
Siddaramaiah
ಕರ್ನಾಟಕ ರಾಜಕಾರಣದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕರ ಪೈಕಿ ಸಿದ್ದರಾಮಯ್ಯ ಪ್ರಮುಖರು. ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ 1948ರ ಆಗಸ್ಟ್ 12ರಂದು ಜನಿಸಿದ ಸಿದ್ದರಾಮಯ್ಯನವರ ಪ್ರಾಥಮಿಕ ಶಿಕ್ಷಣ ಹುಟ್ಟೂರಿನಲ್ಲೇ ಆಯಿತು. ಮೈಸೂರಿನಲ್ಲಿ ಬಿಎಸ್ಸಿ ಹಾಗೂ ಕಾನೂನು ಪದವಿ ಪಡೆದ ಅವರು 1978ರ ವರೆಗೆ ವಕೀಲಿ ವೃತ್ತಿ ನಡೆಸುತ್ತಿದ್ದು, ನಂತರ ರಾಜಕೀಯಕ್ಕೆ ಧುಮುಕಿದರು.
1983ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರತೀಯ ಲೋಕದಳದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಸಿದ್ದರಾಮಯ್ಯ, ನಂತರ ರಾಜಕೀಯದಲ್ಲಿ ಹಿಂತಿರುಗಿ ನೋಡಲೇ ಇಲ್ಲ. ಬಳಿಕ ಜನತಾ ದಳಕ್ಕೆ ಸೇರಿದ ಅವರು, ತರುವಾಯ ನಾಯಕತ್ವದ ವಿರುದ್ಧ ಅಸಮಾಧಾನದಿಂದ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಸಚಿವರಾಗಿ ಹಲವು ಬಾರಿ ಕಾರ್ಯನಿರ್ವಹಿಸಿದ್ದಾರೆ. ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಹಿಂದುಳಿದ ವರ್ಗಗಳ ನಾಯಕನೆಂದು ತಮ್ಮನ್ನು ಬಿಂಬಿಸಿಕೊಂಡಿರುವ ಸಿದ್ದರಾಮಯ್ಯ, 2013ರ ವಿಧಾನಸಭೆ ಚುನಾವಣೆಗೂ ಮುನ್ನ ಬೃಹತ್ ಅಹಿಂದ ಸಮಾವೇಶ ಆಯೋಜಿಸಿ ರಾಜಕೀಯ ಬಲ ಪ್ರದರ್ಶನ ಮಾಡಿದ್ದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರ ಚಲಾಯಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಅವರದ್ದಾಗಿದೆ.
ಮುಖ್ಯಮಂತ್ರಿಯಾಗಿ ಮೊದಲ ಅವಧಿಯಲ್ಲಿ (2013 – 2018) ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಹಲವು ‘ಭಾಗ್ಯ’ಗಳನ್ನು ಘೋಷಣೆ ಮಾಡಿದ್ದ ಸಿದ್ದರಾಮಯ್ಯ, ಭಾರೀ ಜನಪ್ರಿಯತೆಯ ಹೊರತಾಗಿಯೂ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸೋಲನುಭವಿಸಿದ್ದರು. ಆದರೆ, ಬಾದಾಮಿಯಿಂದಲೂ ಸ್ಪರ್ಧಿಸಿದ್ದ ಅವರು, ಅಲ್ಲಿ ಗೆಲುವು ಸಾಧಿಸಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಎರಡನೇ ಅವಧಿಗೆ (2023 ಮೇ) ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕಾಂಗ್ರೆಸ್ ಶಾಸಕರಿಗೆ 50 ಕೋಟಿ, ವಿಪಕ್ಷ ಶಾಸಕರಿಗೆ 25 ಕೋಟಿ ರೂ. ಅನುದಾನ: ಸಿಎಂ ವಿರುದ್ಧ ವಿಪಕ್ಷಗಳ ವಾಗ್ದಾಳಿ
ಕರ್ನಾಟಕದಲ್ಲಿ ಶಾಸಕರ ಅನುದಾನ ಬಿಡುಗಡೆ ವಿಚಾರದಲ್ಲಿ ಭಾರೀ ವಿವಾದ ಏರ್ಪಟ್ಟಿದೆ. ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂ., ವಿಪಕ್ಷಕ್ಕೆ 25 ಕೋಟಿ ರೂ. ನೀಡಿದ್ದು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಈ ತಾರತಮ್ಯವನ್ನು ಖಂಡಿಸಿದ್ದು, ಎಲ್ಲರಿಗೂ ಸಮಾನ ಅನುದಾನ ನೀಡುವಂತೆ ಒತ್ತಾಯಿಸಿದ್ದಾರೆ.
