AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiva Rajkumar

Shiva Rajkumar

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಶಿವರಾಜ್​ಕುಮಾರ್ ಕೂಡ ಪ್ರಮುಖರು. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಅನುಭವ ಅಪಾರ. 130ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಶಿವರಾಜ್​ಕುಮಾರ್​ ಜನಿಸಿದ್ದು 1962ರ ಜುಲೈ 12ರಂದು. ಡಾ. ರಾಜ್​ಕುಮಾರ್ ಅವರ ಪುತ್ರನಾದರೂ ಕೂಡ ತಮ್ಮದೇ ಛಾಪನ್ನು ಶಿವರಾಜ್​ಕುಮಾರ್​ ಮೂಡಿಸಿದ್ದಾರೆ. ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ‘ಆನಂದ್’ ಸೂಪರ್​ ಹಿಟ್​ ಆಯಿತು. ನಂತರದ ವರ್ಷಗಳಲ್ಲಿ ಅವರು ಕನ್ನಡ ಚಿತ್ರರಂಗದ ಪ್ರಮುಖ ಸ್ಟಾರ್​ ನಟನಾಗಿ ಬೆಳೆದರು. ಅವರ ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಜನುಮದ ಜೋಡಿ, ಓಂ, ಜೋಗಿ, ಟಗರು, ತವರಿಗೆ ಬಾ ತಂಗಿ, ಮಫ್ತಿ ಮುಂತಾದವು ಶಿವರಾಜ್​ಕುಮಾರ್​ ನಟನೆಯ ಪ್ರಮುಖ ಸಿನಿಮಾಗಳು. ನಟನೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಿಂದಲೂ ಶಿವರಾಜ್​ಕುಮಾರ್​ ಅವರು ಜನಮೆಚ್ಚುಗೆ ಪಡೆದಿದ್ದಾರೆ

ಇನ್ನೂ ಹೆಚ್ಚು ಓದಿ

ತಮಿಳಿನಲ್ಲಿ ಶಿವರಾಜ್​ಕುಮಾರ್ 4ನೇ ಸಿನಿಮಾಗೆ ಮುಹೂರ್ತ; ಭರ್ಜರಿ ಡಿಮ್ಯಾಂಡ್

ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಕಾಲ್‌ಶೀಟ್ ಪಡೆಯಲು ಪರಭಾಷೆಯ ನಿರ್ದೇಶಕರು, ನಿರ್ಮಾಪಕರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈಗ ಶಿವಣ್ಣ ಮತ್ತೊಂದು ಹೊಸ ತಮಿಳು ಸಿನಿಮಾವನ್ನು ಒಪ್ಪಿಕೊಂಡಿದ್ದು, ಈ ಚಿತ್ರದ ಮುಹೂರ್ತ ಇಂದು (ಜೂನ್ 1) ನೆರವೇರಿದೆ. ಇದು ತಮಿಳಿನಲ್ಲಿ ಅವರು ಒಪ್ಪಿಕೊಂಡ 4ನೇ ಸಿನಿಮಾ.

ಅಂದು ಅಣ್ಣಾವ್ರು​-ಚಿರು, ಇಂದು ಶಿವಣ್ಣ-ರಾಮ್ ಚರಣ್

ತೆಲುಗು ನಟ ರಾಮ್ ಚರಣ್ ಮತ್ತು ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ 'ಪೆದ್ದಿ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪ್ರಚಾರದ ಸಂದರ್ಭದಲ್ಲಿ ಇವರಿಬ್ಬರ ವೈರಲ್ ಫೋಟೋ ಚಿರಂಜೀವಿ ಮತ್ತು ಡಾ. ರಾಜ್‌ಕುಮಾರ್ ಕುಟುಂಬಗಳ ಹಳೆಯ ಸ್ನೇಹವನ್ನು ಮರುಕಳಿಸಿದೆ. ಫ್ಯಾನ್ಸ್ ಈ ಫೋಟೋಗೆ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.

‘ಪೆದ್ದಿ’ ಸಿನಿಮಾದಲ್ಲಿ ನೆಗೆಟಿವ್ ಶೇಡ್ ಪಾತ್ರ? ಶಿವಣ್ಣ ಹೇಳಿದ್ದಿಷ್ಟು

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ 'ಪೆದ್ದಿ' ಚಿತ್ರ ಜೂನ್ 4ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ಹೈ-ವೋಲ್ಟೇಜ್ ಆಕ್ಷನ್ ಡ್ರಾಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಗೌರನಾಯ್ಡು ಎಂಬ ವಿಶಿಷ್ಟ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಬಗೆಗಿನ ಕುತೂಹಲ ಟ್ರೈಲರ್ ಮತ್ತು ಸಂದರ್ಶನದಲ್ಲಿ ಹೆಚ್ಚಾಗಿದೆ. ಇದು ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ನೀಡುವ ಮುನ್ಸೂಚನೆ.

ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್

ರಾಮ್ ಚರಣ್ ಬೆಂಗಳೂರಿಗೆ ಬಂದು ‘ಪೆದ್ದಿ’ ಚಿತ್ರದ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇದಿಕೆಯಲ್ಲಿ ಅವರಿಗೆ ಶಿವರಾಜ್​ಕುಮಾರ್ ಕೂಡ ಸಾಥ್ ನೀಡಿದರು. ‘ಪೆದ್ದಿ’ ಚಿತ್ರದಲ್ಲಿ ಶಿವಣ್ಣ ಹಾಗೂ ರಾಮ್ ಚರಣ್ ತೆರೆ ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕನ್ನಡ, ತೆಲುಗು, ಇಂಗ್ಲಿಷ್ ಮಿಶ್ರಿತವಾಗಿ ರಾಮ್ ಚರಣ್ ಮಾತಾಡಿದರು.

ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ ನೋಡಿ..

ಖ್ಯಾತ ನಟ ರಾಮ್ ಚರಣ್ ಅವರು ಬೆಂಗಳೂರಿಗೆ ಬಂದಿದ್ದಾರೆ. ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಭಾಗಿ ಆಗಿದ್ದಾರೆ. ಅವರ ಜೊತೆ ನಾಯಕಿ ಜಾನ್ವಿ ಕಪೂರ್, ನಟ ಶಿವರಾಜ್​ಕುಮಾರ್ ಸೇರಿದಂತೆ ಚಿತ್ರತಂಡದ ಹಲವರು ಪಾಲ್ಗೊಂಡಿದ್ದಾರೆ. ‘ಪೆದ್ದಿ’ ಸುದ್ದಿಗೋಷ್ಠಿ ಲೈವ್ ವಿಡಿಯೋ ಇಲ್ಲಿದೆ ನೋಡಿ..

Peddi Trailer: ‘ಪೆದ್ದಿ’ ಟ್ರೇಲರ್ ಬಿಡುಗಡೆ; ಕ್ರಿಕೆಟ್ ಜೊತೆ ಕುಸ್ತಿ ಅಖಾಡದಲ್ಲೂ ರಾಮ್ ಚರಣ್ ಮಾಸ್ ಅವತಾರ

Peddi Film Trailer: ‘ಪೆದ್ದಿ’ ಸಿನಿಮಾಗಾಗಿ ರಾಮ್ ಚರಣ್ ಅವರು ಎಷ್ಟು ಶ್ರಮ ಹಾಕಿದ್ದಾರೆ ಎಂಬುದು ಟ್ರೇಲರ್​ನಲ್ಲಿ ಎದ್ದು ಕಾಣುತ್ತಿದೆ. ಬೃಹತ್ ಬಜೆಟ್​ನಲ್ಲಿ ಸಿದ್ಧವಾಗಿರುವ ಈ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆಯೇ ಟ್ರೇಲರ್ ಮೂಡಿಬಂದಿದೆ. ಶಿವರಾಜ್​ಕುಮಾರ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ನೈಜ ಘಟನೆಗಳ ಆಧಾರಿತ ‘ಬೇಲ್’ ಸಿನಿಮಾ ಟೀಸರ್; ಗಮನ ಸೆಳೆದ ಶಿವಣ್ಣ ಲುಕ್

ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಶಿವರಾಜ್​ಕುಮಾರ್ ಅವರ ಲುಕ್ ಗಮನ ಸೆಳೆಯುತ್ತಿದೆ. ಅಜನೀಶ್ ಲೋಕನಾಥ್ ಅವರ ಹಿನ್ನೆಲೆ ಸಂಗೀತದಿಂದ ಟೀಸರ್​ನ ಮೆರುಗು ಹೆಚ್ಚಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣದ ಈ ಸಿನಿಮಾ ಅದ್ದೂರಿಯಾಗಿ ಮೂಡಿಬರುತ್ತಿದೆ. ಪವನ್ ಒಡೆಯರ್ ಅವರು ನಿರ್ದೇಶನ ಮಾಡುತ್ತಿದ್ದಾರೆ.

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಇಲ್ಲಿದೆ ಮೇಕಿಂಗ್ ವಿಡಿಯೋ

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ ಅವರಿಗೆ ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗಗಳಲ್ಲೂ ಬೇಡಿಕೆ ಇದೆ. ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾದಲ್ಲಿ ಶಿವಣ್ಣ ಒಂದು ಪವರ್​ಫುಲ್ ಪಾತ್ರ ಮಾಡಿದ್ದಾರೆ. ಈ ಬಹುನಿರೀಕ್ಷಿತ ಸಿನಿಮಾ ಜೂನ್ 4ರಂದು ಬಿಡುಗಡೆ ಆಗಲಿದೆ. ಶೀಘ್ರದಲ್ಲೇ ಟ್ರೇಲರ್ ರಿಲೀಸ್ ಆಗಲಿದೆ.

