AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah

Siddaramaiah

ಕರ್ನಾಟಕ ರಾಜಕಾರಣದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕರ ಪೈಕಿ ಸಿದ್ದರಾಮಯ್ಯ ಪ್ರಮುಖರು. ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ 1948ರ ಆಗಸ್ಟ್ 12ರಂದು ಜನಿಸಿದ ಸಿದ್ದರಾಮಯ್ಯನವರ ಪ್ರಾಥಮಿಕ ಶಿಕ್ಷಣ ಹುಟ್ಟೂರಿನಲ್ಲೇ ಆಯಿತು. ಮೈಸೂರಿನಲ್ಲಿ ಬಿಎಸ್ಸಿ ಹಾಗೂ ಕಾನೂನು ಪದವಿ ಪಡೆದ ಅವರು 1978ರ ವರೆಗೆ ವಕೀಲಿ ವೃತ್ತಿ ನಡೆಸುತ್ತಿದ್ದು, ನಂತರ ರಾಜಕೀಯಕ್ಕೆ ಧುಮುಕಿದರು.

1983ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರತೀಯ ಲೋಕದಳದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಸಿದ್ದರಾಮಯ್ಯ, ನಂತರ ರಾಜಕೀಯದಲ್ಲಿ ಹಿಂತಿರುಗಿ ನೋಡಲೇ ಇಲ್ಲ. ಬಳಿಕ ಜನತಾ ದಳಕ್ಕೆ ಸೇರಿದ ಅವರು, ತರುವಾಯ ನಾಯಕತ್ವದ ವಿರುದ್ಧ ಅಸಮಾಧಾನದಿಂದ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಸಚಿವರಾಗಿ ಹಲವು ಬಾರಿ ಕಾರ್ಯನಿರ್ವಹಿಸಿದ್ದಾರೆ.

ಹಿಂದುಳಿದ ವರ್ಗಗಳ ನಾಯಕನೆಂದು ತಮ್ಮನ್ನು ಬಿಂಬಿಸಿಕೊಂಡಿರುವ ಸಿದ್ದರಾಮಯ್ಯ, 2013ರ ವಿಧಾನಸಭೆ ಚುನಾವಣೆಗೂ ಮುನ್ನ ಬೃಹತ್ ಅಹಿಂದ ಸಮಾವೇಶ ಆಯೋಜಿಸಿ ರಾಜಕೀಯ ಬಲ ಪ್ರದರ್ಶನ ಮಾಡಿದ್ದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರ ಚಲಾಯಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಅವರದ್ದಾಗಿದೆ.

ಮುಖ್ಯಮಂತ್ರಿಯಾಗಿ ಮೊದಲ ಅವಧಿಯಲ್ಲಿ (2013 – 2018) ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಹಲವು ‘ಭಾಗ್ಯ’ಗಳನ್ನು ಘೋಷಣೆ ಮಾಡಿದ್ದ ಸಿದ್ದರಾಮಯ್ಯ, ಭಾರೀ ಜನಪ್ರಿಯತೆಯ ಹೊರತಾಗಿಯೂ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸೋಲನುಭವಿಸಿದ್ದರು. ಆದರೆ, ಬಾದಾಮಿಯಿಂದಲೂ ಸ್ಪರ್ಧಿಸಿದ್ದ ಅವರು, ಅಲ್ಲಿ ಗೆಲುವು ಸಾಧಿಸಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಎರಡನೇ ಅವಧಿಯಲ್ಲಿ 2023 ಮೇ ತಿಂಗಳಿನಿಂದ 2026 ಮೇ 28ರವರೆಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ

ಇನ್ನೂ ಹೆಚ್ಚು ಓದಿ

ಮುಡಾ ಸೈಟ್ ಹಂಚಿಕೆ ಕೇಸ್ ಹಿನ್ನೆಲೆ ಯತೀಂದ್ರ ಖಾತೆ ಬದಲಾವಣೆಗೆ ಆಗ್ರಹ: ನೈಜ ಹೋರಾಟಗಾರರ ವೇದಿಕೆಯಿಂದ ಸಿಎಂಗೆ ಪತ್ರ