- Anil Kalkere
- Updated on: Jul 19, 2025
- 6:36 pm
ಸಿಎಂ ಸಿದ್ದರಾಮಯ್ಯ ವಿರಾಟ್ ಕೊಹ್ಲಿ ಅಭಿಮಾನಿಗಳ ಕ್ಷಮೆ ಕೇಳಬೇಕೆಂದ ಮಾಜಿ ಡಿವೈಎಸ್ಪಿ: ಕಾರಣ ಇಲ್ಲಿದೆ
ಆರ್ಸಿಬಿ ಐಪಿಎಲ್ ವಿಜಯೋತ್ಸವದ ಸಂದರ್ಭ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಪೊಲೀಸ್ ಇಲಾಖೆಯ ರಾಜಕೀಯವೇ ಕಾರಣ ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಆರೋಪಿಸಿದ್ದು, ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗುಂಪುಗಳ ನೆರವಿನಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಗೊಂದಲ ಸೃಷ್ಟಿಸಲಾಗಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ವಿರಾಟ್ ಕೊಹ್ಲಿಯನ್ನು ಜೈಲಿಗೆ ಕಳುಹಿಸಲು ಹುನ್ನಾರ ಮಾಡಲಾಗಿದೆ ಎಂದು ಆರೋಪಿಸಿದ್ದು, ಅವರಾಡಿರುವ ಮಾತಿನ ವಿವರಗಳು ಇಲ್ಲಿವೆ.
- Prajwal Amin
- Updated on: Jul 19, 2025
- 5:42 pm
ಗ್ಯಾರಂಟಿಯಿಂದಾಗಿ ಸಮಸ್ಯೆ ಎಂದು ನಮ್ಮವರೇ ಕೆಲವರು ಹೇಳ್ತಾರೆ: ಮಲ್ಲಿಕಾರ್ಜುನ ಖರ್ಗೆ ಬೇಸರ
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಜನರು ಯೋಜನೆಗಳ ಪ್ರಯೋಜನ ಪಡೆದ ನಂತರವೂ ಸರ್ಕಾರವನ್ನು ಟೀಕಿಸುತ್ತಿರುವುದಕ್ಕೆ ಅವರು ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದವರೇ ಕೆಲವರು ಅಪಸ್ವರ ಎತ್ತುತ್ತಿದ್ದಾರೆ ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಗ್ಯಾರಂಟಿಗಳಿಂದಾಗಿ ಸರ್ಕಾರಕ್ಕೆ ಹಣಕಾಸಿನ ಸಮಸ್ಯೆ ಆಗಿಲ್ಲ ಎಂದರು.
- Ganapathi Sharma
- Updated on: Jul 19, 2025
- 3:07 pm
ಪಂಚಮಸಾಲಿ ಮೀಸಲಾತಿಗಾಗಿ ಸ್ವಾಮೀಜಿ ನಡೆಸಿರುವ ಹೋರಾಟಗಳಲ್ಲಿ ಸಾಥ್ ನೀಡಿದ್ದೇವೆ: ವಿಜಯಾನಂದ ಕಾಶಪ್ಪನವರ್
ಬಸವಜಯ ಮೃತ್ಯುಂಜಯ ಸ್ವಾಮಿ ಮತ್ತು ಅವರೊಂದಿಗಿರುವ ಪಂಚಮಸಾಲಿ ಸಮಾಜದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಅಪರಾಧಿ ಸ್ಥಾನದಲ್ಲಿಡುವ ಪ್ರಯತ್ನ ಮಾಡುತ್ತಿದ್ದಾರೆ, ಬೆಳಗಾವಿಯಲ್ಲಿ ನಡೆದ ಗಲಾಟೆಯಲ್ಲಿ ಕೆಲ ಆರೆಸ್ಸೆಸ್ ಮುಖಂಡರು ಜೊತೆಗೂಡಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು, ಹಾಗಾಗೇ ಲಾಠಿ ಚಾರ್ಜ್ ಅಗಿತ್ತು ಮತ್ತು ಕೂಡಲಸಂಗಮ ಪೀಠಕ್ಕೆ ಬೀಗ ಹಾಕಿಸುವಷ್ಟು ಕೆಳಮಟ್ಟಕ್ಕೆ ಸಿಎಂ ಇಳಿಯಲ್ಲ ಎಂದು ಕಾಶಪ್ಪನವರ್ ಹೇಳಿದರು.
