Shiva Rajkumar
ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಶಿವರಾಜ್ಕುಮಾರ್ ಕೂಡ ಪ್ರಮುಖರು. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಅನುಭವ ಅಪಾರ. 130ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಶಿವರಾಜ್ಕುಮಾರ್ ಜನಿಸಿದ್ದು 1962ರ ಜುಲೈ 12ರಂದು. ಡಾ. ರಾಜ್ಕುಮಾರ್ ಅವರ ಪುತ್ರನಾದರೂ ಕೂಡ ತಮ್ಮದೇ ಛಾಪನ್ನು ಶಿವರಾಜ್ಕುಮಾರ್ ಮೂಡಿಸಿದ್ದಾರೆ. ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ‘ಆನಂದ್’ ಸೂಪರ್ ಹಿಟ್ ಆಯಿತು. ನಂತರದ ವರ್ಷಗಳಲ್ಲಿ ಅವರು ಕನ್ನಡ ಚಿತ್ರರಂಗದ ಪ್ರಮುಖ ಸ್ಟಾರ್ ನಟನಾಗಿ ಬೆಳೆದರು. ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಜನುಮದ ಜೋಡಿ, ಓಂ, ಜೋಗಿ, ಟಗರು, ತವರಿಗೆ ಬಾ ತಂಗಿ, ಮಫ್ತಿ ಮುಂತಾದವು ಶಿವರಾಜ್ಕುಮಾರ್ ನಟನೆಯ ಪ್ರಮುಖ ಸಿನಿಮಾಗಳು. ನಟನೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಿಂದಲೂ ಶಿವರಾಜ್ಕುಮಾರ್ ಅವರು ಜನಮೆಚ್ಚುಗೆ ಪಡೆದಿದ್ದಾರೆ
‘ಓಂ ನನ್ನ ಆಲ್ ಟೈಮ್ ಫೇವರಿಟ್’; ಹಾಡಿ ಹೊಗಳಿದ ಪ್ರಥ್ವಿರಾಜ್ ಸುಕುಮಾರನ್
ಮಾಲಿವುಡ್ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಅವರು ‘ಓಂ’ ಚಿತ್ರ ಹೊಗಳಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ನಟನೆಯ ಈ ಚಿತ್ರ ಅವರ ಆಲ್ ಟೈಮ್ ಫೇವರಿಟ್. ಭಾರತದ 5 ಪ್ರಮುಖ ಚಿತ್ರರಂಗದ ಅತ್ಯುತ್ತಮ ಸಿನಿಮಾಗಳನ್ನು ಆಯ್ಕೆ ಮಾಡುವಾಗ ಕನ್ನಡದಿಂದ 'ಓಂ' ಚಿತ್ರವನ್ನು ಶ್ಲಾಘಿಸಿರುವ ಅವರ ವಿಡಿಯೋ ಈಗ ವೈರಲ್ ಆಗಿದೆ.
- Rajesh Duggumane
- Updated on: Jul 20, 2026
- 7:31 am
ತಮನ್ನಾ ಜೊತೆ ಹಾಡು ಬೇಕು ಎಂದ ಶಿವಣ್ಣ; ಗೀತಕ್ಕನ ಬಳಿ ಪಿಟ್ಟಿಂಗ್ ಇಟ್ಟ ಶ್ರೀನಿ
ಕರುನಾಡ ಚಕ್ರವರ್ತಿ ಡಾ. ಶಿವರಾಜ್ಕುಮಾರ್ ಹುಟ್ಟುಹಬ್ಬದ ಅಂಗವಾಗಿ 'A For ಆನಂದ್' ಚಿತ್ರದ ಸಖತ್ ಇಂಟರೆಸ್ಟಿಂಗ್ ಪ್ರೋಮೋ ರಿಲೀಸ್ ಆಗಿದೆ. ವಿಡಿಯೋದಲ್ಲಿ ನಿರ್ದೇಶಕ ಶ್ರೀನಿ, ಶಿವಣ್ಣ ಅವರ ಪತ್ನಿ ಗೀತಕ್ಕನ ಮುಂದೆ ಸಾಲು ಸಾಲು ಚಾಡಿ (ಪಿಟ್ಟಿಂಗ್) ಹೇಳುವ ದೃಶ್ಯಗಳು ಜಬರ್ದಸ್ತ್ ಕಾಮಿಡಿಯಾಗಿ ಮೂಡಿಬಂದಿವೆ. ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಿರುವ ಈ ಪ್ರೋಮೋದಲ್ಲಿ ಸೆಂಚುರಿ ಸ್ಟಾರ್ ಅವರ ಲುಕ್ ಕೂಡ ರಿವೀಲ್ ಆಗಿದೆ.
