
Shiva Rajkumar
ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಶಿವರಾಜ್ಕುಮಾರ್ ಕೂಡ ಪ್ರಮುಖರು. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಅನುಭವ ಅಪಾರ. 130ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಶಿವರಾಜ್ಕುಮಾರ್ ಜನಿಸಿದ್ದು 1962ರ ಜುಲೈ 12ರಂದು. ಡಾ. ರಾಜ್ಕುಮಾರ್ ಅವರ ಪುತ್ರನಾದರೂ ಕೂಡ ತಮ್ಮದೇ ಛಾಪನ್ನು ಶಿವರಾಜ್ಕುಮಾರ್ ಮೂಡಿಸಿದ್ದಾರೆ. ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ‘ಆನಂದ್’ ಸೂಪರ್ ಹಿಟ್ ಆಯಿತು. ನಂತರದ ವರ್ಷಗಳಲ್ಲಿ ಅವರು ಕನ್ನಡ ಚಿತ್ರರಂಗದ ಪ್ರಮುಖ ಸ್ಟಾರ್ ನಟನಾಗಿ ಬೆಳೆದರು. ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಜನುಮದ ಜೋಡಿ, ಓಂ, ಜೋಗಿ, ಟಗರು, ತವರಿಗೆ ಬಾ ತಂಗಿ, ಮಫ್ತಿ ಮುಂತಾದವು ಶಿವರಾಜ್ಕುಮಾರ್ ನಟನೆಯ ಪ್ರಮುಖ ಸಿನಿಮಾಗಳು. ನಟನೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಿಂದಲೂ ಶಿವರಾಜ್ಕುಮಾರ್ ಅವರು ಜನಮೆಚ್ಚುಗೆ ಪಡೆದಿದ್ದಾರೆ
ಶಿವಣ್ಣ, ಉಪೇಂದ್ರ, ರಾಜ್ ಶೆಟ್ಟಿ ನಟನೆಯ ‘45’ ಚಿತ್ರದ ಟೀಸರ್ ರಿಲೀಸ್ಗೆ ದಿನಾಂಕ ಫಿಕ್ಸ್
'45' ಚಿತ್ರವು ಶಿವರಾಜ್ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅವರನ್ನು ಒಳಗೊಂಡಿದೆ ಮತ್ತು ಅರ್ಜುನ್ ಜನ್ಯ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಟೀಸರ್ ಮಾರ್ಚ್ 30 ರಂದು ಯುಗಾದಿ ಹಬ್ಬದ ದಿನ ಬಿಡುಗಡೆಯಾಗಲಿದೆ. ಹಾಲಿವುಡ್ ತಂತ್ರಜ್ಞರು ಕೂಡ ಈ ಚಿತ್ರದಲ್ಲಿ ಕೆಲಸ ಮಾಡಿದ್ದಾರೆ ಎಂಬುದು ವಿಶೇಷ.
- Rajesh Duggumane
- Updated on: Mar 22, 2025
- 10:39 am
ಶಿವಣ್ಣ ಆಯ್ತು ಈಗ ಮತ್ತೋರ್ವ ಸೂಪರ್ಸ್ಟಾರ್ಗೆ ಕ್ಯಾನ್ಸರ್? ಸಿಕ್ಕಿತು ಸ್ಪಷ್ಟನೆ
ಶಿವರಾಜ್ಕುಮಾರ್ ಅವರು ಈಗಷ್ಟೇ ಕ್ಯಾನ್ಸರ್ ಮುಕ್ತರಾಗಿ ಮರಳಿದ್ದಾರೆ. ಒಂದು ತಿಂಗಳ ಕಾಲ ಅಮೆರಿಕದಲ್ಲಿ ಇದ್ದ ಅವರು ಈಗ ಚೇತರಿಕೆ ಕಂಡಿದ್ದಾರೆ. ಶೀಘ್ರವೇ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ಈ ಮಧ್ಯೆ ಮತ್ತೋರ್ವ ಸ್ಟಾರ್ ಹೀರೋಗೆ ಕ್ಯಾನ್ಸರ್ ಆಗಿದೆ ಎಂಬ ಸುದ್ದಿ ಹರಿದಾಡಿದೆ .
- Rajesh Duggumane
- Updated on: Mar 19, 2025
- 7:36 am
ಪುನೀತ್ ಸಮಾಧಿಗೆ ಶಿವಣ್ಣ-ಗೀತಕ್ಕ ಭೇಟಿ; ಭಾವುಕರಾದ ದಂಪತಿ
ಪುನೀತ್ ರಾಜ್ಕುಮಾರ್ ಅವರ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಕುಟುಂಬದವರು ಸಮಾಧಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಭಾವುಕರಾದರು. ಪುನೀತ್ ರಾಜ್ಕುಮಾರ್ ಅವರು ಇಂದು ನಮ್ಮ ಜೊತೆ ಇದ್ದಿದ್ದರೆ ಅದ್ದೂರಿಯಾಗಿ ಬರ್ತ್ಡೇ ಆಚರಣೆ ಮಾಡಿಕೊಳ್ಳುತ್ತಿದ್ದರು. ಆದರೆ, ಅವರು ಇಲ್ಲದೆ ನೋವು ಅತಿಯಾಗಿ ಕಾಡುತ್ತಾ ಇದೆ.
