AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah

Siddaramaiah

ಕರ್ನಾಟಕ ರಾಜಕಾರಣದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕರ ಪೈಕಿ ಸಿದ್ದರಾಮಯ್ಯ ಪ್ರಮುಖರು. ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ 1948ರ ಆಗಸ್ಟ್ 12ರಂದು ಜನಿಸಿದ ಸಿದ್ದರಾಮಯ್ಯನವರ ಪ್ರಾಥಮಿಕ ಶಿಕ್ಷಣ ಹುಟ್ಟೂರಿನಲ್ಲೇ ಆಯಿತು. ಮೈಸೂರಿನಲ್ಲಿ ಬಿಎಸ್ಸಿ ಹಾಗೂ ಕಾನೂನು ಪದವಿ ಪಡೆದ ಅವರು 1978ರ ವರೆಗೆ ವಕೀಲಿ ವೃತ್ತಿ ನಡೆಸುತ್ತಿದ್ದು, ನಂತರ ರಾಜಕೀಯಕ್ಕೆ ಧುಮುಕಿದರು.

1983ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರತೀಯ ಲೋಕದಳದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಸಿದ್ದರಾಮಯ್ಯ, ನಂತರ ರಾಜಕೀಯದಲ್ಲಿ ಹಿಂತಿರುಗಿ ನೋಡಲೇ ಇಲ್ಲ. ಬಳಿಕ ಜನತಾ ದಳಕ್ಕೆ ಸೇರಿದ ಅವರು, ತರುವಾಯ ನಾಯಕತ್ವದ ವಿರುದ್ಧ ಅಸಮಾಧಾನದಿಂದ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಸಚಿವರಾಗಿ ಹಲವು ಬಾರಿ ಕಾರ್ಯನಿರ್ವಹಿಸಿದ್ದಾರೆ.

ಹಿಂದುಳಿದ ವರ್ಗಗಳ ನಾಯಕನೆಂದು ತಮ್ಮನ್ನು ಬಿಂಬಿಸಿಕೊಂಡಿರುವ ಸಿದ್ದರಾಮಯ್ಯ, 2013ರ ವಿಧಾನಸಭೆ ಚುನಾವಣೆಗೂ ಮುನ್ನ ಬೃಹತ್ ಅಹಿಂದ ಸಮಾವೇಶ ಆಯೋಜಿಸಿ ರಾಜಕೀಯ ಬಲ ಪ್ರದರ್ಶನ ಮಾಡಿದ್ದರು.

ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರ ಚಲಾಯಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಅವರದ್ದಾಗಿದೆ.

ಮುಖ್ಯಮಂತ್ರಿಯಾಗಿ ಮೊದಲ ಅವಧಿಯಲ್ಲಿ (2013 – 2018) ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಹಲವು ‘ಭಾಗ್ಯ’ಗಳನ್ನು ಘೋಷಣೆ ಮಾಡಿದ್ದ ಸಿದ್ದರಾಮಯ್ಯ, ಭಾರೀ ಜನಪ್ರಿಯತೆಯ ಹೊರತಾಗಿಯೂ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸೋಲನುಭವಿಸಿದ್ದರು. ಆದರೆ, ಬಾದಾಮಿಯಿಂದಲೂ ಸ್ಪರ್ಧಿಸಿದ್ದ ಅವರು, ಅಲ್ಲಿ ಗೆಲುವು ಸಾಧಿಸಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಎರಡನೇ ಅವಧಿಯಲ್ಲಿ 2023 ಮೇ ತಿಂಗಳಿನಿಂದ 2026 ಮೇ 28ರವರೆಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ

ಇನ್ನೂ ಹೆಚ್ಚು ಓದಿ

ಮೈಸೂರಿನಲ್ಲಿ ಛಿದ್ರವಾಯ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ?: ಕುತೂಹಲ ಮೂಡಿಸಿದ ಸಚಿವ ಸ್ಥಾನ ವಂಚಿತ ಶಾಸಕರ ಸಭೆ

Karnataka Politics: ಸಚಿವ ಸಂಪುಟ ಸ್ಥಾನ ವಂಚಿತರಾದ ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಮತ್ತು ತನ್ವೀರ್ ಸೇಠ್ ಅವರು ಮೈಸೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿರೋದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ತಂಡದಲ್ಲಿ ಭಿನ್ನಮತದ ಪ್ರಶ್ನೆಗಳು ಉದ್ಭವಿಸಿದೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