- Arun Belly
- Updated on: Jul 19, 2025
- 3:01 pm
ಸಾಧನಾ ಸಮಾವೇಶದಲ್ಲಿ ಕುರ್ಚಿಗಳ ಮೇಲಿದ್ದ ಸಿದ್ದರಾಮಯ್ಯನವರ ಫೋಟೋಗಳನ್ನು ತೆಗೆಸಿದ್ದು ಯಾಕೆ?
ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಇಷ್ಟೆಲ್ಲ ಕಸರತ್ತು ಎಂದು ವಿರೋಧ ಪಕ್ಷದ ನಾಯಕರು ಲೇವಡಿ ಮಾಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಇಂಥ ಮಾತಿಗಳಿಗೆಲ್ಲ ಕಿವಿಗೊಡಲ್ಲ. ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ ನಂತರವೇ ಸಿದ್ದರಾಮಯ್ಯ ತಮ್ಮ ಶಾಸಕರಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ ಅಂತಲೂ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಅದು ಹಾಗಲ್ಲ ಅಂತ ಸಿದ್ದರಾಮಯ್ಯ ಹೇಳಲಾರರು.
- Arun Belly
- Updated on: Jul 19, 2025
- 1:40 pm
LIVE: ತವರಲ್ಲಿ ಸಿಎಂ ಶಕ್ತಿ ಪ್ರದರ್ಶನ; ಸಾಧನಾ ಸಮಾವೇಶದ ನೇರಪ್ರಸಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಇಂದು ಬೃಹತ್ ಸಾಧನಾ ಸಮಾವೇಶ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಸಮಾವೇಶವನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರತಿ ಕ್ಷೇತ್ರದಿಂದ ಸಾವಿರಾರು ಜನರನ್ನು ಕರೆ ತರುವಂತೆ ಶಾಸಕರಿಗೆ ಸೂಚನೆ ನೀಡಿದ್ದರು. ಒಂದು ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ.
- Gangadhar Saboji
- Updated on: Jul 19, 2025
- 1:14 pm
ಅಧಿಕಾರಕ್ಕೆ ಬಂದಾಗಿನಿಂದ ಕಾಂಗ್ರೆಸ್ ಸರ್ಕಾರ ಬಿಜೆಪಿ ಶಾಸಕರನ್ನು ಟಾರ್ಗೆಟ್ ಮಾಡುತ್ತಿದೆ: ವಿಜಯೇಂದ್ರ
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವುದಕ್ಕೋಸ್ಕರ ಕಾಂಗ್ರೆಸ್ ಶಾಸಕರಿಗೆ ಅನುದಾನ ಬಿಡುಗಡೆ ಮಾಡುವ ನಾಟಕ ಮಾಡಿದ್ದಾರೆ, ಅನುದಾದ ಬಿಡುಗಡೆಗೆ ಅವರು ಪತ್ರವನ್ನಷ್ಟೇ ಬರೆದಿರೋದು, ಬಿಡುಗಡೆ ಭಾಗ್ಯ ಇನ್ನೂ ಯಾವಾಗಲೋ? ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡದಿರುವ ಮೂಲಕ ಮುಖ್ಯಮಂತ್ರಿ ದೊಡ್ಡ ಉಪಕಾರ ಮಾಡಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
