Siddaramaiah
ಕರ್ನಾಟಕ ರಾಜಕಾರಣದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕರ ಪೈಕಿ ಸಿದ್ದರಾಮಯ್ಯ ಪ್ರಮುಖರು. ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ 1948ರ ಆಗಸ್ಟ್ 12ರಂದು ಜನಿಸಿದ ಸಿದ್ದರಾಮಯ್ಯನವರ ಪ್ರಾಥಮಿಕ ಶಿಕ್ಷಣ ಹುಟ್ಟೂರಿನಲ್ಲೇ ಆಯಿತು. ಮೈಸೂರಿನಲ್ಲಿ ಬಿಎಸ್ಸಿ ಹಾಗೂ ಕಾನೂನು ಪದವಿ ಪಡೆದ ಅವರು 1978ರ ವರೆಗೆ ವಕೀಲಿ ವೃತ್ತಿ ನಡೆಸುತ್ತಿದ್ದು, ನಂತರ ರಾಜಕೀಯಕ್ಕೆ ಧುಮುಕಿದರು.
1983ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರತೀಯ ಲೋಕದಳದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಸಿದ್ದರಾಮಯ್ಯ, ನಂತರ ರಾಜಕೀಯದಲ್ಲಿ ಹಿಂತಿರುಗಿ ನೋಡಲೇ ಇಲ್ಲ. ಬಳಿಕ ಜನತಾ ದಳಕ್ಕೆ ಸೇರಿದ ಅವರು, ತರುವಾಯ ನಾಯಕತ್ವದ ವಿರುದ್ಧ ಅಸಮಾಧಾನದಿಂದ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಸಚಿವರಾಗಿ ಹಲವು ಬಾರಿ ಕಾರ್ಯನಿರ್ವಹಿಸಿದ್ದಾರೆ.
ಹಿಂದುಳಿದ ವರ್ಗಗಳ ನಾಯಕನೆಂದು ತಮ್ಮನ್ನು ಬಿಂಬಿಸಿಕೊಂಡಿರುವ ಸಿದ್ದರಾಮಯ್ಯ, 2013ರ ವಿಧಾನಸಭೆ ಚುನಾವಣೆಗೂ ಮುನ್ನ ಬೃಹತ್ ಅಹಿಂದ ಸಮಾವೇಶ ಆಯೋಜಿಸಿ ರಾಜಕೀಯ ಬಲ ಪ್ರದರ್ಶನ ಮಾಡಿದ್ದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರ ಚಲಾಯಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಅವರದ್ದಾಗಿದೆ.
ಮುಖ್ಯಮಂತ್ರಿಯಾಗಿ ಮೊದಲ ಅವಧಿಯಲ್ಲಿ (2013 – 2018) ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಹಲವು ‘ಭಾಗ್ಯ’ಗಳನ್ನು ಘೋಷಣೆ ಮಾಡಿದ್ದ ಸಿದ್ದರಾಮಯ್ಯ, ಭಾರೀ ಜನಪ್ರಿಯತೆಯ ಹೊರತಾಗಿಯೂ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸೋಲನುಭವಿಸಿದ್ದರು. ಆದರೆ, ಬಾದಾಮಿಯಿಂದಲೂ ಸ್ಪರ್ಧಿಸಿದ್ದ ಅವರು, ಅಲ್ಲಿ ಗೆಲುವು ಸಾಧಿಸಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಎರಡನೇ ಅವಧಿಯಲ್ಲಿ 2023 ಮೇ ತಿಂಗಳಿನಿಂದ 2026 ಮೇ 28ರವರೆಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಿಕ್ತು ವಿಶೇಷ ಸ್ಥಾನ
ಇದೇ ಜೂನ್ 18ರಂದು ವಿಧಾನಪರಿಷತ್ನ 7 ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕರು ರೆಸಾರ್ಟ್ಗೆ ಶಿಫ್ಟ್ ಆಗಿದ್ದು, ಬಿಡದಿ ಬಳಿಯ ವಂಡರ್ಲಾ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದೆ. ವಿಶೇಷ ಅಂದ್ರೆ ಈ ಸಭೆಯಲ್ಲಿ ಸಿದ್ದರಾಮಯ್ಯನವರ ಪುತ್ರ, ಸಚಿವರೂ ಆಗಿರುವ ಯತೀಂದ್ರ ಅವರಿಗೆ ವಿಶೇಷ ಗೌರವ ನೀಡಲಾಗಿದೆ. ಹೌದು..ಶಾಸಕಾಂಗ ಪಕ್ಷದ ಸಭೆಯ ವೇದಿಕೆ ಮೇಲೆ ಹಿರಿಯ ಸಚಿವರಿಗೂ ಅವಕಾಶ ಇಲ್ಲ. ಆದ್ರೆ, ಯತೀಂದ್ರ ಸಿದ್ದರಾಮಯ್ಯನವರಿಗೆ ವೇದಿಕೆ ಮೇಲೆ ಅವಕಾಶ ನೀಡಿರುವುದು ಅಚ್ಚರಿ ಮೂಡಿಸಿದ್ದು, ಈ ಸಂಬಂಧ ಚರ್ಚೆಗೆ ಗ್ರಾಸವಾಗಿದೆ.