  • Ram
  • Updated on: Aug 11, 2026
  • 1:57 pm

ಖಾತೆ ಹಂಚಿಕೆ ಕಗ್ಗಂಟು: ದೆಹಲಿಯಲ್ಲಿ ತಡರಾತ್ರಿ ಖರ್ಗೆ ಭೇಟಿಯಾದ ಡಿಕೆಶಿ, ಇಂದು ಸಂಜೆಯೇ ಪಟ್ಟಿ ಫೈನಲ್ ಸಾಧ್ಯತೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಬಳಿಕ ಖಾತೆ ಹಂಚಿಕೆ ಕಗ್ಗಂಟಾಗಿದೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಡಿ.ಕೆ. ಶಿವಕುಮಾರ್ ಭಾನುವಾರ ತಡರಾತ್ರಿ ಭೇಟಿಯಾಗಿ ಚರ್ಚಿಸಿದ್ದು, ಎರಡು-ಮೂರು ಸಚಿವರ ಬದಲಾವಣೆ ಹಾಗೂ ಖಾತೆಗಳ ಅದಲು-ಬದಲು ಸಾಧ್ಯತೆಯೂ ಚರ್ಚೆಯಲ್ಲಿದೆ. ರಾಹುಲ್ ಗಾಂಧಿ ಒಪ್ಪಿಗೆ ಸಿಕ್ಕಿದರೆ ಇಂದು ಸಂಜೆಯೇ ಖಾತೆ ಹಂಚಿಕೆ ಫೈನಲ್ ಆಗುವ ನಿರೀಕ್ಷೆ ಇದೆ.

ಸಚಿವ ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಸಚಿವ ಯತೀಂದ್ರ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ಸಿಗುವುದು ಬಹುತೇಕ ಖಚಿತವಾಗಿದೆ. ಖಾಲಿ ಇರುವ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ ಯತೀಂದ್ರ ಸಿದ್ದರಾಮಯ್ಯನವರ ಹೆಗಲಿಗೆ ಬೀಳುವ ಸಾಧ್ಯತೆ ಇದ್ದು, ಪರಿಷತ್​​ನಿಂದ ಯತೀಂದ್ರ ಸಿದ್ದರಾಮಯ್ಯ ಮಾತ್ರ ಏಕೈಕ ಸಚಿವರಾಗಿರೋದೆ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎನ್​​​ಎಸ್ ಬೋಸರಾಜ್ ಅವರು ಸಚಿವರಾಗಿದ್ದರು. ಜೊತೆಗೆ ವಿಧಾನಪರಿಷತ್ ಸಭಾನಾಯಕರಾಗಿದ್ದರು. ಅದರಂತೆ ಇದೀಗ ಯತೀಂದ್ರ ಸಿದ್ದರಾಮಯ್ಯನವರಿಗೆ ಸಭಾನಾಯಕ ಸ್ಥಾನ ಒಲಿಯಲಿದೆ.

ಯತೀಂದ್ರ ಸಿದ್ದರಾಮಯ್ಯಗೆ ಮತ್ತೊಂದು ಮಹತ್ವದ ಸ್ಥಾನ?: ಸಿಗಲಿದ್ಯಾ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ?

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮಯತ್ತು ಸಚಿವ ಯತೀಂದ್ರ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ಸಿಗುವುದು ಬಹುತೇಕ ಕನ್ಫರ್ನ್​​ ಆಗಿದೆ. ಖಾಲಿ ಇರುವ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ ಅವರ ಹೆಗಲಿಗೆ ಬೀಳುವ ಸಾಧ್ಯತೆ ಇದ್ದು, ಪರಿಷತ್​​ನಿಂದ ಯತೀಂದ್ರ ಸಿದ್ದರಾಮಯ್ಯ ಮಾತ್ರ ಏಕೈಕ ಸಚಿವರಾಗಿರೋದೆ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಆಗಸ್ಟ್ 13 ರಿಂದ ಆಗಸ್ಟ್ 27ರವರೆಗೆ ವಿಧಾನಮಂಡಲದ ಮುಂಗಾರು ಅಧಿವೇಶನ ನಿಗದಿಯಾಗಿದೆ.

ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ, ಅಷ್ಟಕ್ಕೂ ಆಗಿದ್ದೇನು?

ಸಂಪುಟ ಪುನಾರಚನೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​​​​​​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಸ್ಥಾನ ಸಿಕ್ಕಿಲ್ಲವೆಂದು ಹಲವು ಹಿರಿಯ-ಕಿರಿಯ ಶಾಸಕರು ಬೇಸರಗೊಂಡಿದ್ದು, ಅವರನ್ನ ಮನವೊಲಿಸುವ ಯತ್ನವೂ ಸಹ ನಡೆದಿದೆ. ಇದರ ಮಧ್ಯೆ ಇನ್ನೊಂದೆಡೆ ಅಹಿಂದ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಅಸಮಾಧಾನಗೊಂಡಿದ್ದಾರೆ. ಅದರಲ್ಲೂ ಮುಖ್ಯವಾಗಿ ತೀವ್ರ ಬೇಸರಗೊಂಡಿರುವ ಹೆಚ್ ಸಿ ಮಹದೇವಪ್ಪ ಅವರು ದೆಹಲಿಗೆ ಹಾರಿದ್ದಾರೆ.