ಮೈಸೂರಿನ ಮುಡಾ (MUDA) ಸೈಟ್ ಹಂಚಿಕೆ ಹಗರಣದಲ್ಲಿ ಸಚಿವ ಡಾ. ಯತೀಂದ್ರ ಅವರ ತಂದೆ ಮತ್ತು ತಾಯಿ ಪ್ರಮುಖ ಆರೋಪಿಗಳಾಗಿರುವುದರಿಂದ, ಹಿತಾಸಕ್ತಿ ಸಂಘರ್ಷವನ್ನು ತಡೆಯಲು ತಕ್ಷಣವೇ ಅವರ ನಗರಾಭಿವೃದ್ಧಿ ಖಾತೆಯನ್ನು ಬದಲಾಯಿಸುವಂತೆ ಆಗ್ರಹಿಸಿ ‘ನೈಜ ಹೋರಾಟಗಾರರ ವೇದಿಕೆ’ಯು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದೆ.

CM ಆರ್ಥಿಕ ಸಲಹೆಗಾರ ಹುದ್ದೆಯಿಂದ ನನ್ನ ತಗೆದು ಹಾಕಿಲ್ಲ: ಡಿಕೆಶಿ ಬಗ್ಗೆ ರಾಯರೆಡ್ಡಿ ಸ್ಪೋಟಕ ಹೇಳಿಕೆ

ಶಾಸಕ ಬಸವರಾಜ ರಾಯರೆಡ್ಡಿಯವರು ಸಿದ್ದರಾಮಯ್ಯನವರ ಆಪ್ತರಾಗಿದ್ದರೂ ಸಹ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿರಲಿಲ್ಲ. ಇದರಿಂದ ಅವರನ್ನು ಸಿಎಂ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಆದ್ರೆ, ಇದೀಗ ಡಿಕೆ ಶಿವಕುಮಾರ್, ಎಲ್.ಕೆ.ಅತೀಕ್ ಅವರನ್ನು ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಿದ್ದಾರೆ. ಇನ್ನು ಈ ಬಗ್ಗೆ ಕೊಪ್ಪಳದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಯರೆಡ್ಡಿ, ಸಿಎಂ ಆರ್ಥಿಕ ಸಲಹೆಗಾರ ಹುದ್ದೆಯಿಂದ ನನ್ನನ್ನು ತೆಗೆದು ಹಾಕಿಲ್ಲ. ಸಿಎಂ ಬದಲಾವಣೆ ನಂತರ ಡಿಕೆಶಿ ಮತ್ತೊಬ್ಬರನ್ನು ನೇಮಿಸಿದ್ದಾರೆ. ಅದರಲ್ಲಿ ತಪ್ಪೇನಿದೆ? ಆರ್ಡರ್ ಮಾಡಲೇಬೇಕು, ಹಾಗಾಗಿ ಆರ್ಡರ್ ಮಾಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನನ್ನ ವಿರುದ್ಧವಾಗಿ ಇಲ್ಲ ಎಂದಿದ್ದಾರೆ.

ಪತ್ನಿ ಉಷಾ, ತಮ್ಮ ಡಿಕೆ ಸುರೇಶ್ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಡಿಕೆ ಶಿವಕುಮಾರ್: ಶೀಘ್ರ ಉಭಯ ನಾಯಕರು ದೆಹಲಿಗೆ

ಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಸಚಿವರ ಎರಡನೇ ಪಟ್ಟಿ ಮತ್ತು ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾವುದೇ ತೊಡಕು ಆಗದಂತೆ ಉಭಯ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ. ಇಬ್ಬರೂ ನಾಯಕರು ಶೀಘ್ರದಲ್ಲೇ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಕೆಶಿ ಜತೆ ಪತ್ನಿ ಉಷಾ, ಸಹೋದರ ಡಿಕೆ ಸುರೇಶ್ ಸಹ ಇದ್ದರು.

ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್, ಸ್ವಪಕ್ಷದ ನಾಯಕರಿಗೆ ರಾಜಣ್ಣ ಖಡಕ್ ಎಚ್ಚರಿಕೆ

ಸಿದ್ದರಾಮಯ್ಯನ ಸೈಡ್ ಲೈನ್ ಗೆ ಸರಿಸೋಕೆ ಆಗಲ್ಲ. ಅವರು ಮಾಸ್ ಲೀಡರ್. ಯಾರೆಲ್ಲ ಜನರಿಂದ ಮಾಸ್ ಲೀಡರ್ ಆಗಿದ್ದಾರೆ ಅವರನ್ನು ಏನೂ ಮಾಡಲು ಆಗಲ್ಲ . ಅವರನ್ನ ಯಾವತ್ತೂ ಕೂಡ ಹಿಂದೆ ಹಾಕಲು ಆಗಲ್ಲ ಎಂದು ಖಡಕ್ ಆಗಿ ಹೇಳಿದರು. ಸಿದ್ದರಾಮಯ್ಯರನ್ನು ಸೈಡ್ ಲೈನ್ ಮಾಡುವಂತದ್ದು ಅಥವಾ ಅವರನ್ನ ದೂರ ಇಟ್ಟು ಪಕ್ಷ ಸಂಘಟನೆ ಮಾಡ್ತೀವಿ ಅಂತ ಯಾರಾದರೂ ಹೋದ್ರೆ ದೊಡ್ಡ ಬ್ಲಂಡರ್ ಆಗುತ್ತೆ. ಸಿದ್ದರಾಮಯ್ಯರನ್ನು ವಿಶ್ವಾಸಕ್ಕೆ ತಗೊಂಡು ಹೋದ್ರೆನೇ ನಾವು 2028ಕ್ಕೆ ಮತ್ತೆ ಅಧಿಕಾರಕ್ಕೆ ಬರುವ ಎಲ್ಲಾ ಅವಕಾಶಗಳು ಇದ್ದಾವೆ ಎಂದು ಹೇಳಿದರು.

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಶಾಸಕ ಪ್ರದೀಪ್​​ ಈಶ್ವರ್​​ ಕಣ್ಣೀರು

Pradeep Eshwar: ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ್ದಾರೆ. ಈ ವೇಳೆ ಮಾಜಿ ಸಿಎಂ ಧೈರ್ಯ ಹೇಲಿದ್ದು, ಘಟನೆ ಸಂಬಂಧ ಗೃಹ ಸಚಿವರ ಜೊತೆಗೂ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಮತ್ತೊಂದೆಡೆ ಪ್ರದೀಪ್​​ ಬೆಂಬಲಿಸಿ ಸಿಎಂ ಡಿಕೆಶಿ ಕೂಡ ಪೋಸ್ಟ್​​ ಮಾಡಿದ್ದು, ವಿಪಕ್ಷಗಳ ವಿರುದ್ಧ ತೀವ್ರ ಆಕ್ರೋಶವನ್ನವರು ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು! ಹೇಳಿದ್ದೇನು ನೋಡಿ

ಮಾಜಿ ಸಿಎಂ ಸಿದ್ದರಾಮಯ್ಯ ಸೈಡ್​ಲೈನ್ ಆದ್ರಾ? ಮಾಧ್ಯಮ ಪ್ರತಿನಿಧಿಗಳು ಕೇಳಿದ ಈ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ ಮಾರ್ಮಿಕ ಉತ್ತರ ನೀಡಿದ್ದಾರೆ. ರಾಜಕಾರಣದಲ್ಲಿ ಸತತ ಪ್ರಯತ್ನದ ಮಹತ್ವವನ್ನು ವಿವರಿಸಿದ್ದಾರೆ. ಸೈಡ್‌ಲೈನ್ ಆಗುವುದು ಎಲ್ಲಾ ಪಕ್ಷಗಳಲ್ಲಿ ಸಾಮಾನ್ಯ ಎಂದೂ ಅವರು ಹೇಳಿದ್ದಾರೆ. ಸತೀಶ್ ಜಾರಕಿಹೊಳಿ ಹೇಳಿದ್ದೇನೆಂಬುದನ್ನು ಇಲ್ಲಿ ನೋಡಿ.

ಮಂಗಳವಾರದಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಶುರು: ಜಾಗೃತಿ ವಹಿಸದಿದ್ರೆ ಮಾರಣಹೋಮ ಎಂದ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಜೂನ್ 30ರಿಂದ ಆರಂಭವಾಗುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಹಿನ್ನೆಲೆ ಕಾಂಗ್ರೆಸ್ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಬಿಜೆಪಿ ಮತದಾರರ ಪಟ್ಟಿಯಿಂದ ಬಡವರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಮೈಸೂರಿನಲ್ಲಿ ನಡೆದ ಜಾಗೃತಿ ಸಮಾವೇಶದಲ್ಲಿ ಸಿದ್ದರಾಮಯ್ಯ ಜಾಗೃತಿ ವಹಿಸದಿದ್ದರೆ ಮಾರಣಹೋಮ ಎಂದು ಎಚ್ಚರಿಸಿದ್ದಾರೆ.

  • Ram
  • Updated on: Jun 28, 2026
  • 11:02 pm

ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ: ಮಾಜಿ ಸಿಎಂ ಸಿದ್ದರಾಮಯ್ಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಿದ ಬಳಿಕ 'ಮುಖ್ಯಮಂತ್ರಿ ಸಿಂಹಾಸನ ನಶ್ವರ, ಜನತೆಯ ಹೃದಯ‌ ಸಿಂಹಾಸನ ಶಾಶ್ವತ' ಎಂದು ಸಿದ್ದರಾಮಯ್ಯ ಭಾವುಕ ಎಕ್ಸ್ ಪೋಸ್ಟ್ ಹಂಚಿಕೊಂಡಿದ್ದಾರೆ. ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನ್ನದು ಎಂದವರು ತಿಳಿಸಿದ್ದಾರೆ.

ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ, ಸ್ವಾಗತ ಹೇಗಿತ್ತು ನೋಡಿ

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಇದೆ ಮೊದಲ ಬಾರಿಗೆ ಇಂದು (ಜೂನ್ 27) ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಿದ್ದಾರೆ.ಈ ವೇಳೆಮೈಸೂರಿನ ಹೈವೇ ಸರ್ಕಲ್‌ನಲ್ಲಿ ಅಭಿಮಾನಿಗಳು ಬೃಹತ್ ಸೇಬಿನ ಹಾರದೊಂದಿಗೆ ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತ ಕೋರಿದ್ದಾರೆ. ಇನ್ನು ಶಾಸಕರಾದ ಸ್ವಾಗತಿಸಿದ ತನ್ವೀರ್ ಸೇಠ್, ಹರೀಶ್ ಗೌಡ ಸೇರಿ ಹಲವರು ಸಿದ್ದರಾಮಯ್ಯನವರನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಇಂದು ರಾತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದು, ನಾಳೆ (ಜೂನ್ 28) ನಡೆಯಲಿರುವ ಎಸ್​​ಐಆರ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

  • Ram
  • Updated on: Jun 27, 2026
  • 7:57 pm

ಮೂರ್ನಾಲ್ಕು ಜನರಿಗಷ್ಟೇ ಗೊತ್ತಿತ್ತು:ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿಕೆ ಶಿವಕುಮಾರ್

ದರ್ಗಾಗಳ ಧರ್ಮಗುರುಗಳ ನಿಯೋಗ ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ಈ ವೇಳೆ ಅಧಿಕಾರ ಹಂಚಿಕೆ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. ನಿಮ್ಮ ಮನವಿ ವರಿಷ್ಠರ​ ಗಮನಕ್ಕೆ ತರುತ್ತೇನೆ. ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಬಂದಿತ್ತು. ವರಿಷ್ಠರು ನನ್ನನ್ನೇ ಸಿಎಂ ಮಾಡುತ್ತಾರೆ ಅಂದುಕೊಂಡಿದ್ದೆ. ಆದ್ರೆ, ಸಿದ್ದರಾಮಯ್ಯಗೂ ಅವಕಾಶ ಕೊಡೋಣ ಅಂದರು. ಅಲ್ಲದೇ ಅಂದು ಇಬ್ಬರು ಶೇರ್ ಮಾಡಿಕೊಳ್ಳಿ ಎಂದು ಪಕ್ಷ ಹೇಳಿತ್ತು. ಅಂದು ಈ ನಿರ್ಧಾರವಾಗಿತ್ತು, ಅದರ ಬಗ್ಗೆ ಎಲ್ಲೂ ಹೇಳಲಿಲ್ಲ. ಅಧಿಕಾರ ಹಂಚಿಕೆ ವಿಚಾರ 3ರಿಂದ 4 ಜನರಿಗಷ್ಟೇ ಗೊತ್ತಿತ್ತು. ಆದ್ರೆ ಈಗ ಪಕ್ಷ ನನಗೂ ಅವಕಾಶ ಮಾಡಿಕೊಟ್ಟಿದೆ ಎಂದಿದ್ದಾರೆ.

ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಸಲೀಂ ಅಹ್ಮದ್​​ ಸೇರಿ ಮೂವರಿಗೆ ಸಚಿವ ಸ್ಥಾನಕ್ಕೆ ಮನವಿ

ಮುಸ್ಲಿಂ ಧರ್ಮಗುರುಗಳು ಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಸಮುದಾಯಕ್ಕೆ ಮೂರು ಮಂತ್ರಿ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ. ಕಿತ್ತೂರು ಕರ್ನಾಟಕ ಭಾಗದಿಂದ ಸಲೀಂ ಅಹ್ಮದ್ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಲಾಗಿದ್ದು, ಉತ್ತರ ಕರ್ನಾಟಕದಲ್ಲಿ ಸಮುದಾಯದ ಕೆಲಸಗಳಲ್ಲಿ ಸಲೀಂ ಪಾತ್ರದ ಬಗ್ಗೆ ವಿವರಿಸಿದ್ದಾರೆ.

ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ

ಬಿಕೆ ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಇಂದು (ಜೂನ್ 21) ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಹಿಂದಿನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಧ್ವಜ ಹಸ್ತಾಂತರಿಸಿದರು. ಬಳಿಕ ಎಲ್ಲಾ ನಾಯಕರು ಪಕ್ಷ ಸಂಘಟನೆ ಬಗ್ಗೆ ವಿವರವಾಗಿ ಮಾತನಾಡಿದರು. ಇನ್ನು ಕಾರ್ಯಕ್ರಮದಲ್ಲಿ ಕೊನೆಯದಾಗಿ ಭಾಷಣ ಮಾಡಲು CWC ಸದಸ್ಯತ್ವ, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಅವಕಾಶ ನೀಡಲಾಗಿದ್ದು, ಇದಕ್ಕೆ ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದ ಪ್ರಸಂಗ ನಡೆಯಿತು. ಎಂದಿನಂತೆ ನಾನು ಕೊನೆಯ ಭಾಷಣಕಾರ. ಹೀಗಾಗಿ ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಹರಿಪ್ರಸಾದ್ ಗೆ ಮನವಿ ಮಾಡಿ ಹಾಸ್ಯ ಚಟಾಕಿ ಹಾರಿಸಿದರು.

‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ
ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ
ಜೋಗ ಜಲಪಾತದ ಜಲವೈಭವ ಕಣ್ತುಂಬಿಕೊಂಡ ಪ್ರವಾಸಿಗರು
ಜೋಗ ಜಲಪಾತದ ಜಲವೈಭವ ಕಣ್ತುಂಬಿಕೊಂಡ ಪ್ರವಾಸಿಗರು
ಒಂದೇ ರಾತ್ರಿಯಲ್ಲಿ ದೂದ್​ಗಂಗಾ ನದಿಯಲ್ಲಿ 20 ಅಡಿ ಏರಿಕೆ!
ಒಂದೇ ರಾತ್ರಿಯಲ್ಲಿ ದೂದ್​ಗಂಗಾ ನದಿಯಲ್ಲಿ 20 ಅಡಿ ಏರಿಕೆ!
ಬಂಡಾಜೆ ಫಾಲ್ಸ್​ನಂತಹ ಅಪಾಯಕಾರಿ ಸ್ಥಳದಲ್ಲಿ ಪ್ರವಾಸಿಗರ ಹುಚ್ಚಾಟ!
ಬಂಡಾಜೆ ಫಾಲ್ಸ್​ನಂತಹ ಅಪಾಯಕಾರಿ ಸ್ಥಳದಲ್ಲಿ ಪ್ರವಾಸಿಗರ ಹುಚ್ಚಾಟ!
ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ಗುರುದತ್
ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ಗುರುದತ್
ಕರಾವಳಿ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ
ಕರಾವಳಿ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