- Arun Belly
- Updated on: Jul 19, 2025
- 12:37 pm
ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ; ಪ್ರತೀಕಾರದ ರಾಜಕಾರಣ ಅಲ್ಲವೆಂದ ಸಚಿವ ಪರಮೇಶ್ವರ್
ಸಿದ್ದರಾಮಯ್ಯ ತಮ್ಮ ಶಾಸಕರಿಗೆ ಅನುದಾನ ಯಾವಾಗ ಬಿಡುಗಡೆ ಮಾಡಿದರು ಅನ್ನೋದು ಗಮನಿಸಬೇಕಾದ ಅಂಶ. ಕಾಂಗ್ರೆಸ್ ಶಾಸಕರು ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲವೆಂದು ಬಹಿರಂಗವಾಗೇ ಹೇಳಿಕೆ ನೀಡಲಾರಂಭಿಸಿದ ಬಳಿಕ ಪಕ್ಷದ ಹೈಕಮಾಂಡ್ ಮಧ್ಯಪ್ರವೇಶಿಸಬೇಕಾಯಿತು. ರಂದೀಪ್ ಸರ್ಜೇವಾಲಾ ಎಲ್ಲ ಶಾಸಕರ ಅಹವಾಲು ಕೇಳಿದ ಬಳಿಕ ಸಿಎಂ ಜೊತೆ ಮಾತಾಡಿದರು. ಅದಾದ ನಂತರವೇ ಅನುದಾನ ಬಿಡುಗಡೆಯಾಗಿದ್ದು!
- Arun Belly
- Updated on: Jul 19, 2025
- 11:36 am
ಮೈಸೂರು ಸಾಧನಾ ಸಮಾವೇಶ: ಪ್ರಚಾರದ ಗೀಳಿಗೆ ಮತ್ತೊಂದು ಸಜ್ಜಿಕೆ ತಯಾರು, ಕನ್ನಡಿಗನ ದುಡ್ಡು ಪೋಲು
ಅಧಿಕಾರ ಹಂಚಿಕೆ ವಿಷಯದಲ್ಲೂ ಸಾಧನಾ ಸಮಾವೇಶ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ತಮ್ಮ ಪ್ರಯೋಜನಕ್ಕೆ ಬಳಸಿಕೊಳ್ಳುತ್ತಿದ್ದಾರೆ ಅನ್ನೋದು ಸ್ಪಷ್ಟವಾಗಿ ಕಾಣುತ್ತಿದೆ. ಇಲ್ಲಿ ವ್ಯವಸ್ಥೆಗೊಳಿಸಿರುವ ಪ್ರತಿ ಕುರ್ಚಿಯ ಮೇಲೂ ಸಿಎಂ ಫೋಟೋಗಳು! ಇದೆಂಥ ಪ್ರಚಾರದ ಗೀಳು ಸ್ವಾಮಿ? ಪ್ರಚಾರದ ಗೀಳೋ ಅಥವಾ ಅಭದ್ರತೆಯ ಸೂಚನೆಯೋ? ಈ ಸಮಾವೇಶಕ್ಕೆ ತಗುಲಲಿರುವ ಖರ್ಚನ್ನು ಕನ್ನಡಿಗ ತನ್ನ ಜೇಬಿಂದ ಭರಿಸುತ್ತಿದ್ದಾನೆ.
- Arun Belly
- Updated on: Jul 19, 2025
- 10:48 am
ಕನ್ನಡ ಧ್ವಜಕ್ಕೆ ಮತ್ತೆ ಹಕ್ಕು ಮಂಡಿಸಿದ ರಾಜ್ಯ ಸರ್ಕಾರ: ಕೇಂದ್ರಕ್ಕೆ ಪತ್ರ ಬರೆದ ಸಚಿವ ಶಿವರಾಜ್ ತಂಗಡಗಿ
ಕರ್ನಾಟಕ ಸರ್ಕಾರವು ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಮನವಿ ಮಾಡಿದೆ. ಈ ಕುರಿತಾಗಿ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಹಳದಿ-ಕೆಂಪು ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡುವಂತೆ ಒತ್ತಾಯಿಸಿದ್ದಾರೆ. ಶೀಘ್ರದಲ್ಲೇ ತಂಗಡಗಿ ನೇತೃತ್ವದ ನಿಯೋಗ ದೆಹಲಿಗೆ ತೆರಳಲಿದೆ.
- Pramod Shastri G
- Updated on: Jul 19, 2025
- 9:07 am