿಮಾನಿಗಳು ಕರ್ನಾಟಕದಿಂದ ಚೆನ್ನೈಗೆ ಹೋಗಿ ಅಲ್ಲಿಯೇ ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಚೆನ್ನೈಗೆ ಹೋಗಿ ಜನ್ಮದಿನ ಆಚರಿಸಿದ ಅಭಿಮಾನಿಗಳ ಪ್ರೀತಿ ಕಂಡು ದಂಪತಿಗೆ ಖುಷಿ ಆಗಿದೆ.

ಅಂದು ಶಿವಣ್ಣ, ಇಂದು ಧನುಷ್; ‘ಓಂ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಘೋಷಣೆ

‘ಓಂ’ ಸಿನಿಮಾದ ಹೆಸರು ಕೇಳಿದರೆ ಸಿನಿಪ್ರಿಯರಿಗೆ ಥ್ರಿಲ್ ಆಗುತ್ತದೆ. ಆ ಚಿತ್ರದ ಶೀರ್ಷಿಕೆಗೆ ಇರುವ ಪವರ್ ಅಂಥದ್ದು. ನಿರ್ದೇಶಕ ಉಪೇಂದ್ರ ಮತ್ತು ನಟ ಶಿವರಾಜ್​ಕುಮಾರ್ ಅವರ ಕಾಂಬಿನೇಷನ್​ನಲ್ಲಿ ಬಂದ ಆ ಸಿನಿಮಾದ ಕ್ರೇಜ್ ಸಾಮಾನ್ಯದ್ದಲ್ಲ. ‘ಓಂ’ ಶೀರ್ಷಿಕೆ ಈಗ ಕಾಲಿವುಡ್​ನಲ್ಲಿ ಕೂಡ ಸದ್ದು ಮಾಡುತ್ತಿದೆ.

ತಮಿಳಿನಲ್ಲಿ ಶಿವರಾಜ್​ಕುಮಾರ್ 4ನೇ ಸಿನಿಮಾಗೆ ಮುಹೂರ್ತ; ಭರ್ಜರಿ ಡಿಮ್ಯಾಂಡ್

ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಕಾಲ್‌ಶೀಟ್ ಪಡೆಯಲು ಪರಭಾಷೆಯ ನಿರ್ದೇಶಕರು, ನಿರ್ಮಾಪಕರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈಗ ಶಿವಣ್ಣ ಮತ್ತೊಂದು ಹೊಸ ತಮಿಳು ಸಿನಿಮಾವನ್ನು ಒಪ್ಪಿಕೊಂಡಿದ್ದು, ಈ ಚಿತ್ರದ ಮುಹೂರ್ತ ಇಂದು (ಜೂನ್ 1) ನೆರವೇರಿದೆ. ಇದು ತಮಿಳಿನಲ್ಲಿ ಅವರು ಒಪ್ಪಿಕೊಂಡ 4ನೇ ಸಿನಿಮಾ.

ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