- Prasanna Gaonkar
- Updated on: Jun 16, 2026
- 9:57 pm
‘ಸಿದ್ದರಾಮಯ್ಯ ಈ ದೇಶ ಕಂಡ ಅತ್ಯಂತ ಗೌರವಾನ್ವಿತ ಸಿಎಂ’: ಹಿರಿಯ ನಟ ಸುಂದರ್ ರಾಜ್
‘ಕನಕರಾಜ’ ಸಿನಿಮಾದಲ್ಲಿ ಅನೂಪ್ ರೇವಣ್ಣ ಅವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ಹಿರಿಯ ನಟ ಸುಂದರ್ ರಾಜ್ ಕೂಡ ಅಭಿನಯಿಸಿದ್ದಾರೆ. ಚಿತ್ರದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಚಿತ್ರದ ಶೀರ್ಷಿಕೆಗೆ ‘ಫ್ಯಾನ್ ಆಫ್ ಸಿಎಂ’ ಎಂಬ ಟ್ಯಾಗ್ ಲೈನ್ ಇದೆ. ಆ ಬಗ್ಗೆ ಸುಂದರ್ ರಾಜ್ ವಿವರಿಸಿದರು.
- Madan Kumar
- Updated on: Jun 14, 2026
- 10:19 am
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, ಇದು ಕೇವಲ ಪೂರ್ವಭಾವಿ ಮಂಜೂರಾತಿಯಾಗಿದ್ದು, ನಿಯಮಾನುಸಾರವೇ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇಲಾಖೆಗೆ ಸಲ್ಲಿಸಲಾಗಿರುವ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಮನವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣಕ್ಕೆ ಆ ಸಮುದಾಯಕ್ಕೆ ಹೆಚ್ಚಿನ ಅನುದಾನ ಸಂದಾಯವಾಗಿದೆಯೇ ಹೊರತು ಉದ್ದೇಶಪೂರ್ವಕವಾಗಿ ಯಾವುದೇ ಬಗೆಯ ತಾರತಮ್ಯ ಮಾಡಲಾಗಿಲ್ಲ ಎಂದವರು ತಿಳಿಸಿದ್ದಾರೆ.
- Prasanna Hegde
- Updated on: Jun 12, 2026
- 2:08 pm
ಒಂದೇ ಸಮುದಾಯಕ್ಕೆ ಸೀಮಿತಾವಾಯ್ತಾ ಒಬಿಸಿ ಅನುದಾನ? ಕುರುಬ ಸಮುದಾಯದ 89 ಸಂಸ್ಥೆಗಳಿಗೆ ಬಂಪರ್
ಹಿಂದುಳಿದ ವರ್ಗಗಳ ಕಲ್ಯಾಣವೋ ಅಥವಾ ಸ್ವಜಾತಿಯ ಉದ್ಧಾರವೋ? ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬುದು ಪ್ರಜಾಪ್ರಭುತ್ವದ ಮೂಲ ಮಂತ್ರ. ಅದರಲ್ಲೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉದ್ದೇಶವೇ ಸಮಾಜದ ಕಟ್ಟಕಡೆಯ ಅಂಚಿನಲ್ಲಿರುವ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವುದು. ಆದರೆ ಇತ್ತೀಚೆಗೆ ಈ ಇಲಾಖೆಯ ಅನುದಾನ ಹಂಚಿಕೆಯಲ್ಲಿ ನಡೆದಿರುವ ಬೆಳವಣಿಗೆಗಳು, ಈ ಇಲಾಖೆ ಕೇವಲ ಒಂದು ನಿರ್ದಿಷ್ಟ ಸಮುದಾಯದ ಏಳಿಗೆಗಷ್ಟೇ ಸೀಮಿತವಾಗುತ್ತಿದೆಯೇ ಎಂಬ ಚರ್ಚೆಗಳು ಶುರುವಾಗಿವೆ.