- Rajesh Duggumane
- Updated on: Jul 13, 2026
- 8:56 am
‘ಈ ಮರುಜನ್ಮ ನಿಮಗೆ ಅರ್ಪಣೆ’: ಬಹಿರಂಗ ಆಗುತ್ತಿದೆ ಶಿವಣ್ಣ ಕಷ್ಟದ ದಿನಗಳ ಪೂರ್ತಿ ಮಾಹಿತಿ
ನಟ ಶಿವರಾಜ್ಕುಮಾರ್ ಅವರು ಅನಾರೋಗ್ಯವನ್ನು ಎದುರಿಸಿ ಮತ್ತೆ ಮೊದಲಿನಂತೆ ಆ್ಯಕ್ಟೀವ್ ಆಗಿದ್ದಾರೆ. ಆದರೆ ಆ ಜರ್ನಿ ಅಷ್ಟು ಸುಲಭದ್ದಾಗಿರಲಿಲ್ಲ. ಈ ಕುರಿತು ಸ್ವತಃ ಶಿವಣ್ಣ ಮಾತನಾಡಿದ್ದಾರೆ. ‘ಸರ್ವೈವರ್’ ಸಾಕ್ಷ್ಯಚಿತ್ರದ ಪ್ರೋಮೋ ಹಂಚಿಕೊಂಡಿರುವ ಅವರು ‘ಈ ಮರುಜನ್ಮ ನಿಮಗೆ ಅರ್ಪಣೆ’ ಎಂದು ಕ್ಯಾಪ್ಷನ್ ನೀಡಿದ್ದಾರೆ.
- Madan Kumar
- Updated on: Jul 12, 2026
- 8:38 am
ಎಸ್. ಜಾನಕಿ ನಿಧನ: ಶಿವಣ್ಣ, ಜಗ್ಗೇಶ್, ತ್ರಿಶಾ ಸೇರಿ ಹಲವು ಸೆಲೆಬ್ರಿಟಿಗಳ ಸಂತಾಪ
ಖ್ಯಾತ ಗಾಯಕಿ ಎಸ್. ಜಾನಕಿ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಾನಕಿ ಅವರು ಮೈಸೂರಿನಲ್ಲಿ ಶನಿವಾರ (ಜುಲೈ 11) ನಿಧನರಾದರು. ಅವರ ಅಗಲಿಕೆಗೆ ಶಿವರಾಜ್ಕುಮಾರ್, ಜಗ್ಗೇಶ್, ತ್ರಿಶಾ ಸೇರಿದಂತೆ ಹಲವು ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.
- Madan Kumar
- Updated on: Jul 13, 2026
- 12:08 pm
ರಜನಿಕಾಂತ್ ನಟನೆಯ ‘ಜೈಲರ್ 2’ ಅಕ್ಟೋಬರ್ 15ರಂದು ಬಿಡುಗಡೆ ಆಗೋದು ಖಚಿತ
2023ರಲ್ಲಿ ಬಿಡುಗಡೆಯಾಗಿದ್ದ ‘ಜೈಲರ್’ ಸಿನಿಮಾ ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿತ್ತು. ಆ ಸಿನಿಮಾದ ಯಶಸ್ಸಿನ ಬಳಿಕ ‘ಜೈಲರ್ 2’ ಘೋಷಿಸಲಾಯಿತು. ಈಗ ಈ ಚಿತ್ರದ ರಿಲೀಸ್ ದಿನಾಂಕ ಪ್ರಕಟಿಸಲಾಗಿದೆ. ರಜನಿಕಾಂತ್ ಜೊತೆ ಅನೇಕ ಘಟಾನುಘಟಿ ಸ್ಟಾರ್ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.
