
Shiva Rajkumar
ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಶಿವರಾಜ್ಕುಮಾರ್ ಕೂಡ ಪ್ರಮುಖರು. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಅನುಭವ ಅಪಾರ. 130ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಶಿವರಾಜ್ಕುಮಾರ್ ಜನಿಸಿದ್ದು 1962ರ ಜುಲೈ 12ರಂದು. ಡಾ. ರಾಜ್ಕುಮಾರ್ ಅವರ ಪುತ್ರನಾದರೂ ಕೂಡ ತಮ್ಮದೇ ಛಾಪನ್ನು ಶಿವರಾಜ್ಕುಮಾರ್ ಮೂಡಿಸಿದ್ದಾರೆ. ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ‘ಆನಂದ್’ ಸೂಪರ್ ಹಿಟ್ ಆಯಿತು. ನಂತರದ ವರ್ಷಗಳಲ್ಲಿ ಅವರು ಕನ್ನಡ ಚಿತ್ರರಂಗದ ಪ್ರಮುಖ ಸ್ಟಾರ್ ನಟನಾಗಿ ಬೆಳೆದರು. ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಜನುಮದ ಜೋಡಿ, ಓಂ, ಜೋಗಿ, ಟಗರು, ತವರಿಗೆ ಬಾ ತಂಗಿ, ಮಫ್ತಿ ಮುಂತಾದವು ಶಿವರಾಜ್ಕುಮಾರ್ ನಟನೆಯ ಪ್ರಮುಖ ಸಿನಿಮಾಗಳು. ನಟನೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಿಂದಲೂ ಶಿವರಾಜ್ಕುಮಾರ್ ಅವರು ಜನಮೆಚ್ಚುಗೆ ಪಡೆದಿದ್ದಾರೆ
‘ಈ ರಸ್ತೆ ನಿಮ್ ಅಪ್ಪಂದಾ?’.. ಹಾಗೆ ಕ್ಯಾಮೆರಾ ತಿರುಗಿದ್ರೆ; ಇದು ಶಿವಣ್ಣನ ಸಿನಿಮಾದ ಗೂಸ್ಬಂಪ್ಸ್ ದೃಶ್ಯ
ಇಂದು (ಮೇ 24) ರಾಜ್ಕುಮಾರ್ ಜನ್ಮದಿನ. ಅವರ ಹೆಸರಿನಲ್ಲಿ ಒಳ್ಳೆಯ ಕೆಲಸಗಳು ನಡೆಯುತ್ತಿವೆ. ಬೆಳಿಗ್ಗೆ ಕುಟುಂಬದವರು ಬಂದು ರಾಜ್ಕುಮಾರ್ ಸಮಾಧಿಗೆ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಅಭಿನಯದ 'ಕಡ್ಡಿಪುಡಿ' ಚಿತ್ರದ ಒಂದು ದೃಶ್ಯ ವೈರಲ್ ಆಗಿದೆ .
- Rajesh Duggumane
- Updated on: Apr 24, 2025
- 2:06 pm
ಶಿವರಾಜ್ಕುಮಾರ್-ಗೀತಾ ಪ್ರೇಮ ನೋಡಿ ಆ ವ್ಯಕ್ತಿಗೆ ನಿಜಕ್ಕೂ ಶಾಕ್ ಆಗಿತ್ತು..
ಶಿವರಾಜ್ಕುಮಾರ್ ಮತ್ತು ಗೀತಾ ಶಿವರಾಜ್ಕುಮಾರ್ 39 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದಾರೆ. ಅವರ ಮಿಯಾಮಿ ಪ್ರವಾಸದಲ್ಲಿ ನಡೆದ ಘಟನೆ ಮತ್ತು ವಿಮಾನ ನಿಲ್ದಾಣದಲ್ಲಿ ನಡೆದ ಒಂದು ಘಟನೆಯನ್ನು ಶಿವಣ್ಣ ವಿವರಿಸಿದ್ದಾರೆ. ಅವರ ಪ್ರೀತಿಯು ದಿನ ಕಳೆದಂತೆ ಬಲಗೊಳ್ಳುತ್ತಿದೆ ಎಂಬುದನ್ನು ಅವರ ಮಾತುಗಳು ಸಾಬೀತುಪಡಿಸುತ್ತವೆ.