ಟಿವಿಕೆ ಜಯಭೇರಿ: ದಳಪತಿ ವಿಜಯ್ ಗೆಲುವಿಗೆ ರಿಷಬ್ ಶೆಟ್ಟಿ ಅಭಿನಂದನೆ

ಖ್ಯಾತ ನಟ ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿ ಆಗುವ ಸಮಯ ಬಂದಿದೆ. ಅವರ ಈ ಸಾಧನೆಗಾಗಿ ಅನೇಕ ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಕನ್ನಡದ ಸ್ಟಾರ್ ನಟರಾದ ಶಿವರಾಜ್​ಕುಮಾರ್, ರಿಷಬ್ ಶೆಟ್ಟಿ ಕೂಡ ಅಭಿನಂದನೆ ತಿಳಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

‘ರೆಹಮಾನ್ ಡಕಾಯಿತ್ ಪಾತ್ರದಲ್ಲಿ ನೀವೇ ನಟಿಸಬೇಕಿತ್ತು’; ಶಿವಣ್ಣನ ಎದುರು ಫ್ಯಾನ್ಸ್ ಬೇಡಿಕೆ ಇಟ್ಟಿದ್ದೇಕೆ?

ಶಿವರಾಜ್‌ಕುಮಾರ್ ಅವರ ಡ್ಯಾನ್ಸ್‌ ವೈರಲ್ ಆಗಿದೆ. ಅದನ್ನು ನೋಡಿದ ಅಭಿಮಾನಿಗಳು ‘ಧುರಂಧರ್’ ಚಿತ್ರದ ರೆಹಮಾನ್ ಡಕಾಯಿತ್ ಪಾತ್ರದಲ್ಲಿ ಅವರೇ ನಟಿಸಬೇಕಿತ್ತು ಎಂದು ಬಯಸಿದ್ದಾರೆ. ಶಿವಣ್ಣ ತಮ್ಮ ಮಾಸ್ ಪಾತ್ರಗಳು ಹಾಗೂ ಡ್ಯಾನ್ಸ್​‌ಗೆ ಹೆಸರುವಾಸಿ. ಈ ಪಾತ್ರದ ಮೂಲಕ ಅವರು ದಕ್ಷಿಣ ಭಾರತದಾದ್ಯಂತ ಚಿತ್ರಕ್ಕೆ ಇನ್ನಷ್ಟು ಜನಪ್ರಿಯತೆ ತರಬಲ್ಲರು ಎಂಬುದು ಅಭಿಮಾನಿಗಳ ಅಭಿಪ್ರಾಯ.

ಶಿವಣ್ಣ ಬೆನ್ನು ತಟ್ಟಿದ್ದಕ್ಕೆ ಖುಷಿಯಾದ ‘ಧುರಂಧರ್ 2’ ನಿರ್ದೇಶಕ ಆದಿತ್ಯ ಧರ್

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ ಅವರಿಗೆ ‘ಧುರಂಧರ್: ದಿ ರಿವೆಂಜ್’ ಸಿನಿಮಾ ಬಹಳ ಇಷ್ಟ ಆಗಿದೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಈ ಸಿನಿಮಾಗೆ ಭರಪೂರ ಮೆಚ್ಚುಗೆ ಸೂಚಿಸಿದ್ದಾರೆ. ಶಿವಣ್ಣ ಮೆಚ್ಚಿದ್ದಕ್ಕೆ ನಿರ್ದೇಶಕ ಆದಿತ್ಯ ಧರ್ ಅವರಿಗೆ ತುಂಬಾ ಖುಷಿಯಾಗಿದೆ. ಅವರು ಪ್ರತಿಕ್ರಿಯಿಸಿದ್ದಾರೆ.

‘ಧುರಂಧರ್ 2’ ಸಿನಿಮಾ ನೋಡಿ ‘ಬ್ರಿಲಿಯಂಟ್’ ಎಂದು ಹೊಗಳಿದ ಶಿವರಾಜ್​ಕುಮಾರ್

ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೇಂಜ್’ ಸಿನಿಮಾವನ್ನು ಶಿವರಾಜ್​ಕುಮಾರ್ ವೀಕ್ಷಿಸಿದ್ದಾರೆ. ಅವರಿಗೆ ಈ ಸಿನಿಮಾ ಬಹಳ ಇಷ್ಟ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವಿಮರ್ಶೆ ತಿಳಿಸಿದ್ದಾರೆ. ಕಳೆದ ವರ್ಷ ತೆರೆಕಂಡಿದ್ದ ‘ಧರಂಧರ್’ ಚಿತ್ರವನ್ನು ಕೂಡ ಶಿವಣ್ಣ ನೋಡಿ ಮೆಚ್ಚಿಗೆ ವ್ಯಕ್ತಪಡಿಸಿದ್ದರು.

ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