- Madan Kumar
- Updated on: Jul 2, 2026
- 9:02 pm
ಮತ್ತೆ ಲಾಯರ್ ಪಾತ್ರ ಮಾಡಿದ ಶಿವರಾಜ್ಕುಮಾರ್; ‘ಮಹಾನ್’ ಸಿನಿಮಾದಲ್ಲಿ ನಟನೆ
ವಿಜಯ್ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ, ಕಿರಣ್ ಶ್ರೀನಿವಾಸ್ ಮುಂತಾದವರು ‘ಮಹಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಶಿವರಾಜ್ಕುಮಾರ್ ಅವರಿಗೆ ವಿಶೇಷವಾದ ಪಾತ್ರವಿದೆ. ಲಾಯರ್ ಪಾತ್ರದಲ್ಲಿ ಶಿವಣ್ಣ ಅವರ ಫಸ್ಟ್ ಲುಕ್ ಕೂಡ ಅನಾವರಣ ಆಗಿದೆ.
- Madan Kumar
- Updated on: Jun 29, 2026
- 9:12 pm
ಚೆನ್ನೈನಲ್ಲಿ ಗೀತಾ ಶಿವರಾಜ್ಕುಮಾರ್ ಹುಟ್ಟುಹಬ್ಬ ಆಚರಿಸಿದ ಶಿವಣ್ಣ ಫ್ಯಾನ್ಸ್
ಶಿವರಾಜ್ಕುಮಾರ್ ಅವರು ಈಗ ಶೂಟಿಂಗ್ ಸಲುವಾಗಿ ಚೆನ್ನೈನಲ್ಲಿ ಇದ್ದಾರೆ. ಅವರ ಜೊತೆ ಗೀತಾ ಕೂಡ ಇದ್ದಾರೆ. ಹಾಗಾಗಿ ಅಭಿಮಾನಿಗಳು ಕರ್ನಾಟಕದಿಂದ ಚೆನ್ನೈಗೆ ಹೋಗಿ ಅಲ್ಲಿಯೇ ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಚೆನ್ನೈಗೆ ಹೋಗಿ ಜನ್ಮದಿನ ಆಚರಿಸಿದ ಅಭಿಮಾನಿಗಳ ಪ್ರೀತಿ ಕಂಡು ದಂಪತಿಗೆ ಖುಷಿ ಆಗಿದೆ.
- Madan Kumar
- Updated on: Jun 22, 2026
- 10:41 pm
ಅಂದು ಶಿವಣ್ಣ, ಇಂದು ಧನುಷ್; ‘ಓಂ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಘೋಷಣೆ
‘ಓಂ’ ಸಿನಿಮಾದ ಹೆಸರು ಕೇಳಿದರೆ ಸಿನಿಪ್ರಿಯರಿಗೆ ಥ್ರಿಲ್ ಆಗುತ್ತದೆ. ಆ ಚಿತ್ರದ ಶೀರ್ಷಿಕೆಗೆ ಇರುವ ಪವರ್ ಅಂಥದ್ದು. ನಿರ್ದೇಶಕ ಉಪೇಂದ್ರ ಮತ್ತು ನಟ ಶಿವರಾಜ್ಕುಮಾರ್ ಅವರ ಕಾಂಬಿನೇಷನ್ನಲ್ಲಿ ಬಂದ ಆ ಸಿನಿಮಾದ ಕ್ರೇಜ್ ಸಾಮಾನ್ಯದ್ದಲ್ಲ. ‘ಓಂ’ ಶೀರ್ಷಿಕೆ ಈಗ ಕಾಲಿವುಡ್ನಲ್ಲಿ ಕೂಡ ಸದ್ದು ಮಾಡುತ್ತಿದೆ.