- Shreelaxmi H
- Updated on: Apr 21, 2025
- 9:28 am
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ
ನಟ ಶಿವರಾಜ್ಕುಮಾರ್ ಅವರು ಯಾವಾಗಲೂ ಆ್ಯಕ್ಟೀವ್ ಆಗಿರುತ್ತಾರೆ. ಅನಾರೋಗ್ಯದಿಂದ ಚೇತರಿಸಿಕೊಂಡ ಬಳಿಕ ಅವರು ಇನ್ನಷ್ಟು ಆ್ಯಕ್ಟೀವ್ ಆಗಿದ್ದಾರೆ. ಅದಕ್ಕೆ ಈ ವಿಡಿಯೋ ಸಾಕ್ಷಿ. ತಮ್ಮ ಮನೆ ಬಳಿ ಅವರು ಸೈಕಲ್ ಸವಾರಿ ಮಾಡಿದ್ದಾರೆ. ಮಕ್ಕಳ ಜೊತೆ ಬೆರೆತು ತಾವು ಕೂಡ ಬಾಲಕನಂತೆ ಸೈಕಲ್ ಓಡಿಸಿದ್ದಾರೆ.
- Madan Kumar
- Updated on: Apr 18, 2025
- 9:59 pm
ಕ್ಯಾನ್ಸರ್ ಮುಕ್ತರಾದ ಬಳಿಕ ಎನರ್ಜಿ ಹೆಚ್ಚಿಸಿಕೊಂಡ ಶಿವಣ್ಣ; ಇಲ್ಲಿದೆ ವಿಡಿಯೋ ಸಾಕ್ಷಿ
ಶಿವರಾಜ್ ಕುಮಾರ್ ಅವರು ಕ್ಯಾನ್ಸರ್ ನಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದಲ್ಲಿ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ಅವರ ಹೊಸ ಚಿತ್ರ ‘45’ರ ಪ್ರಚಾರ ಕಾರ್ಯಕ್ರಮದಲ್ಲೂ ಅವರು ಸಕ್ರಿಯವಾಗಿ ಭಾಗವಹಿಸಿದ್ದಾರೆ. ಈ ಎಲ್ಲಾ ಘಟನೆಗಳು ಅವರ ಸಂಪೂರ್ಣ ಚೇತರಿಕೆಯನ್ನು ತೋರಿಸುತ್ತವೆ.
- Shreelaxmi H
- Updated on: Apr 18, 2025
- 8:04 am
‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಅರ್ಜುನ್ ಜನ್ಯ
ಶಿವರಾಜ್ಕುಮಾರ್ ಹಾಗೂ ಉಪೇಂದ್ರ ‘ಕಬ್ಜ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈಗ ಇವರು ‘45’ ಚಿತ್ರದಲ್ಲಿ ಮತ್ತೆ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರ್ಪಡೆ ಆಗಿದ್ದಾರೆ. ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
- Rajesh Duggumane
- Updated on: Apr 15, 2025
- 10:42 am
‘ಓಂ’ ಚಿತ್ರಕ್ಕೆ ಕೇಳಿ ಬಂದಿತ್ತು ತಕರಾರು; ರಾಜ್ಕುಮಾರ್ ಹೇಳಿದ ಒಂದೇ ಮಾತಿಗೆ ಎಲ್ಲರೂ ಸೈಲೆಂಟ್
Rajkumar Death Anniversary: ಶಿವರಾಜ್ ಕುಮಾರ್ ಅಭಿನಯದ 'ಓಂ' ಚಿತ್ರವು ತನ್ನ 30ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಚಿತ್ರವು ಸೆನ್ಸಾರ್ ಮಂಡಳಿಯಿಂದ ತೀವ್ರ ವಿರೋಧ ಎದುರಿಸಿತು. ಆದರೆ, ರಾಜ್ ಕುಮಾರ್ ಅವರ ಒಂದೇ ಒಂದು ಮಾತಿನಿಂದ ಈ ವಿವಾದ ಬಗೆಹರಿಯಿತು. ಕೋಟೆ ಪ್ರಭಾಕರ್ ಅವರ ಸಂದರ್ಶನದಲ್ಲಿ ಈ ಘಟನೆಯ ವಿವರಗಳನ್ನು ತಿಳಿಸಲಾಗಿದೆ.
- Shreelaxmi H
- Updated on: Apr 12, 2025
- 9:02 am
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
Shiva Rajkumar-Niveditha: ಶಿವರಾಜ್ ಕುಮಾರ್ ಅವರು ಅನಾರೋಗ್ಯದಿಂದ ಪೂರ್ಣವಾಗಿ ಗುಣಮುಖರಾಗಿದ್ದು, ಸಿನಿಮಾ ಚಿತ್ರೀಕರಣಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದೀಗ ಶಿವಣ್ಣ ಅವರ ಕಿರಿಯ ಪುತ್ರಿ ನಿವೇದಿತಾ ಸಿನಿಮಾ ನಿರ್ಮಾಪಕಿ ಆಗಿದ್ದು, ಶಿವಣ್ಣ ಅವರು ಮಗಳ ಪ್ರಯತ್ನಕ್ಕೆ ಬೆಂಬಲವಾಗಿ ನಿಂತಿದ್ದಾರೆ. ನಿವೇದಿತಾ ನಿರ್ಮಾಣದ ಮೊದಲ ಸಿನಿಮಾ ಬಿಡುಗಡೆಗೆ ಮುಂಚೆ ಅಪ್ಪ-ಮಗಳಿಬ್ಬರೂ ಟಿವಿ9 ಜೊತೆಗೆ ಮಾತನಾಡಿದ್ದಾರೆ.