- Rajesh Duggumane
- Updated on: Mar 17, 2025
- 4:22 pm
ಸುದೀಪ್, ದರ್ಶನ್, ಯಶ್ ಫ್ಯಾನ್ಸ್ ಕೂಡ ನನಗಾಗಿ ಪ್ರಾರ್ಥನೆ ಮಾಡಿದ್ದರು: ಶಿವಣ್ಣ
ನಟ ಶಿವರಾಜ್ಕುಮಾರ್ ಕ್ಯಾನ್ಸರ್ ಗೆದ್ದು ಬಂದಿದ್ದಾರೆ. ಆಪರೇಷನ್ ಆದ ಬಳಿಕ ಅವರು ‘ಟಿವಿ9’ ಜತೆ ಮಾತನಾಡಿದ್ದಾರೆ. ಈ ಸಂದರ್ಶನದಲ್ಲಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಶಿವಣ್ಣ ಅವರು ಆದಷ್ಟು ಬೇಗ ಗುಣಮುಖರಾಗಲಿ ಅಂತ ಬೇರೆ ನಟರ ಫ್ಯಾನ್ಸ್ ಕೂಡ ಪ್ರಾರ್ಥನೆ ಮಾಡಿದ್ದರು. ಆ ಬಗ್ಗೆ ಶಿವರಾಜ್ಕುಮಾರ್ ಮಾತನಾಡಿದ್ದಾರೆ.
- Madan Kumar
- Updated on: Mar 5, 2025
- 9:12 pm
ಎರಡು ತಿಂಗಳ ಬಳಿಕ ನಟನೆಗೆ ಮರಳಿದ ಶಿವಣ್ಣ; ವಿಗ್ ಹಾಕಿ ಶೂಟ್
ಶಿವರಾಜ್ ಕುಮಾರ್ ಅವರು ಕ್ಯಾನ್ಸರ್ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಮಿಯಾಮಿಯಲ್ಲಿ ಚಿಕಿತ್ಸೆ ಪಡೆದ ನಂತರ, ಅವರು ಹೊಸ ಚಿತ್ರದ ಶೂಟಿಂಗ್ ಆರಂಭಿಸಿದ್ದಾರೆ. ಇದು ರಾಮ್ ಚರಣ್ ನಟನೆಯ "ಆರ್ಸಿ 16" ಎಂದು ಹೇಳಲಾಗುತ್ತಿದೆ. ವಿಗ್ ಧರಿಸಿ ಶೂಟಿಂಗ್ ಮಾಡುತ್ತಿರುವ ಶಿವಣ್ಣ ಅವರ ಹೊಸ ಲುಕ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
- Rajesh Duggumane
- Updated on: Mar 4, 2025
- 7:05 am
Shiva Rajkumar: ದೆಹಲಿ ಸಂಸತ್ತು ಹತ್ತಲಿದ್ದಾರೆ ಶಿವರಾಜ್ಕುಮಾರ್; ಸಿಕ್ಕಿತು ಹೊಸ ಸುದ್ದಿ
ಶಿವರಾಜ್ಕುಮಾರ್ ಅವರು ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದು, ರಾಮ್ಚರಣ್ ಜೊತೆಗಿನ "RC16" ಚಿತ್ರದ ಶೂಟ್ನಲ್ಲಿ ಭಾಗಿ ಆಗಲಿದ್ದಾರೆ. ದೆಹಲಿ ಪಾರ್ಲಿಮೆಂಟ್ನಲ್ಲಿನ ಚಿತ್ರದ ಶೂಟ್ ನಡೆಯಲಿದೆ. ಈ ಚಿತ್ರದ ಶೂಟಿಂಗ್ಗಾಗಿ ದೆಹಲಿಗೆ ತೆರಳುವುದರ ಜೊತೆಗೆ ಜಮಾ ಮಸೀದಿಯಲ್ಲಿಯೂ ಶೂಟಿಂಗ್ ನಡೆಯಲಿದೆ. ಪವನ್ ಕಲ್ಯಾಣ್ ಅವರ ಮಧ್ಯಸ್ಥಿಕೆಯಿಂದ ಪಾರ್ಲಿಮೆಂಟ್ನಲ್ಲಿ ಶೂಟಿಂಗ್ಗೆ ಅನುಮತಿ ಪಡೆಯುವ ಪ್ರಯತ್ನ ನಡೆಯುತ್ತಿದೆ.