- Madan Kumar
- Updated on: Jun 18, 2026
- 10:43 pm
ತಮಿಳಿನಲ್ಲಿ ಶಿವರಾಜ್ಕುಮಾರ್ 4ನೇ ಸಿನಿಮಾಗೆ ಮುಹೂರ್ತ; ಭರ್ಜರಿ ಡಿಮ್ಯಾಂಡ್
ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರ ಕಾಲ್ಶೀಟ್ ಪಡೆಯಲು ಪರಭಾಷೆಯ ನಿರ್ದೇಶಕರು, ನಿರ್ಮಾಪಕರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈಗ ಶಿವಣ್ಣ ಮತ್ತೊಂದು ಹೊಸ ತಮಿಳು ಸಿನಿಮಾವನ್ನು ಒಪ್ಪಿಕೊಂಡಿದ್ದು, ಈ ಚಿತ್ರದ ಮುಹೂರ್ತ ಇಂದು (ಜೂನ್ 1) ನೆರವೇರಿದೆ. ಇದು ತಮಿಳಿನಲ್ಲಿ ಅವರು ಒಪ್ಪಿಕೊಂಡ 4ನೇ ಸಿನಿಮಾ.
- Madan Kumar
- Updated on: Jun 1, 2026
- 2:37 pm
ಅಂದು ಅಣ್ಣಾವ್ರು-ಚಿರು, ಇಂದು ಶಿವಣ್ಣ-ರಾಮ್ ಚರಣ್
ತೆಲುಗು ನಟ ರಾಮ್ ಚರಣ್ ಮತ್ತು ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ನಟನೆಯ 'ಪೆದ್ದಿ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪ್ರಚಾರದ ಸಂದರ್ಭದಲ್ಲಿ ಇವರಿಬ್ಬರ ವೈರಲ್ ಫೋಟೋ ಚಿರಂಜೀವಿ ಮತ್ತು ಡಾ. ರಾಜ್ಕುಮಾರ್ ಕುಟುಂಬಗಳ ಹಳೆಯ ಸ್ನೇಹವನ್ನು ಮರುಕಳಿಸಿದೆ. ಫ್ಯಾನ್ಸ್ ಈ ಫೋಟೋಗೆ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.
- Shreelaxmi H
- Updated on: May 30, 2026
- 11:54 am
‘ಪೆದ್ದಿ’ ಸಿನಿಮಾದಲ್ಲಿ ನೆಗೆಟಿವ್ ಶೇಡ್ ಪಾತ್ರ? ಶಿವಣ್ಣ ಹೇಳಿದ್ದಿಷ್ಟು
ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ 'ಪೆದ್ದಿ' ಚಿತ್ರ ಜೂನ್ 4ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ಹೈ-ವೋಲ್ಟೇಜ್ ಆಕ್ಷನ್ ಡ್ರಾಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಗೌರನಾಯ್ಡು ಎಂಬ ವಿಶಿಷ್ಟ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಬಗೆಗಿನ ಕುತೂಹಲ ಟ್ರೈಲರ್ ಮತ್ತು ಸಂದರ್ಶನದಲ್ಲಿ ಹೆಚ್ಚಾಗಿದೆ. ಇದು ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್ ನೀಡುವ ಮುನ್ಸೂಚನೆ.
- Rajesh Duggumane
- Updated on: May 29, 2026
- 9:03 am
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ರಾಮ್ ಚರಣ್ ಬೆಂಗಳೂರಿಗೆ ಬಂದು ‘ಪೆದ್ದಿ’ ಚಿತ್ರದ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇದಿಕೆಯಲ್ಲಿ ಅವರಿಗೆ ಶಿವರಾಜ್ಕುಮಾರ್ ಕೂಡ ಸಾಥ್ ನೀಡಿದರು. ‘ಪೆದ್ದಿ’ ಚಿತ್ರದಲ್ಲಿ ಶಿವಣ್ಣ ಹಾಗೂ ರಾಮ್ ಚರಣ್ ತೆರೆ ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕನ್ನಡ, ತೆಲುಗು, ಇಂಗ್ಲಿಷ್ ಮಿಶ್ರಿತವಾಗಿ ರಾಮ್ ಚರಣ್ ಮಾತಾಡಿದರು.
- Madan Kumar
- Updated on: May 25, 2026
- 8:15 pm