- Manjunatha C
- Updated on: Apr 9, 2025
- 3:59 pm
‘ನನ್ನ ಸುದೀಪ್ ಮಧ್ಯೆ ಸಣ್ಣಪುಟ್ಟ ಮನಸ್ತಾಪ ಆಗಿರಬಹುದು, ಆದರೆ ವೈರತ್ವ ಬೆಳೆದಿಲ್ಲ’; ಶಿವರಾಜ್ಕುಮಾರ್
ಶಿವರಾಜ್ಕುಮಾರ್ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದವರು. ಅವರಿಗೆ ಇತ್ತೀಚೆಗೆ ಕ್ಯಾನ್ಸರ್ ಆಯಿತು. ಇದರಿಂದ ಅವರು ಸಾಕಷ್ಟು ಅನುಭವಿಸಬೇಕಾಗಿ ಬಂತು. ಆದರೆ, ಇದಕ್ಕೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಈಗ ಅವರು ಸುದೀಪ್ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ್ದಾರೆ. ಸುದೀಪ್ ಜೊತೆಗಿನ ಒಡನಾಟ ಹೇಗಿದೆ ಎಂದು ವಿವರಿಸಿದ್ದಾರೆ.
- Rajesh Duggumane
- Updated on: Apr 8, 2025
- 10:40 am
ಶಿವರಾಜ್ಕುಮಾರ್ ಮಾತ್ರವಲ್ಲ, ಈ ಕುಟುಂಬದಲ್ಲಿ ಹಲವರನ್ನು ಕಾಡಿದೆ ಕ್ಯಾನ್ಸರ್
ನಟ ಶಿವರಾಜ್ಕುಮಾರ್ ಅವರು ಕ್ಯಾನ್ಸರ್ಗೆ ಚಿಕಿತ್ಸೆ ಪಡೆದಿದ್ದಾರೆ. ವಿದೇಶದಲ್ಲಿ ಅವರು ಸರ್ಜರಿ ಮುಗಿಸಿಕೊಂಡು ಬಂದಿದ್ದಾರೆ. ಅವರಿಗೆ ಕ್ಯಾನ್ಸರ್ ಉಂಟಾಗಿದೆ ಎಂಬುದು ಗೊತ್ತಾದಾಗ ಎಲ್ಲರಿಗೂ ನೋವಾಯಿತು. ‘ನಿಮಗೆ ಯಾಕೆ ಈ ರೀತಿ ಆಯಿತು’ ಅಂತ ಹಲವರು ಕೇಳಿದ್ದರು. ಆ ಬಗ್ಗೆ ಶಿವಣ್ಣ ಈಗ ಮಾತನಾಡಿದ್ದಾರೆ.
- Madan Kumar
- Updated on: Apr 7, 2025
- 10:26 pm
Niveditha Shivarajkumar: ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್ಕುಮಾರ್ ಮೊದಲ ಸಂದರ್ಶನ: ಲೈವ್ ನೋಡಿ
ನಿವೇದಿತಾ ಶಿವರಾಜ್ ಕುಮಾರ್ ಸಂದರ್ಶನ: ಡಾ. ರಾಜ್ಕುಮಾರ್ ಅವರ ಇಡೀ ಕುಟುಂಬವೇ ಚಿತ್ರರಂಗದಲ್ಲಿ ತೊಡಗಿಕೊಂಡಿದೆ. ಶಿವರಾಜ್ಕುಮಾರ್ ಪುತ್ರಿ ನಿವೇದಿತಾ ಕೂಡ ನಿರ್ಮಾಪಕಿಯಾಗಿದ್ದಾರೆ. ‘ಫೈರ್ ಫ್ಲೈ’ ಸಿನಿಮಾವನ್ನು ಅವರು ನಿರ್ಮಿಸಿದ್ದಾರೆ. ಈ ಪ್ರಯುಕ್ತ ಅವರು ನೀಡಿದ ಎಕ್ಸ್ಕ್ಲೂಸಿವ್ ಸಂದರ್ಶನದ ಲೈವ್ ವಿಡಿಯೋ ಇಲ್ಲಿದೆ..
- Madan Kumar
- Updated on: Apr 7, 2025
- 7:01 pm