- Rajesh Duggumane
- Updated on: Mar 3, 2025
- 10:06 am
ಮಂತ್ರಾಲಯಕ್ಕೆ ತೆರಳಿ ವಿಶೇಷ ಪೂಜೆ ಮಾಡಿಸಿದ ಶಿವರಾಜ್ಕುಮಾರ್-ಗೀತಾ
ಶಿವರಾಜ್ಕುಮಾರ್ ಅವರು ಈಗ ಕ್ಯಾನ್ಸರ್ ಮುಕ್ತರಾಗಿ ಕರ್ನಾಟಕಕ್ಕೆ ಮರಳಿದ್ದಾರೆ. ದೂರದ ಅಮೆರಿಕಕ್ಕೆ ತೆರಳಿ ಅವರು ಚಿಕಿತ್ಸೆ ಪಡೆದಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಶಿವರಾಜ್ಕುಮಾರ್ ಅವರು ಈಗ ಮಂತ್ರಾಲಯಕ್ಕೆ ತೆರಳಿ ಗುರು ರಾಯರ ದರ್ಶನ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
- Rajesh Duggumane
- Updated on: Feb 24, 2025
- 1:10 pm
ಶಿವರಾಜ್ಕುಮಾರ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ DCM ಡಿಕೆ ಶಿವಕುಮಾರ್
ಶಿವರಾಜ್ಕುಮಾರ್ ಅವರು ಕ್ಯಾನ್ಸರ್ ಮುಕ್ತರಾಗಿ ಬೆಂಗಳೂರಿಗೆ ಮರಳಿದ್ದಾರೆ. ಎಲ್ಲರೂ ಅವರ ಆರೋಗ್ಯವನ್ನು ವಿಚಾರಿಸಿಕೊಳ್ಳುತ್ತಿದ್ದಾರೆ. ಈಗ ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಶಿವರಾಜ್ಕುಮಾರ್ ಅವರ ಕ್ಷೇಮ ವಿಚಾರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಶಿವಣ್ಣ ಅವರ ಲುಕ್ ಗಮನ ಸೆಳೆದಿದೆ.
- Rajesh Duggumane
- Updated on: Feb 8, 2025
- 4:57 pm
ಶಿವಣ್ಣನ ಆರೋಗ್ಯದ ಬಗ್ಗೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್ಗೆ ಕಾಳಜಿ
ಶಿವರಾಜ್ ಕುಮಾರ್ ಅವರು ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದಾರೆ. ಅಮಿತಾಭ್ ಬಚ್ಚನ್, ಬಾಲಕೃಷ್ಣ, ಯಶ್, ಸುದೀಪ್ ಮುಂತಾದವರು ಅವರ ಆರೋಗ್ಯ ವಿಚಾರಿಸಿ ಬೆಂಬಲಿಸಿದ್ದಾರೆ. ಪೂರ್ಣ ಚೇತರಿಕೆಗಾಗಿ ಶಿರಸಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನಂತರ ಕನಕಪುರದ ಫಾರ್ಮ್ ಹೌಸ್ ಗೆ ತೆರಳಿ ಸಂಪೂರ್ಣ ವಿಶ್ರಾಂತಿ ಪಡೆದು ಮತ್ತೆ ಚಿತ್ರೀಕರಣಕ್ಕೆ ಮರಳಲಿದ್ದಾರೆ.
- Mangala RR
- Updated on: Feb 4, 2025
- 1:27 pm
ಬೆಂಗಳೂರು ಬಿಟ್ಟು ಈ ಊರಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಶಿವಣ್ಣ; ಮಾರ್ಚ್ನಿಂದ ಸಿನಿಮಾ ಕೆಲಸ
ಶಿವರಾಜ್ ಕುಮಾರ್ ಅವರು ಅಮೆರಿಕದಿಂದ ಭಾರತಕ್ಕೆ ಮರಳಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಮುಕ್ತರಾಗಿದ್ದಾರೆ. ಅವರು ಬೆಂಗಳೂರಿನಿಂದ ಹೊರಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ ಮತ್ತು ಮಾರ್ಚ್ನಿಂದ ಚಲನಚಿತ್ರ ಕೆಲಸಗಳನ್ನು ಪ್ರಾರಂಭಿಸಲಿದ್ದಾರೆ. ಶಿವರಾಜ್ ಕುಮಾರ್ ಅವರು '45' ಚಿತ್ರದ ಪ್ರಚಾರದಲ್ಲೂ ಭಾಗವಹಿಸಲಿದ್ದಾರೆ ಅನ್ನೋದು ವಿಶೇಷ.
- Rajesh Duggumane
- Updated on: Feb 4, 2025
- 8:20 am