ಸಿದ್ದರಾಮಯ್ಯ ಹೈಕಮಾಂಡ್​​ಗೆ ಕೊಟ್ಟ ಪಟ್ಟಿಯಲ್ಲಿ ಹೆಚ್​ಸಿ ಮಹದೇವಪ್ಪ ಹೆಸರಿದ್ದರೂ ಸಚಿವ ಸ್ಥಾನ ತಪ್ಪಿದೆ: ಯತೀಂದ್ರ

ಮೈಸೂರು ಉಸ್ತುವಾರಿ ಸಚಿವರಾಗಿ ಅಧಿಕೃತವಾಗಿ ನೇಮಕಗೊಂಡ ಯತೀಂದ್ರ ಸಿದ್ದರಾಮಯ್ಯ, ಹೆಚ್​ಸಿ ಮಹದೇವಪ್ಪ ಅವರಿಗೆ ಸಚಿವ ಸ್ಥಾನ ತಪ್ಪಿದ ಕುರಿತು ಮಾತನಾಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಹದೇವಪ್ಪ ಹೆಸರನ್ನು ಶಿಫಾರಸು ಮಾಡಿದ್ದರೂ ಹೈಕಮಾಂಡ್ ಈ ಬಾರಿ ಪರಿಗಣಿಸಿಲ್ಲ ಎಂದರು. ಕುರುಬ ಸಮುದಾಯದ ಅಸಮಾಧಾನ ಮತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟಿದ್ದರಿಂದ ತನಗೆ ಸಚಿವ ಸ್ಥಾನ ಲಭಿಸಿದೆ ಎಂದು ಯತೀಂದ್ರ ತಿಳಿಸಿದ್ದಾರೆ.

  • Ram
  • Updated on: Aug 6, 2026
  • 12:55 pm

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು

ಸಚಿವ ಸಂಪುಟ ವಿಸ್ತರಣೆಯ ಬಳಿಕ ಅಹಿಂದ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಮುನಿಸಿಕೊಂಡಿದ್ದಾರೆ. ಚಿವ ಸ್ಥಾನ ಕೈತಪ್ಪಿದ್ದರಿಂದ ಸಿದ್ದರಾಮಯ್ಯ ಆಪ್ತರಾದ ಎಚ್.ಸಿ. ಮಹದೇವಪ್ಪ ತೀವ್ರ ಅಸಮಾಧಾನಗೊಂಡಿದ್ದಾರೆ. ಈ ನಡುವೆ ಅವರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದು, ಇದರಿಂದ ಕಾಂಗ್ರೆಸ್ ಪಾಳಯದಲ್ಲಿ ಗೊಂದಲಗಳು ಹೆಚ್ಚಾಗಿವೆ.

ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ಯಾಕೆ? ಜಾರಕಿಹೊಳಿ ಹಿಂಗ್ಯಾಕಂದ್ರು?

ಡಿಕೆ ಶಿವಕುಮಾರ್ ಸರ್ಕಾರದ ಸಂಪುಟ ವಿಸ್ತರಣೆ ಬಳಿಕ ಕರ್ನಾಟಕ ಕಾಂಗ್ರೆಸ್​​​​ನಲ್ಲಿ ಕೆಲ ಗೊಂದಲಗಳು ಹುಟ್ಟಿಕೊಂಡಿವೆ. ಸಚಿವ ಸ್ಥಾನ ಸಂಬಂಧ ಸಿದ್ದರಾಮಯ್ಯ ಕೊಂಚ ಬೇಸರಗೊಂಡಂತೆ ಕಾಣುತ್ತಿದ್ದು, ತಾವು ಹೇಳಿದವರಿಗೆ ಸಚಿವ ಸ್ಥಾನ ನೀಡದಿದ್ದರಿಂದ ನೂತನ ಸಚಿವ ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎನ್ನಲಾಗುತ್ತಿದೆ. ಸಂಪುಟ ವಿಸ್ತರಣೆ ಬಗ್ಗೆ ಹಲವು ಶಾಸಕರಲ್ಲಿ ಅಸಮಾಧಾನ ಹೊಗೆಯಾಡುತ್ತಿರುವಾಗಲೇ ಸಿದ್ದರಾಮಯ್ಯನವರ ಈ ನಡೆ, ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಮತದ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿದೆ. ಇನ್ನು ಸಿದ್ದರಾಮಯ್ಯ ಗೈರಾಗಿದ್ಯಾಕೆ? ಎನ್ನುವ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಕಾರಣ ಕೊಟ್ಟಿದ್ದಾರೆ.