- Prasanna Gaonkar
- Updated on: Jun 11, 2026
- 8:36 pm
‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’:ಪರಮಾಪ್ತ ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ
ಜಮೀರ್ ಅಹ್ಮದ್ ಖಾನ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಸಿದ್ದರಾಮಯ್ಯವರನ್ನು ಭೇಟಿ ಮಾಡಿ ಒತ್ತಾಯಿಸಿದ್ದು, ಈ ವೇಳೆ ಗಂರ ಆದ ಸಿದ್ದರಾಮಯ್ಯ, ಅವನು (ಜಮೀರ್ ಅಹ್ಮದ್ ಖಾನ್) ನನ್ನ ಆಪ್ತ ಎಂದು ನೀವೆಲ್ಲಾ ಹೇಳುತ್ತೀರಾ. ಆದ್ರೆ, ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ ಎಂದು ಸಿಡಿಮಿಡಿಗೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಮೊದಲೇ ಆಡಿಯೋವೊಂದು ವೈರಲ್ ಆಗಿರುವುದು ಜಮೀರ್ ಅಹ್ಮದ್ ಮೇಲೆ ಪಕ್ಷ ವಿರೋಧಿ ಆರೋಪ ಕೇಳಿಬಂದಿದ್ದು, ಇದರ ನಡುವೆ ಇದೀಗ ಸಿದ್ದರಾಮಯ್ಯ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.
- Ramesh B Jawalagera
- Updated on: Jun 11, 2026
- 2:48 pm
ಕಾಂಗ್ರೆಸ್ನಲ್ಲಿ ಜೋರಾಯ್ತು ಸಚಿವ ಸ್ಥಾನಕ್ಕಾಗಿ ಸರ್ಕಸ್: 20 ಸ್ಥಾನಗಳಿಗಾಗಿ 60ಕ್ಕೂ ಹೆಚ್ಚು ಶಾಸಕರಿಂದ ಮಹಾ ಲಾಬಿ
ಕರ್ನಾಟಕ ಕಾಂಗ್ರೆಸ್ನಲ್ಲಿ 20 ಸಚಿವ ಸ್ಥಾನಗಳ ಭರ್ತಿಗಾಗಿ 60ಕ್ಕೂ ಹೆಚ್ಚು ಶಾಸಕರು ಲಾಬಿ ನಡೆಸುತ್ತಿದ್ದಾರೆ. ಮಾಜಿ ಸಚಿವರು ತೀವ್ರ ಲಾಬಿ ಮಾಡುತ್ತಿದ್ದಾರೆ. ಮತ್ತೊಂದೆಡೆ, ಆಕಾಂಕ್ಷಿಗಳ ಸಂಖ್ಯೆ ನೋಡಿ ಬೆಚ್ಚಿಬಿದ್ದಿರುವ ಹೈಕಮಾಂಡ್, ವಿಧಾನ ಪರಿಷತ್ ಚುನಾವಣೆ ಮುಗಿದ ನಂತರವೇ ಸಂಪುಟ ವಿಸ್ತರಣೆಗೆ ಮುಂದಾಗುವ ಲಕ್ಷಣಗಳಿವೆ.
- Prasanna Gaonkar
- Updated on: Jun 8, 2026
- 9:06 am
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾ ರೆಡ್ಡಿ ರಾಜೀನಾಮೆಯಿಂದ ಆಕ್ರೋಶಗೊಂಡ ಬೆಂಬಲಿಗರು ಕೋರಮಂಗಲದ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಜಲಸಂಪನ್ಮೂಲ ಖಾತೆ ಬದಲಾವಣೆಯಿಂದ ಮನನೊಂದ ರೆಡ್ಡಿ ಅವರು ರಾಜೀನಾಮೆ ನೀಡಿದ್ದಾರೆ. ಇದು ಅನ್ಯಾಯ ಎಂದು ಬೆಂಬಲಿಗರು ಖಂಡಿಸಿದ್ದಾರೆ. ಸೂಕ್ತ ಖಾತೆ ಹಾಗೂ ಸ್ಥಾನಮಾನಕ್ಕೆ ಆಗ್ರಹಿಸಿ ಘೋಷಣೆ ಕೂಗಿ, ಕಾರು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Ganapathi Sharma
- Updated on: Jun 5, 2026
- 11:23 am
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ಸಚಿವರಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಸಚಿವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದು, ಪದಗ್ರಹಣದ ಬೆನ್ನಲ್ಲೇ ಯತೀಂದ್ರ ಅವರು ವೇದಿಕೆಯಲ್ಲೇ ತಮ್ಮ ತಂದೆಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಪುತ್ರನ ಭುಜ ಮುಟ್ಟಿ ಸಿದ್ದರಾಮಯ್ಯ ಹಾರೈಸಿದ್ದಾರೆ.