ಸಚಿವ ಸ್ಥಾನ ವಂಚಿತ ಶಾಸಕರು ರೆಬೆಲ್, ಸಿಎಂಗೆ ಟ್ರಬಲ್: 20ಕ್ಕೂ ಹೆಚ್ಚು ಅತೃಪ್ತ ಶಾಸಕರು ಪ್ರತ್ಯೇಕ ಸಭೆಗೆ ಪ್ಲ್ಯಾನ್

ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಆಂತರಿಕ ಸಂಘರ್ಷ ಭುಗಿಲೆದ್ದಿದೆ. ಸಚಿವ ಸ್ಥಾನ ವಂಚಿತ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, 20ಕ್ಕೂ ಹೆಚ್ಚು ಶಾಸಕರು ಪ್ರತ್ಯೇಕ ಸಭೆಗೆ ಯೋಜನೆ ರೂಪಿಸುತ್ತಿದ್ದಾರೆ. ಅಲ್ಲದೆ, ರೆಬಲ್ ಶಾಸಕರು ಹೈಕಮಾಂಡ್ ಭೇಟಿಗೂ ಚಿಂತನೆ ನಡೆಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ

ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು ಹಾಜರಾಗಿದ್ದರಿಂದ ಅಸಮಾಧಾನಗೊಂಡಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿರುವ ಹಿನ್ನೆಲೆ ಈ ಬಗ್ಗೆ ಸಚಿವ ಶಿವಲಿಂಗೇಗೌಡರು ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯ ಹ್ಯಾಪಿಯಾಗಿದ್ದಾರೆ ಎಂದ ಅವರು, ಯಾವುದೋ ಒಂದು ಸಣ್ಣ ವಿಷಯಕ್ಕೆ ಅವರು ಬೇಸರಿಸಿಕೊಂಡಿದ್ದರು ಅಷ್ಟೇ ಎಂದಿದ್ದಾರೆ.

ನೂತನ ಸಚಿವರ ಪಟ್ಟಿಗೆ ಸಿದ್ದರಾಮಯ್ಯ ಅಸಮಾಧಾನ? ಮಾಜಿ ಸಿಎಂ ಬೇಸರಕ್ಕೆ ಕಾರಣವಾದ ಅಂಶಗಳು ಇಲ್ಲಿವೆ

ನೂತನ ಸಚಿವರ ಪ್ರಮಾಣವಚನ ಸ್ವೀಕಾರದ ಬೆನ್ನಲ್ಲೇ, ಆಯ್ಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ ಎಂಬ ಚರ್ಚೆ ಕಾಂಗ್ರೆಸ್‌ನಲ್ಲಿ ತೀವ್ರವಾಗಿದೆ. ಪ್ರಮಾಣವಚನ ಕಾರ್ಯಕ್ರಮಕ್ಕೆ ಅವರ ಗೈರುಹಾಜರಿ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಈ ಮಧ್ಯೆ, ಸಿದ್ದರಾಮಯ್ಯಗೆ ಅಸಮಾಧಾನವಿಲ್ಲ ಎಂದು ಅವರ ಪುತ್ರ ಯತೀಂದ್ರ ಸ್ಪಷ್ಟಪಡಿಸಿದ್ದಾರೆ.

ರಾಜೀನಾಮೆ ಬೆದರಿಕೆ ಹಾಕಿದವರು ಯಾರು? ಸಿಎಂಗೇ ನೇರ ಕರೆ ಮಾಡಿ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್

ಸಚಿವ ಸಂಪುಟ ವಿಸ್ತರಣೆ ನಂತರ ಅಸಮಾಧಾನಗೊಂಡಿರುವ ಶಾಸಕರ ರಾಜೀನಾಮೆ ಬೆದರಿಕೆ ಕುರಿತು ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ ನೀಡಿದ ಬೆನ್ನಲ್ಲೇ ಮತ್ತೊಂದು ಮಾಹಿತಿ ತಿಳಿದುಬಂದಿದೆ. ಹೈಕಮಾಂಡ್ ಕೂಡ ರಾಜೀನಾಮೆ ಬೆದರಿಕೆ ಹಾಕಿದವರ ವಿವರ ಕೇಳಿದೆ ಎನ್ನಲಾಗಿದೆ. ಅಲ್ಲದೆ, ಸಚಿವ ಸ್ಥಾನ ವಂಚಿತರಿಗೆ ನಿಗಮ ಮಂಡಳಿ ಸ್ಥಾನಗಳನ್ನು ನೀಡಲು ಸೂಚಿಸಿದ್ದು, ರಾಜೀನಾಮೆ ನೀಡಿದರೆ ಸ್ವೀಕರಿಸಲು ಅನುಮತಿ ನೀಡಿದೆ.