- Kiran Haniyadka
- Updated on: Jun 3, 2026
- 6:19 pm
ಇತ್ತ ಡಿಕೆಶಿ ಪದಗ್ರಹಣದ ಬೆನ್ನಲ್ಲೇ ಅತ್ತ ವಿಧಾನಸೌಧದಲ್ಲಿ ಬದಲಾಯ್ತು ಸಿಎಂ ಕಚೇರಿಯ ನಾಮಫಲಕ
ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ವಿಧಾನಸೌಧದ ಸಿಎಂ ಕಚೇರಿಯಲ್ಲಿ ನಾಮಫಲಕ ಬದಲಾವಣೆಯಾಗಿದೆ. ಈ ಹಿಂದೆ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕವಿದ್ದು, ಇದೀಗ ಸಿಬ್ಬಂದಿ ಅದನ್ನು ತೆಗೆದು ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರಿನ ಫಲಕವನ್ನು ಅಳವಡಿಸಿದ್ದಾರೆ. ಈ ಬದಲಾವಣೆಯು ರಾಜ್ಯದ ನಾಯಕತ್ವ ಬದಲಾವಣೆಯನ್ನು ಅಧಿಕೃತವಾಗಿ ಸೂಚಿಸುತ್ತದೆ.
- Prasanna Hegde
- Updated on: Jun 3, 2026
- 5:15 pm
ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂಗಳನ್ನು ಆಹ್ವಾನಿಸಿದ ಡಿಕೆಶಿ: ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ನಿಯೋಜಿತ ಮುಖ್ಯಮಂತ್ರಿ
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಖುದ್ದಾಗಿ ಭೇಟಿಯಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ರಾಜಕೀಯ ವೈರತ್ವ ಮರೆತು ದೇವೇಗೌಡರ ಕಾಲಿಗೆ ನಮಸ್ಕರಿಸಿ ಡಿಕೆಶಿ ಆಶೀರ್ವಾದ ಪಡೆದಿರುವುದು ಗಮನ ಸೆಳೆದಿದೆ.
- Prasanna Hegde
- Updated on: Jun 3, 2026
- 2:30 pm
DK Shivakumar Oath Taking Highlights: ಡಿಕೆ ಶಿವಕುಮಾರ್ ಯುಗಾರಂಭ: ಇಂದಿನ ಪದಗ್ರಹಣದ ಬೆಳವಣಿಗೆಗಳ ಹೈಲೈಟ್ಸ್
ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮ Highlights: ಸಿದ್ದರಾಮಯ್ಯ ರಾಜೀನಾಮೆ ನಂತರ ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 4 ಗಂಟೆ 05 ನಿಮಿಷಕ್ಕೆ ಲೋಕಭವನದಲ್ಲಿ ಪದಗ್ರಹಣ ನೆರವೇರಿತು. ಡಿಕೆ ಶಿವಕುಮಾರ್ ಜೊತೆಗೆ 13 ಜನರು ಸಚಿವ ಸ್ಥಾನವನ್ನು ಅಲಂಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಸೇರಿದಂತೆ ದೇಶದ ಪ್ರಮುಖ ಗಣ್ಯರು ಹಾಗೂ ಸರ್ವಧರ್ಮದ 55 ಧರ್ಮಗುರುಗಳು ಭಾಗಿಯಾಗಿದ್ದರು.
- Bhavana Hegde
- Updated on: Jun 3, 2026
- 11:05 pm
ಪದತ್ಯಾಗಕ್ಕೆ ಬಂಪರ್ ಗಿಫ್ಟ್: ಸಿದ್ದರಾಮಯ್ಯಗೆ ಮಹತ್ವದ ಸ್ಥಾನಮಾನ ನೀಡಿದ ಹೈಕಮಾಂಡ್
ಯಾವುದೇ ತಂಟೆ ತಗಾದೆ ತೆಗೆಯದೇ ಒಂದೇ ಮಾತಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟು ಕೊಟ್ಟ ಸಿದ್ದರಾಮಯ್ಯನವಿರಗೆ ಹೈಕಮಾಂಡ್ ಮಹತ್ವದ ಹುದ್ದೆ ನೀಡಿದೆ. ರಾಜ್ಯಸಭೆ ಆಫರ್ ನಿರಾಕರಿಸಿದ್ದ ಸಿದ್ದರಾಮಯ್ಯನವರಿಗೆ ಎಐಸಿಸಿಯಲ್ಲಿ ಸ್ಥಾನಮಾನ ನೀಡಲಾಗಿದೆ. ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೆ ಸಿದ್ದರಾಮಯ್ಯನವರಿಗೆ ಮಹತ್ವದ ಹುದ್ದೆ ನೀಡಿ ಎಐಸಿಸಿ ಆದೇಶ ಹೊರಡಿಸಿದೆ. ಏನಿದು ಹುದ್ದೆ? ಎಷ್ಟು ಮಹತ್ವ ಹೊಂದಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.
- Harish GR
- Updated on: Jun 2, 2026
- 10:59 pm